Homeಕರ್ನಾಟಕ‘ಮಧ್ಯಂತರ ಚುನಾವಣೆ ಗ್ಯಾರಂಟಿ’: ದೇವೇಗೌಡರ ಶಾಕಿಂಗ್ ಸ್ಟೇಟ್‌ಮೆಂಟ್‌ನ ಪರಿಣಾಮ ಏನಾಗಬಹುದು?

‘ಮಧ್ಯಂತರ ಚುನಾವಣೆ ಗ್ಯಾರಂಟಿ’: ದೇವೇಗೌಡರ ಶಾಕಿಂಗ್ ಸ್ಟೇಟ್‌ಮೆಂಟ್‌ನ ಪರಿಣಾಮ ಏನಾಗಬಹುದು?

- Advertisement -
- Advertisement -

| ಗಿರೀಶ್ ತಾಳಿಕಟ್ಟೆ |

ಹಗ್ಗದ ಮೇಲೆ ನಡೆದಷ್ಟು ನಾಜೂಕಾಗಿ ತೂಗಾಡುತ್ತಿರುವ ರಾಜ್ಯ ಮೈತ್ರಿ ಸರ್ಕಾರದ ಮೇಲೆ ಇದೀಗ ಇನ್ನೊಂದು ತೂಗುಗತ್ತಿ ಬಿದ್ದಿದೆ. ಸೀರಿಯಸ್ ವಿಷಯ ಅಂದ್ರೆ, ಆ ತೂಗುಗತ್ತಿಯನ್ನು ಗುರಿಯಿಟ್ಟು ಬಿಸಾಡಿರೋದು ಮಾಜಿ ಪ್ರಧಾನಿ ದೇವೇಗೌಡ್ರು. ಇವತ್ತು ಮಾಧ್ಯಮದವರ ಜೊತೆ ಮಾತನಾಡುತ್ತ ಮಧ್ಯಂತರ ಚುನಾವಣೆ ನಡೆಯೋದರ ಬಗ್ಗೆ ಡೌಟೇ ಬೇಡ ಎಂಬ ಶಾಕಿಂಗ್ ಹೇಳಿಕೆ ನೀಡಿದ್ದಾರೆ. ಅದು ಬ್ರೇಕಿಂಗ್ ನ್ಯೂಸ್ ಆಗುವ ಸುಳಿವು ಸಿಗುತ್ತಿದ್ದಂತೆಯೇ ಸ್ಪಷ್ಟೀಕರಣ ಕೊಟ್ಟಿರುವ ಅವರು ಇಲ್ಲ ನನ್ನ ಮಾತನ್ನು ತಪ್ಪಾಗಿ ಅರ್ಥೈಸಬೇಡಿ. ನಾನು ಹೇಳಿದ್ದು ಲೋಕಲ್ ಬಾಡಿ ಎಲೆಕ್ಷನ್ ಬಗ್ಗೆಯೇ ಹೊರತು, ರಾಜ್ಯ ವಿಧಾನಸಭೆ ಕುರಿತಂತೆ ಅಲ್ಲ. ಕುಮಾರಸ್ವಾಮಿಯವರು ಹೇಳಿದಂತೆ ಈ ಸರ್ಕಾರ ಇನ್ನು ನಾಲ್ಕು ವರ್ಷ ನಿರಾತಂಕವಾಗಿ ಮುಂದುವರೆಯಲಿದೆ ಎಂದು ಡ್ಯಾಮೇಜ್ ಕಂಟ್ರೋಲ್‌ಗೆ ಮುಂದಾಗಿದ್ದಾರೆ.

ಆದ್ರೆ, ದೇವೇಗೌಡ್ರು ಮಧ್ಯಂತರ ಚುನಾವಣೆ ಬಗ್ಗೆ ಮಾತನಾಡುತ್ತಾ ಆಡಿದ್ದ ಸಂಪೂರ್ಣ ಮಾತುಗಳನ್ನು ಕೇಳಿಸಿಕೊಂಡವರಿಗೆ ಅವರು ರಾಜ್ಯ ವಿಧಾನಸಭೆ ಗಮನದಲ್ಲಿಟ್ಟುಕೊಂಡೇ ಹೇಳಿರೋದು ಎಂಬುದು ಖಾತ್ರಿಯಾಗುತ್ತದೆ. ಯಾಕೆಂದರೆ ಮಧ್ಯಂತರ ಚುನಾವಣೆಯ ಮಾತನ್ನು ಮುಂದುವರೆಸುತ್ತಾ ಮಧ್ಯಂತರ ಚುನಾವಣೆ ನಡೆಯೋದ್ರ ಬಗ್ಗೆ ಡೌಟೇ ಬೇಡ. ಅವರು (ಕಾಂಗ್ರೆಸ್) ಐದು ವರ್ಷ ಸಪೋರ್ಟ್ ಮಾಡ್ತೀವಿ ಅಂತ ಹೇಳಿದ್ದ್ರು, ಆದ್ರೆ ಅವರು ಈಗ ಹೇಗೆ ವರ್ತಿಸ್ತಿದಾರೆ ನೋಡಿ. ನಮ್ಮ ಜನ ಬುದ್ದಿವಂತರು. ಎಲ್ಲವನ್ನೂ ಗಮನಿಸ್ತಾ ಇರ್‍ತಾರೆ. ನಾವೇನು ಮೈತ್ರಿ ಮಾಡಿಕೊಳ್ಳಿ ಅಂತ ಕೇಳಿರಲಿಲ್ಲ. ನನ್ನ ಮಗನನ್ನೇ (ಕುಮಾರಸ್ವಾಮಿ) ಮುಖ್ಯಮಂತ್ರಿ ಮಾಡಿ ಅಂತಾನು ಕೇಳಿರಲಿಲ್ಲ. ಅವರೇ (ಕಾಂಗ್ರೆಸ್) ನನ್ನನ್ನು ಕರೆದ್ರು, ಸರ್ಕಾರ ರಚಿಸುವಂತೆ ಹೇಳಿದ್ರು. ನಾನು ನನ್ನ ಕೆಲಸ ಮುಂದುವರೆಸ್ತೀನಿ. ಯಾರನ್ನೂ ದೂಷಿಸೋದಕ್ಕೆ ಹೋಗಲ್ಲ ಎಂದಿದ್ದರು. ಅಲ್ಲಿಗೆ ದೇವೇಗೌಡರು ಯಾವ ಮಧ್ಯಂತರ ಚುನಾವಣೆ ಬಗ್ಗೆ ಮಾತನಾಡ್ತಾ ಇದಾರೆ ಅನ್ನೋದು ಖಾತ್ರಿ ಆಯ್ತು. ಅತ್ತ ಸಿಎಂ ಕುಮಾರಸ್ವಾಮಿ ಗ್ರಾಮವಾಸ್ತವ್ಯ ಮಾಡಲು ಕಲ್ಬುರ್ಗಿಗೆ ತೆರಳಿರುವ ವೇಳೆಯಲ್ಲಿ ಕ್ಯಾಪಿಟಲ್ ಸಿಟಿಯಲ್ಲಿ ಕೂತು ದೇವೇಗೌಡರು ಈ ಮಾತು ಹೇಳಿರೋದು ಕೇವಲ ಬಾಯಿ ತಪ್ಪಿ ಆಡಿದ ಮಾತಲ್ಲ. ಯಾಕೆಂದರೆ, ದೇವೇಗೌಡರು ಮಾತನಾಡೋದು ಕಮ್ಮಿ. ಆಡುವ ಮಾತನ್ನೂ ಬಲು ತೂಗಿಯೇ ಮಾತನಾಡಿರುತ್ತಾರೆ. ಲೋಕಲ್ ಬಾಡಿ ಎಲೆಕ್ಷನ್‌ಗಳ ಬಗ್ಗೆ ತಾನು ಮಾತನಾಡಿದ್ದು ಎಂಬುದಾಗಿ ದೇವೇಗೌಡರು ಕೊಟ್ಟಿರುವ ಸ್ಪಷ್ಟೀಕರಣರ ನೆಪ ಮಾತ್ರದ್ದಷ್ಟೆ. ಅದರ ಹಿಂದೆ ನಿರ್ದಿಷ್ಟ ಲೆಕ್ಕಾಚಾರಗಳಿವೆ. ಬಸವಳಿದು ಕೂತಿರುವ ಕಾಂಗ್ರೆಸ್ ಹೈಕಮಾಂಡ್‌ಗೆ ಬಿಸಿ ಮುಟ್ಟಿಸುವ ಸ್ಪಷ್ಟ ಇರಾದೆಯಿದೆ.

ಸಿದ್ದರಾಮಯ್ಯನ ದಿಲ್ಲಿ ಭೇಟಿಯ ತರುವಾಯ ಕೆಪಿಸಿಸಿಯನ್ನು ಹೆಚ್ಚೂಕಮ್ಮಿ ವಿಸರ್ಜಿಸಿ ಹೊಸ ಪದಾಧಿಕಾರಿಗಳ ಆಯ್ಕೆಗೆ ಹೈಕಮಾಂಡ್ ಸಿದ್ದುಗೆ ಗ್ರೀನ್ ಸಿಗ್ನಲ್ ಕೊಟ್ಟಿರುವುದರ ಉದ್ದೇಶ ದೇವೇಗೌಡರ ದೂರದೃಷ್ಟಿಗೆ ಸ್ಪಷ್ಟವಾಗಿ ಗೋಚರಿಸಿದೆ. ಪಕ್ಷ ಸಂಘಟನೆ ಅಂದ್ರೆ, ಅದು ಯುದ್ದ ಸನಿಹದ ಶಸ್ತ್ರಾಸ್ತ್ರಾಭ್ಯಾಸವಿದ್ದಂತೆ ಎಂಬುದನ್ನು ಅರ್ಥ ಮಾಡಿಕೊಳ್ಳದಷ್ಟು ದೇವೇಗೌಡರು ದಡ್ಡರೇನಲ್ಲ. ಅದೂ ಅಲ್ಲದೆ ಮೈತ್ರಿಗೆ ಮೊದಲಿಂದಲೂ ಮಗ್ಗುಲ ಮುಳ್ಳಾಗಿ ಇರಿಯುತ್ತಿರುವ ಸಿದ್ರಾಮಯ್ಯ ‘ಮೈತ್ರಿಯಿಂದ ಏನೂ ಪ್ರಯೋಜನವಿಲ್ಲ’ ಎಂಬ ಹೇಳಿಕೆ ನೀಡಿದ್ದು ಅವರ ಅನುಮಾನವನ್ನು ಸ್ಪಷ್ಟವಾಗಿಸಿದೆ. ಒಂದುಕಡೆಯಿಂದ ದಾಳಿ ಶುರುವಾದ ಮೇಲೆ ಮತ್ತೊಂದು ಕಡೆಯಿಂದ ಪ್ರತಿದಾಳಿ ನಡೆಸಲೇಬೇಕಾಗುತ್ತೆ. ಮಧ್ಯಂತರ ಚುನಾವಣೆಗೆ ನೀವಷ್ಟೆ ಅಲ್ಲ, ನಾವೂ ತಯಾರಾಗಿದ್ದೇವೆ ಎಂಬ ಸೂಚ್ಯ ಮೆಸೇಜನ್ನು ದಿಲ್ಲಿ ಕೈ ನಾಯಕರಿಗೆ ರವಾನಿಸುವ ಇರಾದೆಯಿಂದಲೇ ದೇವೇಗೌಡರು ಈ ಬಾಣ ಬಿಟ್ಟಿದ್ದಾರೆ.

ಆದರೆ ಕಾಂಗ್ರೆಸ್ ಮತ್ತು ಜೆಡಿಎಸ್ ಎರಡೂ ಕಡೆಗಣಿಸಿರುವ ಒಂದು ವಾಸ್ತವವಿದೆ. ತಾವು ಮೈತ್ರಿ ಮುರಿದುಕೊಂಡು ಸರ್ಕಾರವನ್ನು ಪತನಗೊಳಿಸಿದ ಕೂಡಲೇ ರಾಜ್ಯದಲ್ಲಿ ಮಧ್ಯಂತರ ಚುನಾವಣೆ ನಡೆದುಬಿಡುತ್ತೆ ಎಂದುಕೊಂಡಂತಿವೆ. ಆದರೆ ಸೆಂಚುರಿ ಮೇಲೆ ಒಂದು ಅದ್ಭುತ ಬೌಂಡರಿ ಮೂಲಕ 104 ನಾಟ್‌ಔಟ್ ಪೊಸೀಷನ್‌ನಲ್ಲಿರುವ; ಅಂಪೈರ್ (ರಾಜ್ಯಪಾಲ), ಥರ್ಡ್ ಅಂಪೈರ್ (ಪ್ರಧಾನಿ), ಮ್ಯಾಚ್ ರೆಫರಿ (ರಾಷ್ಟ್ರಪತಿ) ಸೇರಿದಂತೆ ಸಮಸ್ತ ತನ್ನದೇ ಹೋಮ್‌ಗ್ರೌಂಡ್‌ನಲ್ಲಿ ಸಜ್ಜಾಗಿ ನಿಂತಿರುವ ಬಿಜೆಪಿ ಅಷ್ಟು ಸುಲಭವಾಗಿ ಮಧ್ಯಂತರ ಚುನಾವಣೆ ನಡೆಸಲು ಬಿಡುತ್ತಾ? ಖಂಡಿತ ಇಲ್ಲ. ಅವರೇ ಕಿತ್ತಾಡಿ ಸರ್ಕಾರ ಬೀಳಿಸಿಕೊಳ್ಳುವ ಸನಿಹಕ್ಕೆ ಬರುತ್ತಿದ್ದಾರೆ ಎಂದಕೂಡಲೇ ಅಖಾಡಕ್ಕಿಳಿಯುವ ಬಿಜೆಪಿ ಈಗ ಸಚಿವಗಿರಿ ಸಿಗದೆ ಅತೃಪ್ತರಾಗಿರುವ ಕೈ-ತೆನೆ ಶಾಸಕರನ್ನು ಸೆಳೆದುಕೊಂಡು ಸರ್ಕಾರ ರಚನೆಗೆ ಹಕ್ಕು ಮಂಡಿಸಿಬಿಡುತ್ತೆ.

ಮೇಲ್ನೋಟಕ್ಕೆ ಯಡಿಯೂರಪ್ಪನವರು ನಾವು ಆಪರೇಷನ್ ಕಮಲ ಮಾಡಲ್ಲ, ರಚನಾತ್ಮಕ ವಿರೋಧ ಪಕ್ಷವಾಗಿ ಸರ್ಕಾರದ ವೈಫಲ್ಯಗಳನ್ನು ಜನರ ಮುಂದಿಡುತ್ತೇವೆ ಎಂದು ಈಗಾಗಲೇ ಅಹೋರಾತ್ರಿ ಧರಣಿಗಳನ್ನು ಶುರು ಮಾಡಿಕೊಂಡಿದ್ದಾರೆ. ಆದರೆ ಸದ್ದಿಲ್ಲದೆ ಬಿಜೆಪಿ ಹೈಕಮಾಂಡ್, ಆಪರೇಷನ್ ಕಮಲ ನಡೆಸಲು ಯಡ್ಯೂರಪ್ಪನವರಿಗೆ ಲಾಸ್ಟ್ ಚಾನ್ಸ್ ನೀಡಿದ್ದು, ನಾವು ನೇರವಾಗಿ ಅಖಾಡಕ್ಕಿಳಿಯದೆ ದೂರದಲ್ಲೆ ನಿಂತು ಗೈಡ್ ಮಾಡುತ್ತೇವೆ, ಸಾಧಕ ಬಾಧಕಗಳನ್ನೆಲ್ಲ ಲೋಕಲ್ ಲೀಡರುಗಳೇ ಹೊತ್ತುಕೊಂಡು ಆಪರೇಷನ್ ನಡೆಸಬೇಕು ಎಂಬ ಗ್ರೀನ್ ಸಿಗ್ನಲ್ ನೀಡಿದೆ ಎಂಬ ವರ್ತಮಾನ ಬಿಜೆಪಿ ಮೂಲಗಳಿಂದಲೇ ಬೆಳಕಿಗೆ ಬಂದಿದೆ. ಈಚೆಗೆ ನಡೆದ ಲೋಕಸಭಾ ಎಲೆಕ್ಷನ್‌ನಲ್ಲಿ ಮೈತ್ರಿ ಅಖಾಡದ ಸುಮಾರು ಮೂವತ್ತು ಕಾಂಗ್ರೆಸ್-ಜೆಡಿಎಸ್ ಎಮ್ಮೆಲ್ಲೆಗಳು ಬೇರೆಬೇರೆ ಸ್ಥಳೀಯ ಕಾರಣಗಳಿಗಾಗಿ ಬಿಜೆಪಿಯನ್ನು ಬೆಂಬಲಿಸಿದ್ದರಿಂದಲೇ ೨೫ ಸ್ಥಾನಗಳನ್ನು ಗೆಲ್ಲಲು ಸಾಧ್ಯವಾದದ್ದು ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಆ ಮೂವತ್ತು ಜನರು ಆಪರೇಷನ್ ಕಮಲಕ್ಕೆ ಈಡಾಗುವ ಸಂಭವ ಇಲ್ಲವಾದರು ಅದರಲ್ಲಿ ಅರ್ಧದಷ್ಟು ಜನರಾದರು ಬಿಜೆಪಿಯತ್ತ ಒಲವಿಟ್ಟುಕೊಂಡೇ ಈ ಪಕ್ಷದ್ರೋಹ ಬಗೆದಿರೋದು ಬಿಜೆಪಿಯ ಹುಮ್ಮಸ್ಸನ್ನು ಇನ್ನಷ್ಟು ಹೆಚ್ಚಿಸಿದೆಯಂತೆ.

ಇಂಥಾ ಸಮಯದಲ್ಲಿ ಕಾಂಗ್ರೆಸ್, ಜೆಡಿಎಸ್‌ಗಳು ಮಧ್ಯಂತರ ಚುನಾವಣೆಯ ಕನವರಿಸುತ್ತಾ ಒಬ್ಬರ ಕಾಲು ಮತ್ತೊಬ್ಬರು ಎಳೆದಾಡಿಕೊಳ್ಳುತ್ತಿರೋದು ಬಿಜೆಪಿ ಪಾಲಿಗೆ ‘ಲಡ್ಡು ಬಂದು ಬಾಯಿಗೆ ಬಿತ್ತು’ ಎಂಬಂತಾಗಿದೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...