Homeಮುಖಪುಟದೆಹಲಿ ಮಹಿಳೆಯರಿಗೆ ಪ್ರಯಾಣ ಉಚಿತ: ಸಮಾನತೆಯ ಹಾದಿಯಲ್ಲೊಂದು ಪರಿಣಾಮಕಾರಿ ಹೆಜ್ಜೆ

ದೆಹಲಿ ಮಹಿಳೆಯರಿಗೆ ಪ್ರಯಾಣ ಉಚಿತ: ಸಮಾನತೆಯ ಹಾದಿಯಲ್ಲೊಂದು ಪರಿಣಾಮಕಾರಿ ಹೆಜ್ಜೆ

ಕರ್ನಾಟಕದ ಬೆಂಗಳೂರಿನಲ್ಲೂ ವಾಹನಗಳ ದಟ್ಟಣೆ ಮಿತಿಮೀರಿದೆ ಹಾಗೂ ಬಸ್ ಮತ್ತು ಮೆಟ್ರೊ ಪ್ರಯಾಣದ ದರಗಳು ದೇಶದಲ್ಲೇ ಎಲ್ಲಕ್ಕಿಂತ ಹೆಚ್ಚು. ಹಾಗಾಗಿ ಕರ್ನಾಟಕ ಸರಕಾರವೂ ಇಂತಹ ಒಂದು ಕ್ರಮವನ್ನು ಕೈಗೊಳ್ಳಲು ಇದು ಸಕಾಲ.

- Advertisement -
- Advertisement -

| ನ್ಯಾಯಪಥ ಸಂಪಾದಕೀಯ |

ಮೊನ್ನೆ ದೆಹಲಿಯ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ದೆಹಲಿಯಲ್ಲಿ ಮಹಿಳೆಯರಿಗೆ ಬಸ್ ಹಾಗೂ ಮೆಟ್ರೊ ಪ್ರಯಾಣ ಉಚಿತಗೊಳಿಸಲು ದೆಹಲಿ ಸರಕಾರ ಯೋಜನೆ ರೂಪಿಸಲಿದೆ ಎಂದು ತಿಳಿಸಿದರು. ಇದು ಖಂಡಿತವಾಗಿಯೂ ಒಂದು ಸ್ವಾಗತಾರ್ಹ ಕ್ರಮ.

ಕಳೆದ ಹಲವು ದಶಕಗಳಲ್ಲಿ ಮಹಿಳೆಯರ ಸಬಲೀಕರಣಕ್ಕಾಗಿ ಹಲವಾರು ಕ್ರಮಗಳನ್ನು ಕೈಗೊಂಡಿದ್ದರೂ ನಮ್ಮ ದೇಶದಲ್ಲಿ ಮಹಿಳೆಯರ ಸ್ಥಿತಿ ಇನ್ನೂ ದುಸ್ತರವಾಗಿದೆ ಎನ್ನುವುದನ್ನು ಯಾರೂ ಅಲ್ಲಗಳೆಯಲಾರರು. ಎಲ್ಲಾ ಪರೀಕ್ಷೆಗಳಲ್ಲಿ ಹೆಚ್ಚಿನ ಅಂಕ ಪಡೆಯುವವರು ಬಾಲಕಿಯರೇ ಆಗಿದ್ದರೂ ಉನ್ನತ ಶಿಕ್ಷಣದಲ್ಲಿ ಮಹಿಳೆಯರ ಅನುಪಾತ ಇನ್ನೂ ಕಡಿಮೆ ಇದೆ. ಒಂದೇ ಕೆಲಸಕ್ಕೆ ಮಹಿಳೆಯರು ಪಡೆಯುವ ವೇತನ ಪುರುಷರು ಪಡೆಯುವ ವೇತನಕ್ಕಿಂತ ಕಡಿಮೆಯಾಗಿರುವುದೂ ವಾಸ್ತವ.

ಉದ್ಯೋಗಗಳಲ್ಲೂ ಮಹಿಳೆಯರ ಭಾಗವಹಿಸುವಿಕೆ ಪುರುಷರಿಗಿಂತ ತುಂಬಾ ಕಡಿಮೆಯಾಗಿದೆ. ಇದರೊಂದಿಗೆ ರಾಜಕೀಯ, ಸಾಮಾಜಿಕ ಮತ್ತು ಸಾಂಸ್ಕೃತಿಕ ವಲಯದಲ್ಲೂ ಮಹಿಳೆಯರ ಪ್ರಾತಿನಿಧ್ಯ ಕಡಿಮೆ. ಶಿಕ್ಷಣವನ್ನು ತೊರೆಯುವ ಮಕ್ಕಳಲ್ಲಿ ಹೆಚ್ಚಿನವರು ಬಾಲಕಿಯರೇ. ಇಂತಹ ಸನ್ನಿವೇಶದಲ್ಲಿ ಮಹಿಳೆಯರ ಸಬಲೀಕರಣಕ್ಕೆ ಕ್ರಾಂತಿಕಾರಿಯಾದ ಕ್ರಮಗಳನ್ನು ತೆಗೆದುಕೊಳ್ಳುವುದು ಅತ್ಯವಶ್ಯಕ. ಆ ನಿಟ್ಟಿನಲ್ಲಿ ಆಗಬೇಕಾದ ನೂರಾರು ಕ್ರಮಗಳಲ್ಲಿ ದೆಹಲಿ ಬಸ್ ಮತ್ತು ಮೆಟ್ರೊ ಪ್ರಯಾಣವನ್ನು ಮಹಿಳೆಯರಿಗೆ ಉಚಿತಗೊಳಿಸುವಂತಹವು ಒಂದು.

ದೆಹಲಿಯಲ್ಲಿ ಕಳೆದ ವರ್ಷ ಬಸ್ ಮತ್ತು ಮೆಟ್ರೊ ಪ್ರಯಾಣದರವನ್ನು ಹೆಚ್ಚಿಸಿದಾಗ ಅದರಿಂದ ತೊಂದರೆಗೊಳಗಾದವರು ಹೆಚ್ಚಿನವರು ಮಹಿಳೆಯರೇ ಆಗಿದ್ದಾರೆ. ದಿನಕ್ಕೆ ಸರಾಸರಿ ಒಂದು ನೂರು ರೂಪಾಯಿಗಳನ್ನು ಪ್ರಯಾಣಕ್ಕೆ ಖರ್ಚು ಮಾಡುವುದು ದೊಡ್ಡ ಹೊರೆಯಾಗಿ ಪರಿಣಮಿಸಿದೆ. ಈ ಕ್ರಮದಿಂದ ಆ ಹೊರೆ ಕಡಿಮೆಯಾಗಲಿದ್ದು, ಉಳಿತಾಯವಾಗುವ ಹಣವನ್ನು ತಮಗಾಗಿ, ತಮ್ಮ ಕುಟುಂಬಕ್ಕಾಗಿ ಬಳಸಲು ಸಹಕಾರಿಯಾಗಲಿದೆ. ಇದನ್ನು ಪುರುಷ ವರ್ಸಸ್ ಮಹಿಳೆ ಎಂದು ನೋಡಬಾರದು. ಪ್ರಯಾಣವನ್ನು ಉಚಿತವಾಗಿಸಿರುವುದು ಇಲ್ಲಿನ ಮಹಿಳೆಯರಿಗೇ ಹೊರತು ಅನ್ಯ ಗೃಹಗಳಿಂದ ಬಂದ ಜೀವಿಗಳಿಗಲ್ಲ. ಈ ಕ್ರಮದಿಂದ ಆಗುವ ಲಾಭ, ಅವರ ಕುಟುಂಬಕ್ಕೆ ಮತ್ತು ಇಡೀ ಸಮಾಜಕ್ಕೇ ಆಗಲಿದೆ.

ದೆಹಲಿಯಲ್ಲಿ ಮತ್ತು ದೇಶದ ಇತರೆಡೆಯಲ್ಲಿ ಮಹಿಳೆಯರ ಸುರಕ್ಷತೆ ಒಂದು ದೊಡ್ಡ ಸಮಸ್ಯೆಯಾಗಿದೆ. ಮಹಿಳೆಯರಿಗೆ ಸಾರ್ವಜನಿಕ ಸಾರಿಗೆಯೇ ಅತ್ಯಂತ ಸುರಕ್ಷಿತವಾದದ್ದು ಎನ್ನುವುದರಲ್ಲಿ ಸಂಶಯವಿಲ್ಲ. ಸಾರ್ವಜನಿಕ ಪ್ರಯಾಣವನ್ನು ಉಚಿತಗೊಳಿಸುವುದರಿಂದ ಹೆಚ್ಚೆಚ್ಚು ಮಹಿಳೆಯರು ಸಾರ್ವಜನಿಕ ಸಾರಿಗೆಯನ್ನು ಬಳಸಿ, ಅದನ್ನು ಇನ್ನಷ್ಟು ಸುರಕ್ಷಿತವಾಗಿಸುವಲ್ಲಿ ಸಹಕಾರಿಯಾಗಲಿದೆ. ಮಹಿಳೆಯರ ಆರ್ಥಿಕ ಸ್ವಾತಂತ್ರ ಇನ್ನೂ ಪುರುಷರಿಗೆ ಹೋಲಿಸುವಷ್ಟು ಇಲ್ಲವಾದುದರಿಂದ, ಒಂದು ಸಣ್ಣ ಸ್ವಾತಂತ್ರ್ಯವನ್ನೂ ದೆಹಲಿಯ ಮಹಿಳೆಯರು ಅನುಭವಿಸಲಿದ್ದಾರೆ.

ಈ ಕ್ರಮದಿಂದ ವರ್ಷಕ್ಕೆ 700 ಕೋಟಿಗಳಷ್ಟು ಹಣ ವ್ಯಯಿಸಬೇಕಾಗಬಹುದು ಎಂದು ಅಂದಾಜಿಸಲಾಗಿದೆ. ಇತರ ಯೋಜನೆಗಳಿಗೆ ಮಾಡುವ ಖರ್ಚಿಗೆ ಹೋಲಿಸಿದರೆ ಇದು ದೊಡ್ಡ ಹೊರೆಯಾಗಲಾರದು ಮತ್ತು ಇಂತಹ ಕಲ್ಯಾಣ ಯೋಜನೆಗಳನ್ನು ರೂಪಿಸುವುದು ಸರಕಾರದ ಒಂದು ಪ್ರಮುಖ ಕರ್ತವ್ಯ. ಹಾಗೂ ಇಂತಹ ಕಲ್ಯಾಣ ಯೋಜನೆಗಳಿಂದ ಸಮಾಜದಲ್ಲಿ ಆಗುವ ಬದಲಾವಣೆಗಳಿಂದ ಒಟ್ಟಾರೆ ಆರ್ಥಿಕತೆಗೆ ಬಲ ಸಿಗುವುದೂ ಸಾಬೀತಾಗಿರುವ ಸತ್ಯ.

ಇದರೊಂದಿಗೆ, ದೇಶದ ಎಲ್ಲಾ ನಗರಗಳಲ್ಲಿ ವಾಹನಗಳ ದಟ್ಟಣೆ ನಿಭಾಯಿಸಲಾಗದಷ್ಟು ಹೆಚ್ಚುತ್ತಲೇ ಇದೆ. ಅದಕ್ಕಿರುವ ಒಂದೇ ಉತ್ತರ ಸಾರ್ವಜನಿಕ ಸಾರಿಗೆ. ಸದ್ಯ ದೆಹಲಿಯ ಮೆಟ್ರೋಗಳಲ್ಲಿ ಪ್ರಯಾಣಿಸುವ ಮಹಿಳೆಯರು 33%ರಷ್ಟಿದ್ದಾರೆ. ಈ ಕ್ರಮದಿಂದ ಇನ್ನಷ್ಟು ಮಹಿಳೆಯರು ಸಾರ್ವಜನಿಕ ಸಾರಿಗೆಯನ್ನು ಬಳಸಲಾರಂಭಿಸಿದರೆ ವಾಹನದಟ್ಟಣೆಯಲ್ಲಿ ಇಳಿಮುಖ ಕಾಣಬಹುದಾಗಿದೆ. ದೆಹಲಿಯು ಸಂಪೂರ್ಣ ರಾಜ್ಯದ ಸ್ಥಾನಮಾನವನ್ನು ಹೊಂದಿಲ್ಲವಾದುದರಿಂದ ಕೇಂದ್ರ ಸರಕಾರದ ಸಹಕಾರ ಬೇಕಾಗುತ್ತದೆ. ಹಾಗಾಗಿ ಕೇಂದ್ರ ಸರಕಾರವೂ ಚುನಾವಣಾ ಲೆಕ್ಕಾಚಾರಗಳನ್ನು ಮಾಡದೇ ಸಂಪೂರ್ಣ ಸಹಕಾರ ನೀಡಬೇಕು. ಹಾಗೂ ಈ ಯೋಜನೆಯನ್ನು ಮುಂಬರುವ ಚುನಾವಣೆಗಳನ್ನು ದೃಷ್ಟಿಯಲ್ಲಿ ನೋಡುವುದು ಸಮಂಜಸವಲ್ಲ. ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮಾಡಿದ ಯೋಜನೆಯೇ ಆದರೂ, ಅದರಿಂದ ಸಮಾಜಕ್ಕೆ ಒಳ್ಳೆಯದಾಗುತ್ತಿದ್ದಲ್ಲಿ ಸ್ವಾಗತಿಸಬೇಕು.

ಕರ್ನಾಟಕದ ಬೆಂಗಳೂರಿನಲ್ಲೂ ವಾಹನಗಳ ದಟ್ಟಣೆ ಮಿತಿಮೀರಿದೆ ಹಾಗೂ ಬಸ್ ಮತ್ತು ಮೆಟ್ರೊ ಪ್ರಯಾಣದ ದರಗಳು ದೇಶದಲ್ಲೇ ಎಲ್ಲಕ್ಕಿಂತ ಹೆಚ್ಚು. ಬಸ್ ಪ್ರಯಾಣದರದ ಹೊರೆಯಿಂದಾಗಿ ಅನೇಕ ಮಹಿಳೆಯರು ಹಲವಾರು ಕಿಲೋಮೀಟರ್‍ಗಳಷ್ಟು ದೂರ ನಡೆದುಕೊಂಡೇ ಹೋಗಬೇಕಾದದ್ದನ್ನು ನಾವು ನೋಡಿದ್ದೇವೆ. ದುಬಾರಿ ಮೆಟ್ರೊ ಮತ್ತು ಬಸ್ ದರಗಳಿಂದ ಹಾಗೂ ವಾಹನದಟ್ಟಣೆಗಳಿಂದ ಆಗುವ ಸಂಕಷ್ಟಗಳನ್ನು ಬಗೆಹರಿಸಲೂ ಕರ್ನಾಟಕ ಸರಕಾರವೂ ಇಂತಹ ಒಂದು ಕ್ರಮವನ್ನು ಕೈಗೊಳ್ಳಲು ಇದು ಸಕಾಲ.

ಮೇಲೆ ಹೇಳಿದ ಈ ಎಲ್ಲಾ ತಾಂತ್ರಿಕ ಮತ್ತು ಇತರೆ ವಿಷಯಗಳಿಗೂ ಮಿಗಿಲಾದ ಪರಿಣಾಮಗಳನ್ನು ಸೃಷ್ಟಿಸುವ ಸಾಮಥ್ರ್ಯ ಈ ಯೋಜನೆಗಿದೆ. ದೇಶ ಎಷ್ಟೇ ಮುಂದುವರೆದಿದ್ದರೂ ಮಹಿಳೆಯರ ಸ್ವಾತಂತ್ರ್ಯಕ್ಕೆ ಇರುವ ಕಡಿವಾಣಗಳು ಕಡಿಮೆಯಾಗಿಲ್ಲ. ಹೆಚ್ಚಿನ ಮಹಿಳೆಯರ ಪ್ರತಿಯೊಂದು ಹೆಜ್ಜೆಗೂ ಆ ಮನೆಯ ಪುರುಷನ ಸಮ್ಮತಿ ಇರಲೇಬೇಕು. ಅನೇಕ ಮಹಿಳೆಯರಿಗೆ ಮನೆಯಲ್ಲಿ ಮಾತನಾಡುವ, ವಿಚಾರ ಮಾಡುವ ಅವಕಾಶವಿಲ್ಲ. ಇದರೊಂದಿಗೆ ಅವರಿಗೆ ಆರ್ಥಿಕ ಸ್ವಾವಲಂಬನೆ ಇಲ್ಲದಿದ್ದರೆ ಅವರ ಪರಿಸ್ಥಿತಿಯನ್ನು ಇನ್ನಷ್ಟು ಉಲ್ಬಣಗೊಳಿಸುತ್ತದೆ. ನಮ್ಮ ಪುರುಷಪ್ರಧಾನ ಸಮಾಜ ಮಹಿಳೆಯರ ಸಬಲೀಕರಣದ ಪ್ರತಿಯೊಂದು ಹೆಜ್ಜೆಯನ್ನು ಏನಾದರೊಂದು ಕಾರಣ ನೀಡಿ ವಿರೋಧಿಸುತ್ತಲೇ ಇರುತ್ತದೆ. ಇಂತಹ ಸಮಯದಲ್ಲಿ ಇದೊಂದು ಪುಟ್ಟ ಹೆಜ್ಜೆಯಾದರೂ ಸ್ವಚ್ಛಂದವಾಗಿ ಹಾರಾಡಲು ರೆಕ್ಕೆಪುಕ್ಕಗಳನ್ನು ಬೆಳೆಸುವ ಪ್ರಯತ್ನ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...