Homeಕರ್ನಾಟಕದಲಿತ ಯುವಕನ ಬೆತ್ತಲೆ ಪ್ರಕರಣ ಖಂಡಿಸಿ ಜೂನ್ 18 ರಂದು ಗುಂಡ್ಲುಪೇಟೆಯಲ್ಲಿ ಬೃಹತ್ ಜಾಥ

ದಲಿತ ಯುವಕನ ಬೆತ್ತಲೆ ಪ್ರಕರಣ ಖಂಡಿಸಿ ಜೂನ್ 18 ರಂದು ಗುಂಡ್ಲುಪೇಟೆಯಲ್ಲಿ ಬೃಹತ್ ಜಾಥ

ಇಡೀ ಘಟನೆಯನ್ನು ಅವಲೋಕಿಸಿದರೆ ಮನುಷ್ಯರು ಎಷ್ಟು ಜಾತಿಗ್ರಸ್ಥರಾಗಿದ್ದಾರೆ ಎಂಬ ಆತಂಕ ಮೂಡುತ್ತಿದೆ. ಒಬ್ಬ ಯುವಕನನ್ನು ದಲಿತ ಎಂಬ ಕಾರಣಕ್ಕಾಗಿ ಬೆತ್ತಲೆ ಮೆರವಣಿಗೆ ಮಾಡುವಷ್ಟು ಕ್ರೂರ ಮನಸ್ಸುಗಳನ್ನು ಬದಲಾಯಿಸುವುದಾದರೆ ಹೇಗೆ?

- Advertisement -
- Advertisement -

| ನಾನುಗೌರಿ ಡೆಸ್ಕ್ |

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆಯಲ್ಲಿ ಇತ್ತೀಚಗೆ ನಡೆದ ದಲಿತ ಯುವಕನ ಅಮಾನುಷ ಬೆತ್ತಲೆ ಮೆರವಣಿಗೆ ಪ್ರಕರಣ ವಿರೋಧಿಸಿ, ಈ ರೀತಿಯ ಘಟನೆಗಳು ಮರುಕಳಿಸದಂತೆ ಜಾಗೃತಿ ಮೂಡಿಸಲು ಇದೇ ಜೂನ್ 18 ರಂದು ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಬೃಹತ್ ಜಾಥ ಹಮ್ಮಿಕೊಳ್ಳಲಾಗಿದ್ದು, ಇದೇ ವೇಳೆ ಹಲವು ಮಂದಿ ಹಿಂದೂ ಧರ್ಮ ತ್ಯಜಿಸಿ ಬೌದ್ಧ ಧರ್ಮ ಸ್ವೀಕರಿಸಲು ನಿರ್ಧರಿಸಿದ್ದಾರೆ.

ಗುಂಡ್ಲುಪೇಟೆಯ ಪ್ರವಾಸಿ ಮಂದಿರದಲ್ಲಿ ಎಲ್ಲ ಪ್ರಗತಿಪರ ಸಂಘಟನೆಗಳ ವತಿಯಿಂದ ನಿನ್ನೆ ನಡೆದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಘಟನೆ ನಡೆದ ಶನಿ ಮಹಾತ್ಮ ದೇವಸ್ಥಾನದಿಂದಲೇ ಬೃಹತ್ ಮೆರವಣಿಗೆ ಆರಂಭವಾಗಲಿದ್ದು, ಗುಂಡ್ಲುಪೇಟೆ ವರಗೆ ಕಾಲು ನಡಿಗೆ ಜಾಥಾ ಮತ್ತು ಗುಂಡ್ಲುಪೇಟೆ ಬಂದ್ ನಡೆಸಲು ಈ ಮೊದಲು ಎಲ್ಲರೂ ಒಕ್ಕೊರಲಿನಿಂದ ನಿರ್ಧರಿಸಿಲಾಗಿತ್ತು. ಆದರೆ 18ರಂದು ಪಿಯುಸಿ ಸಪ್ಲಿಮೆಂಟರಿ ಪರೀಕ್ಷೆಗಳು ನಡೆಯುತ್ತಿದ್ದು ವಿದ್ಯಾರ್ಥಿಗಳಿಗೆ ತೊಂದರೆಯಾಗಬಾರದೆಂದು ಬಂದ್ ಹಿಂತೆಗೆದುಕೊಂಡು ದೊಡ್ಡ ಜಾಥ ಮತ್ತು ಸಮಾವೇಶ ನಡೆಸಲು ನಿರ್ಧರಿಸಿದ್ದಾರೆ.

ಸಂತ್ರಸ್ತ ಪ್ರತಾಪ್ ರವರು ಐ.ಎ.ಎಸ್ ಪರೀಕ್ಷೆ ಬರೆಯಲು ಹೋಗಿ ತಡವಾದ ಕಾರಣಕ್ಕೆ ಖಿನ್ನನಾಗಿದ್ದಾನೆ. ಆನಂತರ ನಡೆಯಬಾರದ ಘಟನೆಗಳೆಲ್ಲಾ ನಡೆದು ಮನನೊಂದಿದ್ದಾನೆ. ಇಂತಹ ಸಂದರ್ಭದಲ್ಲಿ ನಾವು ಬಂದ್ ಮಾಡಿ ಪಿಯುಸಿ ಸಪ್ಲಿಮೆಂಟರಿ ಪರೀಕ್ಷೆ ಬರೆಯುವವರಿಗೆ ತೊಂದರೆ ಕೊಡಬಾರದೆಂದು ಬಂದ್ ಹಿಂತೆಗೆದುಕೊಂಡಿದ್ದೇವೆ. ಬದಲಿಗೆ ದೊಡ್ಡ ಜಾಥಾ ನಡೆಸಿ ಬಂತೇಜಿಗಳ ನೇತೃತ್ವದಲ್ಲಿ ಹಿಂದೂ ಧರ್ಮ ತ್ಯಜಿಸಿ ಬೌದ್ಧ ಧರ್ಮಕ್ಕೆ ಮತಾಂತರವಾಗಲು ನಿರ್ಧರಿಸಿದ್ದಾರೆ. ಇಷ್ಟೊಂದು ತಾರತಮ್ಯ ಮತ್ತು ಅವಮಾನ ಮಾಡುವ ಈ ಧರ್ಮ ನಮಗ ಬೇಡ ಎಂದು ದಲಿತ ಸಂಘರ್ಷ ಸಮಿತಿಯ ಚೋರನಹಳ್ಳಿ ಶಿವಣ್ಣ ತಿಳಿಸಿದ್ದಾರೆ.

ಸದರಿ ಘಟನೆಗೆ ಸಂಬಂಧಿಸಿದಂತೆ ನಾಡಿನೆಲ್ಲಾ ಪ್ರಗತಿಪರ ಸಂಘಟನೆಗಳು, ಪ್ರಜ್ಞಾವಂತರು, ದಲಿತ ಸಂಘಟನೆಗಳು ಸ್ವಯಂ ಪ್ರೇರಿತರಾಗಿ ತಮ್ಮ ತಮ್ಮ ಸ್ಥಳಗಳಲ್ಲಿ ಪ್ರತಿಭಟನೆಗಳನ್ನು ನಡೆಸಿ ಸರ್ಕಾರದ ಗಮನ ಸೆಳೆದಿವೆ. ಗುಂಡ್ಲುಪೇಟೆಯ ದಲಿತ ಸಂಘಟನೆಗಳು ಒಗ್ಗಟ್ಟಿನಿಂದ ದೂರು ದಾಖಲಿಸಿ ಎಲ್ಲಾ ಆರೋಪಿಗಳನ್ನೂ ಬಂಧಿಸುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದೇವೆ. 
ಆದರೆ, ಅಷ್ಟಕ್ಕೇ ಸುಮ್ಮನಾದರೆ ಇದೊಂದು ಮಾಮೂಲಿ ಪ್ರಕರಣವಾಗಿ ಮರೆಯಾಗುತ್ತದೆ. ಜಾತಿವಾದಗಳಿಗೆ, ಧರ್ಮಾಂಧರಿಗೆ ಹಾಗೂ ಅಮಾನುಷವಾಗಿ ವರ್ತಿಸಿದ ಜನಗಳಿಗೆ ಹಾಗೂ ಜಡ್ಡುಹಿಡಿದ ವ್ಯವಸ್ಥೆಗೆ ಚುರುಕು ಮುಟ್ಟಿಸಿ ಆತ್ಮಸಾಕ್ಷಿ ಬಡಿದೆಬ್ಬಿಸಲು ಈ ಹೋರಾಟ ಹಮ್ಮಿಕೊಂಡಿದ್ದೇವೆ ಎಂದು ದಲಿತ ಹೋರಾಟಗಾರ ಡಾ. ಕೃಷ್ಣಮೂರ್ತಿ ಚಮರಂ ತಿಳಿಸಿದ್ದಾರೆ. 

ಕೃಷ್ಣಮೂರ್ತಿ ಚಮರಂ

ಈ ಹೋರಾಟ ಯಶಸ್ವಿಯಾಗಲು ಎಲ್ಲರ ಸಹಕಾರ ಭಾಗವಹಿಸುವಿಕೆ ಅಗತ್ಯ. ಆದ್ದರಿಂದ ನಾಡಿನೆಲ್ಲಾ ಪ್ರಜ್ಞಾವಂತ ಜನಪರ ಸಂಘಟನೆಗಳು ಎಂದಿನಂತೆ ಸ್ವಯಂಪ್ರೇರಿತವಾಗಿ ಗುಂಡ್ಲುಪೇಟೆಗೆ ಆಗಮಿಸಿ ಚಳವಳಿಗೆ ಬೆಂಬಲ ಸೂಚಿಸಿ, ಯಶಸ್ಸುಗೊಳಿಸಬೇಕೆಂದು ಚಮರಂ ರವರು ಮನವಿ ಮಾಡಿದ್ದಾರೆ.

ಸಭೆಯಲ್ಲಿ ಹಿರಿಯ ಹೋರಾಟಗಾರರಾಗ ಹರಿಹರ ಆನಂದ ಸ್ವಾಮಿ, ಎಂ.ಬಿ.ಶ್ರೀನಿವಾಸ್. ಡಾ. ಕೃಷ್ಣಮೂರ್ತಿ ಚಮರಂ, ಡಾ.ಮಹದೇವ ಭರಣಿ, ಸಿ.ಎಂ.ಕೃಷ್ಣಮೂರ್ತಿ, ಯರಿಯೂರು ಸಿ.ರಾಜಣ್ಣ, ಸೋಮಯ್ಯ ಮಲೆಯೂರು, ಅಶೋಕ ಪುರಂ ಪುನೀತ್.ಕೆಂ.ಎಂ, ನಾಗರಾಜ್, ಕಂದಹಳ್ಳಿ ನಾರಾಯಣ, ಅಣಗಳ್ಳಿ ಬಸವರಾಜ್, ಚೋರನಹಳ್ಳಿ ಶಿವಣ್ಣ, ಮುರುಡಗಳ್ಳಿ ಮಹದೇವು, ಎಡದೊರೆ ಮಹದೇವ, ಆಲಗೂಡು ಚಂದ್ರಶೇಖರ್, ಪುಟ್ಟಸ್ವಾಮಿ, ಸುರೇಶ್ ಮೌರಿ, ಕಾಗಲವಾಡಿ ಶಿವಣ್ಣ, ರಾಮ ಸಮುದ್ರ ಮಹೇಶ, ಸುಭಾಷ್ ಮಾಡ್ರಹಳ್ಳಿ, ಆರ್.ಸೋಮಣ್ಣ,  ಹೊನ್ನೆಗೌಡನಹಳ್ಳಿ ನಾಗಯ್ಯ, ಹಂಗಳ ಪ್ರಸಾದ್, ಗಿರೀಶ್ ಲಕ್ಕೂರು, ಕಂದೆಗಾಲ ಎಂ ಶಿವಣ್ಣ, ಉಮೇಶ ಮಂಗಲ, ರಂಗಸ್ವಾಮಿ, ಮುಂತಾದ ಅನೇಕರು ಭಾಗವಹಿಸಿದ್ದರು ಬೆಂಬಲ ಸೂಚಿಸಿದ್ದಾರೆ.

ಮನುಷ್ಯತ್ವ ಮರೆತಿರುವುದೇ ಈ ಅಮಾನವೀಯ ಘಟನೆಗೆ ಕಾರಣ- ಚಮರಂ

ಇಡೀ ಘಟನೆಯನ್ನು ಅವಲೋಕಿಸಿದರೆ ಮನುಷ್ಯರು ಎಷ್ಟು ಜಾತಿಗ್ರಸ್ಥರಾಗಿದ್ದಾರೆ ಎಂಬ ಆತಂಕ ಮೂಡುತ್ತಿದೆ. ಒಬ್ಬ ಯುವಕನನ್ನು ದಲಿತ ಎಂಬ ಕಾರಣಕ್ಕಾಗಿ ಬೆತ್ತಲೆ ಮೆರವಣಿಗೆ ಮಾಡುವಷ್ಟು ಕ್ರೂರ ಮನಸ್ಸುಗಳನ್ನು ಬದಲಾಯಿಸುವುದಾದರೆ ಹೇಗೆ? ಆ ಕ್ರೂರ ಮನಸ್ಸುಗಳು ಈಗಲೂ ತಮ್ಮ ಘೋರ ತಪ್ಪನ್ನು ಒಪ್ಪಿಕೊಳ್ಳಲು ಸಿದ್ದರಿಲ್ಲ. ಆತ ಮಾನಸಿಕ ಅಸ್ವಸ್ಥ, ವಿಗ್ರಹ ಕದಿಯಲು ಬಂದಿದ್ದ, ನಾವೇ ಪಂಚೆ ಕೊಟ್ಟೆವು, ದಲಿತ ಅಂತ ಗೊತ್ತಿರಲಿಲ್ಲ ಎಂಬೆಲ್ಲಾ ಕಟ್ಟುಕಥೆಗಳನ್ನು ಕಟ್ಟಿ ತಾವು ಕೇಸಿನಿಂದ ಬಚಾವ್ ಆಗಲು ಪ್ರಯತ್ನಿಸುತ್ತಿದ್ದಾರೆ. ಆತ ಯಾವ ಜಾತಿಯೇ ಆಗಿರಲಿ, ಆ ಯುವಕನ ಸ್ಥಿತಿಯಲ್ಲಿ ತಾವಿದ್ದರೆ ಹೀಗೆ ಮಾಡುತ್ತಿದ್ದೇವೆ ಎಂದು ಆ ಜಾತಿವಾದಿಗಳು ಯೋಚಿಸದಷ್ಟರ ಮಟ್ಟಿಗೆ ದುಷ್ಟರಾಗಿಬಿಟ್ಟಿದ್ದಾರೆ.

ಇನ್ನು ಪೊಲೀಸ್ ಇಲಾಖೆ ಯಥಾಪ್ರಕಾರ ನಿರ್ಲಕ್ಷ್ಯ ತೋರಿದೆ. ವಿಷಯ ತಿಳಿದರೂ ತುಂಬಾ ತಡವಾಗಿ ಪೊಲೀಸರು ಬಂದಿದ್ದು ಮಾತ್ರವಲ್ಲದೇ ಪೊಲೀಸ್ ವಾಹನ ಚಾಲಕ ಶ್ರೀನಿವಾಸ ಸಂತ್ರಸ್ಥ ಯುವಕನಿಗೆ ಒದ್ದಿರುವುದು ಏನನ್ನು ಸೂಚಿಸುತ್ತದೆ? ಇನ್ನು ಪ್ರಕರಣದ ಎಒನ್ ಆರೋಪಿ ಅರ್ಚಕ ಶಿವಪ್ಪ ಎಂಬುವವರ ಹೆಸರನ್ನು ಎಫ್.ಐ.ಆರ್ ನಿಂದ ಕೈಬಿಡಲಾಗಿದೆ ಎಂದು ಹೇಳಲಾಗುತ್ತಿದೆ. ಇದು ಸರ್ವಥಾ ಸರಿಯಲ್ಲ. ಈಗಾದಲ್ಲಿ ಇಂತಹ ಕ್ರೂರ ಆಚರಣೆಗಳು ಮರಕಳಿಸುವುದರಲ್ಲಿ ಸಂದೇಹವೇ ಇಲ್ಲ.

ದುಷ್ಕೃತ್ಯದ ಆರೋಪಿಗಳು

ಈಗ ಐದು ಜನ ಆರೋಪಿಗಳನ್ನು ಬಂಧಿಸಲಾಗಿದೆ. ಎ.ಎಸ್.ಐ ಮತ್ತು ವಾಹನ ಚಾಲಕ ಶ್ರೀನಿವಾಸನನ್ನು ಅಮಾನತು ಮಾಡಲಾಗಿದೆ. ಆದರೆ ಸಂತ್ರಸ್ತ ಪ್ರತಾಪ್ ಗೆ ಇಷ್ಟರಿಂದ ನ್ಯಾಯ ಸಿಗುವುದೇ? ತಪ್ಪಿತಸ್ಥರು ತಮ್ಮ ತಪ್ಪನ್ನು ಅರಿತು ಪ್ರಾಯಶ್ಚಿತ ಮಾಡಿಕೊಳ್ಳುತ್ತಾರೆಯೇ? ಇದು ಗುಂಡ್ಲುಪೇಟೆ ತಾಲ್ಲೂಕಿಗೆ ಮಾತ್ರವಲ್ಲ ಇಡೀ ಕರ್ನಾಟಕ, ದೇಶಕ್ಕೆ ಒಂದು ಸಂದೇಶ ನೀಡಬೇಕಿದೆ. ಜಾತಿವಾದಿಗಳಿಗೆ ಎಚ್ಚರಿಕೆ ನೀಡುವಂತೆ ಮಾಡಬೇಕಿದೆ. ಹಾಗಾಗಿ ಬಂದ್ ನಡೆಸಿ ಮುಂದಕ್ಕೂ ಕಾನೂನು ಮತ್ತು ಬೀದಿ ಹೋರಾಟವನ್ನು ಮುಂದುವರೆಸುತ್ತೇವೆಂದು ಡಾ.ಕೃಷ್ಣಮೂರ್ತಿ ಚಮರಂ ಅಭಿಪ್ರಾಯಪಟ್ಟಿದ್ದಾರೆ.

ರಾಜ್ಯದ ಹಲವು ಕಡೆ ಘಟನೆ ಖಂಡಿಸಿ ತೀವ್ರ ಪ್ರತಿಭಟನೆಗಳು ನಡೆದಿವೆ. ಅವುಗಳ ಕೆಲ ಚಿತ್ರಗಳು ಇಲ್ಲವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...