Homeಕರ್ನಾಟಕ‘ಮಧ್ಯಂತರ ಚುನಾವಣೆ ಗ್ಯಾರಂಟಿ’: ದೇವೇಗೌಡರ ಶಾಕಿಂಗ್ ಸ್ಟೇಟ್‌ಮೆಂಟ್‌ನ ಪರಿಣಾಮ ಏನಾಗಬಹುದು?

‘ಮಧ್ಯಂತರ ಚುನಾವಣೆ ಗ್ಯಾರಂಟಿ’: ದೇವೇಗೌಡರ ಶಾಕಿಂಗ್ ಸ್ಟೇಟ್‌ಮೆಂಟ್‌ನ ಪರಿಣಾಮ ಏನಾಗಬಹುದು?

- Advertisement -
- Advertisement -

| ಗಿರೀಶ್ ತಾಳಿಕಟ್ಟೆ |

ಹಗ್ಗದ ಮೇಲೆ ನಡೆದಷ್ಟು ನಾಜೂಕಾಗಿ ತೂಗಾಡುತ್ತಿರುವ ರಾಜ್ಯ ಮೈತ್ರಿ ಸರ್ಕಾರದ ಮೇಲೆ ಇದೀಗ ಇನ್ನೊಂದು ತೂಗುಗತ್ತಿ ಬಿದ್ದಿದೆ. ಸೀರಿಯಸ್ ವಿಷಯ ಅಂದ್ರೆ, ಆ ತೂಗುಗತ್ತಿಯನ್ನು ಗುರಿಯಿಟ್ಟು ಬಿಸಾಡಿರೋದು ಮಾಜಿ ಪ್ರಧಾನಿ ದೇವೇಗೌಡ್ರು. ಇವತ್ತು ಮಾಧ್ಯಮದವರ ಜೊತೆ ಮಾತನಾಡುತ್ತ ಮಧ್ಯಂತರ ಚುನಾವಣೆ ನಡೆಯೋದರ ಬಗ್ಗೆ ಡೌಟೇ ಬೇಡ ಎಂಬ ಶಾಕಿಂಗ್ ಹೇಳಿಕೆ ನೀಡಿದ್ದಾರೆ. ಅದು ಬ್ರೇಕಿಂಗ್ ನ್ಯೂಸ್ ಆಗುವ ಸುಳಿವು ಸಿಗುತ್ತಿದ್ದಂತೆಯೇ ಸ್ಪಷ್ಟೀಕರಣ ಕೊಟ್ಟಿರುವ ಅವರು ಇಲ್ಲ ನನ್ನ ಮಾತನ್ನು ತಪ್ಪಾಗಿ ಅರ್ಥೈಸಬೇಡಿ. ನಾನು ಹೇಳಿದ್ದು ಲೋಕಲ್ ಬಾಡಿ ಎಲೆಕ್ಷನ್ ಬಗ್ಗೆಯೇ ಹೊರತು, ರಾಜ್ಯ ವಿಧಾನಸಭೆ ಕುರಿತಂತೆ ಅಲ್ಲ. ಕುಮಾರಸ್ವಾಮಿಯವರು ಹೇಳಿದಂತೆ ಈ ಸರ್ಕಾರ ಇನ್ನು ನಾಲ್ಕು ವರ್ಷ ನಿರಾತಂಕವಾಗಿ ಮುಂದುವರೆಯಲಿದೆ ಎಂದು ಡ್ಯಾಮೇಜ್ ಕಂಟ್ರೋಲ್‌ಗೆ ಮುಂದಾಗಿದ್ದಾರೆ.

ಆದ್ರೆ, ದೇವೇಗೌಡ್ರು ಮಧ್ಯಂತರ ಚುನಾವಣೆ ಬಗ್ಗೆ ಮಾತನಾಡುತ್ತಾ ಆಡಿದ್ದ ಸಂಪೂರ್ಣ ಮಾತುಗಳನ್ನು ಕೇಳಿಸಿಕೊಂಡವರಿಗೆ ಅವರು ರಾಜ್ಯ ವಿಧಾನಸಭೆ ಗಮನದಲ್ಲಿಟ್ಟುಕೊಂಡೇ ಹೇಳಿರೋದು ಎಂಬುದು ಖಾತ್ರಿಯಾಗುತ್ತದೆ. ಯಾಕೆಂದರೆ ಮಧ್ಯಂತರ ಚುನಾವಣೆಯ ಮಾತನ್ನು ಮುಂದುವರೆಸುತ್ತಾ ಮಧ್ಯಂತರ ಚುನಾವಣೆ ನಡೆಯೋದ್ರ ಬಗ್ಗೆ ಡೌಟೇ ಬೇಡ. ಅವರು (ಕಾಂಗ್ರೆಸ್) ಐದು ವರ್ಷ ಸಪೋರ್ಟ್ ಮಾಡ್ತೀವಿ ಅಂತ ಹೇಳಿದ್ದ್ರು, ಆದ್ರೆ ಅವರು ಈಗ ಹೇಗೆ ವರ್ತಿಸ್ತಿದಾರೆ ನೋಡಿ. ನಮ್ಮ ಜನ ಬುದ್ದಿವಂತರು. ಎಲ್ಲವನ್ನೂ ಗಮನಿಸ್ತಾ ಇರ್‍ತಾರೆ. ನಾವೇನು ಮೈತ್ರಿ ಮಾಡಿಕೊಳ್ಳಿ ಅಂತ ಕೇಳಿರಲಿಲ್ಲ. ನನ್ನ ಮಗನನ್ನೇ (ಕುಮಾರಸ್ವಾಮಿ) ಮುಖ್ಯಮಂತ್ರಿ ಮಾಡಿ ಅಂತಾನು ಕೇಳಿರಲಿಲ್ಲ. ಅವರೇ (ಕಾಂಗ್ರೆಸ್) ನನ್ನನ್ನು ಕರೆದ್ರು, ಸರ್ಕಾರ ರಚಿಸುವಂತೆ ಹೇಳಿದ್ರು. ನಾನು ನನ್ನ ಕೆಲಸ ಮುಂದುವರೆಸ್ತೀನಿ. ಯಾರನ್ನೂ ದೂಷಿಸೋದಕ್ಕೆ ಹೋಗಲ್ಲ ಎಂದಿದ್ದರು. ಅಲ್ಲಿಗೆ ದೇವೇಗೌಡರು ಯಾವ ಮಧ್ಯಂತರ ಚುನಾವಣೆ ಬಗ್ಗೆ ಮಾತನಾಡ್ತಾ ಇದಾರೆ ಅನ್ನೋದು ಖಾತ್ರಿ ಆಯ್ತು. ಅತ್ತ ಸಿಎಂ ಕುಮಾರಸ್ವಾಮಿ ಗ್ರಾಮವಾಸ್ತವ್ಯ ಮಾಡಲು ಕಲ್ಬುರ್ಗಿಗೆ ತೆರಳಿರುವ ವೇಳೆಯಲ್ಲಿ ಕ್ಯಾಪಿಟಲ್ ಸಿಟಿಯಲ್ಲಿ ಕೂತು ದೇವೇಗೌಡರು ಈ ಮಾತು ಹೇಳಿರೋದು ಕೇವಲ ಬಾಯಿ ತಪ್ಪಿ ಆಡಿದ ಮಾತಲ್ಲ. ಯಾಕೆಂದರೆ, ದೇವೇಗೌಡರು ಮಾತನಾಡೋದು ಕಮ್ಮಿ. ಆಡುವ ಮಾತನ್ನೂ ಬಲು ತೂಗಿಯೇ ಮಾತನಾಡಿರುತ್ತಾರೆ. ಲೋಕಲ್ ಬಾಡಿ ಎಲೆಕ್ಷನ್‌ಗಳ ಬಗ್ಗೆ ತಾನು ಮಾತನಾಡಿದ್ದು ಎಂಬುದಾಗಿ ದೇವೇಗೌಡರು ಕೊಟ್ಟಿರುವ ಸ್ಪಷ್ಟೀಕರಣರ ನೆಪ ಮಾತ್ರದ್ದಷ್ಟೆ. ಅದರ ಹಿಂದೆ ನಿರ್ದಿಷ್ಟ ಲೆಕ್ಕಾಚಾರಗಳಿವೆ. ಬಸವಳಿದು ಕೂತಿರುವ ಕಾಂಗ್ರೆಸ್ ಹೈಕಮಾಂಡ್‌ಗೆ ಬಿಸಿ ಮುಟ್ಟಿಸುವ ಸ್ಪಷ್ಟ ಇರಾದೆಯಿದೆ.

ಸಿದ್ದರಾಮಯ್ಯನ ದಿಲ್ಲಿ ಭೇಟಿಯ ತರುವಾಯ ಕೆಪಿಸಿಸಿಯನ್ನು ಹೆಚ್ಚೂಕಮ್ಮಿ ವಿಸರ್ಜಿಸಿ ಹೊಸ ಪದಾಧಿಕಾರಿಗಳ ಆಯ್ಕೆಗೆ ಹೈಕಮಾಂಡ್ ಸಿದ್ದುಗೆ ಗ್ರೀನ್ ಸಿಗ್ನಲ್ ಕೊಟ್ಟಿರುವುದರ ಉದ್ದೇಶ ದೇವೇಗೌಡರ ದೂರದೃಷ್ಟಿಗೆ ಸ್ಪಷ್ಟವಾಗಿ ಗೋಚರಿಸಿದೆ. ಪಕ್ಷ ಸಂಘಟನೆ ಅಂದ್ರೆ, ಅದು ಯುದ್ದ ಸನಿಹದ ಶಸ್ತ್ರಾಸ್ತ್ರಾಭ್ಯಾಸವಿದ್ದಂತೆ ಎಂಬುದನ್ನು ಅರ್ಥ ಮಾಡಿಕೊಳ್ಳದಷ್ಟು ದೇವೇಗೌಡರು ದಡ್ಡರೇನಲ್ಲ. ಅದೂ ಅಲ್ಲದೆ ಮೈತ್ರಿಗೆ ಮೊದಲಿಂದಲೂ ಮಗ್ಗುಲ ಮುಳ್ಳಾಗಿ ಇರಿಯುತ್ತಿರುವ ಸಿದ್ರಾಮಯ್ಯ ‘ಮೈತ್ರಿಯಿಂದ ಏನೂ ಪ್ರಯೋಜನವಿಲ್ಲ’ ಎಂಬ ಹೇಳಿಕೆ ನೀಡಿದ್ದು ಅವರ ಅನುಮಾನವನ್ನು ಸ್ಪಷ್ಟವಾಗಿಸಿದೆ. ಒಂದುಕಡೆಯಿಂದ ದಾಳಿ ಶುರುವಾದ ಮೇಲೆ ಮತ್ತೊಂದು ಕಡೆಯಿಂದ ಪ್ರತಿದಾಳಿ ನಡೆಸಲೇಬೇಕಾಗುತ್ತೆ. ಮಧ್ಯಂತರ ಚುನಾವಣೆಗೆ ನೀವಷ್ಟೆ ಅಲ್ಲ, ನಾವೂ ತಯಾರಾಗಿದ್ದೇವೆ ಎಂಬ ಸೂಚ್ಯ ಮೆಸೇಜನ್ನು ದಿಲ್ಲಿ ಕೈ ನಾಯಕರಿಗೆ ರವಾನಿಸುವ ಇರಾದೆಯಿಂದಲೇ ದೇವೇಗೌಡರು ಈ ಬಾಣ ಬಿಟ್ಟಿದ್ದಾರೆ.

ಆದರೆ ಕಾಂಗ್ರೆಸ್ ಮತ್ತು ಜೆಡಿಎಸ್ ಎರಡೂ ಕಡೆಗಣಿಸಿರುವ ಒಂದು ವಾಸ್ತವವಿದೆ. ತಾವು ಮೈತ್ರಿ ಮುರಿದುಕೊಂಡು ಸರ್ಕಾರವನ್ನು ಪತನಗೊಳಿಸಿದ ಕೂಡಲೇ ರಾಜ್ಯದಲ್ಲಿ ಮಧ್ಯಂತರ ಚುನಾವಣೆ ನಡೆದುಬಿಡುತ್ತೆ ಎಂದುಕೊಂಡಂತಿವೆ. ಆದರೆ ಸೆಂಚುರಿ ಮೇಲೆ ಒಂದು ಅದ್ಭುತ ಬೌಂಡರಿ ಮೂಲಕ 104 ನಾಟ್‌ಔಟ್ ಪೊಸೀಷನ್‌ನಲ್ಲಿರುವ; ಅಂಪೈರ್ (ರಾಜ್ಯಪಾಲ), ಥರ್ಡ್ ಅಂಪೈರ್ (ಪ್ರಧಾನಿ), ಮ್ಯಾಚ್ ರೆಫರಿ (ರಾಷ್ಟ್ರಪತಿ) ಸೇರಿದಂತೆ ಸಮಸ್ತ ತನ್ನದೇ ಹೋಮ್‌ಗ್ರೌಂಡ್‌ನಲ್ಲಿ ಸಜ್ಜಾಗಿ ನಿಂತಿರುವ ಬಿಜೆಪಿ ಅಷ್ಟು ಸುಲಭವಾಗಿ ಮಧ್ಯಂತರ ಚುನಾವಣೆ ನಡೆಸಲು ಬಿಡುತ್ತಾ? ಖಂಡಿತ ಇಲ್ಲ. ಅವರೇ ಕಿತ್ತಾಡಿ ಸರ್ಕಾರ ಬೀಳಿಸಿಕೊಳ್ಳುವ ಸನಿಹಕ್ಕೆ ಬರುತ್ತಿದ್ದಾರೆ ಎಂದಕೂಡಲೇ ಅಖಾಡಕ್ಕಿಳಿಯುವ ಬಿಜೆಪಿ ಈಗ ಸಚಿವಗಿರಿ ಸಿಗದೆ ಅತೃಪ್ತರಾಗಿರುವ ಕೈ-ತೆನೆ ಶಾಸಕರನ್ನು ಸೆಳೆದುಕೊಂಡು ಸರ್ಕಾರ ರಚನೆಗೆ ಹಕ್ಕು ಮಂಡಿಸಿಬಿಡುತ್ತೆ.

ಮೇಲ್ನೋಟಕ್ಕೆ ಯಡಿಯೂರಪ್ಪನವರು ನಾವು ಆಪರೇಷನ್ ಕಮಲ ಮಾಡಲ್ಲ, ರಚನಾತ್ಮಕ ವಿರೋಧ ಪಕ್ಷವಾಗಿ ಸರ್ಕಾರದ ವೈಫಲ್ಯಗಳನ್ನು ಜನರ ಮುಂದಿಡುತ್ತೇವೆ ಎಂದು ಈಗಾಗಲೇ ಅಹೋರಾತ್ರಿ ಧರಣಿಗಳನ್ನು ಶುರು ಮಾಡಿಕೊಂಡಿದ್ದಾರೆ. ಆದರೆ ಸದ್ದಿಲ್ಲದೆ ಬಿಜೆಪಿ ಹೈಕಮಾಂಡ್, ಆಪರೇಷನ್ ಕಮಲ ನಡೆಸಲು ಯಡ್ಯೂರಪ್ಪನವರಿಗೆ ಲಾಸ್ಟ್ ಚಾನ್ಸ್ ನೀಡಿದ್ದು, ನಾವು ನೇರವಾಗಿ ಅಖಾಡಕ್ಕಿಳಿಯದೆ ದೂರದಲ್ಲೆ ನಿಂತು ಗೈಡ್ ಮಾಡುತ್ತೇವೆ, ಸಾಧಕ ಬಾಧಕಗಳನ್ನೆಲ್ಲ ಲೋಕಲ್ ಲೀಡರುಗಳೇ ಹೊತ್ತುಕೊಂಡು ಆಪರೇಷನ್ ನಡೆಸಬೇಕು ಎಂಬ ಗ್ರೀನ್ ಸಿಗ್ನಲ್ ನೀಡಿದೆ ಎಂಬ ವರ್ತಮಾನ ಬಿಜೆಪಿ ಮೂಲಗಳಿಂದಲೇ ಬೆಳಕಿಗೆ ಬಂದಿದೆ. ಈಚೆಗೆ ನಡೆದ ಲೋಕಸಭಾ ಎಲೆಕ್ಷನ್‌ನಲ್ಲಿ ಮೈತ್ರಿ ಅಖಾಡದ ಸುಮಾರು ಮೂವತ್ತು ಕಾಂಗ್ರೆಸ್-ಜೆಡಿಎಸ್ ಎಮ್ಮೆಲ್ಲೆಗಳು ಬೇರೆಬೇರೆ ಸ್ಥಳೀಯ ಕಾರಣಗಳಿಗಾಗಿ ಬಿಜೆಪಿಯನ್ನು ಬೆಂಬಲಿಸಿದ್ದರಿಂದಲೇ ೨೫ ಸ್ಥಾನಗಳನ್ನು ಗೆಲ್ಲಲು ಸಾಧ್ಯವಾದದ್ದು ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಆ ಮೂವತ್ತು ಜನರು ಆಪರೇಷನ್ ಕಮಲಕ್ಕೆ ಈಡಾಗುವ ಸಂಭವ ಇಲ್ಲವಾದರು ಅದರಲ್ಲಿ ಅರ್ಧದಷ್ಟು ಜನರಾದರು ಬಿಜೆಪಿಯತ್ತ ಒಲವಿಟ್ಟುಕೊಂಡೇ ಈ ಪಕ್ಷದ್ರೋಹ ಬಗೆದಿರೋದು ಬಿಜೆಪಿಯ ಹುಮ್ಮಸ್ಸನ್ನು ಇನ್ನಷ್ಟು ಹೆಚ್ಚಿಸಿದೆಯಂತೆ.

ಇಂಥಾ ಸಮಯದಲ್ಲಿ ಕಾಂಗ್ರೆಸ್, ಜೆಡಿಎಸ್‌ಗಳು ಮಧ್ಯಂತರ ಚುನಾವಣೆಯ ಕನವರಿಸುತ್ತಾ ಒಬ್ಬರ ಕಾಲು ಮತ್ತೊಬ್ಬರು ಎಳೆದಾಡಿಕೊಳ್ಳುತ್ತಿರೋದು ಬಿಜೆಪಿ ಪಾಲಿಗೆ ‘ಲಡ್ಡು ಬಂದು ಬಾಯಿಗೆ ಬಿತ್ತು’ ಎಂಬಂತಾಗಿದೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...