Homeಚಳವಳಿದೆಹಲಿ ಚಲೋ: ಹೋರಾಟದಲ್ಲಿ ತಮ್ಮದೆ ಛಾಪು ಮೂಡಿಸಿದ ರೈತ ಮಹಿಳೆಯರು!

ದೆಹಲಿ ಚಲೋ: ಹೋರಾಟದಲ್ಲಿ ತಮ್ಮದೆ ಛಾಪು ಮೂಡಿಸಿದ ರೈತ ಮಹಿಳೆಯರು!

- Advertisement -
- Advertisement -

ಕೇಂದ್ರ ಸರ್ಕಾರದ ಕರಾಳ ಕೃಷಿ ನೀತಿಗಳ ವಿರುದ್ದ ದೇಶದಾದ್ಯಂತ ರೈತರು ನಡೆಸುತ್ತಿರುವ ಐತಿಹಾಸಿಕ ಹೋರಾಟದಲ್ಲಿ ನೂರಾರು ಮಹಿಳಾ ರೈತರು ಕೂಡಾ ಭಾಗವಹಿಸಿದ್ದಾರೆ. ಹೋರಾಟವು ಐದನೇ ದಿನಕ್ಕೆ ಕಾಲಿಟ್ಟಿದ್ದು ಲಕ್ಷಾಂತರ ರೈತರು ದೆಹಲಿಯ ಗಡಿಯಲ್ಲಿ ನರೆದಿದ್ದು ಕೇಂದ್ರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನೆಯಲ್ಲಿ ಭಾಗವಹಿಸುವುದು ಮಾತ್ರವಲ್ಲದೆ ತಮ್ಮ ಆಹಾರವನ್ನು ತಯಾರಿ ಮಾಡಿ ಅದನ್ನು ಇತರರಿಗೂ ಹಂಚುವ ಮೂಲಕ ಮಹಿಳೆಯರು ಈ ಹೋರಾಟಕ್ಕೆ ತಮ್ಮದೇ ಆದ ಕೊಡುಗೆ ನೀಡುತ್ತಿದ್ದಾರೆ. ಪಟಿಯಾಲ ಮೂಲದ 70 ವರ್ಷದ ಮಹಿಳೆ ಗುರುದೇವ್ ಕೌರ್ ಕಳೆದ ಮೂರು ದಿನಗಳಿಂದ ದೆಹಲಿ ಸಿಂಗೂ ಗಡಿಯಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ. “ನನ್ನ ಆರೋಗ್ಯದ ಕಾಳಜಿ ವಹಿಸಲು ಕುಟುಂಬ ಸದಸ್ಯರಿಂದ ಪ್ರತಿ ಎರಡು ಗಂಟೆಗಳಿಗೊಮ್ಮೆ ಕರೆ ಬರುತ್ತದೆ. ಪಂಜಾಬ್‌ನಲ್ಲಿ ಕಳೆದ ಎರಡು ತಿಂಗಳಿನಿಂದ ನಾವು ಪ್ರತಿದಿನ ನಮ್ಮ ಕ್ರಿಯಾ ಯೋಜನೆ ಕುರಿತು ಸಭೆಯಲ್ಲಿ ಭಾಗವಹಿಸಿದ್ದೇವೆ. ನಮ್ಮ ಕೊನೆಯ ಉಸಿರಾಟದವರೆಗೂ ನಾವು ಆಂದೋಲನವನ್ನು ಬೆಂಬಲಿಸಲು ಸಿದ್ಧರಿದ್ದೇವೆ” ಎಂದು ಅವರು ಹೇಳಿದ್ದಾರೆ.

 

“ನನಗೆ ತುಂಬಾ ವಯಸ್ಸಾದ ಕಾರಣ ನನ್ನ ಬಗ್ಗೆ ಚಿಂತಿತರಾಗಿದ್ದಾರೆ. ಆದರೆ ನಾನು ಒಬ್ಬಂಟಿಯಾಗಿಲ್ಲ. ಕಾರಣ ನನ್ನ ಬಗ್ಗೆ ಕಾಳಜಿ ವಹಿಸಲು ಇಲ್ಲಿ ನೂರಾರು ಮಹಿಳೆಯರು ಇದ್ದಾರೆ ಮತ್ತು ನಾವು ಪರಸ್ಪರ ಸಹಕಾರದಿಂದ ಇದ್ದೇವೆ. ನಮ್ಮ ದೈನಂದಿನ ಔಷಧಿಗಳು ಮತ್ತು ಇತರ ಅವಶ್ಯಕತೆಗಳನ್ನು ನಮ್ಮೊಂದಿಗೆ ತಂದಿದ್ದೇವೆ ” ಎಂದು ಅವರು ಹೇಳಿದ್ದಾರೆ.

ಮತ್ತೊಬ್ಬ ಪ್ರತಿಭಟನಾಕಾರರಾದ 50 ವರ್ಷದ ಚರಣಜೀತ್ ಕೌರ್ ಅವರು ಹೇಳುವಂತೆ, “ತಮ್ಮ ಟ್ರಾಕ್ಟರ್ ಮುಖ್ಯ ಪ್ರತಿಭಟನಾ ಸ್ಥಳದಿಂದ ಕನಿಷ್ಠ ನಾಲ್ಕು ಕಿಲೋಮೀಟರ್ ದೂರದಲ್ಲಿದೆ. ಮಧ್ಯಾಹ್ನ ನಮ್ಮ ರೈತ ನಾಯಕರು ಭಾಷಣಗಳನ್ನು ಮಾಡುವ ಸ್ಥಳಕ್ಕೆ ಹೋಗಿ ನಾವು ಕುಳಿತುಕೊಳ್ಳುತ್ತೇವೆ. ಕೃಷಿ ಕಾನೂನುಗಳಿಗೆ ವಿರುದ್ಧವಾಗಿ ಘೋಷಣೆಗಳನ್ನು ಕೂಗುತ್ತೇವೆ. ಸಂಜೆಯ ಹೊತ್ತಿಗೆ, ನಾವು ನಮ್ಮ ಟ್ರಾಕ್ಟರ್ ಟ್ರಾಲಿಗಳಿಗೆ ಹಿಂತಿರುಗುತ್ತೇವೆ, ಅದು ಈಗ ನಮ್ಮ ಮನೆಯಾಗಿದೆ” ಎಂದು ಹೇಳಿದ್ದಾರೆ.

“ನಾವು ಪಡಿತರವನ್ನು ಹೇರಳವಾಗಿ ತಂದಿದ್ದೇವೆ. ನಮಗೆ 5-6 ತಿಂಗಳುಗಳ ಕಾಲ ಉಳಿಯಲು ಆಹಾರವಿದೆ. ನಾವು ದೆಹಲಿಗೆ ತೆರಳಲು ನಿರ್ಧರಿಸಿದಾಗಲೆ ಪ್ರತಿಯೊಬ್ಬರೂ ವಿಭಿನ್ನ ವಸ್ತುಗಳನ್ನು ನೀಡಿದ್ದಾರೆ. ನಮ್ಮ ಬೇಡಿಕೆಗಳು ಈಡೇರಿದಾಗ ಮಾತ್ರ ಮರಳುತ್ತೇವೆ” ಎಂದು ಪಟಿಯಾಲಕ್ಕೆ ಹತ್ತಿರವಿರುವ ಫತೇಘಡ್‌ನ ಇನ್ನೊಬ್ಬ ರೈತ ಮಹಿಳೆ 62 ವರ್ಷದ ಬಾಲ್ ದೇವ್ ಕೌರ್ ಹೇಳಿದ್ದಾರೆ.

ಲಕ್ಷಾಂತರ ರೈತರು ದೆಹಲಿಯ ಸಿಂಗು ಗಡಿಯನ್ನು ತಲುಪಿ ಶುಕ್ರವಾರದಿಂದ ಪ್ರತಿಭಟನೆ ನಡೆಸುತ್ತಿದ್ದಾರೆ, ಆದರೆ  ರಾಜಧಾನಿಗೆ ಪ್ರವೇಶಿಸುವುದನ್ನು ನಿರ್ಬಂಧಿಸಲಾಗಿದೆ. ದೆಹಲಿ ಪೊಲೀಸರು ಬುರಾರಿಯಲ್ಲಿರುವ ಸಂತ ನಿರಂಕರಿ ಮೈದಾನವನ್ನು ರೈತರಿಗೆ ತಮ್ಮ ಆಂದೋಲನವನ್ನು ಮುಂದುವರೆಸಲು ಕೇಳಿಕೊಂಡಿದ್ದರಾದರೂ ರೈತರು ಈ ಪ್ರಸ್ತಾಪವನ್ನು ತಿರಸ್ಕರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...