Homeರಾಜಕೀಯದಾವಣಗೆರೆ: ಕೈಗೆ ಬೆಣ್ಣೆದೋಸೆ ಕಮಲಕ್ಕೆ ಖಾರ ಮಿರ್ಚಿ

ದಾವಣಗೆರೆ: ಕೈಗೆ ಬೆಣ್ಣೆದೋಸೆ ಕಮಲಕ್ಕೆ ಖಾರ ಮಿರ್ಚಿ

- Advertisement -
- Advertisement -
  • ಟಿ.ಎನ್.ಷಣ್ಮುಖ |

ಕಳೆದ ಸಲ ಬಹುಪಾಲು `ಕೈ’ವಶವಾಗಿದ್ದ ದಾವಣಗೆರೆ ಜಿಲ್ಲೆಯಲ್ಲಿ ಈ ಸಲ ಬಿಜೆಪಿ ಪೈಪೋಟಿ ನೀಡುತ್ತಿದೆಯಾದರೂ ಹಳೆಯ ಫಲಿತಾಂಶ ಸಂಪೂರ್ಣ ಬುಡಮೇಲಾಗುವ ಸಾಧ್ಯತೆ ಇಲ್ಲ. ಒಟ್ಟು ಎಂಟು ಕ್ಷೇತ್ರಗಳ ಪೈಕಿ 2013ರಲ್ಲಿ ಕಾಂಗ್ರೆಸ್ ಏಳರಲ್ಲಿ ಗೆದ್ದಿದ್ದರೆ ಹರಿಹರ ಮಾತ್ರ ಜೆಡಿಎಸ್ ಪಾಲಾಗಿತ್ತು. ಒಂದು ಕಾಲಕ್ಕೆ ಅಖಂಡ ಪ್ರಾಬಲ್ಯ ಸಾಧಿಸಿದ್ದ ಬಿಜೆಪಿ ಶೂನ್ಯ ಸಾಧನೆ ಮೂಲಕ ನೆಲ ಕಚ್ಚಿತ್ತು.

ಈ ಸಲ ಸ್ಪರ್ಧಿಸುವುದಿಲ್ಲ ಎಂದಿದ್ದ ವಯೋವೃದ್ಧ ಶಾಮನೂರು ಶಿವಶಂಕರಪ್ಪನವರು ಮತ್ತೆ ದಾವಣಗೆರೆ ದಕ್ಷಿಣದಿಂದ ಕೈ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಬಿಜೆಪಿಯಿಂದ ಸ್ಪರ್ಧಿಸಿರುವ ಯಶವಂತರಾವ್ ಯಾವ ನಿಟ್ಟಿನಿಂದ ನೋಡಿದರೂ ಶಾಮನೂರು ಧಣಿಗೆ ಸರಿಸಾಟಿಯಾದ ಅಭ್ಯರ್ಥಿಯೇ ಅಲ್ಲ. ಕಾಂಗ್ರೆಸ್‍ಗೆ ಹರಿದುಹೋಗುವ ಮುಸ್ಲಿಂ ಮತಗಳನ್ನು ತನ್ನತ್ತ ತಿರುಗಿಸಿಕೊಳ್ಳಲು ಜೆಡಿಎಸ್ ಇಲ್ಲಿ ಅಮಾನುಲ್ಲಾ ಖಾನ್‍ನನ್ನು ಅಭ್ಯರ್ಥಿಯಾಗಿಸಿದೆ. ಆದರೆ ಈತ ಮೂರನೇ ಸ್ಥಾನಕ್ಕೆ ತಿಣುಕಾಡಬೇಕಾದ ಪರಿಸ್ಥಿತಿಯಿದೆ. ಬಿಜೆಪಿಯ ಯಶವಂತ ಕಳೆದ ಬಾರಿಗಿಂತ ತನ್ನ ಮತಗಳನ್ನು ಒಂದಷ್ಟು ಹೆಚ್ಚಿಸಿಕೊಳ್ಳುವ ಸಾಧ್ಯತೆ ಇದೆಯಾದರು ಶಿವಶಂಕರಪ್ಪರನ್ನು ಸೋಲಿಸುವಷ್ಟು ಆತನ ಅಖಾಡ ಪಕ್ವವಾಗಿಲ್ಲ.

ದಾವಣಗೆರೆ ಉತ್ತರದಲ್ಲಿ ಹಾಲಿ ಮತ್ತು ಮಾಜಿ ತರಕಾರಿ ಮಂತ್ರಿಗಳದ್ದೇ ಕಾದಾಟ. ಆದಾಗ್ಯೂ ಕಾಂಗ್ರೆಸ್‍ನ ಎಸ್.ಎಸ್.ಮಲ್ಲಿಕಾರ್ಜುನ ಜಯದ ನಗೆ ಬೀರಲು ಹಲವು ಕಾರಣಗಳಿವೆ. ಬಿಜೆಪಿ ರವೀಂದ್ರನಾಥನನ್ನು ಯಡ್ಯೂರಪ್ಪ ಜೊತೆ ಆತ ಕಟ್ಟಿಕೊಂಡಿರುವ ದುಷ್ಮನಿ ಅಡ್ಡಡ್ಡ ಮಲಗಿಸಿದರೆ, ಕಳೆದ ಐದು ವರ್ಷದ ಅಭಿವೃದ್ಧಿ ಕಾರ್ಯಗಳು ಮಲ್ಲಿಕಾರ್ಜುನ್‍ರ ಕೈಹಿಡಿಯಲಿವೆ.

ಎಂ.ಪಿ.ರವೀಂದ್ರ

ಹರಪನಹಳ್ಳಿಯಲ್ಲಿ ಮೇಲ್ನೋಟಕ್ಕೆ ಹಾಲಿ ಕೈ ಶಾಸಕ ಎಂ.ಪಿ.ರವೀಂದ್ರನಿಗೆ ಇಕ್ಕಟ್ಟಿನಂತೆ ಕಂಡುಬಂದರೂ ಬಿಜೆಪಿಯ ಆಂತರಿಕ ಗುದಮುರಗಿ ರವಿಗೆ ನೆರವಾಗುವ ಸಾಧ್ಯತೆ ಇದೆ. ಜೆಡಿಎಸ್‍ನಿಂದ ಸ್ಪರ್ಧಿಸಿರುವ ಕೊಟ್ರೇಶ್ ಕೂಡಾ ಲಿಂಗಾಯತನಾಗಿರುವುದರಿಂದ ರವೀಂದ್ರನ ಜಾತಿ ಮತಗಳು ಹಂಚಿಹೋಗುತ್ತವೆ ಎಂಬ ವಾದವಿದೆ. ಆದರೆ ಅಸಲಿಯತ್ತೇನೆಂದರೆ ಮೊದಲಿನಿಂದಲೂ ಇಲ್ಲಿನ ಬಹುಪಾಲು ಲಿಂಗಾಯತ ಮತಗಳು ಹೋಗುತ್ತಿದ್ದುದು ಬಿಜೆಪಿಯ ಕರುಣಾಕರ ರೆಡ್ಡಿಗೆ, ಯಡ್ಯೂರಪ್ಪನ ಕಾರಣಕ್ಕೆ. ಜೆಡಿಎಸ್‍ನ ಕೊಟ್ರೇಶಿ ಪಕ್ಕಾ ಯಡಿಯೂರಪ್ಪನ ಶಿಷ್ಯ. ಕಳೆದ ಸಲ ಕೆಜೆಪಿಯಿಂದ ಸ್ಪರ್ಧಿಸಿದ್ದ. ಆತನಿಗೇ ಬಿಜೆಪಿ ಟಿಕೇಟ್ ಕೊಡಿಸಬೇಕೆನ್ನುವುದು ಯಡ್ಯೂರಪ್ಪ ಇಂಗಿತವಾಗಿತ್ತು. ಆದರೆ ರೆಡ್ಡಿಯೇ ಟಿಕೇಟ್ ಗಿಟ್ಟಿಸಿಕೊಂಡಿರುವುದರಿಂದ ಕೊಟ್ರೇಶಿ ಜೆಡಿಎಸ್‍ನಿಂದ ಸ್ಪರ್ಧಿಸಿದ್ದಾನೆ. ಅಂದರೆ ಆತ ಕೀಳಲಿರುವುದು ಬಿಜೆಪಿಯ ಮತಗಳನ್ನೇ ಹೊರತು ಕಾಂಗ್ರೆಸ್ ಓಟುಗಳನ್ನಲ್ಲ. ಅಲ್ಲಿಗೆ ರವಿಯ ಗೆಲ್ಲುವ ಸಂಭವ ಹೆಚ್ಚಾಗಿದೆ. ಆದರೆ ರವಿ ಕ್ಷೇತ್ರವನ್ನು ನಿರ್ಲಕ್ಷಿಸಿದ್ದಾನೆ ಎನ್ನುವ ವಾದವೂ ಇದ್ದು ಅದು ಫಲಿತಾಂಶದ ಮೇಲೆ ಪ್ರಭಾವ ಬೀರಿದರೆ ಅಚ್ಚರಿಯಿಲ್ಲ.

ಹರಿಹರದಲ್ಲಿ ಹಾಲಿ ಜೆಡಿಎಸ್ ಶಾಸಕ ಶಿವಶಂಕರನ ದರ್ಪ ಮತ್ತು ಮತದಾರರನ್ನು ಕಡೆಗಣಿಸಿದ ಅಪರಾಧವೇ ಆತನ ಸೋಲಿಗೆ ಮುನ್ನುಡಿಯಾಗುವ ಸಾಧ್ಯತೆಗಳಿವೆ. ಕೈ ಪಾರ್ಟಿಯಿಂದ ಹಳೇ ಹುಲಿ ರಾಮಪ್ಪಜ್ಜ ಕಣಕ್ಕಿಳಿದಿರೋದರಿಂದ ಬಿಜೆಪಿಯ ಹರೀಶನ ಬಿಪಿಯೂ ಯದ್ವತದ್ವಾ ಏರತೊಡಗಿದೆ. ರಾಮಪ್ಪನಿಗೆ ಸ್ವಜಾತಿ ಕುರುಬರು ಮಾತ್ರವಲ್ಲದೇ ಮುಸ್ಲಿಮರು, ನಾಯಕರು, ದಲಿತರ ಮತಗಳೂ ಹರಿದುಬರುವ ಸಾಧ್ಯತೆಯಿದ್ದು ಅಜ್ಜ ಗೆಲುವಿನ ನಗೆ ಬೀರಬಲ್ಲರು.

ವಡ್ನಾಳ್ ರಾಜಣ್ಣ

ಚನ್ನಗಿರಿಯಲ್ಲಿ ತ್ರಿಕೋನ ಸ್ಪರ್ಧೆಯಿದೆ. ಕಾಂಗ್ರೆಸ್‍ನ ಹಾಲಿ ಶಾಸಕ ವಡ್ನಾಳು ರಾಜಣ್ಣ, ಬಿಜೆಪಿಯ ಮಾಡಾಳು ವಿರುಪಾಕ್ಷಪ್ಪ, ಜೆಡಿಯು ಮಹಿಮಾ ಪಟೇಲ್ ಆ ತ್ರಿವಳಿ ವೀರರು. ಇವರ ನಡುವೆ ಜೆಡಿಎಸ್‍ನ ಹೊದಿಗೆರೆ ರಮೇಶ ಆಟಕ್ಕೂ ಇಲ್ಲ ಲೆಕ್ಕಕ್ಕೂ ಇಲ್ಲ. ನಾಯಕ ಜಾತಿಯ ಹೊದಿಗೆರೆ ರಮೇಶನನ್ನು ಹೊರತುಪಡಿಸಿದರೆ ಉಳಿದ ಮೂವರೂ ಲಿಂಗಾಯತರು. ವಡ್ನಾಳು ರಾಜಣ್ಣನಿಗೆ ಜಾತಿ ಮತಗಳು ಕೈಕೊಡುವ ಸಾಧ್ಯತೆಯಿದ್ದು ಅವು ಮಾಡಾಳು ಮಾಡಾಳು ವಿರುಪಾಕ್ಷಪ್ಪನತ್ತ ಮುಖ ಮಾಡಿವೆ. ಆದರೆ ಈ ಮತಗಳ ಮೇಲೆ ಮಹಿಮಾ ಕೂಡಾ ದಾಳಿ ಮಾಡಬಹುದಾದ್ದರಿಂದ ಇನ್ನುಳಿದ ಸಮುದಾಯದ ಮತಗಳು ಯಾರತ್ತ ನುಗ್ಗಲಿವೆ ಎಂಬುದು ಸೋಲುಗೆಲುವನ್ನು ನಿರ್ಧರಿಸಲಿದೆ. ಸದ್ಯಕ್ಕಂತೂ ಬಿಜೆಪಿಯ ಮಾಡಾಳು ಮುಂಚೂಣಿಯಲ್ಲಿದ್ದಾರೆ.

ಜಗಳೂರಿನಲ್ಲಿ ಉದ್ಭವಿಸಿದ ಕಾಂಗ್ರೆಸ್ ಟಿಕೇಟ್ ಬಂಡಾಯದ ಯಡವಟ್ಟು ಬಿಜೆಪಿಯ ಎಸ್.ವಿ.ರಾಮಚಂದ್ರನಿಗೆ ಅನುಕೂಲ ಆಗಬಹುದು. ಮೊದಲು ಪುಷ್ಟಾಗೆ ಟಿಕೇಟ್ ಕೊಟ್ಟ ಕಾಂಗ್ರೆಸ್ ನಂತರ ನಿರ್ಧಾರದಿಂದ ಹಿಂದೆ ಸರಿದು ಹಾಲಿ ಶಾಸಕ ರಾಜೇಶನಿಗೆ ಬಿ ಫಾರಂ ದಯಪಾಲಿಸಿದೆ. ಈ ಕಣ್ಣಾಮುಚ್ಚಾಲೆಯಿಂದ ಸಿಟ್ಟಿಗೆದ್ದ ಪುಷ್ಟ ಬಂಡಾಯ ಅಭ್ಯರ್ಥಿಯಾಗಿ ಕಣದಲ್ಲಿರೋದು ಕಾಂಗ್ರೆಸ್‍ಗೆ ದುಬಾರಿಯಾಗಲಿದೆ.

ಬಸವರಾಜ ನಾಯ್ಕ್

ಮಾಯಕೊಂಡದಲ್ಲಿ ಕಾಂಗ್ರೆಸ್‍ನ ಮೇಲುಗೈ ಕಾಣಿಸುತ್ತೆ. ಮಂತ್ರಿ ಆಂಜನೇಯರ ಅಳಿಯ ಬಸವರಾಜನನ್ನು ಕಾಂಗ್ರೆಸ್ ಅಖಾಡಕ್ಕಿಳಿಸಿದೆ. ಯಡ್ಯೂರಪ್ಪ ತನ್ನ ಭಂಟ ಲಿಂಗಪ್ಪನಿಗೆ ಟಿಕೇಟ್ ಕೊಡಿಸಿರುವುದರಿಂದ ಬೇಸತ್ತಿರುವ ಮಾಜಿ ಶಾಸಕ ಬಸವರಾಜ ನಾಯ್ಕ ಜೆಡಿಯು ಸೇರಿ ಕಣದಲ್ಲಿದ್ದಾನೆ. ಸಾಲದ್ದಕ್ಕೆ ಆನಂದಪ್ಪ ಎಂಬ ಮತ್ತೊಬ್ಬ ಅಭ್ಯರ್ಥಿಯೂ ಬಿಜೆಪಿ ಬಂಡಾಯಗಾರನಾಗಿ ಮತ ಬೇಟೆಯಲ್ಲಿ ತೊಡಗಿದ್ದಾನೆ. ಬಿಜೆಪಿಗೆ ಈ ಇಬ್ಬರ ಬಂಡಾಯ ದುಬಾರಿಯಾಗಲಿದೆ. ಮುಖ್ಯವಾಗಿ ಲಂಬಾಣಿ ಮತಗಳು ಬಿಜೆಪಿಯಿಂದ ದೂರ ಸರಿದಿವೆ. ಶಾಮನೂರು ಪಾಳೆಗಾರಿಕೆ ಕಾರಣಕ್ಕೆ ಒಂದಷ್ಟು ಲಿಂಗಾಯತ ಮತಗಳು ಕಾಂಗ್ರೆಸ್‍ಗೆ ಒಲಿಯಲಿವೆ. ಜೊತೆಗೆ ಕುರುಬ, ನಾಯಕ, ಮಾದಿಗ ಮೊದಲಾದ ಅಹಿಂದ ಮತಗಳೂ ಕೈಹಿಡಿಯಲಿವೆ. ಲಂಬಾಣಿ ಮತಗಳು ಬಸವರಾಜ ನಾಯ್ಕ ಮತ್ತು ಜೆಡಿಎಸ್‍ನ ಶೀಲಾ ನಾಯ್ಕ ನಡುವೆ ಹರಿದು ಹಂಚಿಹೋಗಲಿವೆ. ಬಿಜೆಪಿಯ ಲಿಂಗಪ್ಪನಿಗೆ ಸ್ವಜಾತಿಯ ಮಾದಿಗ ಮತಗಳು ಬೀಳೋದೂ ಡೌಟು. ಏನಿದ್ದರೂ ಯಡ್ಯೂರಪ್ಪನ ವಶೀಲಿಬಾಜಿಯ ಒಂದಷ್ಟು ಲಿಂಗಾಯತ ಮತಗಳಷ್ಟೇ ಗಟ್ಟಿ.

ರೇಣುಕಾಚಾರ್ಯ

ಹೊನ್ನಾಳಿಯಲ್ಲಿ ಬಿಜೆಪಿ-ಕಾಂಗ್ರೆಸ್ ನಡುವೆ ನೆಕ್-ಟು-ನೆಕ್ ಹಣಾಹಣಿಯಿದೆ. ಕಾಂಗ್ರೆಸ್ ಟಿಕೇಟ್ ಕೈತಪ್ಪಿದ ಕಾರಣಕ್ಕೆ ಕುರುಬರ ಎಚ್.ಬಿ.ಮಂಜಪ್ಪ ಆರಂಭದಲ್ಲಿ ಬಂಡಾಯವೆದ್ದರೂ ಈಗ ಹಾಲಿ ಶಾಸಕ ಶಾಂತನಗೌಡನ ಪರ ಲವಲವಿಕೆಯಿಂದ ಪ್ರಚಾರ ಮಾಡುತ್ತಿದ್ದಾನೆ. ಇನ್ನು ಬಿಜೆಪಿಯಿಂದ ಕಣದಲ್ಲಿರುವ ನರ್ಸ್ ರೇಣುಕಾಚಾರ್ಯ ಯುವಜನರು ಮತ್ತು ನೊಣಬ, ಬಣಜಿಗ ಲಿಂಗಾಯತರ ಮತಗಳನ್ನು ನಂಬಿ ಹೋರಾಟ ನಡೆಸಿದ್ದಾನೆ. ಕಾಂಗ್ರೆಸ್‍ಗೆ ಹೆಚ್ಚಿನ ಸಂಖ್ಯೆಯಲ್ಲಿರುವ ಸಾದರ ಲಿಂಗಾಯತರ ಜೊತೆಗೆ ಅಹಿಂದ ವರ್ಗದ ಮತಗಳೂ ಬೀಳುವುದರಿಂದ ಇಲ್ಲಿ ಈ ಸಲವೂ ರೇಣುಕಾರ್ಯನಿಗೆ ಕಷ್ಟವಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ ಎಸ್‌ಐಆರ್ ಗಡುವು ವಿಸ್ತರಿಸಲು ಸುಪ್ರೀಂ ಕೋರ್ಟ್ ನಿರ್ದೇಶನ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.9) ಹಲವಾರು ನಿರ್ದೇಶನಗಳನ್ನು ನೀಡಿದೆ. ಚುನಾವಣಾ ಆಯೋಗವು ನಿಯೋಜಿಸಿರುವ ಮೈಕ್ರೋ-ಅಬ್ಸರ್ವರ್‌ಗಳ (ಸೂಕ್ಷ್ಮ ವೀಕ್ಷಕರು) ಬದಲಿಗೆ ಗ್ರೂಪ್...

ಮುಸ್ಲಿಮರಿಗೆ ಗುಂಡಿಕ್ಕುವಂತೆ ವಿಡಿಯೋ ಹಂಚಿಕೆ: ಅಸ್ಸಾಂ ಸಿಎಂ ವಿರುದ್ಧ ಓವೈಸಿ ದೂರು: ದ್ವೇಷ ಭಾಷಣ ಆದೇಶ ಉಲ್ಲೇಖ 

ಅಸ್ಸಾಂ ಬಿಜೆಪಿ ಘಟಕದ ಅಧಿಕೃತ 'ಎಕ್ಸ್' ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಲಾದ ಮತ್ತು ಈಗ ಅಳಿಸಲಾದ ವೀಡಿಯೊದಲ್ಲಿ, ಮುಸ್ಲಿಮರ ಮೇಲೆ ಸಾಂಕೇತಿಕವಾಗಿ ಗುಂಡು ಹಾರಿಸುತ್ತಿರುವುದನ್ನು ತೋರಿಸಲಾಗಿದೆ ಎಂದು ಆರೋಪಿಸಿ ಹಿಮಂತ ಬಿಸ್ವಾ ಶರ್ಮಾ ವಿರುದ್ಧ...

ನರವಾಣೆ ಪುಸ್ತಕಕ್ಕೆ ಹೆದರಿ ಪ್ರಧಾನಿ ಲೋಕಸಭೆಗೆ ಬರುತ್ತಿಲ್ಲ : ರಾಹುಲ್ ಗಾಂಧಿ

ಪ್ರತಿಪಕ್ಷಗಳು ಎತ್ತಿರುವ ವಿಷಯಗಳಿಂದ, ವಿಶೇಷವಾಗಿ ಮಾಜಿ ಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಪುಸ್ತಕದ ವಿಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಭಯಗೊಂಡಿದ್ದಾರೆ. ಹಾಗಾಗಿ, ಅವರು ರಾಷ್ಟ್ರಪತಿಯ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ...

ಡಿಜಿಟಲ್ ‘ಡಕಾಯಿತಿ’: 54,000 ಕೋಟಿಗೂ ಹೆಚ್ಚಿನ ಹಣ ವಂಚನೆ: ಎಸ್‌ಒಪಿ ರಚಿಸಲು ಕೇಂದ್ರಕ್ಕೆ ಸೂಚನೆ ನೀಡಿದ ಸುಪ್ರೀಂ

ನವದೆಹಲಿ: ಡಿಜಿಟಲ್ ವಂಚನೆಯಿಂದ 54,000 ಕೋಟಿ ರೂ.ಗಳಿಗೂ ಹೆಚ್ಚು ಹಣವನ್ನು ವಂಚಿಸುವುದು ಸಂಪೂರ್ಣ "ದರೋಡೆ ಅಥವಾ ಡಕಾಯಿತಿ" ಎಂದು ಸುಪ್ರೀಂ ಕೋರ್ಟ್ ಸೋಮವಾರ ಬಣ್ಣಿಸಿದೆ ಮತ್ತು ಅಂತಹ ಪ್ರಕರಣಗಳನ್ನು ನಿಭಾಯಿಸಲು ಆರ್‌ಬಿಐ, ಬ್ಯಾಂಕುಗಳು...

ಪಾಕಿಸ್ತಾನ ನಂಟು : ಸಿಎಂ ಶರ್ಮಾ ಆರೋಪ ನಿರಾಧಾರ, ಸಿ-ಗ್ರೇಡ್ ಸಿನಿಮಾ ಎಂದ ಗೌರವ್ ಗೊಗೊಯ್

ತಮಗೂ ಪಾಕಿಸ್ತಾನಕ್ಕೂ ಸಂಬಂಧವಿದೆ ಎಂಬ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರ ಆರೋಪಗಳನ್ನು ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ಗೌರವ್ ಗೊಗೊಯ್ ತಳ್ಳಿಹಾಕಿದ್ದು, ಎಸ್‌ಐಟಿ ವರದಿಯು ಕಳೆದ ಆರು ತಿಂಗಳಿನಿಂದ ಮುಖ್ಯಮಂತ್ರಿ ಬಳಿಯೇ ಇದೆ....

ಪಂಜಾಬ್: ತರಗತಿಯೊಳಗೆ ವಿದ್ಯಾರ್ಥಿನಿಯನ್ನು ಕೊಂದು, ತಾನು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಕಾನೂನು ವಿದ್ಯಾರ್ಥಿ

ಚಂಡೀಗಢ: ಪಂಜಾಬ್‌ನ ತರ್ನ್ ತರಣ್ ಜಿಲ್ಲೆಯಲ್ಲಿ ಕಾನೂನು ವಿದ್ಯಾರ್ಥಿಯೊಬ್ಬ ಶಾಲಾ ಕೋಣೆಯೊಳಗೆ ವಿದ್ಯಾರ್ಥಿನಿಯ ತಲೆಗೆ ಗುಂಡು ಹಾರಿಸಿ ಕೊಂದ ಘಟನೆ ಸೋಮವಾರ ನಡೆದಿದೆ. ಸಹಪಾಠಿಗಳು ಭಯಭೀತರಾಗಿ ನೋಡುತ್ತಿದ್ದ ವೇಳೆ ಈ ಘಟನೆ ನಡೆದಿದೆ. ವಿದ್ಯಾರ್ಥಿನಿಯನ್ನು...

ಅಸ್ಸಾಂ ಸಿಎಂ ಮುಸ್ಲಿಮರ ವಿರುದ್ಧ ನರಮೇಧವನ್ನು ಪ್ರಚೋದಿಸುತ್ತಿದ್ದಾರೆ : ಗೌರವ್ ಗೊಗೊಯ್

ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರು ಮುಸ್ಲಿಮರ ವಿರುದ್ದ ದ್ವೇಷ ಹರಡುತ್ತಿದ್ದಾರೆ, ಅವರ ಜನಾಂಗೀಯ ಹತ್ಯೆಗೆ ಪ್ರಚೋದಿಸುತ್ತಿದ್ದಾರೆ ಎಂದು ಅಸ್ಸಾಂ ರಾಜ್ಯ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಹಾಗೂ ಸಂಸದ ಗೌರವ್ ಗೊಗೊಯ್ ಹೇಳಿದ್ದಾರೆ. ಅಸ್ಸಾಂ...

‘ಎಂಡಿಎಂಎ ಡ್ರಗ್ಸ್ ಕೇಂದ್ರವಾಗಿ ಮಾರ್ಪಟ್ಟ ಮಧ್ಯಪ್ರದೇಶ-ರಾಜಸ್ಥಾನ ಗಡಿ’: 13ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದ ಪೊಲೀಸರು. 

ಭೋಪಾಲ್: ದೇಶದ ಅಫೀಮು ಕೃಷಿ ಮತ್ತು ಕಳ್ಳಸಾಗಣೆ ಮಾರ್ಗವಾಗಿ ದೀರ್ಘಕಾಲದಿಂದ ಕುಖ್ಯಾತಿ ಗಳಿಸಿರುವ ಪಶ್ಚಿಮ ಮಧ್ಯಪ್ರದೇಶ ಮತ್ತು ಪಕ್ಕದ ಆಗ್ನೇಯ ರಾಜಸ್ಥಾನದ ಜಿಲ್ಲೆಗಳು ಈಗ MDMA ಸಂಶ್ಲೇಷಿತ ಡ್ರಗ್ಸ್ ಅಕ್ರಮ ಉತ್ಪಾದನೆ ಮತ್ತು...

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಮುಂದಾದ ವಿರೋಧ ಪಕ್ಷಗಳು: ವರದಿ

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ ವಿರೋಧ ಪಕ್ಷಗಳು ಅವಿಶ್ವಾಸ ನಿರ್ಣಯ ಮಂಡಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ವಿಪಕ್ಷ ಸಂಸದರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ 'ಅನಿರೀಕ್ಷಿತ ಕೃತ್ಯ' ಎಸಗಲು ಸಂಚು...

ಮೆಟಾ-ವಾಟ್ಸಾಪ್ ಗೌಪ್ಯತೆ ನೀತಿ ಪ್ರಕರಣ: ಸುಪ್ರೀಂ ಕೋರ್ಟ್ ವಿಚಾರಣೆ ಫೆಬ್ರವರಿ 23ಕ್ಕೆ ಮುಂದೂಡಿಕೆ 

ನವದೆಹಲಿ: ಗೌಪ್ಯತೆ ನೀತಿಯ ಮೇಲೆ 213.14 ಕೋಟಿ ರೂ. ದಂಡ ವಿಧಿಸಿದ ಭಾರತೀಯ ಸ್ಪರ್ಧಾ ಆಯೋಗದ (ಸಿಸಿಐ) ಆದೇಶದ ವಿರುದ್ಧ ಮೆಟಾ ಪ್ಲಾಟ್‌ಫಾರ್ಮ್ಸ್ ಇಂಕ್ ಮತ್ತು ವಾಟ್ಸಾಪ್ ಸಲ್ಲಿಸಿದ ಅರ್ಜಿಗಳನ್ನು ಸುಪ್ರೀಂ ಕೋರ್ಟ್...