Homeಕರ್ನಾಟಕ'ಬ್ರಾಹ್ಮಣ' ಮಾಧ್ಯಮಗಳ ಕುರಿತು ದೇವೇಗೌಡರ ಸಿಟ್ಟು ಸಮರ್ಥನೀಯವಲ್ಲವೇ?

‘ಬ್ರಾಹ್ಮಣ’ ಮಾಧ್ಯಮಗಳ ಕುರಿತು ದೇವೇಗೌಡರ ಸಿಟ್ಟು ಸಮರ್ಥನೀಯವಲ್ಲವೇ?

- Advertisement -
- Advertisement -

ನೀವು ಗೂಗಲ್‍ನಲ್ಲಿ ಸಾಕಷ್ಟು ಹುಡುಕಿದರೂ ಈ ಸುದ್ದಿ ಎರಡು ಕಡೆ ಬಿಟ್ಟರೆ ಎಲ್ಲೂ ಕಾಣುವುದಿಲ್ಲ. ಅದರಲ್ಲೂ ಮಾಧ್ಯಮಗಳ ಕ್ಯಾಮೆರಾದ ಮುಂದೆ ನಡೆದ ಈ ವಿದ್ಯಮಾನದ ವಿಡಿಯೋದ ತುಣುಕೂ ಸಹಾ ಇಂಟರ್‍ನೆಟ್‍ನಲ್ಲಿ ಸುಲಭಕ್ಕೆ ಸಿಗುವುದಿಲ್ಲ. ಆದರೆ ಸಮಕಾಲೀನ ಸಂಧರ್ಭದ ಬಹುಮುಖ್ಯ ಹೇಳಿಕೆಯಾದ ಈ ಸುದ್ದಿ ಮತ್ತು ಅದರ ಕುರಿತ ವಿಶ್ಲೇಷಣೆಯನ್ನು ಮಾಡದಿದ್ದರೆ ಅದು ಪತ್ರಿಕಾಧರ್ಮಕ್ಕೇ ಅಪಚಾರ.

ಟಿವಿ 18 ಮತ್ತು ಡೆಕ್ಕನ್ ನ್ಯೂಸ್‍ಗಳಲ್ಲಿ ಬಂದಿರುವ ಈ ಸುದ್ದಿಯ ವಿವರ ಕೆಳಕಂಡಂತಿದೆ.

ಹಾಸನ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿಕೆ, ಕನ್ನಡ ದೃಶ್ಯ ಮಾಧ್ಯಮಗಳ ಮೇಲೆ ಸಿಡಿಮಿಡಿಗೊಂಡ ಮಾಜಿ ಪ್ರಧಾನಿ, ಈ ರಾಜ್ಯದಲ್ಲಿ ಕನ್ನಡ ದೃಶ್ಯ ಮಾಧ್ಯಮಗಳು ಎಷ್ಟು ಉಪಕಾರ ಮಾಡುತ್ತಿವೆ, ಒಂದು ಪ್ರಾದೇಶಿಕ ಪಕ್ಷ ಉಳಿಯೋದಕ್ಕೆ ಎಷ್ಟು ಉಪಕಾರ ಮಾಡುತ್ತಿವೆ ನಿಮಗೆ ಧನ್ಯವಾದಗಳು. ನಾನು ಟಿವಿನೇ ನೋಡ್ಲಿಲ್ಲಾ ರೀ. ನಾನು ಭಾಷಣ ಮಾಡಿದ್ದನ್ನ ಬರೆಯಬೇಕು ಅಂತಾನೂ ಇಲ್ಲಾ ನೀವು ಬರೀರಿ ಇಲ್ಲಾ ಬಿಡಿ. ನನಗೆ 60 ವರ್ಷದ ರಾಜಕೀಯ ಜೀವನದಲ್ಲಿ ಇಷ್ಟು ಸಣ್ಣ ಮಟ್ಟಕ್ಕೆ ಟಿಬೇಟ್ ಮಾಡೋದನ್ನ ನಾನು ನೋಡಿಲ್ಲಾ ನಡೀರಿ ನಡೀರಿ. ಈ ದೇಶದ ಪ್ರಧಾನಿಯದು ಸಣ್ಣದು ಸಿಕ್ಕಲಿ ಅದು ಹೇಗೆ ಬರುತ್ತೆ? ನಾನು ಶೂದ್ರ ಅಷ್ಟೇನೇ, ಗೊತ್ತಿದೆ ನನಗೆ. ನಡೀರಿ ಎಂದು ಎದ್ದು ಮನೆಯೊಳಗೆ ಹೋದ ದೇವೇಗೌಡ. ಮಾಧ್ಯಮಗಳ ಮೇಲೆ ಬಾರೀ ಆಕ್ರೋಶಗೊಂಡ ದೇವೇಗೌಡ.
ಇದು ಸುದ್ದಿ. ಅವರ ಹೇಳಿಕೆಯನ್ನು ಸಮರ್ಥಿಸುವ ರೀತಿಯಲ್ಲಿ ಯಾವೊಂದು ಪತ್ರಿಕೆಯೂ ಇದನ್ನು ವರದಿ ಮಾಡಲಿಲ್ಲ. ಟಿವಿ 18 ಈ ಸುದ್ದಿಯನ್ನು ಹಾಕಿದ್ದರೂ, ಅದರೊಂದಿಗಿರುವ ದೇವೇಗೌಡರು ಮಾತಾಡುವ ವಿಡಿಯೋದಲ್ಲಿ ಈ ಭಾಗ ಇಲ್ಲ. ಆದರೆ, ಹಾಸನದಲ್ಲಿ ಗೌಡರು ಆಡಿದ ಈ ಮಾತನ್ನು ಅಲ್ಲಿನ ಎಲ್ಲಾ ವರದಿಗಾರರೂ ಕೇಳಿಸಿಕೊಂಡಿದ್ದಾರೆ, ರೆಕಾರ್ಡ್ ಸಹಾ ಮಾಡಿಕೊಂಡಿದ್ದಾರೆ.

ವಿಡಿಯೋ ನೋಡಿ

ಇರಲಿ, ಆದರೆ ದೇವೇಗೌಡರು ಹೇಳಿರುವ ಈ ಮಾತು ತಪ್ಪೇ? ಮಾಧ್ಯಮಗಳ ಮೇಲೆ ಈ ರೀತಿಯ ಜಾತಿ ಆರೋಪ ಮಾಡುವುದು ಸರಿಯೇ? ಕರ್ನಾಟಕದ ವಿವಿಧ ಮಾಧ್ಯಮ ಸಂಸ್ಥೆಗಳ ಮೇಲೆ ಯಾರ ಹಿಡಿತ ಇದೆ ಎಂದು ಅರಿಯಲು, ಹವ್ಯಕ ಬ್ರಾಹ್ಮಣರ ಸಮ್ಮೇಳನದಲ್ಲಿ ವಿಶ್ವೇಶ್ವರಭಟ್ ಮಾಡಿದ, ವೈರಲ್ ಆದ ಆಡಿಯೋ ಕೇಳಿದರೆ ಗೊತ್ತಾಗುತ್ತದೆ. ಕರ್ನಾಟಕದ ಪತ್ರಿಕಾ ಮಾಧ್ಯಮವನ್ನು ತಮ್ಮ ಕೈಯ್ಯಾರೆ ಹಾಳು ಮಾಡಿದ, ಅದನ್ನು ಬಿಜೆಪಿ ವಿರೋಧಿಗಳ ವಿರುದ್ಧ ಮಾಬ್ ಹಿಸ್ಟೀರಿಯಾ ಮೂಡಿಸಲು ಯತ್ನಿಸಿದವರು ಅವರು. ಇಂದು ಕನ್ನಡದ ಯಾವುದೇ ಮಾಧ್ಯಮ ಸಂಸ್ಥೆಗೆ ಹೋದರೆ ಅಲ್ಲೆಲ್ಲಾ ಹವ್ಯಕ ಬ್ರಾಹ್ಮಣ ಹುಡುಗರೇ ಕಾಣುತ್ತಾರೆ, ಇವರ ಸಂಖ್ಯೆ ಇನ್ನೂ ಹೆಚ್ಚಾಗಬೇಕು ಎಂದು ಅವರು ವಿವರವಾಗಿ ಮಾತನಾಡುತ್ತಾರೆ. ಕೆಳಹಂತದಲ್ಲಿ ಮಾತ್ರವಲ್ಲದೇ, ಕರ್ನಾಟಕದ ಇಂದಿನ ರಾಜ್ಯಮಟ್ಟದ ಹೆಚ್ಚಿನ ಪತ್ರಿಕೆಗಳು ಮತ್ತು ಚಾನೆಲ್‍ಗಳ ಮುಖ್ಯಸ್ಥರು ಬ್ರಾಹ್ಮಣರಾಗಿದ್ದಾರೆ. ಅವರಲ್ಲೂ ಶೇ.90ರಷ್ಟು ಹವ್ಯಕ ಬ್ರಾಹ್ಮಣರಾಗಿದ್ದಾರೆ.

ಹವ್ಯಕ ಬ್ರಾಹ್ಮಣರೆಂದರೆ ಗೊತ್ತಿರದವರಿಗೆ – ರಾಮಚಂದ್ರಾಪುರ ಮಠದ ರಾಘವೇಶ್ವರ ಸ್ವಾಮಿ ಪ್ರತಿನಿಧಿಸುವ ಜಾತಿ ಇದು. ಬ್ರಾಹ್ಮಣರಲ್ಲಿ ತೀರಾ ಇತ್ತೀಚಿನವರೆಗೂ ಕೃಷಿಯೇ ಪ್ರಧಾನ ಕಸುಬಾಗಿಸಿಕೊಂಡಿದ್ದ ಸಮುದಾಯವಿದು. ಇತ್ತೀಚೆಗೆ ಕಡಿಮೆಯಾಗುತ್ತಿದ್ದರೂ, ಈಗಲೂ ಕೃಷಿಯಲ್ಲಿ ತೊಡಗಿರುವವರ ಸಂಖ್ಯೆ ಗಣನೀಯವೇ ಆಗಿದೆ.
ಯಾವುದೋ ಸಾಂಧರ್ಭಿಕ ಅಥವಾ ಐತಿಹಾಸಿಕ ಕಾರಣಗಳಿಂದಾಗಿ ನಿರ್ದಿಷ್ಟ ಜಾತಿ ಮತ್ತು ಉಪಜಾತಿಗಳು ನಿರ್ದಿಷ್ಟ ಕ್ಷೇತ್ರವೊಂದರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದರೆ ಅದನ್ನು ಆ ಜಾತಿಯದ್ದೇ ತಪ್ಪು ಎನ್ನಲಾಗುವುದಿಲ್ಲ. ಆದರೆ, ಅವರು ಅಲ್ಲಿದ್ದು ಏನು ಮಾಡುತ್ತಿದ್ದಾರೆ ಎಂಬುದು ಹೆಚ್ಚು ಮುಖ್ಯವಾದುದು. ನಿಸ್ಸಂದೇಹವಾಗಿ ಹೇಳಬಹುದಾದ ಒಂದು ಸಂಗತಿಯೆಂದರೆ, ಬಹುಪಾಲು ಮಾಧ್ಯಮಗಳು ಶೂದ್ರ ರಾಜಕಾರಣಿಗಳು, ಶೂದ್ರ ರಾಜಕಾರಣವನ್ನು ಹಣಿಯುತ್ತಿವೆ. ಬಿಜೆಪಿಯಲ್ಲಿ ಬೇರೆ ಬೇರೆ ಸಮುದಾಯಗಳಿಗೆ ಸೇರಿದವರು ಇದ್ದಾರಾದರೂ, ಅದು ವೈದಿಕ ಶ್ರೇಷ್ಠತೆಯನ್ನು ಎತ್ತಿಹಿಡಿಯುವ ಸಿದ್ಧಾಂತ ಮತ್ತು ರಾಜಕಾರಣ ಮಾಡುತ್ತಿರುವುದರಿಂದ, ಶೇ.90ರಷ್ಟು ಅದರ ಪರವಾಗಿ ನಿಲ್ಲುತ್ತಾರೆ. ದಲಿತ ಮುಖ್ಯಮಂತ್ರಿಯ ಪ್ರಶ್ನೆಯನ್ನು ಎತ್ತುವುದೂ ಸಹಾ ಶೂದ್ರರಾದ ಸಿದ್ದರಾಮಯ್ಯನವರನ್ನು ಹಣಿಯಲೇ ಆಗಿರುತ್ತದೆ.

ತೀರಾ ಇತ್ತೀಚೆಗಿನ ಒಂದು ಉದಾಹರಣೆ ನೀಡುವುದಾದರೆ, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯ ಮೇಲೆ ‘ಮೀಟೂ’ ಆರೋಪಗಳು ಬಂದವು. ಸರ್ವಾಜನಿಕವಾಗಿ ಚರ್ಚೆಯಾಗಿದ್ದಕ್ಕಿಂತ ಹೆಚ್ಚು ಮಾಹಿತಿ ಈ ಮಾಧ್ಯಮಗಳಲ್ಲಿರುವವರ ಕೈಯ್ಯಲ್ಲಿ ಇತ್ತು. ಅದನ್ನೊಂದು ಸುದ್ದಿಯೇ ಅಲ್ಲ ಎಂಬಂತೆ ಪಕ್ಕಕ್ಕೆ ತಳ್ಳಿದ್ದಷ್ಟೇ ಅಲ್ಲದೇ, ಆತನ ವಿರುದ್ಧ ವರದಿ ಮಾಡಬಾರದೆಂಬ ಸಂವಿಧಾನ ವಿರೋಧಿ ತೀರ್ಪು ಬಂದ ಮೇಲೆ ಅದನ್ನು ಪ್ರಶ್ನಿಸಲೂ ಹೋಗಲಿಲ್ಲ. ಸ್ವಲ್ಪ ಕಾಲದ ನಂತರ ಇಂಡಿಯನ್ ಎಕ್ಸ್ ಪ್ರೆಸ್ ಸಂಪಾದಕೀಯ ತೀರ್ಪನ್ನು ಪ್ರಶ್ನಿಸಿತು, ಇನ್ನೂ ಒಂದು ವಾರದ ನಂತರ ಪ್ರಜಾವಾಣಿ ಮತ್ತು ಡೆಕ್ಕನ್ ಹೆರಾಲ್ಡಾಗಳು ಬರೆದವು.

ಒಂದು ವೇಳೆ ಸದರಿ ವ್ಯಕ್ತಿ ಬ್ರಾಹ್ಮಣನಾಗಿರದೇ ಇದ್ದಲ್ಲಿ ಏನಾಗುತ್ತಿತ್ತು? ಆ ವ್ಯಕ್ತಿಯನ್ನು ಚುನಾವಣಾ ಕಣದಿಂದ ನಿವೃತ್ತಗೊಳಿಸುವ ಮಟ್ಟಿಗೆ ಕೂಗಾಟ ನಡೆದಿರುತ್ತಿತ್ತು. ಇಂತಹ ಒಂದಲ್ಲಾ, ಎರಡಲ್ಲಾ, ನೂರಲ್ಲಾ ಸಾವಿರ ಉದಾಹರಣೆಗಳನ್ನು ನೋಡಬಹುದು.

ಈ ಪ್ರಮಾಣದ ಜಾತಿ ರಾಜಕಾರಣವನ್ನು ಮಾಧ್ಯಮಗಳಲ್ಲಿ ಕುಳಿತಿರುವವರು ಮಾಡುತ್ತಿದ್ದಾರೆ. ಬಹಳ ಕ್ಷುದ್ರವಾದ ನಡವಳಿಕೆಯನ್ನು ಇವರೆಲ್ಲರೂ ತೋರಿಸುತ್ತಿದ್ದಾರೆ. ಇದು ಪ್ರಜಾಪ್ರಭುತ್ವದ ದೃಷ್ಟಿಯಿಂದ ಬಹಳ ಅಪಾಯಕಾರಿ. ಈ ಕುರಿತು ಚರ್ಚೆ ನಡೆಯದಿದ್ದರೆ ಅದು ಇನ್ನೂ ಅಪಾಯಕಾರಿ. ನ್ಯಾಯಪಥ-ನಮ್ಮ ಗೌರಿ ಪತ್ರಿಕೆ ಮತ್ತು https://naanugauri.com ಈ ಚರ್ಚೆಯನ್ನು ಗಂಭೀರವಾಗಿ ಮತ್ತು ಆರೋಗ್ಯಕರವಾಗಿ ನಡೆಸಲು ತೀರ್ಮಾನಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...