Homeಮುಖಪುಟದಿ ಕ್ವಿಂಟ್ ಸಂಪಾದಕನ ಮೇಲಿನ `ಐಟಿ ಹಲ್ಲೆ’ ಏನನ್ನು ಸೂಚಿಸುತ್ತಿದೆ...?

ದಿ ಕ್ವಿಂಟ್ ಸಂಪಾದಕನ ಮೇಲಿನ `ಐಟಿ ಹಲ್ಲೆ’ ಏನನ್ನು ಸೂಚಿಸುತ್ತಿದೆ…?

ಕೇಂದ್ರ ಸರ್ಕಾರದ ಐಟಿ ಇಲಾಖೆಯ `ಕಾರ್ಯಾಚರಣೆ’ ಹೇಗೆ ಕಾನೂನು ಉಲ್ಲಂಘನೆ ಮಾಡಿ ತನ್ನನ್ನು `ಟ್ರ್ಯಾಪ್’ ಮಾಡಲು ಯತ್ನಿಸುತ್ತಿದೆ ಎಂಬುದನ್ನು ಅವರು ಅದರಲ್ಲಿ ಎಳೆಎಳೆಯಾಗಿ ಬಿಡಿಸಿಟ್ಟಿದ್ದಾರೆ.

- Advertisement -
- Advertisement -

| ಗೌರಿ ಡೆಸ್ಕ್ |

ಮೇ 29, `ದಿ ಕ್ವಿಂಟ್’ ಆನ್‍ಲೈನ್ ಪೋರ್ಟಲ್‍ನ ಸಂಸ್ಥಾಪಕ ಸಂಪಾದಕ ರಾಘವ್ ಬಹ್ಲ್ ಒಂದು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದರು. ಅವತ್ತಿಗೆ ಸರಿಯಾಗಿ ಇಪ್ಪತ್ತೆಂಟು ದಿನಗಳ ಹಿಂದೆ (ಮೇ 1ರಿಂದ) ಶುರುವಾದ ಕೇಂದ್ರ ಸರ್ಕಾರದ ಐಟಿ ಇಲಾಖೆಯ `ಕಾರ್ಯಾಚರಣೆ’ ಹೇಗೆ ಕಾನೂನು ಉಲ್ಲಂಘನೆ ಮಾಡಿ ತನ್ನನ್ನು `ಟ್ರ್ಯಾಪ್’ ಮಾಡಲು ಯತ್ನಿಸುತ್ತಿದೆ ಎಂಬುದನ್ನು ಅವರು ಅದರಲ್ಲಿ ಎಳೆಎಳೆಯಾಗಿ ಬಿಡಿಸಿಟ್ಟಿದ್ದಾರೆ. ಅದರ ಸಾರಾಂಶ ಹೀಗಿದೆ.

ಮೇ 29, 2019ರಂದು ರಾಘವ್ ಅವರಿಗೆ ಅಧಿಕೃತ `ಇ ಕೋಟ್ರ್ಸ್’ ಆನ್‍ಲೈನ್ ಸೇವೆಯಿಂದ ಒಂದು ಸುದ್ದಿ ಬಂದು ತಲುಪುತ್ತದೆ. ಅವರ ವಿರುದ್ಧ ಮೀರತ್‍ನ ಚೀಫ್ ಜ್ಯೂಡಿಶಿಯಲ್ ಮ್ಯಾಜಿಸ್ಟ್ರೇಟ್ ಕೋರ್ಟ್‍ನಲ್ಲಿ ಮೇ 3ರಂದು ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು ಅವುಗಳ ವಿಚಾರಣೆ ಜೂನ್ 6ಕ್ಕೆ ಇದೆ ಎಂಬುದು ಅದರ ಸಾರಾಂಶ.

ಐ.ಟಿ ಇಲಾಖೆಯ ಶೋಕಾಸ್ ನೋಟಿಸ್

ಅದನ್ನು ನೋಡಿದ ರಾಘವ್‍ರಿಗೆ ನಿಜಕ್ಕೂ ಶಾಕ್ ಆಗುತ್ತದೆ. ಯಾಕೆಂದರೆ, ದೂರು ದಾಖಲಾಗಿ ಹೆಚ್ಚೂಕಮ್ಮಿ ಒಂದು ತಿಂಗಳು ಕಳೆಯುತ್ತಾ ಬಂದರು ಅದರ ಬಗ್ಗೆ ಸಮನ್ಸ್ ಆಗಲಿ, ನೋಟಿಸನ್ನೇ ಆಗಲಿ ನೀಡದ ಐಟಿ ಇಲಾಖೆ, ಮುಂದಿನ ವಿಚಾರಣೆ ಇನ್ನೇನು ಬೆರಳೆಣಿಕೆಯ ದಿನಗಳಿರುವಾಗ ಸಾಕ್ಷ್ಯ ಸಮೇತ ವಿಚಾರಣೆಗೆ ಹಾಜರಾಗಿ ಎಂದದ್ದು ನಮ್ಮ ಸಂವಿಧಾನದ `ನೈಸರ್ಗಿಕ ನ್ಯಾಯ’ದ ಸ್ಪಷ್ಟ ಉಲ್ಲಂಘನೆಯಾಗಿತ್ತು. ಅದಕ್ಕಿಂತಲೂ ಮುಖ್ಯವಾಗಿ ಇದೇ ವಿಚಾರವಾಗಿ ಈ ಹಿಂದೆ ಐಟಿ ಇಲಾಖೆ ಕೊಟ್ಟಿದ್ದ ಶೋಕಾಸ್ ನೋಟಿಸ್‍ಗೆ ಪ್ರತಿಕ್ರಿಯಿಸುತ್ತಾ ಅದು ಆರೋಪಿಸುತ್ತಿರುವ ವ್ಯವಹಾರದಲ್ಲಿ ತಾವು ಯಾವ ಅಕ್ರಮವನ್ನೂ ನಡೆಸಿಲ್ಲ ಎಂಬುದನ್ನು ಸಾಬೀತುಪಡಿಸಲು ವಹಿವಾಟು ನಡೆದ ಎಲ್ಲಾ ದಾಖಲೆಗಳನ್ನೂ ಮತ್ತು ಈ ಆರ್ಥಿಕ ವರ್ಷದಲ್ಲಿ ತಾವು, ತಮ್ಮ ಮಡದಿ ರಿತು ಕಪೂರ್ ಸಲ್ಲಿಸಿದ್ದ ಆದಾಯ ತೆರಿಗೆ ಪಾವತಿ ಪ್ರಮಾಣಪತ್ರಗಳನ್ನು ತಮ್ಮ ಚಾರ್ಟೆಡ್ ಅಕೌಂಟೆಂಟ್ (ಸಿಎ) ಮೂಲಕ ಆದಾಯ ತೆರಿಗೆ ಇಲಾಖೆಗೆ ಸಲ್ಲಿಸಿದ್ದರು. ಅವ್ಯಾವುಗಳನ್ನೂ ಲೆಕ್ಕಕ್ಕೆ ಪರಿಗಣಿಸದೆ ಐಟಿ ಇಲಾಖೆ ಈ ದೂರುಗಳನ್ನು ದಾಖಲಿಸಿದ್ದು ಇಲ್ಲಿ ಸ್ಪಷ್ಟವಾಗಿತ್ತು.

ಮೇ 1ರಂದು ರಾಘವ್ ಅವರ ಮೇಲ್ ಐಡಿಗೆ  incometax.gov.in ಅಕೌಂಟ್‍ನಿಂದ ಒಂದು ಶೋಕಾಸ್ ನೋಟಿಸ್ ಬಂದಿತ್ತು. `ನೀವು ಲಂಡನ್‍ನಲ್ಲಿ ಖರೀದಿಸಿರುವ ಆಸ್ತಿಯೊಂದರ ಮೌಲ್ಯವನ್ನು ಆದಾಯ ತೆರಿಗೆ ಇಲಾಖೆಗೆ ಸಲ್ಲಿಸಲುವಾಗ ತಪ್ಪೆಸಗಿದ್ದೀರಿ, ಆ ಆಸ್ತಿಯ ಮೌಲ್ಯಕ್ಕಿಂತ 2.45 ಕೋಟಿ ಕಡಿಮೆ ಮೌಲ್ಯ ತೋರಿಸಿ ತೆರಿಗೆ ವಂಚಿಸಿದ್ದೀರಿ ಎಂದು ಕಪ್ಪುಹಣ ನಿಗ್ರಹ ಕಾಯ್ದೆ-2015ರ ಸೆಕ್ಷನ್ 50 ಮತ್ತು 51ರಡಿ ನಿಮ್ಮ ವಿರುದ್ಧ ಯಾಕೆ ದೂರು ದಾಖಲಿಸಬಾರದು ಎಂಬುದಕ್ಕೆ ಸೂಕ್ತ ದಾಖಲೆಗಳ ಸಹಿತ ವಿವರಣೆ ಕೊಡಿ. ಇಲ್ಲವಾದಲ್ಲಿ ಮುಂದಿನ ಕ್ರಮ ಕೈಗೊಳ್ಳಲು ನಿಮ್ಮ ಅಭ್ಯಂತರವಿಲ್ಲವೆಂದು ಪರಿಗಣಿಸಬೇಕಾಗುತ್ತದೆ’ ಎಂಬುದು ಇಡೀ ನೋಟಿಸಿನ ಸಾರಾಂಶ. ವಿಪರ್ಯಾಸವೆಂದರೆ ಮೇ 1ನೇ ತಾರೀಕು ನೋಟಿಸು ಬರುತ್ತೆ, ದಾಖಲೆ ಸಲ್ಲಿಸಲು ಮೇ 2ನೇ ತಾರೀಕು ಮಧ್ಯಾಹ್ನ 3.30ಕ್ಕೆ ಡೆಡ್‍ಲೈನ್ ಫಿಕ್ಸ್ ಮಾಡಲಾಗುತ್ತೆ. ಅಂದರೆ ಕೇವಲ 24 ಗಂಟೆಗಳ ಒಳಗೆ ಅವರು ದಾಖಲೆಗಳನ್ನು ಹಾಜರುಪಡಿಸಬೇಕಾಗಿತ್ತು.

ರಾಘವ್ ಅವರ ಸಿಎ,  incometax.gov.in ಅಕೌಂಟ್‍ಗೆ ಮೇಲ್ ಮಾಡಿ ನಿಮ್ಮ ಶೋಕಾಸ್ ನೋಟಿಸ್‍ನಲ್ಲಿ ಸಾಕಷ್ಟು ತಪ್ಪು ಆರೋಪಗಳಿವೆ, ಅವುಗಳಿಗೆಲ್ಲ ಸೂಕ್ತ ದಾಖಲೆ ಒದಗಿಸಿ, ಕಾನೂನು ಸಲಹೆ ಪಡೆಯಲು ಎರಡು ವಾರ ಕಾಲಾವಕಾಶ ಬೇಕೆಂದು ಮೇ 2ರಂದು ಇಮೇಲ್ ರವಾನಿಸಿದ್ದರು. ಅದಕ್ಕೆ ತಕ್ಷಣವೇ ಪ್ರತಿಕ್ರಿಯಿದ್ದ ಐಟಿ ಇಲಾಖೆ, ಎರಡು ವಾರ ಕಾಲಾವಕಾಶ ಕೊಡಲು ಸಾಧ್ಯವೇ ಇಲ್ಲ, ಆದರೆ ದಾಖಲೆಗಳನ್ನು ಸಲ್ಲಿಸಲು ಸಾಧ್ಯವಾಗದಿದ್ದರು ಫ್ಯಾಕ್ಚುಯಲ್ ಎರರ್‍ಗಳನ್ನಾದರು ನೀವು ಇವತ್ತೇ ಕಡ್ಡಾಯವಾಗಿ ಸಲ್ಲಿಸಬೇಕು ಎಂದು ತಾಕೀತು ಮಾಡಿತ್ತು. ರಾಘವ್ ಅವರ ಸಿಎ ಅವತ್ತೇ `ಫ್ಯಾಕ್ಚುಯಲ್ ಪೊಸಿಷನ್’ಗಳನ್ನು ದಾಖಲಿಸಿ ಇಮೇಲ್ ರವಾನಿಸಿದ್ದರು.

ರಾಘವ್ ಅವರು ಒಪ್ಪಿಕೊಳ್ಳುವಂತೆ 2015ರಲ್ಲಿ ಅವರು ಲಂಡನ್‍ನಲ್ಲಿ 27.76 ಕೋಟಿ ಮೌಲ್ಯದ ಆಸ್ತಿ ಖರೀದಿಸಿದ್ದು ನಿಜ. ಆದರೆ ಅದಕ್ಕೆ ಸಂಬಂಧಿಸಿದ ಎಲ್ಲಾ ವ್ಯವಹಾರವನ್ನು ಬ್ಯಾಂಕ್ ಮಾರ್ಗಗಗಳಲ್ಲೇ ನಡೆಸಿದ್ದಾರೆ. ಹಾಗಾಗಿ ಕಪ್ಪು ಹಣ ವಹಿವಾಟಿಗೆ ಅವಕಾಶವೇ ಇಲ್ಲ. ಖರೀದಿಯ ಮುಂಗಡವಾಗಿ ರಾಘವ್ ಅವರ ಅಕೌಂಟ್‍ನಿಂದ 2.4 ಕೋಟಿ ವರ್ಗಾವಣೆಯಾದರೆ, ಅವರ ಮಡದಿ ರಿತು ಕಪೂರ್ ಅಕೌಂಟ್‍ನಿಂದ ಅಷ್ಟೇ ಮೊತ್ತ ವರ್ಗಾವಣೆಯಾಗಿದೆ. ಸಾಮಾನ್ಯವಾಗಿ ವಿದೇಶಗಳಲ್ಲಿ ಆಸ್ತಿ ಖರೀದಿಸುವಾಗ ಅಲ್ಲಿನ ಕಟ್ಟಳೆಗಳಿಗೆ ಒಳಪಟ್ಟು ಖರೀದಿ ಪ್ರಕ್ರಿಯೆಯನ್ನು ಸರಾಗವಾಗಿ ಪೂರ್ಣಗೊಳಿಸಿಕೊಡುವ ಕೆಲ ಏಜೆನ್ಸಿಗಳಿರುತ್ತವೆ. ಅಂತದ್ದೇ ಒಂದು ಆರ್.ಬಿ.ಆರ್.ಕೆ ಇನ್ವೆಸ್ಟ್‍ಮೆಂಟ್ ಕಂಪನಿಗೆ ರಾಘವ್ ತಮ್ಮ ಖರೀದಿ ವ್ಯವಹಾರ ಒಪ್ಪಿಸಿದ್ದರು. ಆ ಕಂಪನಿ ಇಂಗ್ಲೆಂಡ್‍ನ ಬರ್‍ಕ್ಲೇ ಬ್ಯಾಂಕ್‍ನಿಂದ ರಾಘವ್ ಅವರಿಗೆ ಸುಮಾರು 17.95 ಕೋಟಿಯಷ್ಟು ಸಾಲ ಮಂಜೂರು ಮಾಡಿಸಿದ್ದಲ್ಲದೆ, ಮಿಕ್ಕುಳಿದ 2.45 ಕೋಟಿಯನ್ನು ತನ್ನ ಅಕೌಂಟ್‍ನಿಂದ ಆಸ್ತಿ ಒಡೆಯರಿಗೆ ವರ್ಗಾವಣೆ ಮಾಡಿತ್ತು. ಈಗ ಐಟಿ ಇಲಾಖೆ ಹೆಚ್ಚುವರಿ ಮೌಲ್ಯ ಮುಚ್ಚಿಟ್ಟಿದ್ದೀರಿ ಎಂದು ಆರೋಪಿಸುತ್ತಿರುವುದು ಇದೇ ರೂ. 2.45 ಕೋಟಿಯ ಮೇಲೆ.

ಈ ಕಂಪನಿಯಲ್ಲಿ ರಾಘವ್ ಅವರ ಹೆಂಡತಿ ರಿತು ಕಪೂರ್ ಅವರು ಹೂಡಿಕೆ ಮಾಡಿದ್ದು, ಆ ಹೂಡಿಕೆ ಆಧಾರದಲ್ಲಿ ಕಂಪನಿ ಅಷ್ಟು ಮೊತ್ತ ಪಾವತಿಸಿದೆ. ಆ ಕಂಪನಿಯಲ್ಲಿ ಹೂಡಿಕೆ ಮಾಡಿದ್ದಕ್ಕೆ ರಿತು ಅವರ ಬಳಿ ಎಲ್ಲಾ ದಾಖಲೆಗಳಿದ್ದು ಅದನ್ನು ಐಟಿ ಇಲಾಖೆಯ ಮುಂದೆ ಘೋಷಿಸಿಕೊಂಡು, ಕಟ್ಟಬೇಕಾದ ತೆರಿಗೆಯನ್ನೆಲ್ಲ ಪಾವತಿಸಿದ್ದಾರೆ. ಹಾಗಾಗಿ ಕಂಪನಿ ಪಾವತಿಸಿದ ಮೊತ್ತಕ್ಕೂ ರಾಘವ್ ದಂಪತಿಗಳು ನ್ಯಾಯಬದ್ಧವಾಗಿಯೇ ತೆರಿಗೆ ಕಟ್ಟಿದ್ದಾರೆ.

ಇದೆಲ್ಲವನ್ನು ವಿವರಿಸಿ ಇಮೇಲ್ ಕಳಿಸಿದ್ದರೂ ಅದನ್ನು ಲೆಕ್ಕಿಸದೆ, ಐಟಿ ಇಲಾಖೆ ಮೇ 3ನೇ ತಾರೀಕು ಎರಡು ದೂರುಗಳನ್ನು ದಾಖಲಿಸುತ್ತದೆಂದರೆ ಇದು ಪೂರ್ವ ನಿಯೋಜಿತ ಸಂಚು ಎಂಬುದು ರಾಘವ್ ಅವರ ಅಭಿಪ್ರಾಯ. ಯಾಕೆಂದರೆ, ಮೇಲ್‍ನಲ್ಲಿ ವಿವರಿಸಿದ್ದು ಮಾತ್ರವಲ್ಲದೆ ಮೇ 13ರಂದು ಈ ಎಲ್ಲಾ ದಾಖಲೆಗಳನ್ನು ತೆಗೆದುಕೊಂಡು ಐಟಿ ಕಚೇರಿಗೆ ಹೋದ ರಾಘವ್ ಅವರ ಪ್ರತಿನಿಧಿಗಳು ಅವುಗಳನ್ನು ಸ್ವೀಕರಿಸಿ, ತಮ್ಮ ಸ್ಪಷ್ಟೀಕರಣ ದಾಖಲಿಸಲು ಅವಕಾಶ ಕೊಡುವಂತೆ ಕೇಳಿದ್ದರು. ಆದರೆ ಅಧಿಕಾರಿಗಳು ದಾಖಲೆಗಳನ್ನು ಸ್ವೀಕರಿಸಲು ನಿರಾಕರಿಸಿದ್ದು ಮಾತ್ರವಲ್ಲದೆ, ಅವರ ಸ್ಪಷ್ಟೀಕರಣವನ್ನೂ ದಾಖಲಿಸಿಕೊಳ್ಳದೆ ವಾಪಾಸು ಕಳಿಸಿದ್ದರು. ಅವತ್ತು ಸಹಾ, ನಿಮ್ಮ ಕಕ್ಷಿದಾರರ ಮೇಲೆ ಈಗಾಗಲೇ (ಮೇ 3ರಂದು) ಕೇಸು ದಾಖಲಿಸಿದ್ದೇವೆ ಎಂಬ ಗುಟ್ಟನ್ನು ಐಟಿ ಅಧಿಕಾರಿಗಳು ಬಿಟ್ಟುಕೊಟ್ಟಿರಲಿಲ್ಲ. ಕೊನೆಗೆ ರೆಜಿಸ್ಟಾರ್ ಪೋಸ್ಟ್ ಮೂಲಕ ಅವುಗಳನ್ನೆಲ್ಲ ಐಟಿ ಕಚೇರಿಗೆ ಕಳುಹಿಸಿ, ಮೇ 14ರಂದು ಅದೇ ದಾಖಲೆಗಳ ಪ್ರತಿಗಳನ್ನು iಟಿಛಿomeಣಚಿx.gov.iಟಿ ಅಕೌಂಟಿಗೆ ಮೇಲ್ ಕೂಡಾ ಮಾಡಿದ್ದರು. ಆದರೆ ಅಲ್ಲಿಂದ ಯಾವ ಪ್ರತಿಕ್ರಿಯೆಯೂ ಬಂದಿರಲಿಲ್ಲ.

ಫ್ಯಾಕ್ಚುಯಲ್ ದೋಷಗಳಿರುವ ಶೋಕಾಸ್ ನೋಟಿಸ್ ನೀಡುವುದು, ನೋಟಿಸ್ ತಲುಪಿದ ಒಂದೇ ದಿನಕ್ಕೆ ದಾಖಲೆ ಒದಗಿಸುವಂತೆ ಅಪ್ರಾಯೋಗಿಕ ಗಡುವು ನೀಡುವುದು, ಅವಧಿ ವಿಸ್ತರಣೆ ಕೋರಿಕೆಯನ್ನು ಮನ್ನಿಸದೆ ಅವರು ಸಲ್ಲಿಸುವ ಪ್ರತಿಕ್ರಿಯೆಯನ್ನೂ ಲೆಕ್ಕಕ್ಕೆ ತೆಗೆದುಕೊಳ್ಳದೆ ಮಾರನೇ ದಿನವೇ ದೂರು ದಾಖಲಿಸುವುದು, ಆ ದೂರಿನ ಕುರಿತು ಯಾವ ಸುಳಿವನ್ನೂ ಬಿಟ್ಟುಕೊಡದಿರುವುದು, ದಾಖಲೆ ಸಲ್ಲಿಸಲು ಕಚೇರಿಗೆ ಹೋದರೆ ಸ್ವೀಕರಿಸದೆ ವಾಪಾಸು ಕಳಿಸುವುದು, ವಿಚಾರಣೆಗೆ ಕೆಲವೇ ದಿನ ಇರುವಾಗ ಇವರಿಗೆ ಸುದ್ದಿ ಗೊತ್ತಾಗುವುದು, ಇವೆಲ್ಲವನ್ನೂ ಗಮನಿಸಿದರೆ ಕೇಂದ್ರ ಐಟಿ ಇಲಾಖೆ ಉದ್ದೇಶಪೂರ್ವಕವಾಗೇ, ಎಲ್ಲಾ ಕಟ್ಟಳೆಗಳನ್ನು ಧಿಕ್ಕರಿಸಿ ತನ್ನನ್ನು ಟ್ರ್ಯಾಪ್ ಮಾಡಲು ಯತ್ನಿಸುತ್ತಿದೆ ಎಂಬುದು ರಾಘವ್ ಅವರ ಸ್ಪಷ್ಟ ನಿಲುವು.

ರಾಘವ್ ಮತ್ತು ರಿತು ದಂಪತಿಗಳು `ನ್ಯೂಸ್ 18’ ಸಂಸ್ಥೆಯಿಂದ ಹೊರಬಂದ ನಂತರ 2015ರಲ್ಲಿ `ದಿ ಕ್ವಿಂಟ್’ ಎಂಬ ಹಿಂದಿ ಮತ್ತು ಇಂಗ್ಲಿಷ್ ಭಾಷೆಯ ಆನ್‍ಲೈನ್ ನ್ಯೂಸ್ ಪೋರ್ಟಲ್ ಆರಂಭಿಸಿದ್ದರು. 2016ರಲ್ಲಿ ಬ್ಲೂಮ್‍ಬರ್ಗ್ ನ್ಯೂಸ್ ಸಂಸ್ಥೆ ಪಾಲುದಾರನಾಗಿ ಇದರಲ್ಲಿ ಹೂಡಿಕೆ ಮಾಡಿದೆ. ಬಹುಪಾಲು ಮಾಧ್ಯಮಗಳು, ಪತ್ರಿಕೆಗಳು ಆಳುವ ಸರ್ಕಾರದ ಕೈಗೊಂಬೆಯಂತೆ, ಒಂದು ಪ್ರಬಲ ರಾಜಕೀಯ ಪಕ್ಷದ ಪಕ್ಷಪಾತಿಗಳಂತೆ ವರ್ತಿಸುತ್ತಿವೆ ಎಂಬ ಅಭಿಪ್ರಾಯ ಜನರ ನಡುವೆ ಮೂಡುತ್ತಿದ್ದ ಕಾಲದಲ್ಲಿ `ದಿ ಕ್ವಿಂಟ್’ ಅದಕ್ಕೆ ತದ್ವಿರುದ್ಧವಾಗಿ ಯಾರ ಮುಲಾಜಿಗೂ ಒಳಗಾಗದೆ ಅಧಿಕಾರಸ್ಥರ ವಿರುದ್ಧವೇ ಆಘಾತಕಾರಿ ಸತ್ಯಗಳನ್ನು ಹೊರಗೆಡವುವ ಸುದ್ದಿಸಂಸ್ಥೆಯಾಗಿ ಗುರುತಿಸಿಕೊಂಡಿತ್ತು. 2018ರಲ್ಲಿ ರಾಘವ್ ಅವರ ಮೇಲೆ ಐಟಿ ದಾಳಿ ನಡೆದಾಗ, ಅದರ ಹಿಂದೆ `ದಿ ಕ್ವಿಂಟ್’ ನ್ಯೂಸ್ ಸಂಸ್ಥೆಯನ್ನು ಹತ್ತಿಕ್ಕುವ ಹುನ್ನಾರಗಳಿರಬಹುದೆಂದು ಹಲವಾರು ವಿಶ್ಲೇಷಕರು ಅಂದಾಜಿಸಿದ್ದರು. ಈಗ ನಡೆಯುತ್ತಿರುವ ವಿದ್ಯಮಾನ ಗಮನಿಸಿದರೆ ಅದು ನಿಜವೆನ್ನಿಸುತ್ತದೆ.

ಇದನ್ನೂ ಓದಿರಿ: ಕನ್ನಡದ ನಟರ ಮೇಲೆಕೆ ಐ.ಟಿ ಕಣ್ಣು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...