Homeಅಂಕಣಗಳುಕುಟುಂಬ ರಾಜಕಾರಣ ಕೊನೆಯಾಗಲಿ

ಕುಟುಂಬ ರಾಜಕಾರಣ ಕೊನೆಯಾಗಲಿ

- Advertisement -
- Advertisement -

| ಎಚ್.ಎಸ್ ದೊರೆಸ್ವಾಮಿ |

ಮುಖ್ಯಮಂತ್ರಿ ಕುಮಾರಸ್ವಾಮಿಯವರು ಕಾಂಗ್ರೆಸ್ ಅಧ್ಯಕ್ಷ ರಾಹುಲ್‍ಗಾಂಧಿಯವರನ್ನು ಇತ್ತೀಚೆಗೆ ಭೇಟಿಯಾದಾಗ ‘ಕುಟುಂಬ ರಾಜಕೀಯದ ಬಗೆಗೆ ತಲೆಕೆಡಿಸಿಕೊಳ್ಳಬೇಡಿ. ನಮ್ಮದೂ ಕುಟುಂಬ ರಾಜಕಾರಣ, ತಮಿಳುನಾಡಿನಲ್ಲಿ ಡಿಎಂಕೆಯದೂ ಕುಟುಂಬ ರಾಜಕಾರಣ, ಆಂಧ್ರ, ಹರಿಯಾಣ, ಮಹಾರಾಷ್ಟ್ರಗಳಲ್ಲಿ ಕೂಡ ಕುಟುಂಬ ರಾಜಕಾರಣ ನಡೆಯುತ್ತಿದೆ’ ಎಂದಿದ್ದರು. ಆದರೆ ಈಗ ಅದು ಬದಲಾಗಿದೆ. ರಾಹುಲ್ ಗಾಂಧಿಯವರಿಗೆ ‘ನೀವು ಕಾಂಗ್ರೆಸ್ ಅಧ್ಯಕ್ಷರಾಗಿ ಮುಂದುವರೆಯಿರಿ’ ಎಂದು ಕಾಂಗ್ರೆಸ್ ಮುಖಂಡರು ಹೇಳಿರುವುದಾಗಿ ಪತ್ರಿಕೆಯೊಂದರಲ್ಲಿ ವರದಿಯಾಗಿತ್ತು. ಆದರೆ ರಾಹುಲ್‍ಗಾಂಧಿಯವರು ಕಾಂಗ್ರೆಸ್ಸನ್ನು ಕುಟುಂಬ ರಾಜಕೀಯದಿಂದ ಪಾರು ಮಾಡಲು ನಿರ್ಧರಿಸಿದ್ದಾರೆ. ಇನ್ನು ಮುಂದೆ ಕಾಂಗ್ರೆಸ್ ಅಧ್ಯಕ್ಷ ಪದವಿಗೆ ಬೇರೆಯವರನ್ನೇ ಆಯ್ಕೆ ಮಾಡಲಾಗುತ್ತದೆ. ಕುಟುಂಬ ರಾಜಕಾರಣ ಕೈಬಿಟ್ಟು ಸಮರ್ಥರಾದ ಒಬ್ಬ ನಾಯಕರನ್ನು ಕಾಂಗ್ರೆಸ್‍ನ ವರಿಷ್ಠರು ಕೂತು ಆಯ್ಕೆ ಮಾಡುತ್ತಾರೆ ಎಂಬ ಸಂತೋಷದ ಸುದ್ದಿಯನ್ನು ರಾಹುಲ್ ನೀಡಿದ್ದಾರೆ. ಅವರಿಗೆ ಅಭಿನಂದನೆಗಳು.

ನೆಹ್ರೂ ಕುಟುಂಬದವರು ಕಾಂಗ್ರೆಸ್ಸನ್ನು ಕಬ್ಜಾ ಮಾಡಿದ್ದಾರೆ ಎಂಬ ಆಪಾದನೆ 30-40 ವರ್ಷಗಳಿಂದ ವಿರೋಧ ಪಕ್ಷಗಳಿಂದ ಕೇಳಿಬರುತ್ತಿದೆ. ಕುಟುಂಬ ರಾಜಕೀಯಕ್ಕೆ ಮತದಾರರು ಬೇಸತ್ತಿದ್ದರು. ಮೋದಿಯಂತೂ ನೆಹ್ರು ಮನೆತನದವರ ಕುಟುಂಬ ರಾಜಕೀಯವನ್ನು ಬಳಸಿಕೊಂಡು ಜನರಲ್ಲಿ ಕಾಂಗ್ರೆಸ್ ಬಗೆಗೆ ವಿಷ ಬೀಜ ಬಿತ್ತುವ ಕೆಲಸವನ್ನು 5 ವರ್ಷಗಳಿಂದ ಸತತವಾಗಿ ಮಾಡುತ್ತಾ ಬಂದಿದ್ದಾರೆ. ಅದನ್ನೇ ಬಂಡವಾಳ ಮಾಡಿಕೊಂಡು 2ನೇ ಅವಧಿಗೂ ಅಧಿಕಾರ ಪಡೆದುಕೊಂಡಿದ್ದಾರೆ.

ರಾಹುಲ್‍ಗಾಂಧಿಯವರ ಮನೆತನದ ರಾಜಕೀಯವನ್ನು ತೊರೆಯುವ ನಿರ್ಧಾರದಿಂದ ಮೋದಿಯವರ ಕೈಲಿದ್ದ ಮನೆತನದ ರಾಜಕೀಯದ ಅಸ್ತ್ರ, ತನ್ನ ಮೊನಚನ್ನು ಕಳೆದುಕೊಳ್ಳುತ್ತದೆ. ಮೋದಿಯವರ ಬಾಯನ್ನು ಕಟ್ಟಿಹಾಕುತ್ತದೆ. ಇದು ಕಾಂಗ್ರೆಸ್‍ನ ಭವಿಷ್ಯದ ದೃಷ್ಟಿಯಿಂದ ಒಳ್ಳೆಯ ಬೆಳವಣಿಗೆ.

ರಾಹುಲ್‍ಗಾಂಧಿಯವರ ಈ ನಿರ್ಧಾರದಿಂದ ಅವರು ಪ್ರಬುದ್ಧ ರಾಜಕೀಯ ನಾಯಕರು ಎಂಬುದು ಸಾಬೀತಾಗಿದೆ. ಈ ಮೂಲಕ ಕುಟುಂಬ ರಾಜಕೀಯ ನಡೆಸುವ ಇತರ ರಾಜಕೀಯ ಪಕ್ಷಗಳಿಗೂ ರಾಹುಲ್ ಎಚ್ಚರಿಕೆ ನೀಡಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಒಂದು ಮನೆತನದವರು ರಾಜಕೀಯವನ್ನು ಕಬ್ಜಾ ಮಾಡುವುದಕ್ಕೆ ಅವಕಾಶವಿಲ್ಲ. ಜನ ನಿಧಾನವಾಗಿಯಾದರೂ ದೇವೇಗೌಡರಿಗೆ ಮತ್ತು ರಾಹುಲ್‍ಗಾಂಧಿಯವರಿಗೆ ಮನೆತನ ರಾಜಕೀಯಕ್ಕೆ ನಾವು ವಿರೋಧಿಗಳು ಎಂಬುದನ್ನು ಚುನಾವಣೆಯಲ್ಲಿ ಅವರಿಬ್ಬರನ್ನೂ ಸೋಲಿಸುವ ಮೂಲಕ ಘೋಷಿಸಿದ್ದಾರೆ.

ರಾಹುಲ್‍ಗಾಂಧಿಯವರು ಜನತೆಯ ಆಕ್ರೋಶವನ್ನು ಅರ್ಥಮಾಡಿಕೊಂಡು ತಮ್ಮ ಕುಟುಂಬ ರಾಜಕೀಯದ ತತ್ವವನ್ನು ಸರಿಪಡಿಸಿಕೊಳ್ಳುವ ಪ್ರಯತ್ನ ಮಾಡಿದ್ದಾರೆ. ದೇವೇಗೌಡರು ಮನೆತನದ ರಾಜಕೀಯ ಮಾಡಿ ಸೋಲನ್ನು ಅನುಭವಿಸಿದ್ದರೂ ಅವರು ಕುಟುಂಬ ರಾಜಕೀಯದಿಂದ ಮುಕ್ತರಾಗುವ ಸೂಚನೆಗಳು ಕಾಣುತ್ತಿಲ್ಲ.

ಒಕ್ಕಲಿಗರ ಭಾಗ್ಯದಾತ ಎಂದು ಕುಟುಂಬ ರಾಜಕೀಯ ಮಾಡುತ್ತಿರುವ ದೇವೇಗೌಡರ ಕವಚ ಈ ಸಾರಿಯ ಲೋಕಸಭೆ ಚುನಾವಣೆ ವೇಳೆಯಲ್ಲಿ ಕಳಚಿಬಿತ್ತು. 7 ಸೀಟು ನೀಡಿದರೆ 3 ಸೀಟನ್ನು ಮನೆಗೆ ತೆಗೆದುಕೊಂಡು ಹೋಗಿದ್ದು ಒಕ್ಕಲಿಗ ಸಮುದಾಯದ ಭ್ರಮನಿರಸನಕ್ಕೆ ಕಾರಣವಾಯಿತು. ಗೌಡರು ಚುನಾವಣೆಗೆ ನಿಲ್ಲಿಸಿದ ಕುಟುಂಬದ ಮೂವರಲ್ಲಿ ಇಬ್ಬರು ಸೋತರು. ಸೋತವರಲ್ಲಿ ದೇವೇಗೌಡರೂ ಒಬ್ಬರು.

ದೇವೇಗೌಡರು ಇತ್ತೀಚಿನ ಸಾರ್ವಜನಿಕ ಸಭೆಯೊಂದರಲ್ಲಿ ಸೋಲು ನನಗೆ ಹೊಸದೇನಲ್ಲ ಎಂದಿದ್ದಾರೆ. ಈ ಸಾರಿ ಸೋತದ್ದಕ್ಕೆ ವಿಶೇಷ ಕಾರಣವಿದೆ. ಈ ಸಾರಿ ಅವರು ಸೋತದ್ದು ಅವರು ಕುಟುಂಬ ರಾಜಕಾರಣವನ್ನು ಖೇಚರಕ್ಕೆ ತೆಗೆದುಕೊಂಡು ಹೋದ ಕಾರಣಕ್ಕೆ. ಒಕ್ಕಲಿಗ ಮತದಾರರಿಗೆ ಇವರ ಕುಟುಂಬ ರಾಜಕಾರಣ ಮೊದಲ ಸಾರಿಗೆ ಅರಿವಿಗೆ ಬಂತು. ಆಕ್ರೋಶದಿಂದ ತಮ್ಮ ಮತಗಳನ್ನು ಕುಟುಂಬ ರಾಜಕಾರಣದ ವಿರುದ್ಧವಾಗಿ ಹಾಕಿದರು.

ದೇವೇಗೌಡರು, ಕಾಂಗ್ರೆಸ್ ಅಧ್ಯಕ್ಷ ರಾಹುಲ್‍ಗಾಂಧಿಯ ದಿಟ್ಟ ನಿಲುವನ್ನು ಅರ್ಥಮಾಡಿಕೊಳ್ಳಬೇಕು. ಅದು ರಾಜಕೀಯ ಮುತ್ಸದ್ದಿತನ. ಕಾಂಗ್ರೆಸ್ ಮೊದಲುಗೊಂಡು ಎಲ್ಲಾ ರಾಜಕೀಯ ಪಕ್ಷಗಳು ಶಾಸಕರನ್ನು, ಪಾರ್ಲಿಮೆಂಟ್ ಸದಸ್ಯರನ್ನು ಆಯ್ಕೆಮಾಡುವಾಗ ಕ್ರಿಮಿನಲ್‍ಗಳನ್ನು, ಕ್ರಿಮಿನಲ್ ಮೊಕದ್ದಮೆ ಎದುರಿಸುತ್ತಿರುವವರನ್ನು, ಭ್ರಷ್ಟರನ್ನು, ಭೂಗಳ್ಳರನ್ನು, ಪಾಳೆಗಾರಿಕೆ ಮನೆತನದವರನ್ನು ದೂರವಿಡಬೇಕು. ಸೋನಿಯಾಗಾಂಧಿಯವರ ಸುತ್ತಲೂ ಸಮಯ ಸಾಧಕರು, ವಂದಿಮಾಗಧರು, ಅವರನ್ನು ಹೊಗಳಿ ಅಟ್ಟಕ್ಕೇರಿಸುವ ಸ್ವಾರ್ಥಸಾಧಿಸುವವರು ಸುತ್ತುಗಟ್ಟಿರುವುದು. ಇಂತಹದರಿಂದ ಅವರು ದೂರ ಉಳಿಯಬೇಕಾದ್ದರ ಅಗತ್ಯತೆ ಇದೆ. ಈ ಕೆಲಸವನ್ನು ರಾಹುಲ್ ಈ ಕೂಡಲೆ ಕೈಗೆತ್ತಿಕೊಳ್ಳಬೇಕು.

ಇಂದಿನ ಇಂದಿರಾ ಕಾಂಗ್ರೆಸ್ ಹಳೇ ಚಾಳಿಯನ್ನು ಬಿಟ್ಟು ಹೊಸ ರೀತಿಯ ಮೌಲ್ಯಾಧಾರಿತ ರಾಜಕೀಯವನ್ನು ಆರಂಭಿಸಲಿ ಎಂದು ಆಶಿಸುತ್ತೇನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...