Homeಕರ್ನಾಟಕದಲಿತ ಯುವಕನ ಬೆತ್ತಲೆ ಪ್ರಕರಣ ಖಂಡಿಸಿ ಜೂನ್ 18 ರಂದು ಗುಂಡ್ಲುಪೇಟೆಯಲ್ಲಿ ಬೃಹತ್ ಜಾಥ

ದಲಿತ ಯುವಕನ ಬೆತ್ತಲೆ ಪ್ರಕರಣ ಖಂಡಿಸಿ ಜೂನ್ 18 ರಂದು ಗುಂಡ್ಲುಪೇಟೆಯಲ್ಲಿ ಬೃಹತ್ ಜಾಥ

ಇಡೀ ಘಟನೆಯನ್ನು ಅವಲೋಕಿಸಿದರೆ ಮನುಷ್ಯರು ಎಷ್ಟು ಜಾತಿಗ್ರಸ್ಥರಾಗಿದ್ದಾರೆ ಎಂಬ ಆತಂಕ ಮೂಡುತ್ತಿದೆ. ಒಬ್ಬ ಯುವಕನನ್ನು ದಲಿತ ಎಂಬ ಕಾರಣಕ್ಕಾಗಿ ಬೆತ್ತಲೆ ಮೆರವಣಿಗೆ ಮಾಡುವಷ್ಟು ಕ್ರೂರ ಮನಸ್ಸುಗಳನ್ನು ಬದಲಾಯಿಸುವುದಾದರೆ ಹೇಗೆ?

- Advertisement -
- Advertisement -

| ನಾನುಗೌರಿ ಡೆಸ್ಕ್ |

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆಯಲ್ಲಿ ಇತ್ತೀಚಗೆ ನಡೆದ ದಲಿತ ಯುವಕನ ಅಮಾನುಷ ಬೆತ್ತಲೆ ಮೆರವಣಿಗೆ ಪ್ರಕರಣ ವಿರೋಧಿಸಿ, ಈ ರೀತಿಯ ಘಟನೆಗಳು ಮರುಕಳಿಸದಂತೆ ಜಾಗೃತಿ ಮೂಡಿಸಲು ಇದೇ ಜೂನ್ 18 ರಂದು ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಬೃಹತ್ ಜಾಥ ಹಮ್ಮಿಕೊಳ್ಳಲಾಗಿದ್ದು, ಇದೇ ವೇಳೆ ಹಲವು ಮಂದಿ ಹಿಂದೂ ಧರ್ಮ ತ್ಯಜಿಸಿ ಬೌದ್ಧ ಧರ್ಮ ಸ್ವೀಕರಿಸಲು ನಿರ್ಧರಿಸಿದ್ದಾರೆ.

ಗುಂಡ್ಲುಪೇಟೆಯ ಪ್ರವಾಸಿ ಮಂದಿರದಲ್ಲಿ ಎಲ್ಲ ಪ್ರಗತಿಪರ ಸಂಘಟನೆಗಳ ವತಿಯಿಂದ ನಿನ್ನೆ ನಡೆದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಘಟನೆ ನಡೆದ ಶನಿ ಮಹಾತ್ಮ ದೇವಸ್ಥಾನದಿಂದಲೇ ಬೃಹತ್ ಮೆರವಣಿಗೆ ಆರಂಭವಾಗಲಿದ್ದು, ಗುಂಡ್ಲುಪೇಟೆ ವರಗೆ ಕಾಲು ನಡಿಗೆ ಜಾಥಾ ಮತ್ತು ಗುಂಡ್ಲುಪೇಟೆ ಬಂದ್ ನಡೆಸಲು ಈ ಮೊದಲು ಎಲ್ಲರೂ ಒಕ್ಕೊರಲಿನಿಂದ ನಿರ್ಧರಿಸಿಲಾಗಿತ್ತು. ಆದರೆ 18ರಂದು ಪಿಯುಸಿ ಸಪ್ಲಿಮೆಂಟರಿ ಪರೀಕ್ಷೆಗಳು ನಡೆಯುತ್ತಿದ್ದು ವಿದ್ಯಾರ್ಥಿಗಳಿಗೆ ತೊಂದರೆಯಾಗಬಾರದೆಂದು ಬಂದ್ ಹಿಂತೆಗೆದುಕೊಂಡು ದೊಡ್ಡ ಜಾಥ ಮತ್ತು ಸಮಾವೇಶ ನಡೆಸಲು ನಿರ್ಧರಿಸಿದ್ದಾರೆ.

ಸಂತ್ರಸ್ತ ಪ್ರತಾಪ್ ರವರು ಐ.ಎ.ಎಸ್ ಪರೀಕ್ಷೆ ಬರೆಯಲು ಹೋಗಿ ತಡವಾದ ಕಾರಣಕ್ಕೆ ಖಿನ್ನನಾಗಿದ್ದಾನೆ. ಆನಂತರ ನಡೆಯಬಾರದ ಘಟನೆಗಳೆಲ್ಲಾ ನಡೆದು ಮನನೊಂದಿದ್ದಾನೆ. ಇಂತಹ ಸಂದರ್ಭದಲ್ಲಿ ನಾವು ಬಂದ್ ಮಾಡಿ ಪಿಯುಸಿ ಸಪ್ಲಿಮೆಂಟರಿ ಪರೀಕ್ಷೆ ಬರೆಯುವವರಿಗೆ ತೊಂದರೆ ಕೊಡಬಾರದೆಂದು ಬಂದ್ ಹಿಂತೆಗೆದುಕೊಂಡಿದ್ದೇವೆ. ಬದಲಿಗೆ ದೊಡ್ಡ ಜಾಥಾ ನಡೆಸಿ ಬಂತೇಜಿಗಳ ನೇತೃತ್ವದಲ್ಲಿ ಹಿಂದೂ ಧರ್ಮ ತ್ಯಜಿಸಿ ಬೌದ್ಧ ಧರ್ಮಕ್ಕೆ ಮತಾಂತರವಾಗಲು ನಿರ್ಧರಿಸಿದ್ದಾರೆ. ಇಷ್ಟೊಂದು ತಾರತಮ್ಯ ಮತ್ತು ಅವಮಾನ ಮಾಡುವ ಈ ಧರ್ಮ ನಮಗ ಬೇಡ ಎಂದು ದಲಿತ ಸಂಘರ್ಷ ಸಮಿತಿಯ ಚೋರನಹಳ್ಳಿ ಶಿವಣ್ಣ ತಿಳಿಸಿದ್ದಾರೆ.

ಸದರಿ ಘಟನೆಗೆ ಸಂಬಂಧಿಸಿದಂತೆ ನಾಡಿನೆಲ್ಲಾ ಪ್ರಗತಿಪರ ಸಂಘಟನೆಗಳು, ಪ್ರಜ್ಞಾವಂತರು, ದಲಿತ ಸಂಘಟನೆಗಳು ಸ್ವಯಂ ಪ್ರೇರಿತರಾಗಿ ತಮ್ಮ ತಮ್ಮ ಸ್ಥಳಗಳಲ್ಲಿ ಪ್ರತಿಭಟನೆಗಳನ್ನು ನಡೆಸಿ ಸರ್ಕಾರದ ಗಮನ ಸೆಳೆದಿವೆ. ಗುಂಡ್ಲುಪೇಟೆಯ ದಲಿತ ಸಂಘಟನೆಗಳು ಒಗ್ಗಟ್ಟಿನಿಂದ ದೂರು ದಾಖಲಿಸಿ ಎಲ್ಲಾ ಆರೋಪಿಗಳನ್ನೂ ಬಂಧಿಸುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದೇವೆ. 
ಆದರೆ, ಅಷ್ಟಕ್ಕೇ ಸುಮ್ಮನಾದರೆ ಇದೊಂದು ಮಾಮೂಲಿ ಪ್ರಕರಣವಾಗಿ ಮರೆಯಾಗುತ್ತದೆ. ಜಾತಿವಾದಗಳಿಗೆ, ಧರ್ಮಾಂಧರಿಗೆ ಹಾಗೂ ಅಮಾನುಷವಾಗಿ ವರ್ತಿಸಿದ ಜನಗಳಿಗೆ ಹಾಗೂ ಜಡ್ಡುಹಿಡಿದ ವ್ಯವಸ್ಥೆಗೆ ಚುರುಕು ಮುಟ್ಟಿಸಿ ಆತ್ಮಸಾಕ್ಷಿ ಬಡಿದೆಬ್ಬಿಸಲು ಈ ಹೋರಾಟ ಹಮ್ಮಿಕೊಂಡಿದ್ದೇವೆ ಎಂದು ದಲಿತ ಹೋರಾಟಗಾರ ಡಾ. ಕೃಷ್ಣಮೂರ್ತಿ ಚಮರಂ ತಿಳಿಸಿದ್ದಾರೆ. 

ಕೃಷ್ಣಮೂರ್ತಿ ಚಮರಂ

ಈ ಹೋರಾಟ ಯಶಸ್ವಿಯಾಗಲು ಎಲ್ಲರ ಸಹಕಾರ ಭಾಗವಹಿಸುವಿಕೆ ಅಗತ್ಯ. ಆದ್ದರಿಂದ ನಾಡಿನೆಲ್ಲಾ ಪ್ರಜ್ಞಾವಂತ ಜನಪರ ಸಂಘಟನೆಗಳು ಎಂದಿನಂತೆ ಸ್ವಯಂಪ್ರೇರಿತವಾಗಿ ಗುಂಡ್ಲುಪೇಟೆಗೆ ಆಗಮಿಸಿ ಚಳವಳಿಗೆ ಬೆಂಬಲ ಸೂಚಿಸಿ, ಯಶಸ್ಸುಗೊಳಿಸಬೇಕೆಂದು ಚಮರಂ ರವರು ಮನವಿ ಮಾಡಿದ್ದಾರೆ.

ಸಭೆಯಲ್ಲಿ ಹಿರಿಯ ಹೋರಾಟಗಾರರಾಗ ಹರಿಹರ ಆನಂದ ಸ್ವಾಮಿ, ಎಂ.ಬಿ.ಶ್ರೀನಿವಾಸ್. ಡಾ. ಕೃಷ್ಣಮೂರ್ತಿ ಚಮರಂ, ಡಾ.ಮಹದೇವ ಭರಣಿ, ಸಿ.ಎಂ.ಕೃಷ್ಣಮೂರ್ತಿ, ಯರಿಯೂರು ಸಿ.ರಾಜಣ್ಣ, ಸೋಮಯ್ಯ ಮಲೆಯೂರು, ಅಶೋಕ ಪುರಂ ಪುನೀತ್.ಕೆಂ.ಎಂ, ನಾಗರಾಜ್, ಕಂದಹಳ್ಳಿ ನಾರಾಯಣ, ಅಣಗಳ್ಳಿ ಬಸವರಾಜ್, ಚೋರನಹಳ್ಳಿ ಶಿವಣ್ಣ, ಮುರುಡಗಳ್ಳಿ ಮಹದೇವು, ಎಡದೊರೆ ಮಹದೇವ, ಆಲಗೂಡು ಚಂದ್ರಶೇಖರ್, ಪುಟ್ಟಸ್ವಾಮಿ, ಸುರೇಶ್ ಮೌರಿ, ಕಾಗಲವಾಡಿ ಶಿವಣ್ಣ, ರಾಮ ಸಮುದ್ರ ಮಹೇಶ, ಸುಭಾಷ್ ಮಾಡ್ರಹಳ್ಳಿ, ಆರ್.ಸೋಮಣ್ಣ,  ಹೊನ್ನೆಗೌಡನಹಳ್ಳಿ ನಾಗಯ್ಯ, ಹಂಗಳ ಪ್ರಸಾದ್, ಗಿರೀಶ್ ಲಕ್ಕೂರು, ಕಂದೆಗಾಲ ಎಂ ಶಿವಣ್ಣ, ಉಮೇಶ ಮಂಗಲ, ರಂಗಸ್ವಾಮಿ, ಮುಂತಾದ ಅನೇಕರು ಭಾಗವಹಿಸಿದ್ದರು ಬೆಂಬಲ ಸೂಚಿಸಿದ್ದಾರೆ.

ಮನುಷ್ಯತ್ವ ಮರೆತಿರುವುದೇ ಈ ಅಮಾನವೀಯ ಘಟನೆಗೆ ಕಾರಣ- ಚಮರಂ

ಇಡೀ ಘಟನೆಯನ್ನು ಅವಲೋಕಿಸಿದರೆ ಮನುಷ್ಯರು ಎಷ್ಟು ಜಾತಿಗ್ರಸ್ಥರಾಗಿದ್ದಾರೆ ಎಂಬ ಆತಂಕ ಮೂಡುತ್ತಿದೆ. ಒಬ್ಬ ಯುವಕನನ್ನು ದಲಿತ ಎಂಬ ಕಾರಣಕ್ಕಾಗಿ ಬೆತ್ತಲೆ ಮೆರವಣಿಗೆ ಮಾಡುವಷ್ಟು ಕ್ರೂರ ಮನಸ್ಸುಗಳನ್ನು ಬದಲಾಯಿಸುವುದಾದರೆ ಹೇಗೆ? ಆ ಕ್ರೂರ ಮನಸ್ಸುಗಳು ಈಗಲೂ ತಮ್ಮ ಘೋರ ತಪ್ಪನ್ನು ಒಪ್ಪಿಕೊಳ್ಳಲು ಸಿದ್ದರಿಲ್ಲ. ಆತ ಮಾನಸಿಕ ಅಸ್ವಸ್ಥ, ವಿಗ್ರಹ ಕದಿಯಲು ಬಂದಿದ್ದ, ನಾವೇ ಪಂಚೆ ಕೊಟ್ಟೆವು, ದಲಿತ ಅಂತ ಗೊತ್ತಿರಲಿಲ್ಲ ಎಂಬೆಲ್ಲಾ ಕಟ್ಟುಕಥೆಗಳನ್ನು ಕಟ್ಟಿ ತಾವು ಕೇಸಿನಿಂದ ಬಚಾವ್ ಆಗಲು ಪ್ರಯತ್ನಿಸುತ್ತಿದ್ದಾರೆ. ಆತ ಯಾವ ಜಾತಿಯೇ ಆಗಿರಲಿ, ಆ ಯುವಕನ ಸ್ಥಿತಿಯಲ್ಲಿ ತಾವಿದ್ದರೆ ಹೀಗೆ ಮಾಡುತ್ತಿದ್ದೇವೆ ಎಂದು ಆ ಜಾತಿವಾದಿಗಳು ಯೋಚಿಸದಷ್ಟರ ಮಟ್ಟಿಗೆ ದುಷ್ಟರಾಗಿಬಿಟ್ಟಿದ್ದಾರೆ.

ಇನ್ನು ಪೊಲೀಸ್ ಇಲಾಖೆ ಯಥಾಪ್ರಕಾರ ನಿರ್ಲಕ್ಷ್ಯ ತೋರಿದೆ. ವಿಷಯ ತಿಳಿದರೂ ತುಂಬಾ ತಡವಾಗಿ ಪೊಲೀಸರು ಬಂದಿದ್ದು ಮಾತ್ರವಲ್ಲದೇ ಪೊಲೀಸ್ ವಾಹನ ಚಾಲಕ ಶ್ರೀನಿವಾಸ ಸಂತ್ರಸ್ಥ ಯುವಕನಿಗೆ ಒದ್ದಿರುವುದು ಏನನ್ನು ಸೂಚಿಸುತ್ತದೆ? ಇನ್ನು ಪ್ರಕರಣದ ಎಒನ್ ಆರೋಪಿ ಅರ್ಚಕ ಶಿವಪ್ಪ ಎಂಬುವವರ ಹೆಸರನ್ನು ಎಫ್.ಐ.ಆರ್ ನಿಂದ ಕೈಬಿಡಲಾಗಿದೆ ಎಂದು ಹೇಳಲಾಗುತ್ತಿದೆ. ಇದು ಸರ್ವಥಾ ಸರಿಯಲ್ಲ. ಈಗಾದಲ್ಲಿ ಇಂತಹ ಕ್ರೂರ ಆಚರಣೆಗಳು ಮರಕಳಿಸುವುದರಲ್ಲಿ ಸಂದೇಹವೇ ಇಲ್ಲ.

ದುಷ್ಕೃತ್ಯದ ಆರೋಪಿಗಳು

ಈಗ ಐದು ಜನ ಆರೋಪಿಗಳನ್ನು ಬಂಧಿಸಲಾಗಿದೆ. ಎ.ಎಸ್.ಐ ಮತ್ತು ವಾಹನ ಚಾಲಕ ಶ್ರೀನಿವಾಸನನ್ನು ಅಮಾನತು ಮಾಡಲಾಗಿದೆ. ಆದರೆ ಸಂತ್ರಸ್ತ ಪ್ರತಾಪ್ ಗೆ ಇಷ್ಟರಿಂದ ನ್ಯಾಯ ಸಿಗುವುದೇ? ತಪ್ಪಿತಸ್ಥರು ತಮ್ಮ ತಪ್ಪನ್ನು ಅರಿತು ಪ್ರಾಯಶ್ಚಿತ ಮಾಡಿಕೊಳ್ಳುತ್ತಾರೆಯೇ? ಇದು ಗುಂಡ್ಲುಪೇಟೆ ತಾಲ್ಲೂಕಿಗೆ ಮಾತ್ರವಲ್ಲ ಇಡೀ ಕರ್ನಾಟಕ, ದೇಶಕ್ಕೆ ಒಂದು ಸಂದೇಶ ನೀಡಬೇಕಿದೆ. ಜಾತಿವಾದಿಗಳಿಗೆ ಎಚ್ಚರಿಕೆ ನೀಡುವಂತೆ ಮಾಡಬೇಕಿದೆ. ಹಾಗಾಗಿ ಬಂದ್ ನಡೆಸಿ ಮುಂದಕ್ಕೂ ಕಾನೂನು ಮತ್ತು ಬೀದಿ ಹೋರಾಟವನ್ನು ಮುಂದುವರೆಸುತ್ತೇವೆಂದು ಡಾ.ಕೃಷ್ಣಮೂರ್ತಿ ಚಮರಂ ಅಭಿಪ್ರಾಯಪಟ್ಟಿದ್ದಾರೆ.

ರಾಜ್ಯದ ಹಲವು ಕಡೆ ಘಟನೆ ಖಂಡಿಸಿ ತೀವ್ರ ಪ್ರತಿಭಟನೆಗಳು ನಡೆದಿವೆ. ಅವುಗಳ ಕೆಲ ಚಿತ್ರಗಳು ಇಲ್ಲವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...