Homeಮುಖಪುಟದೆಹಲಿ ಮಹಿಳೆಯರಿಗೆ ಪ್ರಯಾಣ ಉಚಿತ: ಸಮಾನತೆಯ ಹಾದಿಯಲ್ಲೊಂದು ಪರಿಣಾಮಕಾರಿ ಹೆಜ್ಜೆ

ದೆಹಲಿ ಮಹಿಳೆಯರಿಗೆ ಪ್ರಯಾಣ ಉಚಿತ: ಸಮಾನತೆಯ ಹಾದಿಯಲ್ಲೊಂದು ಪರಿಣಾಮಕಾರಿ ಹೆಜ್ಜೆ

ಕರ್ನಾಟಕದ ಬೆಂಗಳೂರಿನಲ್ಲೂ ವಾಹನಗಳ ದಟ್ಟಣೆ ಮಿತಿಮೀರಿದೆ ಹಾಗೂ ಬಸ್ ಮತ್ತು ಮೆಟ್ರೊ ಪ್ರಯಾಣದ ದರಗಳು ದೇಶದಲ್ಲೇ ಎಲ್ಲಕ್ಕಿಂತ ಹೆಚ್ಚು. ಹಾಗಾಗಿ ಕರ್ನಾಟಕ ಸರಕಾರವೂ ಇಂತಹ ಒಂದು ಕ್ರಮವನ್ನು ಕೈಗೊಳ್ಳಲು ಇದು ಸಕಾಲ.

- Advertisement -
- Advertisement -

| ನ್ಯಾಯಪಥ ಸಂಪಾದಕೀಯ |

ಮೊನ್ನೆ ದೆಹಲಿಯ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ದೆಹಲಿಯಲ್ಲಿ ಮಹಿಳೆಯರಿಗೆ ಬಸ್ ಹಾಗೂ ಮೆಟ್ರೊ ಪ್ರಯಾಣ ಉಚಿತಗೊಳಿಸಲು ದೆಹಲಿ ಸರಕಾರ ಯೋಜನೆ ರೂಪಿಸಲಿದೆ ಎಂದು ತಿಳಿಸಿದರು. ಇದು ಖಂಡಿತವಾಗಿಯೂ ಒಂದು ಸ್ವಾಗತಾರ್ಹ ಕ್ರಮ.

ಕಳೆದ ಹಲವು ದಶಕಗಳಲ್ಲಿ ಮಹಿಳೆಯರ ಸಬಲೀಕರಣಕ್ಕಾಗಿ ಹಲವಾರು ಕ್ರಮಗಳನ್ನು ಕೈಗೊಂಡಿದ್ದರೂ ನಮ್ಮ ದೇಶದಲ್ಲಿ ಮಹಿಳೆಯರ ಸ್ಥಿತಿ ಇನ್ನೂ ದುಸ್ತರವಾಗಿದೆ ಎನ್ನುವುದನ್ನು ಯಾರೂ ಅಲ್ಲಗಳೆಯಲಾರರು. ಎಲ್ಲಾ ಪರೀಕ್ಷೆಗಳಲ್ಲಿ ಹೆಚ್ಚಿನ ಅಂಕ ಪಡೆಯುವವರು ಬಾಲಕಿಯರೇ ಆಗಿದ್ದರೂ ಉನ್ನತ ಶಿಕ್ಷಣದಲ್ಲಿ ಮಹಿಳೆಯರ ಅನುಪಾತ ಇನ್ನೂ ಕಡಿಮೆ ಇದೆ. ಒಂದೇ ಕೆಲಸಕ್ಕೆ ಮಹಿಳೆಯರು ಪಡೆಯುವ ವೇತನ ಪುರುಷರು ಪಡೆಯುವ ವೇತನಕ್ಕಿಂತ ಕಡಿಮೆಯಾಗಿರುವುದೂ ವಾಸ್ತವ.

ಉದ್ಯೋಗಗಳಲ್ಲೂ ಮಹಿಳೆಯರ ಭಾಗವಹಿಸುವಿಕೆ ಪುರುಷರಿಗಿಂತ ತುಂಬಾ ಕಡಿಮೆಯಾಗಿದೆ. ಇದರೊಂದಿಗೆ ರಾಜಕೀಯ, ಸಾಮಾಜಿಕ ಮತ್ತು ಸಾಂಸ್ಕೃತಿಕ ವಲಯದಲ್ಲೂ ಮಹಿಳೆಯರ ಪ್ರಾತಿನಿಧ್ಯ ಕಡಿಮೆ. ಶಿಕ್ಷಣವನ್ನು ತೊರೆಯುವ ಮಕ್ಕಳಲ್ಲಿ ಹೆಚ್ಚಿನವರು ಬಾಲಕಿಯರೇ. ಇಂತಹ ಸನ್ನಿವೇಶದಲ್ಲಿ ಮಹಿಳೆಯರ ಸಬಲೀಕರಣಕ್ಕೆ ಕ್ರಾಂತಿಕಾರಿಯಾದ ಕ್ರಮಗಳನ್ನು ತೆಗೆದುಕೊಳ್ಳುವುದು ಅತ್ಯವಶ್ಯಕ. ಆ ನಿಟ್ಟಿನಲ್ಲಿ ಆಗಬೇಕಾದ ನೂರಾರು ಕ್ರಮಗಳಲ್ಲಿ ದೆಹಲಿ ಬಸ್ ಮತ್ತು ಮೆಟ್ರೊ ಪ್ರಯಾಣವನ್ನು ಮಹಿಳೆಯರಿಗೆ ಉಚಿತಗೊಳಿಸುವಂತಹವು ಒಂದು.

ದೆಹಲಿಯಲ್ಲಿ ಕಳೆದ ವರ್ಷ ಬಸ್ ಮತ್ತು ಮೆಟ್ರೊ ಪ್ರಯಾಣದರವನ್ನು ಹೆಚ್ಚಿಸಿದಾಗ ಅದರಿಂದ ತೊಂದರೆಗೊಳಗಾದವರು ಹೆಚ್ಚಿನವರು ಮಹಿಳೆಯರೇ ಆಗಿದ್ದಾರೆ. ದಿನಕ್ಕೆ ಸರಾಸರಿ ಒಂದು ನೂರು ರೂಪಾಯಿಗಳನ್ನು ಪ್ರಯಾಣಕ್ಕೆ ಖರ್ಚು ಮಾಡುವುದು ದೊಡ್ಡ ಹೊರೆಯಾಗಿ ಪರಿಣಮಿಸಿದೆ. ಈ ಕ್ರಮದಿಂದ ಆ ಹೊರೆ ಕಡಿಮೆಯಾಗಲಿದ್ದು, ಉಳಿತಾಯವಾಗುವ ಹಣವನ್ನು ತಮಗಾಗಿ, ತಮ್ಮ ಕುಟುಂಬಕ್ಕಾಗಿ ಬಳಸಲು ಸಹಕಾರಿಯಾಗಲಿದೆ. ಇದನ್ನು ಪುರುಷ ವರ್ಸಸ್ ಮಹಿಳೆ ಎಂದು ನೋಡಬಾರದು. ಪ್ರಯಾಣವನ್ನು ಉಚಿತವಾಗಿಸಿರುವುದು ಇಲ್ಲಿನ ಮಹಿಳೆಯರಿಗೇ ಹೊರತು ಅನ್ಯ ಗೃಹಗಳಿಂದ ಬಂದ ಜೀವಿಗಳಿಗಲ್ಲ. ಈ ಕ್ರಮದಿಂದ ಆಗುವ ಲಾಭ, ಅವರ ಕುಟುಂಬಕ್ಕೆ ಮತ್ತು ಇಡೀ ಸಮಾಜಕ್ಕೇ ಆಗಲಿದೆ.

ದೆಹಲಿಯಲ್ಲಿ ಮತ್ತು ದೇಶದ ಇತರೆಡೆಯಲ್ಲಿ ಮಹಿಳೆಯರ ಸುರಕ್ಷತೆ ಒಂದು ದೊಡ್ಡ ಸಮಸ್ಯೆಯಾಗಿದೆ. ಮಹಿಳೆಯರಿಗೆ ಸಾರ್ವಜನಿಕ ಸಾರಿಗೆಯೇ ಅತ್ಯಂತ ಸುರಕ್ಷಿತವಾದದ್ದು ಎನ್ನುವುದರಲ್ಲಿ ಸಂಶಯವಿಲ್ಲ. ಸಾರ್ವಜನಿಕ ಪ್ರಯಾಣವನ್ನು ಉಚಿತಗೊಳಿಸುವುದರಿಂದ ಹೆಚ್ಚೆಚ್ಚು ಮಹಿಳೆಯರು ಸಾರ್ವಜನಿಕ ಸಾರಿಗೆಯನ್ನು ಬಳಸಿ, ಅದನ್ನು ಇನ್ನಷ್ಟು ಸುರಕ್ಷಿತವಾಗಿಸುವಲ್ಲಿ ಸಹಕಾರಿಯಾಗಲಿದೆ. ಮಹಿಳೆಯರ ಆರ್ಥಿಕ ಸ್ವಾತಂತ್ರ ಇನ್ನೂ ಪುರುಷರಿಗೆ ಹೋಲಿಸುವಷ್ಟು ಇಲ್ಲವಾದುದರಿಂದ, ಒಂದು ಸಣ್ಣ ಸ್ವಾತಂತ್ರ್ಯವನ್ನೂ ದೆಹಲಿಯ ಮಹಿಳೆಯರು ಅನುಭವಿಸಲಿದ್ದಾರೆ.

ಈ ಕ್ರಮದಿಂದ ವರ್ಷಕ್ಕೆ 700 ಕೋಟಿಗಳಷ್ಟು ಹಣ ವ್ಯಯಿಸಬೇಕಾಗಬಹುದು ಎಂದು ಅಂದಾಜಿಸಲಾಗಿದೆ. ಇತರ ಯೋಜನೆಗಳಿಗೆ ಮಾಡುವ ಖರ್ಚಿಗೆ ಹೋಲಿಸಿದರೆ ಇದು ದೊಡ್ಡ ಹೊರೆಯಾಗಲಾರದು ಮತ್ತು ಇಂತಹ ಕಲ್ಯಾಣ ಯೋಜನೆಗಳನ್ನು ರೂಪಿಸುವುದು ಸರಕಾರದ ಒಂದು ಪ್ರಮುಖ ಕರ್ತವ್ಯ. ಹಾಗೂ ಇಂತಹ ಕಲ್ಯಾಣ ಯೋಜನೆಗಳಿಂದ ಸಮಾಜದಲ್ಲಿ ಆಗುವ ಬದಲಾವಣೆಗಳಿಂದ ಒಟ್ಟಾರೆ ಆರ್ಥಿಕತೆಗೆ ಬಲ ಸಿಗುವುದೂ ಸಾಬೀತಾಗಿರುವ ಸತ್ಯ.

ಇದರೊಂದಿಗೆ, ದೇಶದ ಎಲ್ಲಾ ನಗರಗಳಲ್ಲಿ ವಾಹನಗಳ ದಟ್ಟಣೆ ನಿಭಾಯಿಸಲಾಗದಷ್ಟು ಹೆಚ್ಚುತ್ತಲೇ ಇದೆ. ಅದಕ್ಕಿರುವ ಒಂದೇ ಉತ್ತರ ಸಾರ್ವಜನಿಕ ಸಾರಿಗೆ. ಸದ್ಯ ದೆಹಲಿಯ ಮೆಟ್ರೋಗಳಲ್ಲಿ ಪ್ರಯಾಣಿಸುವ ಮಹಿಳೆಯರು 33%ರಷ್ಟಿದ್ದಾರೆ. ಈ ಕ್ರಮದಿಂದ ಇನ್ನಷ್ಟು ಮಹಿಳೆಯರು ಸಾರ್ವಜನಿಕ ಸಾರಿಗೆಯನ್ನು ಬಳಸಲಾರಂಭಿಸಿದರೆ ವಾಹನದಟ್ಟಣೆಯಲ್ಲಿ ಇಳಿಮುಖ ಕಾಣಬಹುದಾಗಿದೆ. ದೆಹಲಿಯು ಸಂಪೂರ್ಣ ರಾಜ್ಯದ ಸ್ಥಾನಮಾನವನ್ನು ಹೊಂದಿಲ್ಲವಾದುದರಿಂದ ಕೇಂದ್ರ ಸರಕಾರದ ಸಹಕಾರ ಬೇಕಾಗುತ್ತದೆ. ಹಾಗಾಗಿ ಕೇಂದ್ರ ಸರಕಾರವೂ ಚುನಾವಣಾ ಲೆಕ್ಕಾಚಾರಗಳನ್ನು ಮಾಡದೇ ಸಂಪೂರ್ಣ ಸಹಕಾರ ನೀಡಬೇಕು. ಹಾಗೂ ಈ ಯೋಜನೆಯನ್ನು ಮುಂಬರುವ ಚುನಾವಣೆಗಳನ್ನು ದೃಷ್ಟಿಯಲ್ಲಿ ನೋಡುವುದು ಸಮಂಜಸವಲ್ಲ. ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮಾಡಿದ ಯೋಜನೆಯೇ ಆದರೂ, ಅದರಿಂದ ಸಮಾಜಕ್ಕೆ ಒಳ್ಳೆಯದಾಗುತ್ತಿದ್ದಲ್ಲಿ ಸ್ವಾಗತಿಸಬೇಕು.

ಕರ್ನಾಟಕದ ಬೆಂಗಳೂರಿನಲ್ಲೂ ವಾಹನಗಳ ದಟ್ಟಣೆ ಮಿತಿಮೀರಿದೆ ಹಾಗೂ ಬಸ್ ಮತ್ತು ಮೆಟ್ರೊ ಪ್ರಯಾಣದ ದರಗಳು ದೇಶದಲ್ಲೇ ಎಲ್ಲಕ್ಕಿಂತ ಹೆಚ್ಚು. ಬಸ್ ಪ್ರಯಾಣದರದ ಹೊರೆಯಿಂದಾಗಿ ಅನೇಕ ಮಹಿಳೆಯರು ಹಲವಾರು ಕಿಲೋಮೀಟರ್‍ಗಳಷ್ಟು ದೂರ ನಡೆದುಕೊಂಡೇ ಹೋಗಬೇಕಾದದ್ದನ್ನು ನಾವು ನೋಡಿದ್ದೇವೆ. ದುಬಾರಿ ಮೆಟ್ರೊ ಮತ್ತು ಬಸ್ ದರಗಳಿಂದ ಹಾಗೂ ವಾಹನದಟ್ಟಣೆಗಳಿಂದ ಆಗುವ ಸಂಕಷ್ಟಗಳನ್ನು ಬಗೆಹರಿಸಲೂ ಕರ್ನಾಟಕ ಸರಕಾರವೂ ಇಂತಹ ಒಂದು ಕ್ರಮವನ್ನು ಕೈಗೊಳ್ಳಲು ಇದು ಸಕಾಲ.

ಮೇಲೆ ಹೇಳಿದ ಈ ಎಲ್ಲಾ ತಾಂತ್ರಿಕ ಮತ್ತು ಇತರೆ ವಿಷಯಗಳಿಗೂ ಮಿಗಿಲಾದ ಪರಿಣಾಮಗಳನ್ನು ಸೃಷ್ಟಿಸುವ ಸಾಮಥ್ರ್ಯ ಈ ಯೋಜನೆಗಿದೆ. ದೇಶ ಎಷ್ಟೇ ಮುಂದುವರೆದಿದ್ದರೂ ಮಹಿಳೆಯರ ಸ್ವಾತಂತ್ರ್ಯಕ್ಕೆ ಇರುವ ಕಡಿವಾಣಗಳು ಕಡಿಮೆಯಾಗಿಲ್ಲ. ಹೆಚ್ಚಿನ ಮಹಿಳೆಯರ ಪ್ರತಿಯೊಂದು ಹೆಜ್ಜೆಗೂ ಆ ಮನೆಯ ಪುರುಷನ ಸಮ್ಮತಿ ಇರಲೇಬೇಕು. ಅನೇಕ ಮಹಿಳೆಯರಿಗೆ ಮನೆಯಲ್ಲಿ ಮಾತನಾಡುವ, ವಿಚಾರ ಮಾಡುವ ಅವಕಾಶವಿಲ್ಲ. ಇದರೊಂದಿಗೆ ಅವರಿಗೆ ಆರ್ಥಿಕ ಸ್ವಾವಲಂಬನೆ ಇಲ್ಲದಿದ್ದರೆ ಅವರ ಪರಿಸ್ಥಿತಿಯನ್ನು ಇನ್ನಷ್ಟು ಉಲ್ಬಣಗೊಳಿಸುತ್ತದೆ. ನಮ್ಮ ಪುರುಷಪ್ರಧಾನ ಸಮಾಜ ಮಹಿಳೆಯರ ಸಬಲೀಕರಣದ ಪ್ರತಿಯೊಂದು ಹೆಜ್ಜೆಯನ್ನು ಏನಾದರೊಂದು ಕಾರಣ ನೀಡಿ ವಿರೋಧಿಸುತ್ತಲೇ ಇರುತ್ತದೆ. ಇಂತಹ ಸಮಯದಲ್ಲಿ ಇದೊಂದು ಪುಟ್ಟ ಹೆಜ್ಜೆಯಾದರೂ ಸ್ವಚ್ಛಂದವಾಗಿ ಹಾರಾಡಲು ರೆಕ್ಕೆಪುಕ್ಕಗಳನ್ನು ಬೆಳೆಸುವ ಪ್ರಯತ್ನ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...