Homeಅಂಕಣಗಳುನಿಮಗಿನ್ನೂ ಏನಾಗಬೇಕು ಸಾರ್

ನಿಮಗಿನ್ನೂ ಏನಾಗಬೇಕು ಸಾರ್

- Advertisement -
- Advertisement -

| ಯಾಹೂ |

ಅಂತೂ ಎಲ್ಲರೂ ಅವರವರ ಗೋಳನ್ನು ವಿಂಗಡಿಸಿಕೊಂಡು “ನಮಗ್ಯಾರಿದ್ದರೇನು ಸುಖವಿಲ್ಲ ಪ್ರಭುವೇ” ಎಂಬ ತತ್ವಪದ ಗುನುಗುತ್ತ ಒಳಗೊಳಗೇ ಅಳುತ್ತಿದ್ದಾರಂತಲ್ಲಾ. ಮೊದಲನೆಯದಾಗಿ ಅತಿವೃಷ್ಟಿಯಿಂದ ಕೊಚ್ಚಿಹೋದ ಬದುಕನ್ನು ಯಾರೂ ಸರಿಮಾಡಲಾರರೆಂಬ ತೀರ್ಮಾನಕ್ಕೆ ಬಂದಿರುವ ಪ್ರವಾಹ ಸಂತ್ರಸ್ತರು, ಮನೆಮಠ ನೆನೆಸಿಕೊಂಡು ಒಳಗೊಳಗೇ ಅಳುತ್ತಿದ್ದಾರೆ. ಎಡೂರಪ್ಪ ಅನರ್ಹ ಶಾಸಕರುಗಳ ಸ್ಥಿತಿ ನೋಡಿ ಗೊಳೋ ಎಂದು ಅಳುತ್ತಿರಬೇಕಾದರೆ, ಸಮ್ಮಿಶ್ರ ಸರಕಾರದಲ್ಲಿ ಮಂತ್ರಿಗಳಾಗಿ ಮೆರೆಯುತ್ತಿದ್ದ ಮೈತ್ರಿ ಸರಕಾರದ ಮಂತ್ರಿಗಳು ಕಣ್ಣಂಚಿನಲ್ಲಿ ನೀರು ತಂದುಕೊಂಡು ಬರೀ ಶಾಸಕರಾಗಿ ಬಾಳುವೆ ಮಾಡುವುದನ್ನು ನೆನಸಿಕೊಂಡು ಮುಮ್ಮಲ ಮರಗುತ್ತಿವೆಯಂತಲ್ಲಾ. ಇನ್ನ ಮಗನನ್ನು ಮುಖ್ಯಮಂತ್ರಿ ಮಾಡಿ ಬದುಕಿನ ಸಾರ್ಥಕತೆ ಕಂಡುಕೊಂಡು ಒಳಗೊಳಗೇ ಯಾವ ಪ್ರತಿರೋಧವೂ ಮಗನ ಬಳಿ ಸುಳಿಯದಂತೆ ಬೆಂಗಾವಲಾಗಿದ್ದ ದೇವೇಗೌಡರು ಹೇಳಿಕೊಳ್ಳಲಾಗದ ವೇದನೆಯಿಂದ ಅಳುತ್ತಿದ್ದಾರಂತಲ್ಲಾ, ಥೂತ್ತೇರಿ..

ಮಗನ ಮುಖ್ಯಮಂತ್ರಿಗಿರಿ ಹೋಯಿತು; ರೇವಣ್ಣ ಗಡಿಗೆ ತೆಗೆದುಕೊಂಡು ಕೆ.ಎಂ.ಎಫ್ ಡೈರಿ ಹತ್ತಿರ ಹೋದರೆ, ಜಾರಕಿ ಎಂಬ ಹಸು ಜಾಡಿಸಿ ಒದ್ದ ಪರಿಣಾಮ ಈಗ ಅವರೂ ನಿರುದ್ಯೋಗಿ. ಇದ್ದುದರಲ್ಲಿ ಅನಿತಾ, ಕುಮಾರ, ರೇವಣ್ಣ ಬರೀ ಶಾಸಕರು ಮಾತ್ರ. ಸ್ವತಃ ತಾವೂ ಕೂಡ ಜನಾಂಗದಿಂದ ತಿರಸ್ಕರಿಸಲ್ಪಟ್ಟಿರುವ ಸಮಯ ನೆನೆಸಿಕೊಂಡು ಮುಂದೇನು ಎಂದು ಹಲುಬುತ್ತಿರುವ ದೇವೇಗೌಡರನ್ನ ಮಾತನಾಡಿಸಿ, ಸಾಂತ್ವನ ಹೇಳುವುದು ನಮ್ಮ ಕರ್ತವ್ಯವಲ್ಲವೇ ಎಂದು ಚಿಂತಿಸಿ ಫೋನ್ ಮಾಡಲಾಗಿ ರಿಂಗಾಯ್ತು.
ರಿಂಗ್‍ಟೋನ್: “ಏನಿದೀ ಗ್ರಹಚಾರವೋ ಏನಿದೀ ವನವಾಸವೊ……….”
“ಹಲೋ ಯಾರು?”
“ನಾನು ಪತ್ರಕರ್ತ. ಗೌಡ್ರು ಜೊತೆ ಮಾತಾಡಬೇಕು.”
“ಹಲೋ”
“ನಾನು ಸಾರ್ ಯಾಹು”
“ಏನು ಗುರುವೇ”
“ಸುಮ್ಮನೆ ಮಾತಾಡಸನ ಅಂತ ಫೋನು ಮಾಡಿದೆ ಸಾರ್”
“ಏನು ಮಾತಾಡದು ಯಲ್ಲ ಮುಗಿತಲ್ಲ”
“ಮುಗದಿಲ್ಲ ಸಾರ್, ಯಲ್ಲ ಈಗ ಶುರುವಾಗ್ಯದೆ”
“ಅಯ್ಯೋ ರಾಮ ಏನು ಶುರುವಾಗಿದೆ”
“ನಿಮ್ಮ ಕುಟುಂಬದಿಂದ ಒಳ್ಳೆ ರಾಜಕಾರಣಿ ಬಂದ ಸಾರ್. ಪ್ರಜ್ವಲ ನಿಮ್ಮ ಹೆಸರುಳುಸ್ತನೆ. ಇನ್ನ ನಿಖಿಲ್ ನಿಮ್ಮ ಸಂಸ್ಕøತಿ ಉಳುಸ್ತನೆ. ರೇವಣ್ಣ ಕುಮಾರಣ್ಣನ ಕತೆ ಮುಗಿತಿದ್ದಂಗೆ ಇಬ್ಬರು ಎದ್ದರಲ್ಲ ಸಾರ್”
“ಎಲ್ಲಾ ಜನತೆ ಆಶೀರ್ವಾದ”
“ಆದ್ರೆ ಜನತೆ ಆಶೀರ್ವಾದ ನಿಮಗೆ ಸಿಗಲಿಲಲ್ಲವಲ್ಲ ಸಾರ್”
“ಸಿಗತಿತ್ತು, ಹಿತಶತ್ರುಗಳಿಂದ ಹಾಗಾಯ್ತು”
“ಹಿತ ಶತ್ರು ಏನು ಅಂತ ಗೊತ್ತಿದ್ರು ಯಾಕ್ ಸಾರ್ ಅವರ ಜೊತೆ ಇದ್ರಿ”
“ಅನಿವಾರ್ಯವಾಗಿ ಇರಬೇಕಾಯ್ತು”
“ನಿಮ್ಮಿಬ್ಬರ ನಡುವೆ ಅಷ್ಟೊಂದು ದ್ವೇಷ ಇದ್ದು ಅದ್ಯಂಗೆ ಹದುನಾಕು ತಿಂಗಳು ಜೊತೆಲಿದ್ರಿ ಸಾರ್”
“ದುರ್ಯೋದನನ ಜೊತೆ ಶಕುನಿ ಸ್ನೇಹದಿಂದ್ಲೇ ಇರಲಿಲ್ವೆ”
“ಅದೇನೊ ನಿಜ ಸಾರ್, ಆದ್ರು ಸಭೆ ಸಮಾರಂಭದಲ್ಲಿ ನೀವೆ ನಿಮ್ಮ ವೈರಿ ಕೈಮುಟ್ಟಿ ಮಾತನಾಡುಸ್ತಿದ್ರಿ. ಪ್ರೀತಿ ತೋರಿಸಿದ್ರಿ. ಮುದಿ ಪ್ರೇಮಿತರ ತುಂಟನಗೆ ಬೀರಿದ್ರಿ”
“ಅದು ಚುನಾವಣಾ ಸಂದರ್ಭ. ಮಾನ್ಯ ರಾಮಕೃಷ್ಣ ಹೆಗಡೆಯವರು ನಾನು ಎಷ್ಟೇ ಜಗಳ ಆಡಿದ್ರೂ ಸಾರ್ವಜನಿಕ ವೇದಿಕೇಲಿ ಒಂದಾಗಿರಲಿಲ್ವೇ”
“ನಿಜ ಸಾರ್ ನಿಮ್ಮಗಳ ಅಭಿನಯಕ್ಕೆ ಆಸ್ಕರ್ ಸಿಗಬೇಕಿತ್ತು ಸಾರ್”
“ಅದು ಅಭಿನಯ ಅಲ್ಲ. ಈ ನಾಡಿನ ಹಿತಕ್ಕಾಗಿ ನಾವೂ ಹೊಂದಾಣಿಕೆ ಮಾಡಿಕೊಬೇಕಾಗತ್ತೆ. ಅದನ್ನ ನಿಮ್ಮಂತವರು ಅಭಿನಯ ಅಂತಿರಾ”
“ಅಲ್ಲ ಸಾರ್, ನಿಮ್ಮಪ್ಪನಾಣೆ ಮುಖ್ಯಮಂತ್ರಿಯಾಗಲ್ಲ ಅಂದೊರು ಕುಮಾರಸ್ವಾಮಿ ಸರಕಾರ ಇರದಿಕ್ಕೆ ಬಿಡ್ತರಾ ಅಂದಿದ್ದಿರಿ. ಚುನಾವಣೆಗೂ ಮೊದಲಿನ ಈ ಹೇಳಿಕೆ ನಿಮಗೆ ಸಿಟ್ಟು ತರಿಸಿದೆ. ಆದ್ರೂ ಅವುರ ಜೊತೆ ನಗನಗತ ಇದ್ರಲ್ಲ”
“ಕರ್ನಾಟಕದಲ್ಲಿ ಮಕ್ಕಳ ರಾಜ್ಯ ಸ್ಥಾಪನೆ ಮಾಡಕ್ಕೆ ತಯಾರಾದ್ರು ಆದ್ರಿಂದ ನಾವು ಗೌಡರನ್ನ ವಿರೋಧಿಸೋದು ಅನಿವಾರ್ಯ ಆಯ್ತು ಅಂತರಲ್ಲ ಸಾರ್.”
“ಆ ರೀತಿ ಹೇಳೊ ಮಹಾನಾಯಕರು ಈ ದೇವೇಗೌಡ ಗುರುತಿಸಿ ಹಣಕಾಸಿನ ಸಚಿವನನ್ನಾಗಿ ಮಾಡೋವರಿಗೂ ಎಲ್ಲಿದ್ರೂ. ಉಪಮುಖ್ಯಮಂತ್ರಿ ಮಾಡಿದ್ಯಾರು ಅದು ಸಾಲದು ಅಂತ ಮುಖ್ಯಮಂತ್ರಿ ಆಗೋದಿಕ್ಕೆ ಹೋದಾಗ ಜೆ.ಎಚ್.ಪಟೇಲರು ಮೆಟ್ಟಿನಲ್ಲಿ ಹೊಡಿಯಕ್ಕೆ ಹೋದದ್ದು ತಡೆದೊರ್ಯಾರು. ಅವುರು ಇತಿಹಾಸ ಮಾತಾಡೋದಾದ್ರೆ ನಾವು ಮಾತನಾಡ್ತೀವಿ”
“ಸದ್ಯದಲ್ಲಿ ನಿಮ್ಮ ವೈರಿಗಳು ಬಿಜೆಪಿಗಳಲ್ಲವ ಸಾರ್.”
“ಯಾರೂ ವೈರಿಗಳಲ್ಲ. ಹತ್ತೊಂಬತ್ತು ನೂರಾ ಎಪ್ಪತ್ತೊಂಬತ್ತನೇ ಇಸವಿಲಿ ನಾನು ದೇವರಾಜ ಅರಸುರನ್ನ ಟೀಕೆ ಮಾಡ್ತ ಭ್ರಷ್ಟತೆಯ ಮಹಾಜನಕ ಅರಸು ಅಂತ ಭಾಷಣ ಮಾಡಿದೆ. ಅದೇ ದಿನ ರಾತ್ರಿ ಮುರಾರ್ಜಿ ದೇಸಾಯಿಯವರಿಂದ ಫೋನ್ ಬಂತು. ನೀವು ಅರಸುರವರನ್ನ ಭೇಟಿ ಮಾಡಿ ಕರ್ನಾಟಕದ ಎಂ.ಪಿಗಳು ಮುರಾರ್ಜಿ ಸರಕಾರಕ್ಕೆ ಬೆಂಬಲ ಕೊಡಬೇಕು ಅಂತ ವಿನಂತಿ ಮಾಡಿ ಅಂತಹೇಳಿ. ನನ್ನ ಪರಿಸ್ಥಿತಿ ಏನಾಗಿರಬೇಕು? ಅವತ್ತಿನಿಂದ ನಾನು ಯಾರನ್ನು ವೈರಿಗಳು ಅಂತ ಪರಿಗಣಿಸಿ ಹೋರಾಟ ಮಾಡಲ್ಲ. ಭವಿಷ್ಯದಲ್ಲಿ ಏನಾಗಬಹುದೊ ಅಂತ ತಿಳಕೊಂಡು ಮಾತನಾಡ್ತಿನಿ. ಆದ್ರೆ ಮಹಾ ನಾಯಕರಲ್ಲಿ ಅದಿಲ್ಲ.”
“ನನಿಗನ್ನಿಸಿದಂಗೆ ನಿಮಗೂ ಅವರಿಗೂ ದಾಯಾದಿ ಕಲಹ ಅನ್ನಿಸುತ್ತೆ ಸಾರ್”
“ಅದು ಹೇಗೇಳ್ತಿರೀ”
“ನೋಡಿ ಸಾರ್, ಹೊಳೆನರಸೀಪುರದಲ್ಲಿ ನಿಮ್ಮ ಮನೆ ಹತ್ರನೇ ಅವುರ ಜನಾಂಗದ ಮನೆಗಳೂ ಇದ್ದವಂತೆ. ಬಹಳ ಹೊಂದಿಕೊಂಡಿದ್ದವಂತೆ. ನೀವು ರಾಜಕೀಯವಾಗಿ ಬೆಳದಂಗೂ ಜಗಳ ಜಾಸ್ತಿಯಾಯ್ತಂತೆ. ಸಾಮಾನ್ಯವಾಗಿ ಹುಟ್ಟುತಾ ಅಣ್ಣತಮ್ಮದೀರು ಬೆಳಿತ ದಾಯಾದಿಗಳು ಅಂತ ಗಾದೆನೆ ಇದೆ. ಹಂಗಾಗಿ ನಿಮಗೂ ಅವುರ ಕಡೆಯವರಿಗೂ ಜಗಳ ಶುರುವಾಯ್ತಂತೆ. ಇದು ರಾಜಕೀಯವಾಗಿ ಇಡೀ ರಾಜ್ಯವೆ ಆವರಿಸಿಗಂಡದೆ. ಯಂಗೇ ಅಂದ್ರೇ, ಊರ ಜಮೀನು ವಿಷ್ಯ ರಾಜ್ಯದವರೆಗೂ ಹಬ್ಬಿ ಈಗ ನೀವು ಅವುರ ಎದುರಾಬದುರಾ ಹೋರಾಡ್ತ ಇದ್ದಿರಿ ಸರಿನ ಸಾರ್”
“ಹಾಗೇನು ಇಲ್ಲ”
“ಇಲ್ಲ ಅಂದ್ರೆ ಇದನ್ನೆಲ್ಲಾ ನಿಲ್ಲಿಸಿ ಸಾರ್. ಈಗ ಅಂಥಾ ನೀವು ಪ್ರಧಾನಿಯಾಗಿದ್ರಿ. ರೇಣುಕಾಚಾರಿ ತರದ ಕುಮಾರಣ್ಣ ಒಂದು ಸತಿಯಲ್ಲ ಯರಡಸತಿ ಮುಖ್ಯಮಂತ್ರಿಯಾದ್ರು. ಇನ್ನ ಇಲಾತಿ ಹಸಕಟ್ಟಿ ಸಾವುರಾರು ಲೀಟ್ರು ಹಾಲುಮಾರೊ ಹೈನೋದ್ಯಮ ತರದ ರೇವಣ್ಣ ಯರಡು ಮೂರು ಸತಿ ಯರಡು ಮೂರು ಪ್ರಬಲ ಖಾತೆನೆ ನಿಭಾಯಿಸಿದ್ರು. ಅಕ್ಕಪಕ್ಕದ ಮನೆಗೋಗಿ ಕಷ್ಟಸುಖ ಹೇಳಿಕಳೊತರ ಇದ್ದ ಅನಿತಕ್ಕ ಯರಡು ಬಾರಿ ಶಾಸಕಿಯಾದ್ರು. ಇನ್ನ ಭವಾನಕ್ಕ ಏನೇನಾಯ್ತರೊ ಏನೊ. ಪ್ರಜ್ವಲ ಜನಪ್ರಿಯ ಎಂ.ಪಿ. ಚಿಲ್ಡ್‍ಬೀರ್ ನಿಖಿಲಣ್ಣನ ಭವಿಷ್ಯ ದೊಡ್ಡದಾಗೆ ಉದ್ಘಾಟನೆ ಆಗಿದೆ. ಇನ್ನ ಬೀಗರು ಬಿಜ್ಜರು ನಂಟರು ಇಷ್ಟರು ಅಕ್ರಮಿಸಿರೊ ಸ್ಥಾನಮಾನದ ಪಟ್ಟಿ ದೊಡ್ಡದಿದೆ ಹಿಂಗಿರುವಾಗ ಇನ್ನು ಏನಾಗಬೇಕಿದೆ ಸಾರ್”
“ಇನ್ನ ಆಗಬೇಕಾದ್ದೇನಿಲ್ಲ ಕಡೆಯವರಿಗೂ ಹೋರಾಡ್ತಿನಿ ಈ ದೇವೇಗೌಡ ಹೋರಾಟದಿಂದ ಬಂದೊನು”
“ಹೋರಾಟ ಕುಟುಂಬದ ಉನ್ನತಿಗಾಗಿ ಅಂತ ಜನಾಂಗ ತಿಳಕಂಡು ತಿರಸ್ಕರುಸ್ತಾ ಅವುರಲ್ಲ ಸಾರ್”
“ಯಾರ ತಿರಸ್ಕಾರಕ್ಕೂ ಈ ದೇವೇಗೌಡ ಹೆದರಲ್ಲ”
“ಥೂತ್ತೇರಿ”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫೆಬ್ರವರಿ 14, ಪ್ರೇಮಿಗಳ ದಿನದಂದು ನಂದಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧ: ಬೆಳಗ್ಗೆ 6 ರಿಂದ ಸಂಜೆ 6ರವರೆಗೆ ಪ್ರವೇಶ ನಿಷೇಧಿಸಿದ ಜಿಲ್ಲಾಡಳಿತ 

ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಫೆಬ್ರವರಿ 14 ರಂದು ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ನಂದಿ ಬೆಟ್ಟಕ್ಕೆ ಪ್ರವಾಸಿಗರು ಪ್ರವೇಶಿಸುವುದನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ಬೆಂಗಳೂರಿನಿಂದ ಸುಮಾರು 60 ಕಿ.ಮೀ ದೂರದಲ್ಲಿರುವ ಈ...

ಮೊಹಮ್ಮದ್ ದೀಪಕ್ ಜಿಮ್‌ನಲ್ಲಿ ಸದಸ್ಯತ್ವ ಪಡೆದ 15 ಜನ ಹಿರಿಯ ಸುಪ್ರೀಂ ಕೋರ್ಟ್ ವಕೀಲರು

ಉತ್ತರಾಖಂಡದ ಕೋಟ್ದ್ವಾರದ ದೀಪಕ್ ಅವರ ಜಿಮ್‌ ಈ ಹಿಂದೆ 150 ಕ್ಕೂ ಹೆಚ್ಚು ಸದಸ್ಯರನ್ನು ಹೊಂದಿತ್ತು, ಜನನಿಬಿಡ ಕೇಂದ್ರವಾಗಿದ್ದ ದೀಪಕ್ ಕುಮಾರ್ ಅವರ 'ಹಲ್ಕ್' ಜಿಮ್‌ಗೆ, ಮುಸ್ಲಿಂ ವ್ಯಾಪಾರಿ ಪರವಾಗಿ ನಿಂತ ಬಳಿಕ...

ಮೀರತ್‌ನಲ್ಲಿ ‘ಲವ್ ಜಿಹಾದ್’ ಕಾನೂನಿನಡಿಯಲ್ಲಿ ಮುಸ್ಲಿಂ ವ್ಯಕ್ತಿ ವಿರುದ್ಧ ಪ್ರಕರಣ ದಾಖಲು; ಹಿಂದುತ್ವದ ಹೇಳಿಕೆಗಳನ್ನು ತಿರಸ್ಕರಿಸಿದ ಬೌದ್ಧ ವಧು

ಉತ್ತರ ಪ್ರದೇಶದ ಮುಸ್ಲಿಂ ವ್ಯಕ್ತಿಯೊಬ್ಬನ ವಿರುದ್ಧ ವಧುವಿನ ಚಿಕ್ಕಪ್ಪ ಆತನ ನಿಶ್ಚಿತಾರ್ಥದ ದಿನ ಅಂತರಧರ್ಮೀಯ ವಿವಾಹಕ್ಕೆ ಆಕ್ಷೇಪ ವ್ಯಕ್ತಪಡಿಸಿ ಪೊಲೀಸ್ ದೂರು ದಾಖಲಿಸಿದ್ದು, ಶುಕ್ರವಾರ ನಡೆಯಬೇಕಿದ್ದ ವಿವಾಹದ ಸುತ್ತ ಉದ್ವಿಗ್ನತೆ ಹೆಚ್ಚಾಗಿದೆ. ಈ ಪ್ರಕರಣವು...

ತಮಿಳುನಾಡು: ವಿಧಾನಸಭಾ ಚುನಾವಣೆಗೂ ಮುನ್ನ 1.31 ಕೋಟಿ ಮಹಿಳೆಯರ ಖಾತೆಗೆ 5000ರೂ ಜಮಾ ಮಾಡಿದ ಸ್ಟಾಲಿನ್ ಸರ್ಕಾರ

ಚೆನ್ನೈ: ವಿಧಾನಸಭಾ ಚುನಾವಣೆಗೆ ಮುನ್ನ ಮಹತ್ವದ ಹೆಜ್ಜೆಯಾಗಿ, ತಮಿಳುನಾಡಿನ ಡಿಎಂಕೆ ಸರ್ಕಾರ ಶುಕ್ರವಾರ ಮಹಿಳೆಯರಿಗೆ ಮಾಸಿಕ ರೂ.1,000 ಸಹಾಯ ಯೋಜನೆಯ 1.31 ಕೋಟಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ರೂ.5,000 ಜಮಾ ಮಾಡಿದೆ. ಏಪ್ರಿಲ್-ಮೇ ವಿಧಾನಸಭಾ...

17 ವರ್ಷಗಳ ಗಡಿಪಾರಿನ ಬಳಿಕ ತಾರಿಕ್ ರೆಹಮಾನ್ ರಾಜಕೀಯ ಪುನರಾಗಮನ; ಬಾಂಗ್ಲಾದೇಶ ಚುನಾವಣೆಯಲ್ಲಿ ಬಿಎನ್‌ಪಿಗೆ ಬಹುಮತ

17 ವರ್ಷಗಳ ಗಡಿಪಾರಾದ ನಂತರ ತಾರಿಕ್ ರೆಹಮಾನ್ ರಾಜಕೀಯವಾಗಿ ಪುನರಾಗಮನ ಮಾಡಿದ್ದಾರೆ. 2026 ರ ಬಾಂಗ್ಲಾದೇಶ ಚುನಾವಣೆಯಲ್ಲಿ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷವನ್ನು ಭರ್ಜರಿ ಗೆಲುವಿನತ್ತ ಕೊಂಡೊಯ್ದಿದ್ದಾರೆ. ಬಿಎನ್‌ಪಿ ಅಧ್ಯಕ್ಷರಾಗಿರುವ ತಾರಿಕ್ ಎರಡು ಕ್ಷೇತ್ರಗಳಿಂದ...

ಸುಡಾನ್: ನೈಲ್ ನದಿಯಲ್ಲಿ ದೋಣಿ ಮುಳುಗಿ ಕನಿಷ್ಠ 21 ಸಾವು, ಹಲವರು ನಾಪತ್ತೆ!

ಉತ್ತರ ಸುಡಾನ್‌ನ ನೈಲ್ ರಾಜ್ಯದ ನೈಲ್ ನದಿಯಲ್ಲಿ ಪ್ರಯಾಣಿಕರ ದೋಣಿ ಮುಳುಗಿದ ನಂತರ ಕನಿಷ್ಠ 21 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಕಾಣೆಯಾಗಿದ್ದಾರೆ ಎಂದು ಯುದ್ಧ ಪೀಡಿತ ದೇಶದ ನಾಗರಿಕ ರಕ್ಷಣಾ...

ಹೊಸಕೋಟೆ ಭೀಕರ ಅಪಘಾತದಲ್ಲಿ 7 ಮಂದಿ ಸಾವು: ಮೃತರಲ್ಲಿ 6 ಮಂದಿ 17-18 ವರ್ಷದ ವಿದ್ಯಾರ್ಥಿಗಳು!

ಬೆಂಗಳೂರು: ಫೆಬ್ರವರಿ 13, ಶುಕ್ರವಾರ ಬೆಳಗಿನ ಜಾವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ಹೊರವಲಯದಲ್ಲಿ ಸಂಭವಿಸಿದ ಭೀಕರ ಸರಣಿ ರಸ್ತೆ ಅಪಘಾತದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ಪೊಲೀಸರ ಪ್ರಕಾರ,...

85 ಕೋಟಿ ರೂ. ವಂಚನೆ ಪ್ರಕರಣ: ಲೋಧಾ ಡೆವಲಪರ್ಸ್‌ನ ಮಾಜಿ ನಿರ್ದೇಶಕರನ್ನು ಬಂಧಿಸಿದ ಇಡಿ

85 ಕೋಟಿ ರೂಪಾಯಿ ಹಗರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಮುಂಬೈ ಮೂಲದ ರಿಯಲ್ ಎಸ್ಟೇಟ್ ಸಂಸ್ಥೆ ಲೋಧಾ ಡೆವಲಪರ್ಸ್‌ನ ಮಾಜಿ ನಿರ್ದೇಶಕ ರಾಜೇಂದ್ರ ಲೋಧಾ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಗುರುವಾರ (Pe.13)...

ಹೆತ್ತವರ ಹತ್ಯೆ ಪ್ರಕರಣ: ಸ್ಕಿಜೋಫ್ರೇನಿಯಾ ಎಂಬ ಮನೋರೋಗದಿಂದ ಬಳಲುತ್ತಿದ್ದ ಬೆಂಗಳೂರು ಟೆಕ್ಕಿ ರೋಹನ್ ಚಂದ್ರ ಭಟ್ 

ಬೆಂಗಳೂರು: ಬುಧವಾರ ತನ್ನ ಹೆತ್ತವರನ್ನು ಇರಿದು ಕೊಂದ 33 ವರ್ಷದ ಅಮೆರಿಕದಿಂದ ಹಿಂದಿರುಗಿದ ಟೆಕ್ಕಿ ರೋಹನ್ ಚಂದ್ರ ಭಟ್, ವರ್ಷಗಳಿಂದ ಕೆಲಸವಿಲ್ಲದ ಕಾರಣ ಮಾನಸಿಕವಾಗಿ ಅಸ್ವಸ್ಥನಾಗಿದ್ದ ಅನ್ನುವುದು ದೃಢವಾಗಿದೆ.  ಬುಧವಾರ ಬೆಳಿಗ್ಗೆ 8.30 ರ...

ಬಿಕ್ಲುಶಿವ ಹತ್ಯೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಬೈರತಿ ಬಸವರಾಜ್ ಬಂಧನ: ಇಂದು ಕೋರ್ಟ್‌ಗೆ ಹಾಜರು

ಬೆಂಗಳೂರು ನಗರ ಪೊಲೀಸ್‌ ವ್ಯಾಪ್ತಿಯ ರೌಡಿ ಶಿವಪ್ರಕಾಶ್ ಅಲಿಯಾಸ್ ಬಿಕ್ಲುಶಿವ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್‌.ಪುರ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರಿಗೆ ಆರಿ ಹಿನ್ನಡೆಯಾಗಿದೆ. ಕೊಲೆ ಪ್ರಕರಣ ಸಂಬಂಧ ಸುಪ್ರೀಂಕೋರ್ಟ್‌ನಲ್ಲಿ...