Homeಅಂಕಣಗಳುನಾವೆಂದೂ ಜಾತಿ ರಾಜಕಾರಣ ಮಾಡಿದವರಲ್ಲ

ನಾವೆಂದೂ ಜಾತಿ ರಾಜಕಾರಣ ಮಾಡಿದವರಲ್ಲ

- Advertisement -
- Advertisement -

| ಯಾಹೂ |

ಲಿಂಗನಮಕ್ಕಿ ಜಲಾಶಯದಿಂದ ಬೆಂಗಳೂರೇ ಬೆಳಗುತ್ತಿದೆ. ಆದರೆ ಈಗ ಬೆಳಕಷ್ಟೇ ಸಾಲದು, ಬೆಂಗಳೂರಿಗರಿಗೆ ಕುಡಿಯಲೋಸ್ಕರ ಲಿಂಗನಮಕ್ಕಿ ನೀರು ಕೊಡಲು ಮಂಗನಂತಹ ರಾಜಕಾರಣಿಗಳು ಯೋಜನೆ ರೂಪಿಸಿದ್ದಾರಂತಲ್ಲಾ. ಅತ್ತ ಲಿಂಗನಮಕ್ಕಿ ಕತೆಯೇನಾಗಿದೆಯೆಂದರೆ, ಒಂದು ಕಾಲದಲ್ಲಿ ವರ್ಷಪೂರ್ತಿ ಭೋರ್ಗರೆಯುತ್ತಿದ್ದ ಜೋಗ, ಡ್ಯಾಂ ಕಟ್ಟಿದ ಮೇಲೆ ನಿಂತು ಹೋಯ್ತು. ಗುಡ್ಡಗಳ ಜವುಗಿನಿಂದ ಅಳುತ್ತಿದ್ದ ಜೋಗ ಈಗ ಗಟ್ಟಿ ಮನಸ್ಸು ಮಾಡಿ ಅದನ್ನು ನಿಲ್ಲಿಸಿದೆ. ಆದರೆ ರಾಜಕಾರಣಿಗಳು ಬರುವ ಪ್ರವಾಸಿಗರಿಗಾಗಿ ಮಾರ್ಕೆಟ್ ನಿರ್ಮಿಸಿ ಬಾಡಿಗೆ ಕೊಟ್ಟಿದ್ದಾರೆ. ಐಶಾರಾಮಿ ಐಬಿ ಕಟ್ಟಿಸಿದ್ದಾರೆ. ಜೊತೆಗೆ ಮುನಿಸಿಕೊಂಡ ಶರಾವತಿಯನ್ನು ಬೆಂಗಳೂರಿನವರೆಗೂ ಎಳೆದು ತರಲು ಯೋಜಿಸಿದ್ದಾರೆ. ಈ ಮೂರ್ಖರ ದೆಸೆಯಿಂದ ಈಗಾಗಲೇ ಗಾಜನೂರು ಬಲದಂಡೆ ತೋಡಲಾಗಿದೆ. ಭದ್ರಾ ಮೇಲ್ದಂಡೆ ಪಾತಾಳದಲ್ಲಿ ಹರಿಯಬೇಕಿದೆ. ಎತ್ತಿನಹೊಳೆ ತಿರುಗಿಸಲಾಗಿದೆ. ಇದಲ್ಲದೆ ಮಳೆ ನೀರು ಸಂಗ್ರಹಕ್ಕಾಗಿ ಇಡೀ ಕರ್ನಾಟಕದಲ್ಲಿ ಕೃಷಿ ಹೊಂಡ ತೋಡಿದ್ದಾರೆ. ಈ ಕೃಷಿ ಹೊಂಡದಲ್ಲಿ ನೀರು ತುಂಬುವ ಬದಲು ಜನಗಳ ಜೇಬು ಎಷ್ಟು ತುಂಬಿದೆ ಎಂದರೆ, ಇವರ ಕಡೆಯವರು ಯಾವ ಕೋಳಿಗಳನ್ನೂ ಬಿಡುತ್ತಿಲ್ಲ, ಯಾವ ಬ್ರಾಂಡಿ ಶಾಪನ್ನೂ ಬಿಡುತ್ತಿಲ್ಲ. ಇಂತವೇ ಹೋಗಿ ವಿಧಾನಸೌಧದಲ್ಲಿ ಕುಳಿತಿರುವುದರಿಂದ ಶರಾವತಿಗೆ ಕಂಟಕ ಎದುರಾಗಿದೆ. ಆದರದು ಅಷ್ಟು ಸುಲಭವಲ್ಲವಂತಲ್ಲಾ ಥೂತ್ತೇರಿ.

ನಿಜಕ್ಕೂ ಈಗ ದೇಶ ಅವ್ಯಕ್ತ ಕ್ಷೋಭೆಯಿಂದ ಕೂಡಿದೆ. ಕ್ರಿಕೆಟ್ ಮ್ಯಾಚನ್ನ ಸಂಭ್ರಮಿಸಲಾಗುತ್ತಿಲ್ಲ. ಏಕೆಂದರೆ ಟಿವಿಯಲ್ಲಿರುವ ಮೂರ್ಖರು ಕ್ಯಾಪ್ಟನ್ ಕೊಯ್ಲಿ ಜೊತೆಗೆ ಮೋದಿ ಫೋಟೊವನ್ನ ಹಾಕುತ್ತಿದ್ದಾರೆ. ನಮ್ಮ ಕ್ರಿಕೆಟಿಗರಿಗೆ ಮೋದಿ ಕೋಚ್ ಎಂಬುದು ಗೊತ್ತೇ ಇರಲಿಲ್ಲ. ಆದಿರಲಿ ಕರ್ನಾಟಕದ ಮಟ್ಟಿಗೆ ಭೀಕರವಾದ ಬಿಕ್ಕಟ್ಟುಗಳಿವೆ. ಶರಾವತಿ, ಐಎಂಎ ದರೋಡೆ, ಜಿಂದಾಲ್ ಭೂಹಗರಣ ಇವೆಲ್ಲ ಸಮಸ್ಯೆಗಳು ತೊಡರಿಕೊಂಡಿರುವಾಗ, ನಮ್ಮ ಮಾಜಿ ಪ್ರಧಾನಿಗಳಾದ ದೇವೇಗೌಡರು ಮಧ್ಯಂತರ ಚುನಾವಣೆಯ ಧಮಕಿ ಹಾಕಿ ರಾಜಕಾರಣಿಗಳನ್ನು ಬೆಚ್ಚಿಸಿದ್ದಾರಲ್ಲಾ. ಈ ಬಗ್ಗೆ ಅವರನ್ನೇ ಮಾತನಾಡಿಸಿದರೆ ಹೇಗೆ ಎಂದು ಫೋನ್ ಮಾಡಲಾಗಿ ರಿಂಗಾಯ್ತು.

ರಿಂಗ್‍ಟೋನ್; “ಜಾಡಿಸಿ ಹೊದಿ, ಅವರನ್ನು ಥೂ ಎಂದು ಉಗಿ ಜಾಡಿಸಿ…..” ಹಲೋ…
“ನಮಸ್ಕಾರ ಸಾರ್ ನಾನು ಯಾಹೂ.”
“ಗೌರಿ ಸಿಸ್ಟರ್ ಪತ್ರಿಕೆ ಬರ್ತಾಯಿದೆಯಾ.”
“ಬರ್ತಾಯಿದೆ ಸಾರ್.”
“ಒಂದು ಕಳಿಸಿ ಕೊಡಿ.”
“ಆಯ್ತು ಸಾರ್, ಒಂದೆರಡು ಪ್ರಶ್ನೆ ಕೇಳಬೇಕು.”
“ಕೇಳಿ.”
“ಮಧ್ಯಂತರ ಚುನಾವಣೆ ಎದುರಿಸೋಣ ಅಂದಿದ್ದಿರಲ್ಲಾ ಸಾ.”
“ಈ ದೇವೇಗೌಡ ಯಾವತ್ತು ಚುನಾವಣೆಗೆದಿರಿಲ್ಲ.”
“ನೀವು ಹೆದರಲ್ಲ ಸಾರ್, ಆದ್ರೆ ಎಮ್ಮೆಲ್ಲೆಗಳು ಬೆಚ್ಚಿ ಬಿದ್ದವುರೆ.”
“ಈಚಿನ ಚುನಾವಣೆ ಅಂದ್ರೆ ಹುಡುಗಾಟದ ಮಾತಲ್ಲ ಕೋಟಿಗಳ ಮಾತು.”
“ಅಕಸ್ಮಾತ್ ನೀವು ಚುನಾವಣೆಗೋದ್ರೆ ನಿಮಿಗೆ ಇಪ್ಪತ್ತೈದು, ಕಾಂಗ್ರೆಸ್‍ಗೆ ಐವತ್ತು, ಬಿಜೆಪಿಗೆ ಮೆಜಾರಿಟಿ ಬರುತ್ತಲ್ಲವಾ ಸಾರ್.”
“ಅದನ್ನು ತಮ್ಮಿಂದ ಕೇಳಿ ತಿಳಕೊಬೇಕಾಗಿಲ್ಲ ನನಿಗೂ ಗೊತ್ತು.”
“ಸಾರಿ ಸಾರ್, ನಿಮ್ಮ ಅನುಭವ ಮತ್ತೆ ಆತ್ಮವಿಶ್ವಾಸ ಒಂದೊಂದು ಸಾರಿ ಕೈ ಕೊಟ್ಟಿದೆಯಲ್ಲವ ಸಾರ್.”
“ಯಾವಾಗ.”
“ಕುಮಾರಣ್ಣ ಇಪ್ಪತ್ತು ತಿಂಗಳು ಮುಗಿಸಿದ ಮೇಲೆ, ಎಡೂರಪ್ಪನಿಗೆ ಬೆಂಬಲ ಕೊಡದು ಬೇಡ ಅಂತ ಹಟ ಹಿಡಿದ್ರಿ.”
“ಅದು ನನ್ನ ಭಾಗದ ಸರಿಯಾದ ತೀರ್ಮಾನ.”
“ಆದ್ರೆ ಎಡೂರಪ್ಪ ನಿಮ್ಮ ಕೈಲಿ ಗೂಸಾ ತಿಂದೋರಂಗೆ ಇಡೀ ಕರ್ನಾಟಕದಲ್ಲಿ ಅಳತ ತಿರುಗಾಡಿದರು. ಬಹುಮತ ಪಡೆದ್ರು ನೀವು ಇಪ್ಪತ್ತೈದು ಸೀಟಿಗೆ ನಿಂತೋದ್ರಿ ಅಲ್ಲವ ಸಾರ್.”
“ಹೌದು, ನನಿಗೆ ಇಪ್ಪತ್ತೈದು ಸೀಟು ಬಂದಿದ್ಕೆ ಯಾವ ಬೇಸರನೂ ಇಲ್ಲ. ಆದ್ರೆ ಕುಮಾರ ಬಿಜೆಪಿಗೆ ಸಪೋರ್ಟ್ ಮಾಡಿದ್ರೆ ನಾನು ಮುಖ ಎತ್ತಿಕೊಂಡು ರಾಜಕಾರಣ ಮಾಡಕ್ಕಾಗ್ತಿತ್ತ.”
“ಯಾಕೆ ಸಾರ್.”
“ನೀನು ಬಿಜೆಪಿಗೋಗಿ ಮುಖ್ಯಮಂತ್ರಿ ಆಗೋದಾದ್ರೆ ನನ್ನ ಹೆಣ ನೋಡಬೇಕಾಗತ್ತೆ ಅಂತ ಕುಮಾರನಿಗೆ ಹೇಳಿದ್ದೆ. ಲೋಕಸಭೆಲಿ ನಿಂತು ನಾನಿಲ್ಲದಾಗ ನನ್ನ ಮಗನನ್ನ ಕರೆದುಕೊಂಡೋಗಿ ಬಿಜೆಪಿಯವರು ಅಧಿಕಾರ ಹಿಡಿದ್ರು ಅಂತ ಹೇಳಿದ್ದೆ. ಇಷ್ಟಾದ ಮೇಲೆ ನಾನು ಎಡೂರಪ್ಪನಿಗೆ ಸಪೋರ್ಟ್ ಮಾಡು ಅನ್ನಕ್ಕಾಗತ್ತ.”
“ಇಲ್ಲ ಸಾರ್, ರಾಜಕಾರಣದಲ್ಲಿ ನೈತಿಕತೆ ಅಂದ್ರೆ ಇದೆ ಅಲ್ಲವ ಸಾರ್.”
“ನಾನು ಯಾವತ್ತಿಗೂ ಬಿಜೆಪಿಯವರ ಜೊತೆ ಸರಸ ಆಡಿದವನಲ್ಲ.”
“ನಿಜ ಸಾರ್, ಅಷ್ಟೇ ಅಲ್ಲ ಮಾಜಿ ಪ್ರಧಾನಿಗಳಾಗಿದ್ದು ಆ ಮೋದಿ ಬಗ್ಗೆ ಮಾತಾಡಲಿಲ್ಲ. ರಫೇಲ್ ಹಗರಣ, ಹುಸಿ ಯುದ್ಧ ಮತ್ತೆ ಮೋದಿ ಸುಳ್ಳು ಬಗ್ಗೆನೂ ಚಕಾರ ಎತ್ತಲಿಲ್ಲ.”
“ನನ್ನ ರಾಜಕಾರಣ ಅದಲ್ಲ.”
“ಇನ್ನೊಂದು ವಿಷಯ ಸಾರ್, ಕಾಂಗ್ರೆಸ್‍ನವರು ನೀವು ಸರಕಾರ ಮಾಡಿ ಅಂತ ಹೇಳಿದಾಗ, ಖರ್ಗೆ ಮುಖ್ಯಮಂತ್ರಿ ಆಗಲಿ ಅಂದ್ರಂತೆ. ಈಗ ಚುನಾವಣೆಗೆ ಹೋಗೋದರ ಬದಲು ಖರ್ಗೆ ಮಾಡಿ ಕೈ ತೊಳಕೊಂಡ್ರೆಂಗೇ.”
“ಅದಷ್ಟು ಸುಲಭವಲ್ಲ ಕಾಂಗೈನಲ್ಲೇ ವಿರೋಧ ಇದೆ.”
“ನೀವು ಮನಸು ಮಾಡಿದ್ರೆ ಆಗತ್ತೆ ಸಾರ್. ಆಗ ಹಾಸನ ಜಿಲ್ಲಾ ಪಂಚಾಯ್ತಿಗೆ ಹರಿಜನರ ಹುಡುಗನ್ನ ಅಧ್ಯಕ್ಷನ್ನ ಮಾಡಿದ್ರಿ. ಈಗ ಅಂತ ಕೆಲಸ ನಿಮ್ಮಿಂದ ಮಾತ್ರ ಸಾಧ್ಯ ಸಾರ್.”
“ಈ ಬಗ್ಗೆ ತೀರ್ಮಾನ ತಗೋಬೇಕಾದವರು ಕಾಂಗ್ರೆಸಿಗರು. ಮುಖ್ಯವಾಗಿ ನನ್ನನ್ನ ತುಮಕೂರಲ್ಲಿ ನಿಲ್ಲಿಸಿ ಸೋಲಿಸಿದಂತಹ ಮಹಾ ನಾಯಕರು ಈ ಬಗ್ಗೆ ಮನಸು ಮಾಡಬೇಕು.”
“ನಿಮ್ಮನ ತುಮಕೂರಲ್ಲಿ ನಿಲ್ಲಂಗೆ ಮಾಡಿದ ಮಹಾ ನಾಯಕರು ಮುಟ್ಟಿನೋಡಿಕಳಂಗಾಯ್ತು ಸಾರ್. ಮೈಸೂರು ಒಕ್ಕಲಿಗರು ಕಾಂಗ್ರೆಸ್‍ಗೆ ಓಟಾಕಲಿಲ್ಲ. ತುಮಕೂರು ಕುರುಬ್ರು ನಿಮಗೆ ಓಟು ಮಾಡಲಿಲ್ಲ ಅಲ್ಲವ ಸಾರ್.”
“ಹಾಗೇಳಕ್ಕೆ ಬರಲ್ಲ.”
“ಅಂಗಂದ್ರೆ ಮುದ್ದ ಹನುಮೇಗೌಡರನ್ನ ಮುದ್ದು ಮಾಡೋರು ನಿಮ್ಮನ್ನ ಮುಗಿಸಿದ್ರು ಅಂದಂಗಾಗತ್ತೆ.”
“ಸೋಲನ್ನ ನಾನು ಒಪ್ಪಿಕಂಡಿದ್ದಿನಿ.”
“ಒಪ್ಪದೆಯಿದ್ರೆ ಗೆಲವು ಅಂತ ಅನ್ನಕ್ಕಾಗಲ್ಲ ಸಾರ್. ಆದ್ರೆ ನಿಮ್ಮ ತೀರ್ಮಾನ ಸರಿಯಿರಲಿಲ್ಲ. ಆದ್ರು ನೀವು ಸಿದ್ದರಾಮಯ್ಯ ಈಗ ಒಂದಾಗಿರಬೇಕು ಸಾರ್.”
“ಅದರಗತ್ಯ ಇದಿಯಾ.”
“ಇದೆ ಸಾರ್, ನಿಮ್ಮಿಬ್ಬರ ರಾಜಕಾರಣದಿಂದ ಅಣ್ಣ ತಮ್ಮಂದಿರಂಗಿದ್ದ ಕುರುಬ್ರು ಒಕ್ಕಲಿಗರು ವೈರಿಗಳಾಗಿದ್ದಾದಾರೆ, ನೀವು ಒಂದಾದ್ರೆ ಲಿಂಗಾಯಿತರ ಹೆದರಿಸಬವುದು.”
“ಈ ತರದ ಜಾತಿ ಲೆಕ್ಕಾಚಾರದ ರಾಜಕಾರಣವನ್ನ ಈ ದೇವೇಗೌಡ ಎಂದೂ ಮಾಡಿಲ್ಲ.”
“ಮತ್ಯಾಕೆ ಸಾರ್, ಜಾತ್ಯಾತೀತವಾಗಿದ್ದ ಒಕ್ಕಲಿಗರು ಹಿಂಗಾದ್ರು.”
“ಹ್ಯಂಗಾಗಿದಾರೆ.”
“ಒಂದು ಕಾಲದಲ್ಲಿ ಸಿಂಧ್ಯನ ಎದುರಿಗೆ ನಿಮ್ಮನ್ನೇ ಸೋಲಸತಿದ್ರು. ದೇವರಾಜ ಅರಸು ಎದುರಿಗೆ ತಿಮ್ಮೇಗೌಡನ್ನ ಸೋಲಿಸತಿದ್ರು, ಚಿಗರಿಗೌಡನ ಎದುರಿಗೆ ಎಚ್.ಬಿ.ಕೃಷ್ಣಪ್ಪನ್ನ ಸೋಲಿಸಿದ್ರು. ಆದ್ರೀಗ ಅವುರೂ ಲಿಂಗಾಯತರಂಗೆ ಆಗ್ಯವುರೆ ಇದನ್ಯಲ್ಲ ನೋಡಿದ್ರೆ ಕಮ್ಯುನಿಟಿ ಲೀಡ್ರು ಹೊಣೆಗಾರಾಗಬೇಕಾಗತ್ತೆ ಸಾರ್.”
“ನೋಡಿ ಕಾಲ ಬದಲಾಗಿದೆ ಆದ್ರಿಂದ ರಾಜಕಾರಣ ತುಂಬ ವ್ಯಾಪಿಸಿಕೊಂಡಿದೆ. ಸರಕಾರಿ ಜನ ಕೂಡ ತಮ್ಮ ಜನಾಂಗದ ಲೀಡರನ್ನ ಆಶ್ರಯಿಸಿದಾರೆ, ಒಬ್ಬ ರಾಜಕಾರಣಿ ಎಲ್ಲ ಜನಾಂಗದವರ ಕೆಲಸಗಳನ್ನ ಮಾಡಿದ್ರೆ ಹೀಗಾಗತಿರಲಿಲ್ಲ. ನಾವು ಎಂದೂ ಜಾತಿ ರಾಜಕಾರಣ ಮಾಡಿದವರಲ್ಲ. ಕುಟುಂಬದ ರಾಜಕಾರಣವನ್ನೂ ಮಾಡಿದವರಲ್ಲ. ಭ್ರಷ್ಟ ಕೆಲಸ ಮಾಡಕ್ಕೆ ನಮ್ಮಿಂದ ಸಾಧ್ಯವಾಗಲೇಯಿಲ್ಲ. ಆದ್ರಿಂದ ಕಳೆದ ಅರವತ್ತು ವರ್ಷಗಳಿಂದ ರಾಜಕಾರಣದಲ್ಲಿದ್ದೀನಿ. ಇದು ಜನರ ಆಶೀರ್ವಾದಗಳಿಂದ ಮಾಡಿಕೊಂಡು ಬಂದ ರಾಜಕಾರಣವೇ ಪರಂತೂ. ಇನ್ಯಾರಿಂದ್ಲೂ ಅಲ್ಲ.”
“ಇನ್ನೊಂದು ಗುರುತರವಾದ ಆಪಾದನೆ ಸಾರ್, ನೀವು ಕುರುಬ ಜನಾಂಗದವರಂತೆ ನಿಜವ.”
“ಯಾವ ಬೋಸುಡಿ ಮಗ ಅಂಗಂದೋನು.”
“ಥೂತ್ತೇರಿ.”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...