Homeಕರ್ನಾಟಕ'ಬ್ರಾಹ್ಮಣ' ಮಾಧ್ಯಮಗಳ ಕುರಿತು ದೇವೇಗೌಡರ ಸಿಟ್ಟು ಸಮರ್ಥನೀಯವಲ್ಲವೇ?

‘ಬ್ರಾಹ್ಮಣ’ ಮಾಧ್ಯಮಗಳ ಕುರಿತು ದೇವೇಗೌಡರ ಸಿಟ್ಟು ಸಮರ್ಥನೀಯವಲ್ಲವೇ?

- Advertisement -
- Advertisement -

ನೀವು ಗೂಗಲ್‍ನಲ್ಲಿ ಸಾಕಷ್ಟು ಹುಡುಕಿದರೂ ಈ ಸುದ್ದಿ ಎರಡು ಕಡೆ ಬಿಟ್ಟರೆ ಎಲ್ಲೂ ಕಾಣುವುದಿಲ್ಲ. ಅದರಲ್ಲೂ ಮಾಧ್ಯಮಗಳ ಕ್ಯಾಮೆರಾದ ಮುಂದೆ ನಡೆದ ಈ ವಿದ್ಯಮಾನದ ವಿಡಿಯೋದ ತುಣುಕೂ ಸಹಾ ಇಂಟರ್‍ನೆಟ್‍ನಲ್ಲಿ ಸುಲಭಕ್ಕೆ ಸಿಗುವುದಿಲ್ಲ. ಆದರೆ ಸಮಕಾಲೀನ ಸಂಧರ್ಭದ ಬಹುಮುಖ್ಯ ಹೇಳಿಕೆಯಾದ ಈ ಸುದ್ದಿ ಮತ್ತು ಅದರ ಕುರಿತ ವಿಶ್ಲೇಷಣೆಯನ್ನು ಮಾಡದಿದ್ದರೆ ಅದು ಪತ್ರಿಕಾಧರ್ಮಕ್ಕೇ ಅಪಚಾರ.

ಟಿವಿ 18 ಮತ್ತು ಡೆಕ್ಕನ್ ನ್ಯೂಸ್‍ಗಳಲ್ಲಿ ಬಂದಿರುವ ಈ ಸುದ್ದಿಯ ವಿವರ ಕೆಳಕಂಡಂತಿದೆ.

ಹಾಸನ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿಕೆ, ಕನ್ನಡ ದೃಶ್ಯ ಮಾಧ್ಯಮಗಳ ಮೇಲೆ ಸಿಡಿಮಿಡಿಗೊಂಡ ಮಾಜಿ ಪ್ರಧಾನಿ, ಈ ರಾಜ್ಯದಲ್ಲಿ ಕನ್ನಡ ದೃಶ್ಯ ಮಾಧ್ಯಮಗಳು ಎಷ್ಟು ಉಪಕಾರ ಮಾಡುತ್ತಿವೆ, ಒಂದು ಪ್ರಾದೇಶಿಕ ಪಕ್ಷ ಉಳಿಯೋದಕ್ಕೆ ಎಷ್ಟು ಉಪಕಾರ ಮಾಡುತ್ತಿವೆ ನಿಮಗೆ ಧನ್ಯವಾದಗಳು. ನಾನು ಟಿವಿನೇ ನೋಡ್ಲಿಲ್ಲಾ ರೀ. ನಾನು ಭಾಷಣ ಮಾಡಿದ್ದನ್ನ ಬರೆಯಬೇಕು ಅಂತಾನೂ ಇಲ್ಲಾ ನೀವು ಬರೀರಿ ಇಲ್ಲಾ ಬಿಡಿ. ನನಗೆ 60 ವರ್ಷದ ರಾಜಕೀಯ ಜೀವನದಲ್ಲಿ ಇಷ್ಟು ಸಣ್ಣ ಮಟ್ಟಕ್ಕೆ ಟಿಬೇಟ್ ಮಾಡೋದನ್ನ ನಾನು ನೋಡಿಲ್ಲಾ ನಡೀರಿ ನಡೀರಿ. ಈ ದೇಶದ ಪ್ರಧಾನಿಯದು ಸಣ್ಣದು ಸಿಕ್ಕಲಿ ಅದು ಹೇಗೆ ಬರುತ್ತೆ? ನಾನು ಶೂದ್ರ ಅಷ್ಟೇನೇ, ಗೊತ್ತಿದೆ ನನಗೆ. ನಡೀರಿ ಎಂದು ಎದ್ದು ಮನೆಯೊಳಗೆ ಹೋದ ದೇವೇಗೌಡ. ಮಾಧ್ಯಮಗಳ ಮೇಲೆ ಬಾರೀ ಆಕ್ರೋಶಗೊಂಡ ದೇವೇಗೌಡ.
ಇದು ಸುದ್ದಿ. ಅವರ ಹೇಳಿಕೆಯನ್ನು ಸಮರ್ಥಿಸುವ ರೀತಿಯಲ್ಲಿ ಯಾವೊಂದು ಪತ್ರಿಕೆಯೂ ಇದನ್ನು ವರದಿ ಮಾಡಲಿಲ್ಲ. ಟಿವಿ 18 ಈ ಸುದ್ದಿಯನ್ನು ಹಾಕಿದ್ದರೂ, ಅದರೊಂದಿಗಿರುವ ದೇವೇಗೌಡರು ಮಾತಾಡುವ ವಿಡಿಯೋದಲ್ಲಿ ಈ ಭಾಗ ಇಲ್ಲ. ಆದರೆ, ಹಾಸನದಲ್ಲಿ ಗೌಡರು ಆಡಿದ ಈ ಮಾತನ್ನು ಅಲ್ಲಿನ ಎಲ್ಲಾ ವರದಿಗಾರರೂ ಕೇಳಿಸಿಕೊಂಡಿದ್ದಾರೆ, ರೆಕಾರ್ಡ್ ಸಹಾ ಮಾಡಿಕೊಂಡಿದ್ದಾರೆ.

ವಿಡಿಯೋ ನೋಡಿ

ಇರಲಿ, ಆದರೆ ದೇವೇಗೌಡರು ಹೇಳಿರುವ ಈ ಮಾತು ತಪ್ಪೇ? ಮಾಧ್ಯಮಗಳ ಮೇಲೆ ಈ ರೀತಿಯ ಜಾತಿ ಆರೋಪ ಮಾಡುವುದು ಸರಿಯೇ? ಕರ್ನಾಟಕದ ವಿವಿಧ ಮಾಧ್ಯಮ ಸಂಸ್ಥೆಗಳ ಮೇಲೆ ಯಾರ ಹಿಡಿತ ಇದೆ ಎಂದು ಅರಿಯಲು, ಹವ್ಯಕ ಬ್ರಾಹ್ಮಣರ ಸಮ್ಮೇಳನದಲ್ಲಿ ವಿಶ್ವೇಶ್ವರಭಟ್ ಮಾಡಿದ, ವೈರಲ್ ಆದ ಆಡಿಯೋ ಕೇಳಿದರೆ ಗೊತ್ತಾಗುತ್ತದೆ. ಕರ್ನಾಟಕದ ಪತ್ರಿಕಾ ಮಾಧ್ಯಮವನ್ನು ತಮ್ಮ ಕೈಯ್ಯಾರೆ ಹಾಳು ಮಾಡಿದ, ಅದನ್ನು ಬಿಜೆಪಿ ವಿರೋಧಿಗಳ ವಿರುದ್ಧ ಮಾಬ್ ಹಿಸ್ಟೀರಿಯಾ ಮೂಡಿಸಲು ಯತ್ನಿಸಿದವರು ಅವರು. ಇಂದು ಕನ್ನಡದ ಯಾವುದೇ ಮಾಧ್ಯಮ ಸಂಸ್ಥೆಗೆ ಹೋದರೆ ಅಲ್ಲೆಲ್ಲಾ ಹವ್ಯಕ ಬ್ರಾಹ್ಮಣ ಹುಡುಗರೇ ಕಾಣುತ್ತಾರೆ, ಇವರ ಸಂಖ್ಯೆ ಇನ್ನೂ ಹೆಚ್ಚಾಗಬೇಕು ಎಂದು ಅವರು ವಿವರವಾಗಿ ಮಾತನಾಡುತ್ತಾರೆ. ಕೆಳಹಂತದಲ್ಲಿ ಮಾತ್ರವಲ್ಲದೇ, ಕರ್ನಾಟಕದ ಇಂದಿನ ರಾಜ್ಯಮಟ್ಟದ ಹೆಚ್ಚಿನ ಪತ್ರಿಕೆಗಳು ಮತ್ತು ಚಾನೆಲ್‍ಗಳ ಮುಖ್ಯಸ್ಥರು ಬ್ರಾಹ್ಮಣರಾಗಿದ್ದಾರೆ. ಅವರಲ್ಲೂ ಶೇ.90ರಷ್ಟು ಹವ್ಯಕ ಬ್ರಾಹ್ಮಣರಾಗಿದ್ದಾರೆ.

ಹವ್ಯಕ ಬ್ರಾಹ್ಮಣರೆಂದರೆ ಗೊತ್ತಿರದವರಿಗೆ – ರಾಮಚಂದ್ರಾಪುರ ಮಠದ ರಾಘವೇಶ್ವರ ಸ್ವಾಮಿ ಪ್ರತಿನಿಧಿಸುವ ಜಾತಿ ಇದು. ಬ್ರಾಹ್ಮಣರಲ್ಲಿ ತೀರಾ ಇತ್ತೀಚಿನವರೆಗೂ ಕೃಷಿಯೇ ಪ್ರಧಾನ ಕಸುಬಾಗಿಸಿಕೊಂಡಿದ್ದ ಸಮುದಾಯವಿದು. ಇತ್ತೀಚೆಗೆ ಕಡಿಮೆಯಾಗುತ್ತಿದ್ದರೂ, ಈಗಲೂ ಕೃಷಿಯಲ್ಲಿ ತೊಡಗಿರುವವರ ಸಂಖ್ಯೆ ಗಣನೀಯವೇ ಆಗಿದೆ.
ಯಾವುದೋ ಸಾಂಧರ್ಭಿಕ ಅಥವಾ ಐತಿಹಾಸಿಕ ಕಾರಣಗಳಿಂದಾಗಿ ನಿರ್ದಿಷ್ಟ ಜಾತಿ ಮತ್ತು ಉಪಜಾತಿಗಳು ನಿರ್ದಿಷ್ಟ ಕ್ಷೇತ್ರವೊಂದರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದರೆ ಅದನ್ನು ಆ ಜಾತಿಯದ್ದೇ ತಪ್ಪು ಎನ್ನಲಾಗುವುದಿಲ್ಲ. ಆದರೆ, ಅವರು ಅಲ್ಲಿದ್ದು ಏನು ಮಾಡುತ್ತಿದ್ದಾರೆ ಎಂಬುದು ಹೆಚ್ಚು ಮುಖ್ಯವಾದುದು. ನಿಸ್ಸಂದೇಹವಾಗಿ ಹೇಳಬಹುದಾದ ಒಂದು ಸಂಗತಿಯೆಂದರೆ, ಬಹುಪಾಲು ಮಾಧ್ಯಮಗಳು ಶೂದ್ರ ರಾಜಕಾರಣಿಗಳು, ಶೂದ್ರ ರಾಜಕಾರಣವನ್ನು ಹಣಿಯುತ್ತಿವೆ. ಬಿಜೆಪಿಯಲ್ಲಿ ಬೇರೆ ಬೇರೆ ಸಮುದಾಯಗಳಿಗೆ ಸೇರಿದವರು ಇದ್ದಾರಾದರೂ, ಅದು ವೈದಿಕ ಶ್ರೇಷ್ಠತೆಯನ್ನು ಎತ್ತಿಹಿಡಿಯುವ ಸಿದ್ಧಾಂತ ಮತ್ತು ರಾಜಕಾರಣ ಮಾಡುತ್ತಿರುವುದರಿಂದ, ಶೇ.90ರಷ್ಟು ಅದರ ಪರವಾಗಿ ನಿಲ್ಲುತ್ತಾರೆ. ದಲಿತ ಮುಖ್ಯಮಂತ್ರಿಯ ಪ್ರಶ್ನೆಯನ್ನು ಎತ್ತುವುದೂ ಸಹಾ ಶೂದ್ರರಾದ ಸಿದ್ದರಾಮಯ್ಯನವರನ್ನು ಹಣಿಯಲೇ ಆಗಿರುತ್ತದೆ.

ತೀರಾ ಇತ್ತೀಚೆಗಿನ ಒಂದು ಉದಾಹರಣೆ ನೀಡುವುದಾದರೆ, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯ ಮೇಲೆ ‘ಮೀಟೂ’ ಆರೋಪಗಳು ಬಂದವು. ಸರ್ವಾಜನಿಕವಾಗಿ ಚರ್ಚೆಯಾಗಿದ್ದಕ್ಕಿಂತ ಹೆಚ್ಚು ಮಾಹಿತಿ ಈ ಮಾಧ್ಯಮಗಳಲ್ಲಿರುವವರ ಕೈಯ್ಯಲ್ಲಿ ಇತ್ತು. ಅದನ್ನೊಂದು ಸುದ್ದಿಯೇ ಅಲ್ಲ ಎಂಬಂತೆ ಪಕ್ಕಕ್ಕೆ ತಳ್ಳಿದ್ದಷ್ಟೇ ಅಲ್ಲದೇ, ಆತನ ವಿರುದ್ಧ ವರದಿ ಮಾಡಬಾರದೆಂಬ ಸಂವಿಧಾನ ವಿರೋಧಿ ತೀರ್ಪು ಬಂದ ಮೇಲೆ ಅದನ್ನು ಪ್ರಶ್ನಿಸಲೂ ಹೋಗಲಿಲ್ಲ. ಸ್ವಲ್ಪ ಕಾಲದ ನಂತರ ಇಂಡಿಯನ್ ಎಕ್ಸ್ ಪ್ರೆಸ್ ಸಂಪಾದಕೀಯ ತೀರ್ಪನ್ನು ಪ್ರಶ್ನಿಸಿತು, ಇನ್ನೂ ಒಂದು ವಾರದ ನಂತರ ಪ್ರಜಾವಾಣಿ ಮತ್ತು ಡೆಕ್ಕನ್ ಹೆರಾಲ್ಡಾಗಳು ಬರೆದವು.

ಒಂದು ವೇಳೆ ಸದರಿ ವ್ಯಕ್ತಿ ಬ್ರಾಹ್ಮಣನಾಗಿರದೇ ಇದ್ದಲ್ಲಿ ಏನಾಗುತ್ತಿತ್ತು? ಆ ವ್ಯಕ್ತಿಯನ್ನು ಚುನಾವಣಾ ಕಣದಿಂದ ನಿವೃತ್ತಗೊಳಿಸುವ ಮಟ್ಟಿಗೆ ಕೂಗಾಟ ನಡೆದಿರುತ್ತಿತ್ತು. ಇಂತಹ ಒಂದಲ್ಲಾ, ಎರಡಲ್ಲಾ, ನೂರಲ್ಲಾ ಸಾವಿರ ಉದಾಹರಣೆಗಳನ್ನು ನೋಡಬಹುದು.

ಈ ಪ್ರಮಾಣದ ಜಾತಿ ರಾಜಕಾರಣವನ್ನು ಮಾಧ್ಯಮಗಳಲ್ಲಿ ಕುಳಿತಿರುವವರು ಮಾಡುತ್ತಿದ್ದಾರೆ. ಬಹಳ ಕ್ಷುದ್ರವಾದ ನಡವಳಿಕೆಯನ್ನು ಇವರೆಲ್ಲರೂ ತೋರಿಸುತ್ತಿದ್ದಾರೆ. ಇದು ಪ್ರಜಾಪ್ರಭುತ್ವದ ದೃಷ್ಟಿಯಿಂದ ಬಹಳ ಅಪಾಯಕಾರಿ. ಈ ಕುರಿತು ಚರ್ಚೆ ನಡೆಯದಿದ್ದರೆ ಅದು ಇನ್ನೂ ಅಪಾಯಕಾರಿ. ನ್ಯಾಯಪಥ-ನಮ್ಮ ಗೌರಿ ಪತ್ರಿಕೆ ಮತ್ತು https://naanugauri.com ಈ ಚರ್ಚೆಯನ್ನು ಗಂಭೀರವಾಗಿ ಮತ್ತು ಆರೋಗ್ಯಕರವಾಗಿ ನಡೆಸಲು ತೀರ್ಮಾನಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...