Homeಕರ್ನಾಟಕ'ಬ್ರಾಹ್ಮಣ' ಮಾಧ್ಯಮಗಳ ಕುರಿತು ದೇವೇಗೌಡರ ಸಿಟ್ಟು ಸಮರ್ಥನೀಯವಲ್ಲವೇ?

‘ಬ್ರಾಹ್ಮಣ’ ಮಾಧ್ಯಮಗಳ ಕುರಿತು ದೇವೇಗೌಡರ ಸಿಟ್ಟು ಸಮರ್ಥನೀಯವಲ್ಲವೇ?

- Advertisement -
- Advertisement -

ನೀವು ಗೂಗಲ್‍ನಲ್ಲಿ ಸಾಕಷ್ಟು ಹುಡುಕಿದರೂ ಈ ಸುದ್ದಿ ಎರಡು ಕಡೆ ಬಿಟ್ಟರೆ ಎಲ್ಲೂ ಕಾಣುವುದಿಲ್ಲ. ಅದರಲ್ಲೂ ಮಾಧ್ಯಮಗಳ ಕ್ಯಾಮೆರಾದ ಮುಂದೆ ನಡೆದ ಈ ವಿದ್ಯಮಾನದ ವಿಡಿಯೋದ ತುಣುಕೂ ಸಹಾ ಇಂಟರ್‍ನೆಟ್‍ನಲ್ಲಿ ಸುಲಭಕ್ಕೆ ಸಿಗುವುದಿಲ್ಲ. ಆದರೆ ಸಮಕಾಲೀನ ಸಂಧರ್ಭದ ಬಹುಮುಖ್ಯ ಹೇಳಿಕೆಯಾದ ಈ ಸುದ್ದಿ ಮತ್ತು ಅದರ ಕುರಿತ ವಿಶ್ಲೇಷಣೆಯನ್ನು ಮಾಡದಿದ್ದರೆ ಅದು ಪತ್ರಿಕಾಧರ್ಮಕ್ಕೇ ಅಪಚಾರ.

ಟಿವಿ 18 ಮತ್ತು ಡೆಕ್ಕನ್ ನ್ಯೂಸ್‍ಗಳಲ್ಲಿ ಬಂದಿರುವ ಈ ಸುದ್ದಿಯ ವಿವರ ಕೆಳಕಂಡಂತಿದೆ.

ಹಾಸನ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿಕೆ, ಕನ್ನಡ ದೃಶ್ಯ ಮಾಧ್ಯಮಗಳ ಮೇಲೆ ಸಿಡಿಮಿಡಿಗೊಂಡ ಮಾಜಿ ಪ್ರಧಾನಿ, ಈ ರಾಜ್ಯದಲ್ಲಿ ಕನ್ನಡ ದೃಶ್ಯ ಮಾಧ್ಯಮಗಳು ಎಷ್ಟು ಉಪಕಾರ ಮಾಡುತ್ತಿವೆ, ಒಂದು ಪ್ರಾದೇಶಿಕ ಪಕ್ಷ ಉಳಿಯೋದಕ್ಕೆ ಎಷ್ಟು ಉಪಕಾರ ಮಾಡುತ್ತಿವೆ ನಿಮಗೆ ಧನ್ಯವಾದಗಳು. ನಾನು ಟಿವಿನೇ ನೋಡ್ಲಿಲ್ಲಾ ರೀ. ನಾನು ಭಾಷಣ ಮಾಡಿದ್ದನ್ನ ಬರೆಯಬೇಕು ಅಂತಾನೂ ಇಲ್ಲಾ ನೀವು ಬರೀರಿ ಇಲ್ಲಾ ಬಿಡಿ. ನನಗೆ 60 ವರ್ಷದ ರಾಜಕೀಯ ಜೀವನದಲ್ಲಿ ಇಷ್ಟು ಸಣ್ಣ ಮಟ್ಟಕ್ಕೆ ಟಿಬೇಟ್ ಮಾಡೋದನ್ನ ನಾನು ನೋಡಿಲ್ಲಾ ನಡೀರಿ ನಡೀರಿ. ಈ ದೇಶದ ಪ್ರಧಾನಿಯದು ಸಣ್ಣದು ಸಿಕ್ಕಲಿ ಅದು ಹೇಗೆ ಬರುತ್ತೆ? ನಾನು ಶೂದ್ರ ಅಷ್ಟೇನೇ, ಗೊತ್ತಿದೆ ನನಗೆ. ನಡೀರಿ ಎಂದು ಎದ್ದು ಮನೆಯೊಳಗೆ ಹೋದ ದೇವೇಗೌಡ. ಮಾಧ್ಯಮಗಳ ಮೇಲೆ ಬಾರೀ ಆಕ್ರೋಶಗೊಂಡ ದೇವೇಗೌಡ.
ಇದು ಸುದ್ದಿ. ಅವರ ಹೇಳಿಕೆಯನ್ನು ಸಮರ್ಥಿಸುವ ರೀತಿಯಲ್ಲಿ ಯಾವೊಂದು ಪತ್ರಿಕೆಯೂ ಇದನ್ನು ವರದಿ ಮಾಡಲಿಲ್ಲ. ಟಿವಿ 18 ಈ ಸುದ್ದಿಯನ್ನು ಹಾಕಿದ್ದರೂ, ಅದರೊಂದಿಗಿರುವ ದೇವೇಗೌಡರು ಮಾತಾಡುವ ವಿಡಿಯೋದಲ್ಲಿ ಈ ಭಾಗ ಇಲ್ಲ. ಆದರೆ, ಹಾಸನದಲ್ಲಿ ಗೌಡರು ಆಡಿದ ಈ ಮಾತನ್ನು ಅಲ್ಲಿನ ಎಲ್ಲಾ ವರದಿಗಾರರೂ ಕೇಳಿಸಿಕೊಂಡಿದ್ದಾರೆ, ರೆಕಾರ್ಡ್ ಸಹಾ ಮಾಡಿಕೊಂಡಿದ್ದಾರೆ.

ವಿಡಿಯೋ ನೋಡಿ

ಇರಲಿ, ಆದರೆ ದೇವೇಗೌಡರು ಹೇಳಿರುವ ಈ ಮಾತು ತಪ್ಪೇ? ಮಾಧ್ಯಮಗಳ ಮೇಲೆ ಈ ರೀತಿಯ ಜಾತಿ ಆರೋಪ ಮಾಡುವುದು ಸರಿಯೇ? ಕರ್ನಾಟಕದ ವಿವಿಧ ಮಾಧ್ಯಮ ಸಂಸ್ಥೆಗಳ ಮೇಲೆ ಯಾರ ಹಿಡಿತ ಇದೆ ಎಂದು ಅರಿಯಲು, ಹವ್ಯಕ ಬ್ರಾಹ್ಮಣರ ಸಮ್ಮೇಳನದಲ್ಲಿ ವಿಶ್ವೇಶ್ವರಭಟ್ ಮಾಡಿದ, ವೈರಲ್ ಆದ ಆಡಿಯೋ ಕೇಳಿದರೆ ಗೊತ್ತಾಗುತ್ತದೆ. ಕರ್ನಾಟಕದ ಪತ್ರಿಕಾ ಮಾಧ್ಯಮವನ್ನು ತಮ್ಮ ಕೈಯ್ಯಾರೆ ಹಾಳು ಮಾಡಿದ, ಅದನ್ನು ಬಿಜೆಪಿ ವಿರೋಧಿಗಳ ವಿರುದ್ಧ ಮಾಬ್ ಹಿಸ್ಟೀರಿಯಾ ಮೂಡಿಸಲು ಯತ್ನಿಸಿದವರು ಅವರು. ಇಂದು ಕನ್ನಡದ ಯಾವುದೇ ಮಾಧ್ಯಮ ಸಂಸ್ಥೆಗೆ ಹೋದರೆ ಅಲ್ಲೆಲ್ಲಾ ಹವ್ಯಕ ಬ್ರಾಹ್ಮಣ ಹುಡುಗರೇ ಕಾಣುತ್ತಾರೆ, ಇವರ ಸಂಖ್ಯೆ ಇನ್ನೂ ಹೆಚ್ಚಾಗಬೇಕು ಎಂದು ಅವರು ವಿವರವಾಗಿ ಮಾತನಾಡುತ್ತಾರೆ. ಕೆಳಹಂತದಲ್ಲಿ ಮಾತ್ರವಲ್ಲದೇ, ಕರ್ನಾಟಕದ ಇಂದಿನ ರಾಜ್ಯಮಟ್ಟದ ಹೆಚ್ಚಿನ ಪತ್ರಿಕೆಗಳು ಮತ್ತು ಚಾನೆಲ್‍ಗಳ ಮುಖ್ಯಸ್ಥರು ಬ್ರಾಹ್ಮಣರಾಗಿದ್ದಾರೆ. ಅವರಲ್ಲೂ ಶೇ.90ರಷ್ಟು ಹವ್ಯಕ ಬ್ರಾಹ್ಮಣರಾಗಿದ್ದಾರೆ.

ಹವ್ಯಕ ಬ್ರಾಹ್ಮಣರೆಂದರೆ ಗೊತ್ತಿರದವರಿಗೆ – ರಾಮಚಂದ್ರಾಪುರ ಮಠದ ರಾಘವೇಶ್ವರ ಸ್ವಾಮಿ ಪ್ರತಿನಿಧಿಸುವ ಜಾತಿ ಇದು. ಬ್ರಾಹ್ಮಣರಲ್ಲಿ ತೀರಾ ಇತ್ತೀಚಿನವರೆಗೂ ಕೃಷಿಯೇ ಪ್ರಧಾನ ಕಸುಬಾಗಿಸಿಕೊಂಡಿದ್ದ ಸಮುದಾಯವಿದು. ಇತ್ತೀಚೆಗೆ ಕಡಿಮೆಯಾಗುತ್ತಿದ್ದರೂ, ಈಗಲೂ ಕೃಷಿಯಲ್ಲಿ ತೊಡಗಿರುವವರ ಸಂಖ್ಯೆ ಗಣನೀಯವೇ ಆಗಿದೆ.
ಯಾವುದೋ ಸಾಂಧರ್ಭಿಕ ಅಥವಾ ಐತಿಹಾಸಿಕ ಕಾರಣಗಳಿಂದಾಗಿ ನಿರ್ದಿಷ್ಟ ಜಾತಿ ಮತ್ತು ಉಪಜಾತಿಗಳು ನಿರ್ದಿಷ್ಟ ಕ್ಷೇತ್ರವೊಂದರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದರೆ ಅದನ್ನು ಆ ಜಾತಿಯದ್ದೇ ತಪ್ಪು ಎನ್ನಲಾಗುವುದಿಲ್ಲ. ಆದರೆ, ಅವರು ಅಲ್ಲಿದ್ದು ಏನು ಮಾಡುತ್ತಿದ್ದಾರೆ ಎಂಬುದು ಹೆಚ್ಚು ಮುಖ್ಯವಾದುದು. ನಿಸ್ಸಂದೇಹವಾಗಿ ಹೇಳಬಹುದಾದ ಒಂದು ಸಂಗತಿಯೆಂದರೆ, ಬಹುಪಾಲು ಮಾಧ್ಯಮಗಳು ಶೂದ್ರ ರಾಜಕಾರಣಿಗಳು, ಶೂದ್ರ ರಾಜಕಾರಣವನ್ನು ಹಣಿಯುತ್ತಿವೆ. ಬಿಜೆಪಿಯಲ್ಲಿ ಬೇರೆ ಬೇರೆ ಸಮುದಾಯಗಳಿಗೆ ಸೇರಿದವರು ಇದ್ದಾರಾದರೂ, ಅದು ವೈದಿಕ ಶ್ರೇಷ್ಠತೆಯನ್ನು ಎತ್ತಿಹಿಡಿಯುವ ಸಿದ್ಧಾಂತ ಮತ್ತು ರಾಜಕಾರಣ ಮಾಡುತ್ತಿರುವುದರಿಂದ, ಶೇ.90ರಷ್ಟು ಅದರ ಪರವಾಗಿ ನಿಲ್ಲುತ್ತಾರೆ. ದಲಿತ ಮುಖ್ಯಮಂತ್ರಿಯ ಪ್ರಶ್ನೆಯನ್ನು ಎತ್ತುವುದೂ ಸಹಾ ಶೂದ್ರರಾದ ಸಿದ್ದರಾಮಯ್ಯನವರನ್ನು ಹಣಿಯಲೇ ಆಗಿರುತ್ತದೆ.

ತೀರಾ ಇತ್ತೀಚೆಗಿನ ಒಂದು ಉದಾಹರಣೆ ನೀಡುವುದಾದರೆ, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯ ಮೇಲೆ ‘ಮೀಟೂ’ ಆರೋಪಗಳು ಬಂದವು. ಸರ್ವಾಜನಿಕವಾಗಿ ಚರ್ಚೆಯಾಗಿದ್ದಕ್ಕಿಂತ ಹೆಚ್ಚು ಮಾಹಿತಿ ಈ ಮಾಧ್ಯಮಗಳಲ್ಲಿರುವವರ ಕೈಯ್ಯಲ್ಲಿ ಇತ್ತು. ಅದನ್ನೊಂದು ಸುದ್ದಿಯೇ ಅಲ್ಲ ಎಂಬಂತೆ ಪಕ್ಕಕ್ಕೆ ತಳ್ಳಿದ್ದಷ್ಟೇ ಅಲ್ಲದೇ, ಆತನ ವಿರುದ್ಧ ವರದಿ ಮಾಡಬಾರದೆಂಬ ಸಂವಿಧಾನ ವಿರೋಧಿ ತೀರ್ಪು ಬಂದ ಮೇಲೆ ಅದನ್ನು ಪ್ರಶ್ನಿಸಲೂ ಹೋಗಲಿಲ್ಲ. ಸ್ವಲ್ಪ ಕಾಲದ ನಂತರ ಇಂಡಿಯನ್ ಎಕ್ಸ್ ಪ್ರೆಸ್ ಸಂಪಾದಕೀಯ ತೀರ್ಪನ್ನು ಪ್ರಶ್ನಿಸಿತು, ಇನ್ನೂ ಒಂದು ವಾರದ ನಂತರ ಪ್ರಜಾವಾಣಿ ಮತ್ತು ಡೆಕ್ಕನ್ ಹೆರಾಲ್ಡಾಗಳು ಬರೆದವು.

ಒಂದು ವೇಳೆ ಸದರಿ ವ್ಯಕ್ತಿ ಬ್ರಾಹ್ಮಣನಾಗಿರದೇ ಇದ್ದಲ್ಲಿ ಏನಾಗುತ್ತಿತ್ತು? ಆ ವ್ಯಕ್ತಿಯನ್ನು ಚುನಾವಣಾ ಕಣದಿಂದ ನಿವೃತ್ತಗೊಳಿಸುವ ಮಟ್ಟಿಗೆ ಕೂಗಾಟ ನಡೆದಿರುತ್ತಿತ್ತು. ಇಂತಹ ಒಂದಲ್ಲಾ, ಎರಡಲ್ಲಾ, ನೂರಲ್ಲಾ ಸಾವಿರ ಉದಾಹರಣೆಗಳನ್ನು ನೋಡಬಹುದು.

ಈ ಪ್ರಮಾಣದ ಜಾತಿ ರಾಜಕಾರಣವನ್ನು ಮಾಧ್ಯಮಗಳಲ್ಲಿ ಕುಳಿತಿರುವವರು ಮಾಡುತ್ತಿದ್ದಾರೆ. ಬಹಳ ಕ್ಷುದ್ರವಾದ ನಡವಳಿಕೆಯನ್ನು ಇವರೆಲ್ಲರೂ ತೋರಿಸುತ್ತಿದ್ದಾರೆ. ಇದು ಪ್ರಜಾಪ್ರಭುತ್ವದ ದೃಷ್ಟಿಯಿಂದ ಬಹಳ ಅಪಾಯಕಾರಿ. ಈ ಕುರಿತು ಚರ್ಚೆ ನಡೆಯದಿದ್ದರೆ ಅದು ಇನ್ನೂ ಅಪಾಯಕಾರಿ. ನ್ಯಾಯಪಥ-ನಮ್ಮ ಗೌರಿ ಪತ್ರಿಕೆ ಮತ್ತು https://naanugauri.com ಈ ಚರ್ಚೆಯನ್ನು ಗಂಭೀರವಾಗಿ ಮತ್ತು ಆರೋಗ್ಯಕರವಾಗಿ ನಡೆಸಲು ತೀರ್ಮಾನಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...