Homeಮುಖಪುಟದೆಹಲಿ ಮಹಿಳೆಯರಿಗೆ ಪ್ರಯಾಣ ಉಚಿತ: ಸಮಾನತೆಯ ಹಾದಿಯಲ್ಲೊಂದು ಪರಿಣಾಮಕಾರಿ ಹೆಜ್ಜೆ

ದೆಹಲಿ ಮಹಿಳೆಯರಿಗೆ ಪ್ರಯಾಣ ಉಚಿತ: ಸಮಾನತೆಯ ಹಾದಿಯಲ್ಲೊಂದು ಪರಿಣಾಮಕಾರಿ ಹೆಜ್ಜೆ

ಕರ್ನಾಟಕದ ಬೆಂಗಳೂರಿನಲ್ಲೂ ವಾಹನಗಳ ದಟ್ಟಣೆ ಮಿತಿಮೀರಿದೆ ಹಾಗೂ ಬಸ್ ಮತ್ತು ಮೆಟ್ರೊ ಪ್ರಯಾಣದ ದರಗಳು ದೇಶದಲ್ಲೇ ಎಲ್ಲಕ್ಕಿಂತ ಹೆಚ್ಚು. ಹಾಗಾಗಿ ಕರ್ನಾಟಕ ಸರಕಾರವೂ ಇಂತಹ ಒಂದು ಕ್ರಮವನ್ನು ಕೈಗೊಳ್ಳಲು ಇದು ಸಕಾಲ.

- Advertisement -
- Advertisement -

| ನ್ಯಾಯಪಥ ಸಂಪಾದಕೀಯ |

ಮೊನ್ನೆ ದೆಹಲಿಯ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ದೆಹಲಿಯಲ್ಲಿ ಮಹಿಳೆಯರಿಗೆ ಬಸ್ ಹಾಗೂ ಮೆಟ್ರೊ ಪ್ರಯಾಣ ಉಚಿತಗೊಳಿಸಲು ದೆಹಲಿ ಸರಕಾರ ಯೋಜನೆ ರೂಪಿಸಲಿದೆ ಎಂದು ತಿಳಿಸಿದರು. ಇದು ಖಂಡಿತವಾಗಿಯೂ ಒಂದು ಸ್ವಾಗತಾರ್ಹ ಕ್ರಮ.

ಕಳೆದ ಹಲವು ದಶಕಗಳಲ್ಲಿ ಮಹಿಳೆಯರ ಸಬಲೀಕರಣಕ್ಕಾಗಿ ಹಲವಾರು ಕ್ರಮಗಳನ್ನು ಕೈಗೊಂಡಿದ್ದರೂ ನಮ್ಮ ದೇಶದಲ್ಲಿ ಮಹಿಳೆಯರ ಸ್ಥಿತಿ ಇನ್ನೂ ದುಸ್ತರವಾಗಿದೆ ಎನ್ನುವುದನ್ನು ಯಾರೂ ಅಲ್ಲಗಳೆಯಲಾರರು. ಎಲ್ಲಾ ಪರೀಕ್ಷೆಗಳಲ್ಲಿ ಹೆಚ್ಚಿನ ಅಂಕ ಪಡೆಯುವವರು ಬಾಲಕಿಯರೇ ಆಗಿದ್ದರೂ ಉನ್ನತ ಶಿಕ್ಷಣದಲ್ಲಿ ಮಹಿಳೆಯರ ಅನುಪಾತ ಇನ್ನೂ ಕಡಿಮೆ ಇದೆ. ಒಂದೇ ಕೆಲಸಕ್ಕೆ ಮಹಿಳೆಯರು ಪಡೆಯುವ ವೇತನ ಪುರುಷರು ಪಡೆಯುವ ವೇತನಕ್ಕಿಂತ ಕಡಿಮೆಯಾಗಿರುವುದೂ ವಾಸ್ತವ.

ಉದ್ಯೋಗಗಳಲ್ಲೂ ಮಹಿಳೆಯರ ಭಾಗವಹಿಸುವಿಕೆ ಪುರುಷರಿಗಿಂತ ತುಂಬಾ ಕಡಿಮೆಯಾಗಿದೆ. ಇದರೊಂದಿಗೆ ರಾಜಕೀಯ, ಸಾಮಾಜಿಕ ಮತ್ತು ಸಾಂಸ್ಕೃತಿಕ ವಲಯದಲ್ಲೂ ಮಹಿಳೆಯರ ಪ್ರಾತಿನಿಧ್ಯ ಕಡಿಮೆ. ಶಿಕ್ಷಣವನ್ನು ತೊರೆಯುವ ಮಕ್ಕಳಲ್ಲಿ ಹೆಚ್ಚಿನವರು ಬಾಲಕಿಯರೇ. ಇಂತಹ ಸನ್ನಿವೇಶದಲ್ಲಿ ಮಹಿಳೆಯರ ಸಬಲೀಕರಣಕ್ಕೆ ಕ್ರಾಂತಿಕಾರಿಯಾದ ಕ್ರಮಗಳನ್ನು ತೆಗೆದುಕೊಳ್ಳುವುದು ಅತ್ಯವಶ್ಯಕ. ಆ ನಿಟ್ಟಿನಲ್ಲಿ ಆಗಬೇಕಾದ ನೂರಾರು ಕ್ರಮಗಳಲ್ಲಿ ದೆಹಲಿ ಬಸ್ ಮತ್ತು ಮೆಟ್ರೊ ಪ್ರಯಾಣವನ್ನು ಮಹಿಳೆಯರಿಗೆ ಉಚಿತಗೊಳಿಸುವಂತಹವು ಒಂದು.

ದೆಹಲಿಯಲ್ಲಿ ಕಳೆದ ವರ್ಷ ಬಸ್ ಮತ್ತು ಮೆಟ್ರೊ ಪ್ರಯಾಣದರವನ್ನು ಹೆಚ್ಚಿಸಿದಾಗ ಅದರಿಂದ ತೊಂದರೆಗೊಳಗಾದವರು ಹೆಚ್ಚಿನವರು ಮಹಿಳೆಯರೇ ಆಗಿದ್ದಾರೆ. ದಿನಕ್ಕೆ ಸರಾಸರಿ ಒಂದು ನೂರು ರೂಪಾಯಿಗಳನ್ನು ಪ್ರಯಾಣಕ್ಕೆ ಖರ್ಚು ಮಾಡುವುದು ದೊಡ್ಡ ಹೊರೆಯಾಗಿ ಪರಿಣಮಿಸಿದೆ. ಈ ಕ್ರಮದಿಂದ ಆ ಹೊರೆ ಕಡಿಮೆಯಾಗಲಿದ್ದು, ಉಳಿತಾಯವಾಗುವ ಹಣವನ್ನು ತಮಗಾಗಿ, ತಮ್ಮ ಕುಟುಂಬಕ್ಕಾಗಿ ಬಳಸಲು ಸಹಕಾರಿಯಾಗಲಿದೆ. ಇದನ್ನು ಪುರುಷ ವರ್ಸಸ್ ಮಹಿಳೆ ಎಂದು ನೋಡಬಾರದು. ಪ್ರಯಾಣವನ್ನು ಉಚಿತವಾಗಿಸಿರುವುದು ಇಲ್ಲಿನ ಮಹಿಳೆಯರಿಗೇ ಹೊರತು ಅನ್ಯ ಗೃಹಗಳಿಂದ ಬಂದ ಜೀವಿಗಳಿಗಲ್ಲ. ಈ ಕ್ರಮದಿಂದ ಆಗುವ ಲಾಭ, ಅವರ ಕುಟುಂಬಕ್ಕೆ ಮತ್ತು ಇಡೀ ಸಮಾಜಕ್ಕೇ ಆಗಲಿದೆ.

ದೆಹಲಿಯಲ್ಲಿ ಮತ್ತು ದೇಶದ ಇತರೆಡೆಯಲ್ಲಿ ಮಹಿಳೆಯರ ಸುರಕ್ಷತೆ ಒಂದು ದೊಡ್ಡ ಸಮಸ್ಯೆಯಾಗಿದೆ. ಮಹಿಳೆಯರಿಗೆ ಸಾರ್ವಜನಿಕ ಸಾರಿಗೆಯೇ ಅತ್ಯಂತ ಸುರಕ್ಷಿತವಾದದ್ದು ಎನ್ನುವುದರಲ್ಲಿ ಸಂಶಯವಿಲ್ಲ. ಸಾರ್ವಜನಿಕ ಪ್ರಯಾಣವನ್ನು ಉಚಿತಗೊಳಿಸುವುದರಿಂದ ಹೆಚ್ಚೆಚ್ಚು ಮಹಿಳೆಯರು ಸಾರ್ವಜನಿಕ ಸಾರಿಗೆಯನ್ನು ಬಳಸಿ, ಅದನ್ನು ಇನ್ನಷ್ಟು ಸುರಕ್ಷಿತವಾಗಿಸುವಲ್ಲಿ ಸಹಕಾರಿಯಾಗಲಿದೆ. ಮಹಿಳೆಯರ ಆರ್ಥಿಕ ಸ್ವಾತಂತ್ರ ಇನ್ನೂ ಪುರುಷರಿಗೆ ಹೋಲಿಸುವಷ್ಟು ಇಲ್ಲವಾದುದರಿಂದ, ಒಂದು ಸಣ್ಣ ಸ್ವಾತಂತ್ರ್ಯವನ್ನೂ ದೆಹಲಿಯ ಮಹಿಳೆಯರು ಅನುಭವಿಸಲಿದ್ದಾರೆ.

ಈ ಕ್ರಮದಿಂದ ವರ್ಷಕ್ಕೆ 700 ಕೋಟಿಗಳಷ್ಟು ಹಣ ವ್ಯಯಿಸಬೇಕಾಗಬಹುದು ಎಂದು ಅಂದಾಜಿಸಲಾಗಿದೆ. ಇತರ ಯೋಜನೆಗಳಿಗೆ ಮಾಡುವ ಖರ್ಚಿಗೆ ಹೋಲಿಸಿದರೆ ಇದು ದೊಡ್ಡ ಹೊರೆಯಾಗಲಾರದು ಮತ್ತು ಇಂತಹ ಕಲ್ಯಾಣ ಯೋಜನೆಗಳನ್ನು ರೂಪಿಸುವುದು ಸರಕಾರದ ಒಂದು ಪ್ರಮುಖ ಕರ್ತವ್ಯ. ಹಾಗೂ ಇಂತಹ ಕಲ್ಯಾಣ ಯೋಜನೆಗಳಿಂದ ಸಮಾಜದಲ್ಲಿ ಆಗುವ ಬದಲಾವಣೆಗಳಿಂದ ಒಟ್ಟಾರೆ ಆರ್ಥಿಕತೆಗೆ ಬಲ ಸಿಗುವುದೂ ಸಾಬೀತಾಗಿರುವ ಸತ್ಯ.

ಇದರೊಂದಿಗೆ, ದೇಶದ ಎಲ್ಲಾ ನಗರಗಳಲ್ಲಿ ವಾಹನಗಳ ದಟ್ಟಣೆ ನಿಭಾಯಿಸಲಾಗದಷ್ಟು ಹೆಚ್ಚುತ್ತಲೇ ಇದೆ. ಅದಕ್ಕಿರುವ ಒಂದೇ ಉತ್ತರ ಸಾರ್ವಜನಿಕ ಸಾರಿಗೆ. ಸದ್ಯ ದೆಹಲಿಯ ಮೆಟ್ರೋಗಳಲ್ಲಿ ಪ್ರಯಾಣಿಸುವ ಮಹಿಳೆಯರು 33%ರಷ್ಟಿದ್ದಾರೆ. ಈ ಕ್ರಮದಿಂದ ಇನ್ನಷ್ಟು ಮಹಿಳೆಯರು ಸಾರ್ವಜನಿಕ ಸಾರಿಗೆಯನ್ನು ಬಳಸಲಾರಂಭಿಸಿದರೆ ವಾಹನದಟ್ಟಣೆಯಲ್ಲಿ ಇಳಿಮುಖ ಕಾಣಬಹುದಾಗಿದೆ. ದೆಹಲಿಯು ಸಂಪೂರ್ಣ ರಾಜ್ಯದ ಸ್ಥಾನಮಾನವನ್ನು ಹೊಂದಿಲ್ಲವಾದುದರಿಂದ ಕೇಂದ್ರ ಸರಕಾರದ ಸಹಕಾರ ಬೇಕಾಗುತ್ತದೆ. ಹಾಗಾಗಿ ಕೇಂದ್ರ ಸರಕಾರವೂ ಚುನಾವಣಾ ಲೆಕ್ಕಾಚಾರಗಳನ್ನು ಮಾಡದೇ ಸಂಪೂರ್ಣ ಸಹಕಾರ ನೀಡಬೇಕು. ಹಾಗೂ ಈ ಯೋಜನೆಯನ್ನು ಮುಂಬರುವ ಚುನಾವಣೆಗಳನ್ನು ದೃಷ್ಟಿಯಲ್ಲಿ ನೋಡುವುದು ಸಮಂಜಸವಲ್ಲ. ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮಾಡಿದ ಯೋಜನೆಯೇ ಆದರೂ, ಅದರಿಂದ ಸಮಾಜಕ್ಕೆ ಒಳ್ಳೆಯದಾಗುತ್ತಿದ್ದಲ್ಲಿ ಸ್ವಾಗತಿಸಬೇಕು.

ಕರ್ನಾಟಕದ ಬೆಂಗಳೂರಿನಲ್ಲೂ ವಾಹನಗಳ ದಟ್ಟಣೆ ಮಿತಿಮೀರಿದೆ ಹಾಗೂ ಬಸ್ ಮತ್ತು ಮೆಟ್ರೊ ಪ್ರಯಾಣದ ದರಗಳು ದೇಶದಲ್ಲೇ ಎಲ್ಲಕ್ಕಿಂತ ಹೆಚ್ಚು. ಬಸ್ ಪ್ರಯಾಣದರದ ಹೊರೆಯಿಂದಾಗಿ ಅನೇಕ ಮಹಿಳೆಯರು ಹಲವಾರು ಕಿಲೋಮೀಟರ್‍ಗಳಷ್ಟು ದೂರ ನಡೆದುಕೊಂಡೇ ಹೋಗಬೇಕಾದದ್ದನ್ನು ನಾವು ನೋಡಿದ್ದೇವೆ. ದುಬಾರಿ ಮೆಟ್ರೊ ಮತ್ತು ಬಸ್ ದರಗಳಿಂದ ಹಾಗೂ ವಾಹನದಟ್ಟಣೆಗಳಿಂದ ಆಗುವ ಸಂಕಷ್ಟಗಳನ್ನು ಬಗೆಹರಿಸಲೂ ಕರ್ನಾಟಕ ಸರಕಾರವೂ ಇಂತಹ ಒಂದು ಕ್ರಮವನ್ನು ಕೈಗೊಳ್ಳಲು ಇದು ಸಕಾಲ.

ಮೇಲೆ ಹೇಳಿದ ಈ ಎಲ್ಲಾ ತಾಂತ್ರಿಕ ಮತ್ತು ಇತರೆ ವಿಷಯಗಳಿಗೂ ಮಿಗಿಲಾದ ಪರಿಣಾಮಗಳನ್ನು ಸೃಷ್ಟಿಸುವ ಸಾಮಥ್ರ್ಯ ಈ ಯೋಜನೆಗಿದೆ. ದೇಶ ಎಷ್ಟೇ ಮುಂದುವರೆದಿದ್ದರೂ ಮಹಿಳೆಯರ ಸ್ವಾತಂತ್ರ್ಯಕ್ಕೆ ಇರುವ ಕಡಿವಾಣಗಳು ಕಡಿಮೆಯಾಗಿಲ್ಲ. ಹೆಚ್ಚಿನ ಮಹಿಳೆಯರ ಪ್ರತಿಯೊಂದು ಹೆಜ್ಜೆಗೂ ಆ ಮನೆಯ ಪುರುಷನ ಸಮ್ಮತಿ ಇರಲೇಬೇಕು. ಅನೇಕ ಮಹಿಳೆಯರಿಗೆ ಮನೆಯಲ್ಲಿ ಮಾತನಾಡುವ, ವಿಚಾರ ಮಾಡುವ ಅವಕಾಶವಿಲ್ಲ. ಇದರೊಂದಿಗೆ ಅವರಿಗೆ ಆರ್ಥಿಕ ಸ್ವಾವಲಂಬನೆ ಇಲ್ಲದಿದ್ದರೆ ಅವರ ಪರಿಸ್ಥಿತಿಯನ್ನು ಇನ್ನಷ್ಟು ಉಲ್ಬಣಗೊಳಿಸುತ್ತದೆ. ನಮ್ಮ ಪುರುಷಪ್ರಧಾನ ಸಮಾಜ ಮಹಿಳೆಯರ ಸಬಲೀಕರಣದ ಪ್ರತಿಯೊಂದು ಹೆಜ್ಜೆಯನ್ನು ಏನಾದರೊಂದು ಕಾರಣ ನೀಡಿ ವಿರೋಧಿಸುತ್ತಲೇ ಇರುತ್ತದೆ. ಇಂತಹ ಸಮಯದಲ್ಲಿ ಇದೊಂದು ಪುಟ್ಟ ಹೆಜ್ಜೆಯಾದರೂ ಸ್ವಚ್ಛಂದವಾಗಿ ಹಾರಾಡಲು ರೆಕ್ಕೆಪುಕ್ಕಗಳನ್ನು ಬೆಳೆಸುವ ಪ್ರಯತ್ನ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...