Homeಅಂಕಣಗಳುನಿಮಗಿನ್ನೂ ಏನಾಗಬೇಕು ಸಾರ್

ನಿಮಗಿನ್ನೂ ಏನಾಗಬೇಕು ಸಾರ್

- Advertisement -
- Advertisement -

| ಯಾಹೂ |

ಅಂತೂ ಎಲ್ಲರೂ ಅವರವರ ಗೋಳನ್ನು ವಿಂಗಡಿಸಿಕೊಂಡು “ನಮಗ್ಯಾರಿದ್ದರೇನು ಸುಖವಿಲ್ಲ ಪ್ರಭುವೇ” ಎಂಬ ತತ್ವಪದ ಗುನುಗುತ್ತ ಒಳಗೊಳಗೇ ಅಳುತ್ತಿದ್ದಾರಂತಲ್ಲಾ. ಮೊದಲನೆಯದಾಗಿ ಅತಿವೃಷ್ಟಿಯಿಂದ ಕೊಚ್ಚಿಹೋದ ಬದುಕನ್ನು ಯಾರೂ ಸರಿಮಾಡಲಾರರೆಂಬ ತೀರ್ಮಾನಕ್ಕೆ ಬಂದಿರುವ ಪ್ರವಾಹ ಸಂತ್ರಸ್ತರು, ಮನೆಮಠ ನೆನೆಸಿಕೊಂಡು ಒಳಗೊಳಗೇ ಅಳುತ್ತಿದ್ದಾರೆ. ಎಡೂರಪ್ಪ ಅನರ್ಹ ಶಾಸಕರುಗಳ ಸ್ಥಿತಿ ನೋಡಿ ಗೊಳೋ ಎಂದು ಅಳುತ್ತಿರಬೇಕಾದರೆ, ಸಮ್ಮಿಶ್ರ ಸರಕಾರದಲ್ಲಿ ಮಂತ್ರಿಗಳಾಗಿ ಮೆರೆಯುತ್ತಿದ್ದ ಮೈತ್ರಿ ಸರಕಾರದ ಮಂತ್ರಿಗಳು ಕಣ್ಣಂಚಿನಲ್ಲಿ ನೀರು ತಂದುಕೊಂಡು ಬರೀ ಶಾಸಕರಾಗಿ ಬಾಳುವೆ ಮಾಡುವುದನ್ನು ನೆನಸಿಕೊಂಡು ಮುಮ್ಮಲ ಮರಗುತ್ತಿವೆಯಂತಲ್ಲಾ. ಇನ್ನ ಮಗನನ್ನು ಮುಖ್ಯಮಂತ್ರಿ ಮಾಡಿ ಬದುಕಿನ ಸಾರ್ಥಕತೆ ಕಂಡುಕೊಂಡು ಒಳಗೊಳಗೇ ಯಾವ ಪ್ರತಿರೋಧವೂ ಮಗನ ಬಳಿ ಸುಳಿಯದಂತೆ ಬೆಂಗಾವಲಾಗಿದ್ದ ದೇವೇಗೌಡರು ಹೇಳಿಕೊಳ್ಳಲಾಗದ ವೇದನೆಯಿಂದ ಅಳುತ್ತಿದ್ದಾರಂತಲ್ಲಾ, ಥೂತ್ತೇರಿ..

ಮಗನ ಮುಖ್ಯಮಂತ್ರಿಗಿರಿ ಹೋಯಿತು; ರೇವಣ್ಣ ಗಡಿಗೆ ತೆಗೆದುಕೊಂಡು ಕೆ.ಎಂ.ಎಫ್ ಡೈರಿ ಹತ್ತಿರ ಹೋದರೆ, ಜಾರಕಿ ಎಂಬ ಹಸು ಜಾಡಿಸಿ ಒದ್ದ ಪರಿಣಾಮ ಈಗ ಅವರೂ ನಿರುದ್ಯೋಗಿ. ಇದ್ದುದರಲ್ಲಿ ಅನಿತಾ, ಕುಮಾರ, ರೇವಣ್ಣ ಬರೀ ಶಾಸಕರು ಮಾತ್ರ. ಸ್ವತಃ ತಾವೂ ಕೂಡ ಜನಾಂಗದಿಂದ ತಿರಸ್ಕರಿಸಲ್ಪಟ್ಟಿರುವ ಸಮಯ ನೆನೆಸಿಕೊಂಡು ಮುಂದೇನು ಎಂದು ಹಲುಬುತ್ತಿರುವ ದೇವೇಗೌಡರನ್ನ ಮಾತನಾಡಿಸಿ, ಸಾಂತ್ವನ ಹೇಳುವುದು ನಮ್ಮ ಕರ್ತವ್ಯವಲ್ಲವೇ ಎಂದು ಚಿಂತಿಸಿ ಫೋನ್ ಮಾಡಲಾಗಿ ರಿಂಗಾಯ್ತು.
ರಿಂಗ್‍ಟೋನ್: “ಏನಿದೀ ಗ್ರಹಚಾರವೋ ಏನಿದೀ ವನವಾಸವೊ……….”
“ಹಲೋ ಯಾರು?”
“ನಾನು ಪತ್ರಕರ್ತ. ಗೌಡ್ರು ಜೊತೆ ಮಾತಾಡಬೇಕು.”
“ಹಲೋ”
“ನಾನು ಸಾರ್ ಯಾಹು”
“ಏನು ಗುರುವೇ”
“ಸುಮ್ಮನೆ ಮಾತಾಡಸನ ಅಂತ ಫೋನು ಮಾಡಿದೆ ಸಾರ್”
“ಏನು ಮಾತಾಡದು ಯಲ್ಲ ಮುಗಿತಲ್ಲ”
“ಮುಗದಿಲ್ಲ ಸಾರ್, ಯಲ್ಲ ಈಗ ಶುರುವಾಗ್ಯದೆ”
“ಅಯ್ಯೋ ರಾಮ ಏನು ಶುರುವಾಗಿದೆ”
“ನಿಮ್ಮ ಕುಟುಂಬದಿಂದ ಒಳ್ಳೆ ರಾಜಕಾರಣಿ ಬಂದ ಸಾರ್. ಪ್ರಜ್ವಲ ನಿಮ್ಮ ಹೆಸರುಳುಸ್ತನೆ. ಇನ್ನ ನಿಖಿಲ್ ನಿಮ್ಮ ಸಂಸ್ಕøತಿ ಉಳುಸ್ತನೆ. ರೇವಣ್ಣ ಕುಮಾರಣ್ಣನ ಕತೆ ಮುಗಿತಿದ್ದಂಗೆ ಇಬ್ಬರು ಎದ್ದರಲ್ಲ ಸಾರ್”
“ಎಲ್ಲಾ ಜನತೆ ಆಶೀರ್ವಾದ”
“ಆದ್ರೆ ಜನತೆ ಆಶೀರ್ವಾದ ನಿಮಗೆ ಸಿಗಲಿಲಲ್ಲವಲ್ಲ ಸಾರ್”
“ಸಿಗತಿತ್ತು, ಹಿತಶತ್ರುಗಳಿಂದ ಹಾಗಾಯ್ತು”
“ಹಿತ ಶತ್ರು ಏನು ಅಂತ ಗೊತ್ತಿದ್ರು ಯಾಕ್ ಸಾರ್ ಅವರ ಜೊತೆ ಇದ್ರಿ”
“ಅನಿವಾರ್ಯವಾಗಿ ಇರಬೇಕಾಯ್ತು”
“ನಿಮ್ಮಿಬ್ಬರ ನಡುವೆ ಅಷ್ಟೊಂದು ದ್ವೇಷ ಇದ್ದು ಅದ್ಯಂಗೆ ಹದುನಾಕು ತಿಂಗಳು ಜೊತೆಲಿದ್ರಿ ಸಾರ್”
“ದುರ್ಯೋದನನ ಜೊತೆ ಶಕುನಿ ಸ್ನೇಹದಿಂದ್ಲೇ ಇರಲಿಲ್ವೆ”
“ಅದೇನೊ ನಿಜ ಸಾರ್, ಆದ್ರು ಸಭೆ ಸಮಾರಂಭದಲ್ಲಿ ನೀವೆ ನಿಮ್ಮ ವೈರಿ ಕೈಮುಟ್ಟಿ ಮಾತನಾಡುಸ್ತಿದ್ರಿ. ಪ್ರೀತಿ ತೋರಿಸಿದ್ರಿ. ಮುದಿ ಪ್ರೇಮಿತರ ತುಂಟನಗೆ ಬೀರಿದ್ರಿ”
“ಅದು ಚುನಾವಣಾ ಸಂದರ್ಭ. ಮಾನ್ಯ ರಾಮಕೃಷ್ಣ ಹೆಗಡೆಯವರು ನಾನು ಎಷ್ಟೇ ಜಗಳ ಆಡಿದ್ರೂ ಸಾರ್ವಜನಿಕ ವೇದಿಕೇಲಿ ಒಂದಾಗಿರಲಿಲ್ವೇ”
“ನಿಜ ಸಾರ್ ನಿಮ್ಮಗಳ ಅಭಿನಯಕ್ಕೆ ಆಸ್ಕರ್ ಸಿಗಬೇಕಿತ್ತು ಸಾರ್”
“ಅದು ಅಭಿನಯ ಅಲ್ಲ. ಈ ನಾಡಿನ ಹಿತಕ್ಕಾಗಿ ನಾವೂ ಹೊಂದಾಣಿಕೆ ಮಾಡಿಕೊಬೇಕಾಗತ್ತೆ. ಅದನ್ನ ನಿಮ್ಮಂತವರು ಅಭಿನಯ ಅಂತಿರಾ”
“ಅಲ್ಲ ಸಾರ್, ನಿಮ್ಮಪ್ಪನಾಣೆ ಮುಖ್ಯಮಂತ್ರಿಯಾಗಲ್ಲ ಅಂದೊರು ಕುಮಾರಸ್ವಾಮಿ ಸರಕಾರ ಇರದಿಕ್ಕೆ ಬಿಡ್ತರಾ ಅಂದಿದ್ದಿರಿ. ಚುನಾವಣೆಗೂ ಮೊದಲಿನ ಈ ಹೇಳಿಕೆ ನಿಮಗೆ ಸಿಟ್ಟು ತರಿಸಿದೆ. ಆದ್ರೂ ಅವುರ ಜೊತೆ ನಗನಗತ ಇದ್ರಲ್ಲ”
“ಕರ್ನಾಟಕದಲ್ಲಿ ಮಕ್ಕಳ ರಾಜ್ಯ ಸ್ಥಾಪನೆ ಮಾಡಕ್ಕೆ ತಯಾರಾದ್ರು ಆದ್ರಿಂದ ನಾವು ಗೌಡರನ್ನ ವಿರೋಧಿಸೋದು ಅನಿವಾರ್ಯ ಆಯ್ತು ಅಂತರಲ್ಲ ಸಾರ್.”
“ಆ ರೀತಿ ಹೇಳೊ ಮಹಾನಾಯಕರು ಈ ದೇವೇಗೌಡ ಗುರುತಿಸಿ ಹಣಕಾಸಿನ ಸಚಿವನನ್ನಾಗಿ ಮಾಡೋವರಿಗೂ ಎಲ್ಲಿದ್ರೂ. ಉಪಮುಖ್ಯಮಂತ್ರಿ ಮಾಡಿದ್ಯಾರು ಅದು ಸಾಲದು ಅಂತ ಮುಖ್ಯಮಂತ್ರಿ ಆಗೋದಿಕ್ಕೆ ಹೋದಾಗ ಜೆ.ಎಚ್.ಪಟೇಲರು ಮೆಟ್ಟಿನಲ್ಲಿ ಹೊಡಿಯಕ್ಕೆ ಹೋದದ್ದು ತಡೆದೊರ್ಯಾರು. ಅವುರು ಇತಿಹಾಸ ಮಾತಾಡೋದಾದ್ರೆ ನಾವು ಮಾತನಾಡ್ತೀವಿ”
“ಸದ್ಯದಲ್ಲಿ ನಿಮ್ಮ ವೈರಿಗಳು ಬಿಜೆಪಿಗಳಲ್ಲವ ಸಾರ್.”
“ಯಾರೂ ವೈರಿಗಳಲ್ಲ. ಹತ್ತೊಂಬತ್ತು ನೂರಾ ಎಪ್ಪತ್ತೊಂಬತ್ತನೇ ಇಸವಿಲಿ ನಾನು ದೇವರಾಜ ಅರಸುರನ್ನ ಟೀಕೆ ಮಾಡ್ತ ಭ್ರಷ್ಟತೆಯ ಮಹಾಜನಕ ಅರಸು ಅಂತ ಭಾಷಣ ಮಾಡಿದೆ. ಅದೇ ದಿನ ರಾತ್ರಿ ಮುರಾರ್ಜಿ ದೇಸಾಯಿಯವರಿಂದ ಫೋನ್ ಬಂತು. ನೀವು ಅರಸುರವರನ್ನ ಭೇಟಿ ಮಾಡಿ ಕರ್ನಾಟಕದ ಎಂ.ಪಿಗಳು ಮುರಾರ್ಜಿ ಸರಕಾರಕ್ಕೆ ಬೆಂಬಲ ಕೊಡಬೇಕು ಅಂತ ವಿನಂತಿ ಮಾಡಿ ಅಂತಹೇಳಿ. ನನ್ನ ಪರಿಸ್ಥಿತಿ ಏನಾಗಿರಬೇಕು? ಅವತ್ತಿನಿಂದ ನಾನು ಯಾರನ್ನು ವೈರಿಗಳು ಅಂತ ಪರಿಗಣಿಸಿ ಹೋರಾಟ ಮಾಡಲ್ಲ. ಭವಿಷ್ಯದಲ್ಲಿ ಏನಾಗಬಹುದೊ ಅಂತ ತಿಳಕೊಂಡು ಮಾತನಾಡ್ತಿನಿ. ಆದ್ರೆ ಮಹಾ ನಾಯಕರಲ್ಲಿ ಅದಿಲ್ಲ.”
“ನನಿಗನ್ನಿಸಿದಂಗೆ ನಿಮಗೂ ಅವರಿಗೂ ದಾಯಾದಿ ಕಲಹ ಅನ್ನಿಸುತ್ತೆ ಸಾರ್”
“ಅದು ಹೇಗೇಳ್ತಿರೀ”
“ನೋಡಿ ಸಾರ್, ಹೊಳೆನರಸೀಪುರದಲ್ಲಿ ನಿಮ್ಮ ಮನೆ ಹತ್ರನೇ ಅವುರ ಜನಾಂಗದ ಮನೆಗಳೂ ಇದ್ದವಂತೆ. ಬಹಳ ಹೊಂದಿಕೊಂಡಿದ್ದವಂತೆ. ನೀವು ರಾಜಕೀಯವಾಗಿ ಬೆಳದಂಗೂ ಜಗಳ ಜಾಸ್ತಿಯಾಯ್ತಂತೆ. ಸಾಮಾನ್ಯವಾಗಿ ಹುಟ್ಟುತಾ ಅಣ್ಣತಮ್ಮದೀರು ಬೆಳಿತ ದಾಯಾದಿಗಳು ಅಂತ ಗಾದೆನೆ ಇದೆ. ಹಂಗಾಗಿ ನಿಮಗೂ ಅವುರ ಕಡೆಯವರಿಗೂ ಜಗಳ ಶುರುವಾಯ್ತಂತೆ. ಇದು ರಾಜಕೀಯವಾಗಿ ಇಡೀ ರಾಜ್ಯವೆ ಆವರಿಸಿಗಂಡದೆ. ಯಂಗೇ ಅಂದ್ರೇ, ಊರ ಜಮೀನು ವಿಷ್ಯ ರಾಜ್ಯದವರೆಗೂ ಹಬ್ಬಿ ಈಗ ನೀವು ಅವುರ ಎದುರಾಬದುರಾ ಹೋರಾಡ್ತ ಇದ್ದಿರಿ ಸರಿನ ಸಾರ್”
“ಹಾಗೇನು ಇಲ್ಲ”
“ಇಲ್ಲ ಅಂದ್ರೆ ಇದನ್ನೆಲ್ಲಾ ನಿಲ್ಲಿಸಿ ಸಾರ್. ಈಗ ಅಂಥಾ ನೀವು ಪ್ರಧಾನಿಯಾಗಿದ್ರಿ. ರೇಣುಕಾಚಾರಿ ತರದ ಕುಮಾರಣ್ಣ ಒಂದು ಸತಿಯಲ್ಲ ಯರಡಸತಿ ಮುಖ್ಯಮಂತ್ರಿಯಾದ್ರು. ಇನ್ನ ಇಲಾತಿ ಹಸಕಟ್ಟಿ ಸಾವುರಾರು ಲೀಟ್ರು ಹಾಲುಮಾರೊ ಹೈನೋದ್ಯಮ ತರದ ರೇವಣ್ಣ ಯರಡು ಮೂರು ಸತಿ ಯರಡು ಮೂರು ಪ್ರಬಲ ಖಾತೆನೆ ನಿಭಾಯಿಸಿದ್ರು. ಅಕ್ಕಪಕ್ಕದ ಮನೆಗೋಗಿ ಕಷ್ಟಸುಖ ಹೇಳಿಕಳೊತರ ಇದ್ದ ಅನಿತಕ್ಕ ಯರಡು ಬಾರಿ ಶಾಸಕಿಯಾದ್ರು. ಇನ್ನ ಭವಾನಕ್ಕ ಏನೇನಾಯ್ತರೊ ಏನೊ. ಪ್ರಜ್ವಲ ಜನಪ್ರಿಯ ಎಂ.ಪಿ. ಚಿಲ್ಡ್‍ಬೀರ್ ನಿಖಿಲಣ್ಣನ ಭವಿಷ್ಯ ದೊಡ್ಡದಾಗೆ ಉದ್ಘಾಟನೆ ಆಗಿದೆ. ಇನ್ನ ಬೀಗರು ಬಿಜ್ಜರು ನಂಟರು ಇಷ್ಟರು ಅಕ್ರಮಿಸಿರೊ ಸ್ಥಾನಮಾನದ ಪಟ್ಟಿ ದೊಡ್ಡದಿದೆ ಹಿಂಗಿರುವಾಗ ಇನ್ನು ಏನಾಗಬೇಕಿದೆ ಸಾರ್”
“ಇನ್ನ ಆಗಬೇಕಾದ್ದೇನಿಲ್ಲ ಕಡೆಯವರಿಗೂ ಹೋರಾಡ್ತಿನಿ ಈ ದೇವೇಗೌಡ ಹೋರಾಟದಿಂದ ಬಂದೊನು”
“ಹೋರಾಟ ಕುಟುಂಬದ ಉನ್ನತಿಗಾಗಿ ಅಂತ ಜನಾಂಗ ತಿಳಕಂಡು ತಿರಸ್ಕರುಸ್ತಾ ಅವುರಲ್ಲ ಸಾರ್”
“ಯಾರ ತಿರಸ್ಕಾರಕ್ಕೂ ಈ ದೇವೇಗೌಡ ಹೆದರಲ್ಲ”
“ಥೂತ್ತೇರಿ”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...