Homeಅಂಕಣಗಳುನಾವೆಂದೂ ಜಾತಿ ರಾಜಕಾರಣ ಮಾಡಿದವರಲ್ಲ

ನಾವೆಂದೂ ಜಾತಿ ರಾಜಕಾರಣ ಮಾಡಿದವರಲ್ಲ

- Advertisement -
- Advertisement -

| ಯಾಹೂ |

ಲಿಂಗನಮಕ್ಕಿ ಜಲಾಶಯದಿಂದ ಬೆಂಗಳೂರೇ ಬೆಳಗುತ್ತಿದೆ. ಆದರೆ ಈಗ ಬೆಳಕಷ್ಟೇ ಸಾಲದು, ಬೆಂಗಳೂರಿಗರಿಗೆ ಕುಡಿಯಲೋಸ್ಕರ ಲಿಂಗನಮಕ್ಕಿ ನೀರು ಕೊಡಲು ಮಂಗನಂತಹ ರಾಜಕಾರಣಿಗಳು ಯೋಜನೆ ರೂಪಿಸಿದ್ದಾರಂತಲ್ಲಾ. ಅತ್ತ ಲಿಂಗನಮಕ್ಕಿ ಕತೆಯೇನಾಗಿದೆಯೆಂದರೆ, ಒಂದು ಕಾಲದಲ್ಲಿ ವರ್ಷಪೂರ್ತಿ ಭೋರ್ಗರೆಯುತ್ತಿದ್ದ ಜೋಗ, ಡ್ಯಾಂ ಕಟ್ಟಿದ ಮೇಲೆ ನಿಂತು ಹೋಯ್ತು. ಗುಡ್ಡಗಳ ಜವುಗಿನಿಂದ ಅಳುತ್ತಿದ್ದ ಜೋಗ ಈಗ ಗಟ್ಟಿ ಮನಸ್ಸು ಮಾಡಿ ಅದನ್ನು ನಿಲ್ಲಿಸಿದೆ. ಆದರೆ ರಾಜಕಾರಣಿಗಳು ಬರುವ ಪ್ರವಾಸಿಗರಿಗಾಗಿ ಮಾರ್ಕೆಟ್ ನಿರ್ಮಿಸಿ ಬಾಡಿಗೆ ಕೊಟ್ಟಿದ್ದಾರೆ. ಐಶಾರಾಮಿ ಐಬಿ ಕಟ್ಟಿಸಿದ್ದಾರೆ. ಜೊತೆಗೆ ಮುನಿಸಿಕೊಂಡ ಶರಾವತಿಯನ್ನು ಬೆಂಗಳೂರಿನವರೆಗೂ ಎಳೆದು ತರಲು ಯೋಜಿಸಿದ್ದಾರೆ. ಈ ಮೂರ್ಖರ ದೆಸೆಯಿಂದ ಈಗಾಗಲೇ ಗಾಜನೂರು ಬಲದಂಡೆ ತೋಡಲಾಗಿದೆ. ಭದ್ರಾ ಮೇಲ್ದಂಡೆ ಪಾತಾಳದಲ್ಲಿ ಹರಿಯಬೇಕಿದೆ. ಎತ್ತಿನಹೊಳೆ ತಿರುಗಿಸಲಾಗಿದೆ. ಇದಲ್ಲದೆ ಮಳೆ ನೀರು ಸಂಗ್ರಹಕ್ಕಾಗಿ ಇಡೀ ಕರ್ನಾಟಕದಲ್ಲಿ ಕೃಷಿ ಹೊಂಡ ತೋಡಿದ್ದಾರೆ. ಈ ಕೃಷಿ ಹೊಂಡದಲ್ಲಿ ನೀರು ತುಂಬುವ ಬದಲು ಜನಗಳ ಜೇಬು ಎಷ್ಟು ತುಂಬಿದೆ ಎಂದರೆ, ಇವರ ಕಡೆಯವರು ಯಾವ ಕೋಳಿಗಳನ್ನೂ ಬಿಡುತ್ತಿಲ್ಲ, ಯಾವ ಬ್ರಾಂಡಿ ಶಾಪನ್ನೂ ಬಿಡುತ್ತಿಲ್ಲ. ಇಂತವೇ ಹೋಗಿ ವಿಧಾನಸೌಧದಲ್ಲಿ ಕುಳಿತಿರುವುದರಿಂದ ಶರಾವತಿಗೆ ಕಂಟಕ ಎದುರಾಗಿದೆ. ಆದರದು ಅಷ್ಟು ಸುಲಭವಲ್ಲವಂತಲ್ಲಾ ಥೂತ್ತೇರಿ.

ನಿಜಕ್ಕೂ ಈಗ ದೇಶ ಅವ್ಯಕ್ತ ಕ್ಷೋಭೆಯಿಂದ ಕೂಡಿದೆ. ಕ್ರಿಕೆಟ್ ಮ್ಯಾಚನ್ನ ಸಂಭ್ರಮಿಸಲಾಗುತ್ತಿಲ್ಲ. ಏಕೆಂದರೆ ಟಿವಿಯಲ್ಲಿರುವ ಮೂರ್ಖರು ಕ್ಯಾಪ್ಟನ್ ಕೊಯ್ಲಿ ಜೊತೆಗೆ ಮೋದಿ ಫೋಟೊವನ್ನ ಹಾಕುತ್ತಿದ್ದಾರೆ. ನಮ್ಮ ಕ್ರಿಕೆಟಿಗರಿಗೆ ಮೋದಿ ಕೋಚ್ ಎಂಬುದು ಗೊತ್ತೇ ಇರಲಿಲ್ಲ. ಆದಿರಲಿ ಕರ್ನಾಟಕದ ಮಟ್ಟಿಗೆ ಭೀಕರವಾದ ಬಿಕ್ಕಟ್ಟುಗಳಿವೆ. ಶರಾವತಿ, ಐಎಂಎ ದರೋಡೆ, ಜಿಂದಾಲ್ ಭೂಹಗರಣ ಇವೆಲ್ಲ ಸಮಸ್ಯೆಗಳು ತೊಡರಿಕೊಂಡಿರುವಾಗ, ನಮ್ಮ ಮಾಜಿ ಪ್ರಧಾನಿಗಳಾದ ದೇವೇಗೌಡರು ಮಧ್ಯಂತರ ಚುನಾವಣೆಯ ಧಮಕಿ ಹಾಕಿ ರಾಜಕಾರಣಿಗಳನ್ನು ಬೆಚ್ಚಿಸಿದ್ದಾರಲ್ಲಾ. ಈ ಬಗ್ಗೆ ಅವರನ್ನೇ ಮಾತನಾಡಿಸಿದರೆ ಹೇಗೆ ಎಂದು ಫೋನ್ ಮಾಡಲಾಗಿ ರಿಂಗಾಯ್ತು.

ರಿಂಗ್‍ಟೋನ್; “ಜಾಡಿಸಿ ಹೊದಿ, ಅವರನ್ನು ಥೂ ಎಂದು ಉಗಿ ಜಾಡಿಸಿ…..” ಹಲೋ…
“ನಮಸ್ಕಾರ ಸಾರ್ ನಾನು ಯಾಹೂ.”
“ಗೌರಿ ಸಿಸ್ಟರ್ ಪತ್ರಿಕೆ ಬರ್ತಾಯಿದೆಯಾ.”
“ಬರ್ತಾಯಿದೆ ಸಾರ್.”
“ಒಂದು ಕಳಿಸಿ ಕೊಡಿ.”
“ಆಯ್ತು ಸಾರ್, ಒಂದೆರಡು ಪ್ರಶ್ನೆ ಕೇಳಬೇಕು.”
“ಕೇಳಿ.”
“ಮಧ್ಯಂತರ ಚುನಾವಣೆ ಎದುರಿಸೋಣ ಅಂದಿದ್ದಿರಲ್ಲಾ ಸಾ.”
“ಈ ದೇವೇಗೌಡ ಯಾವತ್ತು ಚುನಾವಣೆಗೆದಿರಿಲ್ಲ.”
“ನೀವು ಹೆದರಲ್ಲ ಸಾರ್, ಆದ್ರೆ ಎಮ್ಮೆಲ್ಲೆಗಳು ಬೆಚ್ಚಿ ಬಿದ್ದವುರೆ.”
“ಈಚಿನ ಚುನಾವಣೆ ಅಂದ್ರೆ ಹುಡುಗಾಟದ ಮಾತಲ್ಲ ಕೋಟಿಗಳ ಮಾತು.”
“ಅಕಸ್ಮಾತ್ ನೀವು ಚುನಾವಣೆಗೋದ್ರೆ ನಿಮಿಗೆ ಇಪ್ಪತ್ತೈದು, ಕಾಂಗ್ರೆಸ್‍ಗೆ ಐವತ್ತು, ಬಿಜೆಪಿಗೆ ಮೆಜಾರಿಟಿ ಬರುತ್ತಲ್ಲವಾ ಸಾರ್.”
“ಅದನ್ನು ತಮ್ಮಿಂದ ಕೇಳಿ ತಿಳಕೊಬೇಕಾಗಿಲ್ಲ ನನಿಗೂ ಗೊತ್ತು.”
“ಸಾರಿ ಸಾರ್, ನಿಮ್ಮ ಅನುಭವ ಮತ್ತೆ ಆತ್ಮವಿಶ್ವಾಸ ಒಂದೊಂದು ಸಾರಿ ಕೈ ಕೊಟ್ಟಿದೆಯಲ್ಲವ ಸಾರ್.”
“ಯಾವಾಗ.”
“ಕುಮಾರಣ್ಣ ಇಪ್ಪತ್ತು ತಿಂಗಳು ಮುಗಿಸಿದ ಮೇಲೆ, ಎಡೂರಪ್ಪನಿಗೆ ಬೆಂಬಲ ಕೊಡದು ಬೇಡ ಅಂತ ಹಟ ಹಿಡಿದ್ರಿ.”
“ಅದು ನನ್ನ ಭಾಗದ ಸರಿಯಾದ ತೀರ್ಮಾನ.”
“ಆದ್ರೆ ಎಡೂರಪ್ಪ ನಿಮ್ಮ ಕೈಲಿ ಗೂಸಾ ತಿಂದೋರಂಗೆ ಇಡೀ ಕರ್ನಾಟಕದಲ್ಲಿ ಅಳತ ತಿರುಗಾಡಿದರು. ಬಹುಮತ ಪಡೆದ್ರು ನೀವು ಇಪ್ಪತ್ತೈದು ಸೀಟಿಗೆ ನಿಂತೋದ್ರಿ ಅಲ್ಲವ ಸಾರ್.”
“ಹೌದು, ನನಿಗೆ ಇಪ್ಪತ್ತೈದು ಸೀಟು ಬಂದಿದ್ಕೆ ಯಾವ ಬೇಸರನೂ ಇಲ್ಲ. ಆದ್ರೆ ಕುಮಾರ ಬಿಜೆಪಿಗೆ ಸಪೋರ್ಟ್ ಮಾಡಿದ್ರೆ ನಾನು ಮುಖ ಎತ್ತಿಕೊಂಡು ರಾಜಕಾರಣ ಮಾಡಕ್ಕಾಗ್ತಿತ್ತ.”
“ಯಾಕೆ ಸಾರ್.”
“ನೀನು ಬಿಜೆಪಿಗೋಗಿ ಮುಖ್ಯಮಂತ್ರಿ ಆಗೋದಾದ್ರೆ ನನ್ನ ಹೆಣ ನೋಡಬೇಕಾಗತ್ತೆ ಅಂತ ಕುಮಾರನಿಗೆ ಹೇಳಿದ್ದೆ. ಲೋಕಸಭೆಲಿ ನಿಂತು ನಾನಿಲ್ಲದಾಗ ನನ್ನ ಮಗನನ್ನ ಕರೆದುಕೊಂಡೋಗಿ ಬಿಜೆಪಿಯವರು ಅಧಿಕಾರ ಹಿಡಿದ್ರು ಅಂತ ಹೇಳಿದ್ದೆ. ಇಷ್ಟಾದ ಮೇಲೆ ನಾನು ಎಡೂರಪ್ಪನಿಗೆ ಸಪೋರ್ಟ್ ಮಾಡು ಅನ್ನಕ್ಕಾಗತ್ತ.”
“ಇಲ್ಲ ಸಾರ್, ರಾಜಕಾರಣದಲ್ಲಿ ನೈತಿಕತೆ ಅಂದ್ರೆ ಇದೆ ಅಲ್ಲವ ಸಾರ್.”
“ನಾನು ಯಾವತ್ತಿಗೂ ಬಿಜೆಪಿಯವರ ಜೊತೆ ಸರಸ ಆಡಿದವನಲ್ಲ.”
“ನಿಜ ಸಾರ್, ಅಷ್ಟೇ ಅಲ್ಲ ಮಾಜಿ ಪ್ರಧಾನಿಗಳಾಗಿದ್ದು ಆ ಮೋದಿ ಬಗ್ಗೆ ಮಾತಾಡಲಿಲ್ಲ. ರಫೇಲ್ ಹಗರಣ, ಹುಸಿ ಯುದ್ಧ ಮತ್ತೆ ಮೋದಿ ಸುಳ್ಳು ಬಗ್ಗೆನೂ ಚಕಾರ ಎತ್ತಲಿಲ್ಲ.”
“ನನ್ನ ರಾಜಕಾರಣ ಅದಲ್ಲ.”
“ಇನ್ನೊಂದು ವಿಷಯ ಸಾರ್, ಕಾಂಗ್ರೆಸ್‍ನವರು ನೀವು ಸರಕಾರ ಮಾಡಿ ಅಂತ ಹೇಳಿದಾಗ, ಖರ್ಗೆ ಮುಖ್ಯಮಂತ್ರಿ ಆಗಲಿ ಅಂದ್ರಂತೆ. ಈಗ ಚುನಾವಣೆಗೆ ಹೋಗೋದರ ಬದಲು ಖರ್ಗೆ ಮಾಡಿ ಕೈ ತೊಳಕೊಂಡ್ರೆಂಗೇ.”
“ಅದಷ್ಟು ಸುಲಭವಲ್ಲ ಕಾಂಗೈನಲ್ಲೇ ವಿರೋಧ ಇದೆ.”
“ನೀವು ಮನಸು ಮಾಡಿದ್ರೆ ಆಗತ್ತೆ ಸಾರ್. ಆಗ ಹಾಸನ ಜಿಲ್ಲಾ ಪಂಚಾಯ್ತಿಗೆ ಹರಿಜನರ ಹುಡುಗನ್ನ ಅಧ್ಯಕ್ಷನ್ನ ಮಾಡಿದ್ರಿ. ಈಗ ಅಂತ ಕೆಲಸ ನಿಮ್ಮಿಂದ ಮಾತ್ರ ಸಾಧ್ಯ ಸಾರ್.”
“ಈ ಬಗ್ಗೆ ತೀರ್ಮಾನ ತಗೋಬೇಕಾದವರು ಕಾಂಗ್ರೆಸಿಗರು. ಮುಖ್ಯವಾಗಿ ನನ್ನನ್ನ ತುಮಕೂರಲ್ಲಿ ನಿಲ್ಲಿಸಿ ಸೋಲಿಸಿದಂತಹ ಮಹಾ ನಾಯಕರು ಈ ಬಗ್ಗೆ ಮನಸು ಮಾಡಬೇಕು.”
“ನಿಮ್ಮನ ತುಮಕೂರಲ್ಲಿ ನಿಲ್ಲಂಗೆ ಮಾಡಿದ ಮಹಾ ನಾಯಕರು ಮುಟ್ಟಿನೋಡಿಕಳಂಗಾಯ್ತು ಸಾರ್. ಮೈಸೂರು ಒಕ್ಕಲಿಗರು ಕಾಂಗ್ರೆಸ್‍ಗೆ ಓಟಾಕಲಿಲ್ಲ. ತುಮಕೂರು ಕುರುಬ್ರು ನಿಮಗೆ ಓಟು ಮಾಡಲಿಲ್ಲ ಅಲ್ಲವ ಸಾರ್.”
“ಹಾಗೇಳಕ್ಕೆ ಬರಲ್ಲ.”
“ಅಂಗಂದ್ರೆ ಮುದ್ದ ಹನುಮೇಗೌಡರನ್ನ ಮುದ್ದು ಮಾಡೋರು ನಿಮ್ಮನ್ನ ಮುಗಿಸಿದ್ರು ಅಂದಂಗಾಗತ್ತೆ.”
“ಸೋಲನ್ನ ನಾನು ಒಪ್ಪಿಕಂಡಿದ್ದಿನಿ.”
“ಒಪ್ಪದೆಯಿದ್ರೆ ಗೆಲವು ಅಂತ ಅನ್ನಕ್ಕಾಗಲ್ಲ ಸಾರ್. ಆದ್ರೆ ನಿಮ್ಮ ತೀರ್ಮಾನ ಸರಿಯಿರಲಿಲ್ಲ. ಆದ್ರು ನೀವು ಸಿದ್ದರಾಮಯ್ಯ ಈಗ ಒಂದಾಗಿರಬೇಕು ಸಾರ್.”
“ಅದರಗತ್ಯ ಇದಿಯಾ.”
“ಇದೆ ಸಾರ್, ನಿಮ್ಮಿಬ್ಬರ ರಾಜಕಾರಣದಿಂದ ಅಣ್ಣ ತಮ್ಮಂದಿರಂಗಿದ್ದ ಕುರುಬ್ರು ಒಕ್ಕಲಿಗರು ವೈರಿಗಳಾಗಿದ್ದಾದಾರೆ, ನೀವು ಒಂದಾದ್ರೆ ಲಿಂಗಾಯಿತರ ಹೆದರಿಸಬವುದು.”
“ಈ ತರದ ಜಾತಿ ಲೆಕ್ಕಾಚಾರದ ರಾಜಕಾರಣವನ್ನ ಈ ದೇವೇಗೌಡ ಎಂದೂ ಮಾಡಿಲ್ಲ.”
“ಮತ್ಯಾಕೆ ಸಾರ್, ಜಾತ್ಯಾತೀತವಾಗಿದ್ದ ಒಕ್ಕಲಿಗರು ಹಿಂಗಾದ್ರು.”
“ಹ್ಯಂಗಾಗಿದಾರೆ.”
“ಒಂದು ಕಾಲದಲ್ಲಿ ಸಿಂಧ್ಯನ ಎದುರಿಗೆ ನಿಮ್ಮನ್ನೇ ಸೋಲಸತಿದ್ರು. ದೇವರಾಜ ಅರಸು ಎದುರಿಗೆ ತಿಮ್ಮೇಗೌಡನ್ನ ಸೋಲಿಸತಿದ್ರು, ಚಿಗರಿಗೌಡನ ಎದುರಿಗೆ ಎಚ್.ಬಿ.ಕೃಷ್ಣಪ್ಪನ್ನ ಸೋಲಿಸಿದ್ರು. ಆದ್ರೀಗ ಅವುರೂ ಲಿಂಗಾಯತರಂಗೆ ಆಗ್ಯವುರೆ ಇದನ್ಯಲ್ಲ ನೋಡಿದ್ರೆ ಕಮ್ಯುನಿಟಿ ಲೀಡ್ರು ಹೊಣೆಗಾರಾಗಬೇಕಾಗತ್ತೆ ಸಾರ್.”
“ನೋಡಿ ಕಾಲ ಬದಲಾಗಿದೆ ಆದ್ರಿಂದ ರಾಜಕಾರಣ ತುಂಬ ವ್ಯಾಪಿಸಿಕೊಂಡಿದೆ. ಸರಕಾರಿ ಜನ ಕೂಡ ತಮ್ಮ ಜನಾಂಗದ ಲೀಡರನ್ನ ಆಶ್ರಯಿಸಿದಾರೆ, ಒಬ್ಬ ರಾಜಕಾರಣಿ ಎಲ್ಲ ಜನಾಂಗದವರ ಕೆಲಸಗಳನ್ನ ಮಾಡಿದ್ರೆ ಹೀಗಾಗತಿರಲಿಲ್ಲ. ನಾವು ಎಂದೂ ಜಾತಿ ರಾಜಕಾರಣ ಮಾಡಿದವರಲ್ಲ. ಕುಟುಂಬದ ರಾಜಕಾರಣವನ್ನೂ ಮಾಡಿದವರಲ್ಲ. ಭ್ರಷ್ಟ ಕೆಲಸ ಮಾಡಕ್ಕೆ ನಮ್ಮಿಂದ ಸಾಧ್ಯವಾಗಲೇಯಿಲ್ಲ. ಆದ್ರಿಂದ ಕಳೆದ ಅರವತ್ತು ವರ್ಷಗಳಿಂದ ರಾಜಕಾರಣದಲ್ಲಿದ್ದೀನಿ. ಇದು ಜನರ ಆಶೀರ್ವಾದಗಳಿಂದ ಮಾಡಿಕೊಂಡು ಬಂದ ರಾಜಕಾರಣವೇ ಪರಂತೂ. ಇನ್ಯಾರಿಂದ್ಲೂ ಅಲ್ಲ.”
“ಇನ್ನೊಂದು ಗುರುತರವಾದ ಆಪಾದನೆ ಸಾರ್, ನೀವು ಕುರುಬ ಜನಾಂಗದವರಂತೆ ನಿಜವ.”
“ಯಾವ ಬೋಸುಡಿ ಮಗ ಅಂಗಂದೋನು.”
“ಥೂತ್ತೇರಿ.”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...