Homeಚಳವಳಿದೇಶದ ಗಮನ ಸೆಳೆಯಲು ಹೋದ ನಮ್ಮ ಗಮನ ಸೆಳೆದ ಒಂದು ಪ್ರತಿಭಟನೆ

ದೇಶದ ಗಮನ ಸೆಳೆಯಲು ಹೋದ ನಮ್ಮ ಗಮನ ಸೆಳೆದ ಒಂದು ಪ್ರತಿಭಟನೆ

- Advertisement -
- Advertisement -

ಸರೋವರ್ ಬೆಂಕಿಕೆರೆ |

ರೈತರ ಹೋರಾಟವು ಎಲ್ಲರ ಗಮನ ಸೆಳೆಯಿತು. ಅದಕ್ಕಾಗಿ ದೆಹಲಿಗೆ ಹೋಗಿದ್ದ ನಮಗೆ ಅದೇ ಜಂತರ್‌ಮಂತರ್‌ನಲ್ಲಿ ಇನ್ನೊಂದು ಹೋರಾಟವು ಗಮನ ಸೆಳೆಯಿತು. ಸರ್ಕಾರಗಳ ಕಣ್ಣು ಕಾಣಿಸದೇ ಇರಬಹುದು, ಅವರುಗಳ ಕಿವಿ ಕೇಳಿಸದೇ ಇರಬಹುದು. ಆದರೆ ಆಳದಲ್ಲಿ ಪ್ರಜ್ಞೆಯನ್ನು ಜಾಗೃತವಾಗಿರಿಸಿಕೊಂಡ ನಾಗರಿಕರು ಅವರ ಕಣ್ಣು, ಕಿವಿಗಳು ಊನವಾಗಿದ್ದರೂ, ಸಮಾಜವನ್ನು ಎಚ್ಚರಿಸುತ್ತಲೇ ಇರುತ್ತಾರೆ. ದೆಹಲಿಯ ರೈತ ಹೋರಾಟ ನಡೆದ ೨ ದಿನಗಳ ಬಳಿಕ ನಮಗೆ ಅಲ್ಲಿ ಕಂಡ ಸಂಗತಿಯಿದು. ಡಿ. 3ರಂದು ನೂರಾರು ಅಂಗವಿಕಲರು ಸಂಘಟಿತರಾಗಿ ಒಂದು ಪ್ರತಿಭಟನೆಯನ್ನು ನಡೆಸಿದರು. ಅವರಲ್ಲಿ ಅಂಧರೇ ಅತ್ಯಂತ ಹೆಚ್ಚು ಸಂಖ್ಯೆಯಲ್ಲಿದ್ದರು.

ಹೆಣ್ಣುಮಕ್ಕಳು ಬಳಸುವ ನ್ಯಾಪ್ಕಿನ್ ಮೇಲೆ ಹೆಚ್ಚಿನ ಜಿಎಸ್‌ಟಿ ತೆರಿಗೆ ವಿಧಿಸಿ ದೇಶದಾದ್ಯಂತ ಪ್ರತಿರೋಧದ ಬಂದ ನಂತರದಲ್ಲಿ ಸ್ವಲ್ಪ ಮಟ್ಟಿಗೆ ತೆರಿಗೆ ಇಳಿಸಿದ್ದು ನಮಗೆ ಗೊತ್ತಿತ್ತು. ಆದರೆ ಅದೇ ಸರ್ಕಾರವು ಸಾವಿರಾರು ಕೋಟಿ ರೂಗಳನ್ನು ಕೊಳ್ಳೆ ಹೊಡೆದು ದೇಶ ಬಿಟ್ಟಂತ ದರೋಡೆಕೋರರು, ತೆರಿಗೆ ಪಾವತಿಸದೆ ನಮ್ಮ ನೈಸರ್ಗಿಕ ಸಂಪನ್ಮೂಲಗಳನ್ನು ತಿಂದು ತೇಗುತ್ತಿರುವ ಬಂಡವಾಳಶಾಹಿಗಳಿಗೆ ಬೆನ್ನೆಲುಬಾಗಿ ನಿಂತಿರುವುದೂ ಗೊತ್ತಿತ್ತು. ಆದರೆ, ಈ ಪ್ರತಿಭಟನೆಯಿಂದ ನಮಗೆ ಇನ್ನೊಂದು ಸಂಗತಿಯೂ ಗೊತ್ತಾಯಿತು. ಮಾನ ಮರ್ಯಾದೆಯಿಲ್ಲದ, ಪಂಚೇಂದ್ರಿಯಗಳಿಲ್ಲದ ಕೇಂದ್ರ ಸರ್ಕಾರವು ಅಂಗವಿಕಲರು ಬಳಸುವ ಉಪಕರಣಗಳ ಮೇಲೆ ತೆರಿಗೆ ಹೆಚ್ಚಿಸಿ 25% ಜಿಎಸ್‌ಟಿಅನ್ನು ವಿಧಿಸಿದೆ! ಅದೇ ಕಾರಣಕ್ಕೆ ಅವರು ಅಲ್ಲಿ ಸೇರಿದ್ದರು.

ಯುಪಿಎ ಆಡಳಿತದ ಸಂದರ್ಭದಿಂದ ಶುರುವಾದ ಜಾಬ್‌ಲೆಸ್ ಗ್ರೋಥ್‌ನಿಂದ ಜಾಬ್ ಲಾಸ್‌ಗ್ರೋಥ್‌ನತ್ತ ಭಾರತವು ಮುಖ ಮಾಡಿದೆ. ಈ ನಕಾರಾತ್ಮಕ ಬೆಳವಣಿಗೆಗೆ ಬಿಜೆಪಿ ಆಡಳಿತವೇ ಕಾರಣವೆಂಬುದು ನಮಗೆ ಗೊತ್ತಿತ್ತು. ನಿರುದ್ಯೋಗದ ವಿರುದ್ಧದ ಆಂದೋಲನದಲ್ಲಿ ತೊಡಗಿದ್ದ ನಮಗೆ ಅದರ ಒಳಹೊರಗುಗಳ ಅರಿವಿದೆ. ಆದರೆ ಈ ಅವಧಿಯಲ್ಲಿ ಎರಡು ವಿಶೇಷ ಸಮುದಾಯಗಳ ಕುರಿತು ನಮಗೆ ದೆಹಲಿಯಲ್ಲಿ ಅರಿವಿಗೆ ಬಂದಿತು. ನಿರುದ್ಯೋಗದ ಸಮಸ್ಯೆಯು ಓದಿಕೊಂಡಿರುವ ಸುಶಿಕ್ಷಿತ ಸಮುದಾಯದ ಜೊತೆಗೆ, ಹಳ್ಳಿಯಲ್ಲೇ ಉಳಿಯಬಯಸುವ ಯುವಜನರದ್ದೂ ಆಗಿರುವುದು ಎಲ್ಲರಿಗೂ ತಿಳಿದಿದೆ; ಉದ್ಯೋಗ ಹುಡುಕಿಕೊಳ್ಳಲು ಸಾಧ್ಯವಾಗದೇ ಸೆಕ್ಸ್‌ವರ್ಕ್ ಮತ್ತು ಭಿಕ್ಷಾಟನೆಗಿಳಿದಿರುವ ಹಿಜ್ರಾ ಸಮುದಾಯದ ಕಥೆ ಏನಾಗಿರಬಹುದು? ಹಾಗೆಯೇ ವಿಕಲಚೇತನರದ್ದು?

ಎಲ್ಲರಿಗೂ ಖುಷಿಯಿಂದ ಆಚರಣೆ ಮಾಡಲು ಒಂದು ದಿನವಿರುವಂತೆ (ಡಿ.3ರಂದು) ಯಾವುದೋ ಒಂದು ಕಾರ್ಯಕ್ರಮದಲ್ಲಿ ಅಂಗವಿಕಲರ ದಿನವನ್ನು ಸಂತಸದಿಂದ ಆಚರಣೆ ಮಾಡಬೇಕಿದ್ದವರು ಅಂದು ಪ್ರತಿಭಟನೆಗೆ ಧುಮುಕಿದ್ದರು. ದೆಹಲಿಯಲ್ಲಿ ಸಂಘಟಿತರಾಗಿದ್ದ ಅವರು ನೋವುಗಳನ್ನು ಅದುಮಿಟ್ಟುಕೊಂಡು ರೋಷಾವೇಶದಿಂದ ಕುದಿಯುತ್ತಿದ್ದರು. ನಮಗೆ ನಿಮ್ಮ ಕರುಣೆ ಬೇಡ, ಸ್ವಾವಲಂಬಿಯಾಗಿ ಘನತೆಯಿಂದ ನಾವು ಜೀವಿಸಲು ನಮ್ಮ ಕೈಗೆ ಉದ್ಯೋಗ ಕೊಡಿ, ಉದ್ಯೋಗದಲ್ಲಿ ಮೀಸಲಾತಿ ಹೆಚ್ಚಿಸಿ ಎಂದು ತಮ್ಮ ಹಕ್ಕುಗಳನ್ನು ಕೇಂದ್ರ ಸರ್ಕಾರಕ್ಕೆ ಕೇಳುತ್ತಿದ್ದರು. ಅಲ್ಲದೆ ಅಂಗವಿಕಲರ ಉಪಕರಣಗಳ ಮೇಲೆ ಹೆಚ್ಚಿಸಿರುವ ಜಿಎಸ್‌ಟಿ ತೆರಿಗೆಯನ್ನು ಕಡಿಮೆ ಮಾಡಿ ಎನ್ನುವುದು ಅವರ ಹಕ್ಕೊತ್ತಾಯವಾಗಿತ್ತು. ದೇಶದ ದೊಡ್ಡ ಸುದ್ದಿಯಾಗಬೇಕಿದ್ದ ಈ ಹೋರಾಟವು ದುರದೃಷ್ಟವಶಾತ್ ಬಿಜೆಪಿಯ ಕೈಗೊಂಬೆಯಾಗಿರುವ ಮಾಧ್ಯಮಗಳು ಜನರ ಜೀವನಕ್ಕೆ ಸಂಬಂಧವೇ ಇಲ್ಲದ ಯಾರ ಹೊಟ್ಟೆಯನ್ನು ತುಂಬಿಸದ ರಾಮಮಂದಿರ, ಕೋಮು ದ್ವೇಷದಂತಹ ವಿಚಾರಗಳು ಮತ್ತು ಸೆಲಬ್ರಿಟಿಗಳ ಮದುವೆಯಿಂದ ಹಿಡಿದು ಬಸುರಿ ಬಾಣಂತನದವರೆಗಿನ ಸುದ್ದಿಗಳಲ್ಲಿ ಮುಳುಗಿವೆ. ಕರ್ನಾಟಕದಿಂದ ದೆಹಲಿಯವರೆಗೆ ಇದೇ ಕಥೆ. ಒಂದು ಸಮಧಾನದ ವಿಚಾರವೆಂದರೆ, ನೋವುಣ್ಣುತ್ತಿರುವ ಸಮುದಾಯಗಳು ಸುಮ್ಮನೇ ಕೂತಿಲ್ಲ; ಬೀದಿಗಿಳಿಯುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...