Homeಅಂಕಣಗಳುಕುಟುಂಬ ರಾಜಕಾರಣ ಕೊನೆಯಾಗಲಿ

ಕುಟುಂಬ ರಾಜಕಾರಣ ಕೊನೆಯಾಗಲಿ

- Advertisement -
- Advertisement -

| ಎಚ್.ಎಸ್ ದೊರೆಸ್ವಾಮಿ |

ಮುಖ್ಯಮಂತ್ರಿ ಕುಮಾರಸ್ವಾಮಿಯವರು ಕಾಂಗ್ರೆಸ್ ಅಧ್ಯಕ್ಷ ರಾಹುಲ್‍ಗಾಂಧಿಯವರನ್ನು ಇತ್ತೀಚೆಗೆ ಭೇಟಿಯಾದಾಗ ‘ಕುಟುಂಬ ರಾಜಕೀಯದ ಬಗೆಗೆ ತಲೆಕೆಡಿಸಿಕೊಳ್ಳಬೇಡಿ. ನಮ್ಮದೂ ಕುಟುಂಬ ರಾಜಕಾರಣ, ತಮಿಳುನಾಡಿನಲ್ಲಿ ಡಿಎಂಕೆಯದೂ ಕುಟುಂಬ ರಾಜಕಾರಣ, ಆಂಧ್ರ, ಹರಿಯಾಣ, ಮಹಾರಾಷ್ಟ್ರಗಳಲ್ಲಿ ಕೂಡ ಕುಟುಂಬ ರಾಜಕಾರಣ ನಡೆಯುತ್ತಿದೆ’ ಎಂದಿದ್ದರು. ಆದರೆ ಈಗ ಅದು ಬದಲಾಗಿದೆ. ರಾಹುಲ್ ಗಾಂಧಿಯವರಿಗೆ ‘ನೀವು ಕಾಂಗ್ರೆಸ್ ಅಧ್ಯಕ್ಷರಾಗಿ ಮುಂದುವರೆಯಿರಿ’ ಎಂದು ಕಾಂಗ್ರೆಸ್ ಮುಖಂಡರು ಹೇಳಿರುವುದಾಗಿ ಪತ್ರಿಕೆಯೊಂದರಲ್ಲಿ ವರದಿಯಾಗಿತ್ತು. ಆದರೆ ರಾಹುಲ್‍ಗಾಂಧಿಯವರು ಕಾಂಗ್ರೆಸ್ಸನ್ನು ಕುಟುಂಬ ರಾಜಕೀಯದಿಂದ ಪಾರು ಮಾಡಲು ನಿರ್ಧರಿಸಿದ್ದಾರೆ. ಇನ್ನು ಮುಂದೆ ಕಾಂಗ್ರೆಸ್ ಅಧ್ಯಕ್ಷ ಪದವಿಗೆ ಬೇರೆಯವರನ್ನೇ ಆಯ್ಕೆ ಮಾಡಲಾಗುತ್ತದೆ. ಕುಟುಂಬ ರಾಜಕಾರಣ ಕೈಬಿಟ್ಟು ಸಮರ್ಥರಾದ ಒಬ್ಬ ನಾಯಕರನ್ನು ಕಾಂಗ್ರೆಸ್‍ನ ವರಿಷ್ಠರು ಕೂತು ಆಯ್ಕೆ ಮಾಡುತ್ತಾರೆ ಎಂಬ ಸಂತೋಷದ ಸುದ್ದಿಯನ್ನು ರಾಹುಲ್ ನೀಡಿದ್ದಾರೆ. ಅವರಿಗೆ ಅಭಿನಂದನೆಗಳು.

ನೆಹ್ರೂ ಕುಟುಂಬದವರು ಕಾಂಗ್ರೆಸ್ಸನ್ನು ಕಬ್ಜಾ ಮಾಡಿದ್ದಾರೆ ಎಂಬ ಆಪಾದನೆ 30-40 ವರ್ಷಗಳಿಂದ ವಿರೋಧ ಪಕ್ಷಗಳಿಂದ ಕೇಳಿಬರುತ್ತಿದೆ. ಕುಟುಂಬ ರಾಜಕೀಯಕ್ಕೆ ಮತದಾರರು ಬೇಸತ್ತಿದ್ದರು. ಮೋದಿಯಂತೂ ನೆಹ್ರು ಮನೆತನದವರ ಕುಟುಂಬ ರಾಜಕೀಯವನ್ನು ಬಳಸಿಕೊಂಡು ಜನರಲ್ಲಿ ಕಾಂಗ್ರೆಸ್ ಬಗೆಗೆ ವಿಷ ಬೀಜ ಬಿತ್ತುವ ಕೆಲಸವನ್ನು 5 ವರ್ಷಗಳಿಂದ ಸತತವಾಗಿ ಮಾಡುತ್ತಾ ಬಂದಿದ್ದಾರೆ. ಅದನ್ನೇ ಬಂಡವಾಳ ಮಾಡಿಕೊಂಡು 2ನೇ ಅವಧಿಗೂ ಅಧಿಕಾರ ಪಡೆದುಕೊಂಡಿದ್ದಾರೆ.

ರಾಹುಲ್‍ಗಾಂಧಿಯವರ ಮನೆತನದ ರಾಜಕೀಯವನ್ನು ತೊರೆಯುವ ನಿರ್ಧಾರದಿಂದ ಮೋದಿಯವರ ಕೈಲಿದ್ದ ಮನೆತನದ ರಾಜಕೀಯದ ಅಸ್ತ್ರ, ತನ್ನ ಮೊನಚನ್ನು ಕಳೆದುಕೊಳ್ಳುತ್ತದೆ. ಮೋದಿಯವರ ಬಾಯನ್ನು ಕಟ್ಟಿಹಾಕುತ್ತದೆ. ಇದು ಕಾಂಗ್ರೆಸ್‍ನ ಭವಿಷ್ಯದ ದೃಷ್ಟಿಯಿಂದ ಒಳ್ಳೆಯ ಬೆಳವಣಿಗೆ.

ರಾಹುಲ್‍ಗಾಂಧಿಯವರ ಈ ನಿರ್ಧಾರದಿಂದ ಅವರು ಪ್ರಬುದ್ಧ ರಾಜಕೀಯ ನಾಯಕರು ಎಂಬುದು ಸಾಬೀತಾಗಿದೆ. ಈ ಮೂಲಕ ಕುಟುಂಬ ರಾಜಕೀಯ ನಡೆಸುವ ಇತರ ರಾಜಕೀಯ ಪಕ್ಷಗಳಿಗೂ ರಾಹುಲ್ ಎಚ್ಚರಿಕೆ ನೀಡಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಒಂದು ಮನೆತನದವರು ರಾಜಕೀಯವನ್ನು ಕಬ್ಜಾ ಮಾಡುವುದಕ್ಕೆ ಅವಕಾಶವಿಲ್ಲ. ಜನ ನಿಧಾನವಾಗಿಯಾದರೂ ದೇವೇಗೌಡರಿಗೆ ಮತ್ತು ರಾಹುಲ್‍ಗಾಂಧಿಯವರಿಗೆ ಮನೆತನ ರಾಜಕೀಯಕ್ಕೆ ನಾವು ವಿರೋಧಿಗಳು ಎಂಬುದನ್ನು ಚುನಾವಣೆಯಲ್ಲಿ ಅವರಿಬ್ಬರನ್ನೂ ಸೋಲಿಸುವ ಮೂಲಕ ಘೋಷಿಸಿದ್ದಾರೆ.

ರಾಹುಲ್‍ಗಾಂಧಿಯವರು ಜನತೆಯ ಆಕ್ರೋಶವನ್ನು ಅರ್ಥಮಾಡಿಕೊಂಡು ತಮ್ಮ ಕುಟುಂಬ ರಾಜಕೀಯದ ತತ್ವವನ್ನು ಸರಿಪಡಿಸಿಕೊಳ್ಳುವ ಪ್ರಯತ್ನ ಮಾಡಿದ್ದಾರೆ. ದೇವೇಗೌಡರು ಮನೆತನದ ರಾಜಕೀಯ ಮಾಡಿ ಸೋಲನ್ನು ಅನುಭವಿಸಿದ್ದರೂ ಅವರು ಕುಟುಂಬ ರಾಜಕೀಯದಿಂದ ಮುಕ್ತರಾಗುವ ಸೂಚನೆಗಳು ಕಾಣುತ್ತಿಲ್ಲ.

ಒಕ್ಕಲಿಗರ ಭಾಗ್ಯದಾತ ಎಂದು ಕುಟುಂಬ ರಾಜಕೀಯ ಮಾಡುತ್ತಿರುವ ದೇವೇಗೌಡರ ಕವಚ ಈ ಸಾರಿಯ ಲೋಕಸಭೆ ಚುನಾವಣೆ ವೇಳೆಯಲ್ಲಿ ಕಳಚಿಬಿತ್ತು. 7 ಸೀಟು ನೀಡಿದರೆ 3 ಸೀಟನ್ನು ಮನೆಗೆ ತೆಗೆದುಕೊಂಡು ಹೋಗಿದ್ದು ಒಕ್ಕಲಿಗ ಸಮುದಾಯದ ಭ್ರಮನಿರಸನಕ್ಕೆ ಕಾರಣವಾಯಿತು. ಗೌಡರು ಚುನಾವಣೆಗೆ ನಿಲ್ಲಿಸಿದ ಕುಟುಂಬದ ಮೂವರಲ್ಲಿ ಇಬ್ಬರು ಸೋತರು. ಸೋತವರಲ್ಲಿ ದೇವೇಗೌಡರೂ ಒಬ್ಬರು.

ದೇವೇಗೌಡರು ಇತ್ತೀಚಿನ ಸಾರ್ವಜನಿಕ ಸಭೆಯೊಂದರಲ್ಲಿ ಸೋಲು ನನಗೆ ಹೊಸದೇನಲ್ಲ ಎಂದಿದ್ದಾರೆ. ಈ ಸಾರಿ ಸೋತದ್ದಕ್ಕೆ ವಿಶೇಷ ಕಾರಣವಿದೆ. ಈ ಸಾರಿ ಅವರು ಸೋತದ್ದು ಅವರು ಕುಟುಂಬ ರಾಜಕಾರಣವನ್ನು ಖೇಚರಕ್ಕೆ ತೆಗೆದುಕೊಂಡು ಹೋದ ಕಾರಣಕ್ಕೆ. ಒಕ್ಕಲಿಗ ಮತದಾರರಿಗೆ ಇವರ ಕುಟುಂಬ ರಾಜಕಾರಣ ಮೊದಲ ಸಾರಿಗೆ ಅರಿವಿಗೆ ಬಂತು. ಆಕ್ರೋಶದಿಂದ ತಮ್ಮ ಮತಗಳನ್ನು ಕುಟುಂಬ ರಾಜಕಾರಣದ ವಿರುದ್ಧವಾಗಿ ಹಾಕಿದರು.

ದೇವೇಗೌಡರು, ಕಾಂಗ್ರೆಸ್ ಅಧ್ಯಕ್ಷ ರಾಹುಲ್‍ಗಾಂಧಿಯ ದಿಟ್ಟ ನಿಲುವನ್ನು ಅರ್ಥಮಾಡಿಕೊಳ್ಳಬೇಕು. ಅದು ರಾಜಕೀಯ ಮುತ್ಸದ್ದಿತನ. ಕಾಂಗ್ರೆಸ್ ಮೊದಲುಗೊಂಡು ಎಲ್ಲಾ ರಾಜಕೀಯ ಪಕ್ಷಗಳು ಶಾಸಕರನ್ನು, ಪಾರ್ಲಿಮೆಂಟ್ ಸದಸ್ಯರನ್ನು ಆಯ್ಕೆಮಾಡುವಾಗ ಕ್ರಿಮಿನಲ್‍ಗಳನ್ನು, ಕ್ರಿಮಿನಲ್ ಮೊಕದ್ದಮೆ ಎದುರಿಸುತ್ತಿರುವವರನ್ನು, ಭ್ರಷ್ಟರನ್ನು, ಭೂಗಳ್ಳರನ್ನು, ಪಾಳೆಗಾರಿಕೆ ಮನೆತನದವರನ್ನು ದೂರವಿಡಬೇಕು. ಸೋನಿಯಾಗಾಂಧಿಯವರ ಸುತ್ತಲೂ ಸಮಯ ಸಾಧಕರು, ವಂದಿಮಾಗಧರು, ಅವರನ್ನು ಹೊಗಳಿ ಅಟ್ಟಕ್ಕೇರಿಸುವ ಸ್ವಾರ್ಥಸಾಧಿಸುವವರು ಸುತ್ತುಗಟ್ಟಿರುವುದು. ಇಂತಹದರಿಂದ ಅವರು ದೂರ ಉಳಿಯಬೇಕಾದ್ದರ ಅಗತ್ಯತೆ ಇದೆ. ಈ ಕೆಲಸವನ್ನು ರಾಹುಲ್ ಈ ಕೂಡಲೆ ಕೈಗೆತ್ತಿಕೊಳ್ಳಬೇಕು.

ಇಂದಿನ ಇಂದಿರಾ ಕಾಂಗ್ರೆಸ್ ಹಳೇ ಚಾಳಿಯನ್ನು ಬಿಟ್ಟು ಹೊಸ ರೀತಿಯ ಮೌಲ್ಯಾಧಾರಿತ ರಾಜಕೀಯವನ್ನು ಆರಂಭಿಸಲಿ ಎಂದು ಆಶಿಸುತ್ತೇನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...