Homeಚಳವಳಿದೇಶದ ಗಮನ ಸೆಳೆಯಲು ಹೋದ ನಮ್ಮ ಗಮನ ಸೆಳೆದ ಒಂದು ಪ್ರತಿಭಟನೆ

ದೇಶದ ಗಮನ ಸೆಳೆಯಲು ಹೋದ ನಮ್ಮ ಗಮನ ಸೆಳೆದ ಒಂದು ಪ್ರತಿಭಟನೆ

- Advertisement -
- Advertisement -

ಸರೋವರ್ ಬೆಂಕಿಕೆರೆ |

ರೈತರ ಹೋರಾಟವು ಎಲ್ಲರ ಗಮನ ಸೆಳೆಯಿತು. ಅದಕ್ಕಾಗಿ ದೆಹಲಿಗೆ ಹೋಗಿದ್ದ ನಮಗೆ ಅದೇ ಜಂತರ್‌ಮಂತರ್‌ನಲ್ಲಿ ಇನ್ನೊಂದು ಹೋರಾಟವು ಗಮನ ಸೆಳೆಯಿತು. ಸರ್ಕಾರಗಳ ಕಣ್ಣು ಕಾಣಿಸದೇ ಇರಬಹುದು, ಅವರುಗಳ ಕಿವಿ ಕೇಳಿಸದೇ ಇರಬಹುದು. ಆದರೆ ಆಳದಲ್ಲಿ ಪ್ರಜ್ಞೆಯನ್ನು ಜಾಗೃತವಾಗಿರಿಸಿಕೊಂಡ ನಾಗರಿಕರು ಅವರ ಕಣ್ಣು, ಕಿವಿಗಳು ಊನವಾಗಿದ್ದರೂ, ಸಮಾಜವನ್ನು ಎಚ್ಚರಿಸುತ್ತಲೇ ಇರುತ್ತಾರೆ. ದೆಹಲಿಯ ರೈತ ಹೋರಾಟ ನಡೆದ ೨ ದಿನಗಳ ಬಳಿಕ ನಮಗೆ ಅಲ್ಲಿ ಕಂಡ ಸಂಗತಿಯಿದು. ಡಿ. 3ರಂದು ನೂರಾರು ಅಂಗವಿಕಲರು ಸಂಘಟಿತರಾಗಿ ಒಂದು ಪ್ರತಿಭಟನೆಯನ್ನು ನಡೆಸಿದರು. ಅವರಲ್ಲಿ ಅಂಧರೇ ಅತ್ಯಂತ ಹೆಚ್ಚು ಸಂಖ್ಯೆಯಲ್ಲಿದ್ದರು.

ಹೆಣ್ಣುಮಕ್ಕಳು ಬಳಸುವ ನ್ಯಾಪ್ಕಿನ್ ಮೇಲೆ ಹೆಚ್ಚಿನ ಜಿಎಸ್‌ಟಿ ತೆರಿಗೆ ವಿಧಿಸಿ ದೇಶದಾದ್ಯಂತ ಪ್ರತಿರೋಧದ ಬಂದ ನಂತರದಲ್ಲಿ ಸ್ವಲ್ಪ ಮಟ್ಟಿಗೆ ತೆರಿಗೆ ಇಳಿಸಿದ್ದು ನಮಗೆ ಗೊತ್ತಿತ್ತು. ಆದರೆ ಅದೇ ಸರ್ಕಾರವು ಸಾವಿರಾರು ಕೋಟಿ ರೂಗಳನ್ನು ಕೊಳ್ಳೆ ಹೊಡೆದು ದೇಶ ಬಿಟ್ಟಂತ ದರೋಡೆಕೋರರು, ತೆರಿಗೆ ಪಾವತಿಸದೆ ನಮ್ಮ ನೈಸರ್ಗಿಕ ಸಂಪನ್ಮೂಲಗಳನ್ನು ತಿಂದು ತೇಗುತ್ತಿರುವ ಬಂಡವಾಳಶಾಹಿಗಳಿಗೆ ಬೆನ್ನೆಲುಬಾಗಿ ನಿಂತಿರುವುದೂ ಗೊತ್ತಿತ್ತು. ಆದರೆ, ಈ ಪ್ರತಿಭಟನೆಯಿಂದ ನಮಗೆ ಇನ್ನೊಂದು ಸಂಗತಿಯೂ ಗೊತ್ತಾಯಿತು. ಮಾನ ಮರ್ಯಾದೆಯಿಲ್ಲದ, ಪಂಚೇಂದ್ರಿಯಗಳಿಲ್ಲದ ಕೇಂದ್ರ ಸರ್ಕಾರವು ಅಂಗವಿಕಲರು ಬಳಸುವ ಉಪಕರಣಗಳ ಮೇಲೆ ತೆರಿಗೆ ಹೆಚ್ಚಿಸಿ 25% ಜಿಎಸ್‌ಟಿಅನ್ನು ವಿಧಿಸಿದೆ! ಅದೇ ಕಾರಣಕ್ಕೆ ಅವರು ಅಲ್ಲಿ ಸೇರಿದ್ದರು.

ಯುಪಿಎ ಆಡಳಿತದ ಸಂದರ್ಭದಿಂದ ಶುರುವಾದ ಜಾಬ್‌ಲೆಸ್ ಗ್ರೋಥ್‌ನಿಂದ ಜಾಬ್ ಲಾಸ್‌ಗ್ರೋಥ್‌ನತ್ತ ಭಾರತವು ಮುಖ ಮಾಡಿದೆ. ಈ ನಕಾರಾತ್ಮಕ ಬೆಳವಣಿಗೆಗೆ ಬಿಜೆಪಿ ಆಡಳಿತವೇ ಕಾರಣವೆಂಬುದು ನಮಗೆ ಗೊತ್ತಿತ್ತು. ನಿರುದ್ಯೋಗದ ವಿರುದ್ಧದ ಆಂದೋಲನದಲ್ಲಿ ತೊಡಗಿದ್ದ ನಮಗೆ ಅದರ ಒಳಹೊರಗುಗಳ ಅರಿವಿದೆ. ಆದರೆ ಈ ಅವಧಿಯಲ್ಲಿ ಎರಡು ವಿಶೇಷ ಸಮುದಾಯಗಳ ಕುರಿತು ನಮಗೆ ದೆಹಲಿಯಲ್ಲಿ ಅರಿವಿಗೆ ಬಂದಿತು. ನಿರುದ್ಯೋಗದ ಸಮಸ್ಯೆಯು ಓದಿಕೊಂಡಿರುವ ಸುಶಿಕ್ಷಿತ ಸಮುದಾಯದ ಜೊತೆಗೆ, ಹಳ್ಳಿಯಲ್ಲೇ ಉಳಿಯಬಯಸುವ ಯುವಜನರದ್ದೂ ಆಗಿರುವುದು ಎಲ್ಲರಿಗೂ ತಿಳಿದಿದೆ; ಉದ್ಯೋಗ ಹುಡುಕಿಕೊಳ್ಳಲು ಸಾಧ್ಯವಾಗದೇ ಸೆಕ್ಸ್‌ವರ್ಕ್ ಮತ್ತು ಭಿಕ್ಷಾಟನೆಗಿಳಿದಿರುವ ಹಿಜ್ರಾ ಸಮುದಾಯದ ಕಥೆ ಏನಾಗಿರಬಹುದು? ಹಾಗೆಯೇ ವಿಕಲಚೇತನರದ್ದು?

ಎಲ್ಲರಿಗೂ ಖುಷಿಯಿಂದ ಆಚರಣೆ ಮಾಡಲು ಒಂದು ದಿನವಿರುವಂತೆ (ಡಿ.3ರಂದು) ಯಾವುದೋ ಒಂದು ಕಾರ್ಯಕ್ರಮದಲ್ಲಿ ಅಂಗವಿಕಲರ ದಿನವನ್ನು ಸಂತಸದಿಂದ ಆಚರಣೆ ಮಾಡಬೇಕಿದ್ದವರು ಅಂದು ಪ್ರತಿಭಟನೆಗೆ ಧುಮುಕಿದ್ದರು. ದೆಹಲಿಯಲ್ಲಿ ಸಂಘಟಿತರಾಗಿದ್ದ ಅವರು ನೋವುಗಳನ್ನು ಅದುಮಿಟ್ಟುಕೊಂಡು ರೋಷಾವೇಶದಿಂದ ಕುದಿಯುತ್ತಿದ್ದರು. ನಮಗೆ ನಿಮ್ಮ ಕರುಣೆ ಬೇಡ, ಸ್ವಾವಲಂಬಿಯಾಗಿ ಘನತೆಯಿಂದ ನಾವು ಜೀವಿಸಲು ನಮ್ಮ ಕೈಗೆ ಉದ್ಯೋಗ ಕೊಡಿ, ಉದ್ಯೋಗದಲ್ಲಿ ಮೀಸಲಾತಿ ಹೆಚ್ಚಿಸಿ ಎಂದು ತಮ್ಮ ಹಕ್ಕುಗಳನ್ನು ಕೇಂದ್ರ ಸರ್ಕಾರಕ್ಕೆ ಕೇಳುತ್ತಿದ್ದರು. ಅಲ್ಲದೆ ಅಂಗವಿಕಲರ ಉಪಕರಣಗಳ ಮೇಲೆ ಹೆಚ್ಚಿಸಿರುವ ಜಿಎಸ್‌ಟಿ ತೆರಿಗೆಯನ್ನು ಕಡಿಮೆ ಮಾಡಿ ಎನ್ನುವುದು ಅವರ ಹಕ್ಕೊತ್ತಾಯವಾಗಿತ್ತು. ದೇಶದ ದೊಡ್ಡ ಸುದ್ದಿಯಾಗಬೇಕಿದ್ದ ಈ ಹೋರಾಟವು ದುರದೃಷ್ಟವಶಾತ್ ಬಿಜೆಪಿಯ ಕೈಗೊಂಬೆಯಾಗಿರುವ ಮಾಧ್ಯಮಗಳು ಜನರ ಜೀವನಕ್ಕೆ ಸಂಬಂಧವೇ ಇಲ್ಲದ ಯಾರ ಹೊಟ್ಟೆಯನ್ನು ತುಂಬಿಸದ ರಾಮಮಂದಿರ, ಕೋಮು ದ್ವೇಷದಂತಹ ವಿಚಾರಗಳು ಮತ್ತು ಸೆಲಬ್ರಿಟಿಗಳ ಮದುವೆಯಿಂದ ಹಿಡಿದು ಬಸುರಿ ಬಾಣಂತನದವರೆಗಿನ ಸುದ್ದಿಗಳಲ್ಲಿ ಮುಳುಗಿವೆ. ಕರ್ನಾಟಕದಿಂದ ದೆಹಲಿಯವರೆಗೆ ಇದೇ ಕಥೆ. ಒಂದು ಸಮಧಾನದ ವಿಚಾರವೆಂದರೆ, ನೋವುಣ್ಣುತ್ತಿರುವ ಸಮುದಾಯಗಳು ಸುಮ್ಮನೇ ಕೂತಿಲ್ಲ; ಬೀದಿಗಿಳಿಯುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...