Homeಅಂಕಣಗಳುಕುಟುಂಬ ರಾಜಕಾರಣ ಕೊನೆಯಾಗಲಿ

ಕುಟುಂಬ ರಾಜಕಾರಣ ಕೊನೆಯಾಗಲಿ

- Advertisement -
- Advertisement -

| ಎಚ್.ಎಸ್ ದೊರೆಸ್ವಾಮಿ |

ಮುಖ್ಯಮಂತ್ರಿ ಕುಮಾರಸ್ವಾಮಿಯವರು ಕಾಂಗ್ರೆಸ್ ಅಧ್ಯಕ್ಷ ರಾಹುಲ್‍ಗಾಂಧಿಯವರನ್ನು ಇತ್ತೀಚೆಗೆ ಭೇಟಿಯಾದಾಗ ‘ಕುಟುಂಬ ರಾಜಕೀಯದ ಬಗೆಗೆ ತಲೆಕೆಡಿಸಿಕೊಳ್ಳಬೇಡಿ. ನಮ್ಮದೂ ಕುಟುಂಬ ರಾಜಕಾರಣ, ತಮಿಳುನಾಡಿನಲ್ಲಿ ಡಿಎಂಕೆಯದೂ ಕುಟುಂಬ ರಾಜಕಾರಣ, ಆಂಧ್ರ, ಹರಿಯಾಣ, ಮಹಾರಾಷ್ಟ್ರಗಳಲ್ಲಿ ಕೂಡ ಕುಟುಂಬ ರಾಜಕಾರಣ ನಡೆಯುತ್ತಿದೆ’ ಎಂದಿದ್ದರು. ಆದರೆ ಈಗ ಅದು ಬದಲಾಗಿದೆ. ರಾಹುಲ್ ಗಾಂಧಿಯವರಿಗೆ ‘ನೀವು ಕಾಂಗ್ರೆಸ್ ಅಧ್ಯಕ್ಷರಾಗಿ ಮುಂದುವರೆಯಿರಿ’ ಎಂದು ಕಾಂಗ್ರೆಸ್ ಮುಖಂಡರು ಹೇಳಿರುವುದಾಗಿ ಪತ್ರಿಕೆಯೊಂದರಲ್ಲಿ ವರದಿಯಾಗಿತ್ತು. ಆದರೆ ರಾಹುಲ್‍ಗಾಂಧಿಯವರು ಕಾಂಗ್ರೆಸ್ಸನ್ನು ಕುಟುಂಬ ರಾಜಕೀಯದಿಂದ ಪಾರು ಮಾಡಲು ನಿರ್ಧರಿಸಿದ್ದಾರೆ. ಇನ್ನು ಮುಂದೆ ಕಾಂಗ್ರೆಸ್ ಅಧ್ಯಕ್ಷ ಪದವಿಗೆ ಬೇರೆಯವರನ್ನೇ ಆಯ್ಕೆ ಮಾಡಲಾಗುತ್ತದೆ. ಕುಟುಂಬ ರಾಜಕಾರಣ ಕೈಬಿಟ್ಟು ಸಮರ್ಥರಾದ ಒಬ್ಬ ನಾಯಕರನ್ನು ಕಾಂಗ್ರೆಸ್‍ನ ವರಿಷ್ಠರು ಕೂತು ಆಯ್ಕೆ ಮಾಡುತ್ತಾರೆ ಎಂಬ ಸಂತೋಷದ ಸುದ್ದಿಯನ್ನು ರಾಹುಲ್ ನೀಡಿದ್ದಾರೆ. ಅವರಿಗೆ ಅಭಿನಂದನೆಗಳು.

ನೆಹ್ರೂ ಕುಟುಂಬದವರು ಕಾಂಗ್ರೆಸ್ಸನ್ನು ಕಬ್ಜಾ ಮಾಡಿದ್ದಾರೆ ಎಂಬ ಆಪಾದನೆ 30-40 ವರ್ಷಗಳಿಂದ ವಿರೋಧ ಪಕ್ಷಗಳಿಂದ ಕೇಳಿಬರುತ್ತಿದೆ. ಕುಟುಂಬ ರಾಜಕೀಯಕ್ಕೆ ಮತದಾರರು ಬೇಸತ್ತಿದ್ದರು. ಮೋದಿಯಂತೂ ನೆಹ್ರು ಮನೆತನದವರ ಕುಟುಂಬ ರಾಜಕೀಯವನ್ನು ಬಳಸಿಕೊಂಡು ಜನರಲ್ಲಿ ಕಾಂಗ್ರೆಸ್ ಬಗೆಗೆ ವಿಷ ಬೀಜ ಬಿತ್ತುವ ಕೆಲಸವನ್ನು 5 ವರ್ಷಗಳಿಂದ ಸತತವಾಗಿ ಮಾಡುತ್ತಾ ಬಂದಿದ್ದಾರೆ. ಅದನ್ನೇ ಬಂಡವಾಳ ಮಾಡಿಕೊಂಡು 2ನೇ ಅವಧಿಗೂ ಅಧಿಕಾರ ಪಡೆದುಕೊಂಡಿದ್ದಾರೆ.

ರಾಹುಲ್‍ಗಾಂಧಿಯವರ ಮನೆತನದ ರಾಜಕೀಯವನ್ನು ತೊರೆಯುವ ನಿರ್ಧಾರದಿಂದ ಮೋದಿಯವರ ಕೈಲಿದ್ದ ಮನೆತನದ ರಾಜಕೀಯದ ಅಸ್ತ್ರ, ತನ್ನ ಮೊನಚನ್ನು ಕಳೆದುಕೊಳ್ಳುತ್ತದೆ. ಮೋದಿಯವರ ಬಾಯನ್ನು ಕಟ್ಟಿಹಾಕುತ್ತದೆ. ಇದು ಕಾಂಗ್ರೆಸ್‍ನ ಭವಿಷ್ಯದ ದೃಷ್ಟಿಯಿಂದ ಒಳ್ಳೆಯ ಬೆಳವಣಿಗೆ.

ರಾಹುಲ್‍ಗಾಂಧಿಯವರ ಈ ನಿರ್ಧಾರದಿಂದ ಅವರು ಪ್ರಬುದ್ಧ ರಾಜಕೀಯ ನಾಯಕರು ಎಂಬುದು ಸಾಬೀತಾಗಿದೆ. ಈ ಮೂಲಕ ಕುಟುಂಬ ರಾಜಕೀಯ ನಡೆಸುವ ಇತರ ರಾಜಕೀಯ ಪಕ್ಷಗಳಿಗೂ ರಾಹುಲ್ ಎಚ್ಚರಿಕೆ ನೀಡಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಒಂದು ಮನೆತನದವರು ರಾಜಕೀಯವನ್ನು ಕಬ್ಜಾ ಮಾಡುವುದಕ್ಕೆ ಅವಕಾಶವಿಲ್ಲ. ಜನ ನಿಧಾನವಾಗಿಯಾದರೂ ದೇವೇಗೌಡರಿಗೆ ಮತ್ತು ರಾಹುಲ್‍ಗಾಂಧಿಯವರಿಗೆ ಮನೆತನ ರಾಜಕೀಯಕ್ಕೆ ನಾವು ವಿರೋಧಿಗಳು ಎಂಬುದನ್ನು ಚುನಾವಣೆಯಲ್ಲಿ ಅವರಿಬ್ಬರನ್ನೂ ಸೋಲಿಸುವ ಮೂಲಕ ಘೋಷಿಸಿದ್ದಾರೆ.

ರಾಹುಲ್‍ಗಾಂಧಿಯವರು ಜನತೆಯ ಆಕ್ರೋಶವನ್ನು ಅರ್ಥಮಾಡಿಕೊಂಡು ತಮ್ಮ ಕುಟುಂಬ ರಾಜಕೀಯದ ತತ್ವವನ್ನು ಸರಿಪಡಿಸಿಕೊಳ್ಳುವ ಪ್ರಯತ್ನ ಮಾಡಿದ್ದಾರೆ. ದೇವೇಗೌಡರು ಮನೆತನದ ರಾಜಕೀಯ ಮಾಡಿ ಸೋಲನ್ನು ಅನುಭವಿಸಿದ್ದರೂ ಅವರು ಕುಟುಂಬ ರಾಜಕೀಯದಿಂದ ಮುಕ್ತರಾಗುವ ಸೂಚನೆಗಳು ಕಾಣುತ್ತಿಲ್ಲ.

ಒಕ್ಕಲಿಗರ ಭಾಗ್ಯದಾತ ಎಂದು ಕುಟುಂಬ ರಾಜಕೀಯ ಮಾಡುತ್ತಿರುವ ದೇವೇಗೌಡರ ಕವಚ ಈ ಸಾರಿಯ ಲೋಕಸಭೆ ಚುನಾವಣೆ ವೇಳೆಯಲ್ಲಿ ಕಳಚಿಬಿತ್ತು. 7 ಸೀಟು ನೀಡಿದರೆ 3 ಸೀಟನ್ನು ಮನೆಗೆ ತೆಗೆದುಕೊಂಡು ಹೋಗಿದ್ದು ಒಕ್ಕಲಿಗ ಸಮುದಾಯದ ಭ್ರಮನಿರಸನಕ್ಕೆ ಕಾರಣವಾಯಿತು. ಗೌಡರು ಚುನಾವಣೆಗೆ ನಿಲ್ಲಿಸಿದ ಕುಟುಂಬದ ಮೂವರಲ್ಲಿ ಇಬ್ಬರು ಸೋತರು. ಸೋತವರಲ್ಲಿ ದೇವೇಗೌಡರೂ ಒಬ್ಬರು.

ದೇವೇಗೌಡರು ಇತ್ತೀಚಿನ ಸಾರ್ವಜನಿಕ ಸಭೆಯೊಂದರಲ್ಲಿ ಸೋಲು ನನಗೆ ಹೊಸದೇನಲ್ಲ ಎಂದಿದ್ದಾರೆ. ಈ ಸಾರಿ ಸೋತದ್ದಕ್ಕೆ ವಿಶೇಷ ಕಾರಣವಿದೆ. ಈ ಸಾರಿ ಅವರು ಸೋತದ್ದು ಅವರು ಕುಟುಂಬ ರಾಜಕಾರಣವನ್ನು ಖೇಚರಕ್ಕೆ ತೆಗೆದುಕೊಂಡು ಹೋದ ಕಾರಣಕ್ಕೆ. ಒಕ್ಕಲಿಗ ಮತದಾರರಿಗೆ ಇವರ ಕುಟುಂಬ ರಾಜಕಾರಣ ಮೊದಲ ಸಾರಿಗೆ ಅರಿವಿಗೆ ಬಂತು. ಆಕ್ರೋಶದಿಂದ ತಮ್ಮ ಮತಗಳನ್ನು ಕುಟುಂಬ ರಾಜಕಾರಣದ ವಿರುದ್ಧವಾಗಿ ಹಾಕಿದರು.

ದೇವೇಗೌಡರು, ಕಾಂಗ್ರೆಸ್ ಅಧ್ಯಕ್ಷ ರಾಹುಲ್‍ಗಾಂಧಿಯ ದಿಟ್ಟ ನಿಲುವನ್ನು ಅರ್ಥಮಾಡಿಕೊಳ್ಳಬೇಕು. ಅದು ರಾಜಕೀಯ ಮುತ್ಸದ್ದಿತನ. ಕಾಂಗ್ರೆಸ್ ಮೊದಲುಗೊಂಡು ಎಲ್ಲಾ ರಾಜಕೀಯ ಪಕ್ಷಗಳು ಶಾಸಕರನ್ನು, ಪಾರ್ಲಿಮೆಂಟ್ ಸದಸ್ಯರನ್ನು ಆಯ್ಕೆಮಾಡುವಾಗ ಕ್ರಿಮಿನಲ್‍ಗಳನ್ನು, ಕ್ರಿಮಿನಲ್ ಮೊಕದ್ದಮೆ ಎದುರಿಸುತ್ತಿರುವವರನ್ನು, ಭ್ರಷ್ಟರನ್ನು, ಭೂಗಳ್ಳರನ್ನು, ಪಾಳೆಗಾರಿಕೆ ಮನೆತನದವರನ್ನು ದೂರವಿಡಬೇಕು. ಸೋನಿಯಾಗಾಂಧಿಯವರ ಸುತ್ತಲೂ ಸಮಯ ಸಾಧಕರು, ವಂದಿಮಾಗಧರು, ಅವರನ್ನು ಹೊಗಳಿ ಅಟ್ಟಕ್ಕೇರಿಸುವ ಸ್ವಾರ್ಥಸಾಧಿಸುವವರು ಸುತ್ತುಗಟ್ಟಿರುವುದು. ಇಂತಹದರಿಂದ ಅವರು ದೂರ ಉಳಿಯಬೇಕಾದ್ದರ ಅಗತ್ಯತೆ ಇದೆ. ಈ ಕೆಲಸವನ್ನು ರಾಹುಲ್ ಈ ಕೂಡಲೆ ಕೈಗೆತ್ತಿಕೊಳ್ಳಬೇಕು.

ಇಂದಿನ ಇಂದಿರಾ ಕಾಂಗ್ರೆಸ್ ಹಳೇ ಚಾಳಿಯನ್ನು ಬಿಟ್ಟು ಹೊಸ ರೀತಿಯ ಮೌಲ್ಯಾಧಾರಿತ ರಾಜಕೀಯವನ್ನು ಆರಂಭಿಸಲಿ ಎಂದು ಆಶಿಸುತ್ತೇನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...