Homeಚಳವಳಿದೇಶದ ಗಮನ ಸೆಳೆಯಲು ಹೋದ ನಮ್ಮ ಗಮನ ಸೆಳೆದ ಒಂದು ಪ್ರತಿಭಟನೆ

ದೇಶದ ಗಮನ ಸೆಳೆಯಲು ಹೋದ ನಮ್ಮ ಗಮನ ಸೆಳೆದ ಒಂದು ಪ್ರತಿಭಟನೆ

- Advertisement -
- Advertisement -

ಸರೋವರ್ ಬೆಂಕಿಕೆರೆ |

ರೈತರ ಹೋರಾಟವು ಎಲ್ಲರ ಗಮನ ಸೆಳೆಯಿತು. ಅದಕ್ಕಾಗಿ ದೆಹಲಿಗೆ ಹೋಗಿದ್ದ ನಮಗೆ ಅದೇ ಜಂತರ್‌ಮಂತರ್‌ನಲ್ಲಿ ಇನ್ನೊಂದು ಹೋರಾಟವು ಗಮನ ಸೆಳೆಯಿತು. ಸರ್ಕಾರಗಳ ಕಣ್ಣು ಕಾಣಿಸದೇ ಇರಬಹುದು, ಅವರುಗಳ ಕಿವಿ ಕೇಳಿಸದೇ ಇರಬಹುದು. ಆದರೆ ಆಳದಲ್ಲಿ ಪ್ರಜ್ಞೆಯನ್ನು ಜಾಗೃತವಾಗಿರಿಸಿಕೊಂಡ ನಾಗರಿಕರು ಅವರ ಕಣ್ಣು, ಕಿವಿಗಳು ಊನವಾಗಿದ್ದರೂ, ಸಮಾಜವನ್ನು ಎಚ್ಚರಿಸುತ್ತಲೇ ಇರುತ್ತಾರೆ. ದೆಹಲಿಯ ರೈತ ಹೋರಾಟ ನಡೆದ ೨ ದಿನಗಳ ಬಳಿಕ ನಮಗೆ ಅಲ್ಲಿ ಕಂಡ ಸಂಗತಿಯಿದು. ಡಿ. 3ರಂದು ನೂರಾರು ಅಂಗವಿಕಲರು ಸಂಘಟಿತರಾಗಿ ಒಂದು ಪ್ರತಿಭಟನೆಯನ್ನು ನಡೆಸಿದರು. ಅವರಲ್ಲಿ ಅಂಧರೇ ಅತ್ಯಂತ ಹೆಚ್ಚು ಸಂಖ್ಯೆಯಲ್ಲಿದ್ದರು.

ಹೆಣ್ಣುಮಕ್ಕಳು ಬಳಸುವ ನ್ಯಾಪ್ಕಿನ್ ಮೇಲೆ ಹೆಚ್ಚಿನ ಜಿಎಸ್‌ಟಿ ತೆರಿಗೆ ವಿಧಿಸಿ ದೇಶದಾದ್ಯಂತ ಪ್ರತಿರೋಧದ ಬಂದ ನಂತರದಲ್ಲಿ ಸ್ವಲ್ಪ ಮಟ್ಟಿಗೆ ತೆರಿಗೆ ಇಳಿಸಿದ್ದು ನಮಗೆ ಗೊತ್ತಿತ್ತು. ಆದರೆ ಅದೇ ಸರ್ಕಾರವು ಸಾವಿರಾರು ಕೋಟಿ ರೂಗಳನ್ನು ಕೊಳ್ಳೆ ಹೊಡೆದು ದೇಶ ಬಿಟ್ಟಂತ ದರೋಡೆಕೋರರು, ತೆರಿಗೆ ಪಾವತಿಸದೆ ನಮ್ಮ ನೈಸರ್ಗಿಕ ಸಂಪನ್ಮೂಲಗಳನ್ನು ತಿಂದು ತೇಗುತ್ತಿರುವ ಬಂಡವಾಳಶಾಹಿಗಳಿಗೆ ಬೆನ್ನೆಲುಬಾಗಿ ನಿಂತಿರುವುದೂ ಗೊತ್ತಿತ್ತು. ಆದರೆ, ಈ ಪ್ರತಿಭಟನೆಯಿಂದ ನಮಗೆ ಇನ್ನೊಂದು ಸಂಗತಿಯೂ ಗೊತ್ತಾಯಿತು. ಮಾನ ಮರ್ಯಾದೆಯಿಲ್ಲದ, ಪಂಚೇಂದ್ರಿಯಗಳಿಲ್ಲದ ಕೇಂದ್ರ ಸರ್ಕಾರವು ಅಂಗವಿಕಲರು ಬಳಸುವ ಉಪಕರಣಗಳ ಮೇಲೆ ತೆರಿಗೆ ಹೆಚ್ಚಿಸಿ 25% ಜಿಎಸ್‌ಟಿಅನ್ನು ವಿಧಿಸಿದೆ! ಅದೇ ಕಾರಣಕ್ಕೆ ಅವರು ಅಲ್ಲಿ ಸೇರಿದ್ದರು.

ಯುಪಿಎ ಆಡಳಿತದ ಸಂದರ್ಭದಿಂದ ಶುರುವಾದ ಜಾಬ್‌ಲೆಸ್ ಗ್ರೋಥ್‌ನಿಂದ ಜಾಬ್ ಲಾಸ್‌ಗ್ರೋಥ್‌ನತ್ತ ಭಾರತವು ಮುಖ ಮಾಡಿದೆ. ಈ ನಕಾರಾತ್ಮಕ ಬೆಳವಣಿಗೆಗೆ ಬಿಜೆಪಿ ಆಡಳಿತವೇ ಕಾರಣವೆಂಬುದು ನಮಗೆ ಗೊತ್ತಿತ್ತು. ನಿರುದ್ಯೋಗದ ವಿರುದ್ಧದ ಆಂದೋಲನದಲ್ಲಿ ತೊಡಗಿದ್ದ ನಮಗೆ ಅದರ ಒಳಹೊರಗುಗಳ ಅರಿವಿದೆ. ಆದರೆ ಈ ಅವಧಿಯಲ್ಲಿ ಎರಡು ವಿಶೇಷ ಸಮುದಾಯಗಳ ಕುರಿತು ನಮಗೆ ದೆಹಲಿಯಲ್ಲಿ ಅರಿವಿಗೆ ಬಂದಿತು. ನಿರುದ್ಯೋಗದ ಸಮಸ್ಯೆಯು ಓದಿಕೊಂಡಿರುವ ಸುಶಿಕ್ಷಿತ ಸಮುದಾಯದ ಜೊತೆಗೆ, ಹಳ್ಳಿಯಲ್ಲೇ ಉಳಿಯಬಯಸುವ ಯುವಜನರದ್ದೂ ಆಗಿರುವುದು ಎಲ್ಲರಿಗೂ ತಿಳಿದಿದೆ; ಉದ್ಯೋಗ ಹುಡುಕಿಕೊಳ್ಳಲು ಸಾಧ್ಯವಾಗದೇ ಸೆಕ್ಸ್‌ವರ್ಕ್ ಮತ್ತು ಭಿಕ್ಷಾಟನೆಗಿಳಿದಿರುವ ಹಿಜ್ರಾ ಸಮುದಾಯದ ಕಥೆ ಏನಾಗಿರಬಹುದು? ಹಾಗೆಯೇ ವಿಕಲಚೇತನರದ್ದು?

ಎಲ್ಲರಿಗೂ ಖುಷಿಯಿಂದ ಆಚರಣೆ ಮಾಡಲು ಒಂದು ದಿನವಿರುವಂತೆ (ಡಿ.3ರಂದು) ಯಾವುದೋ ಒಂದು ಕಾರ್ಯಕ್ರಮದಲ್ಲಿ ಅಂಗವಿಕಲರ ದಿನವನ್ನು ಸಂತಸದಿಂದ ಆಚರಣೆ ಮಾಡಬೇಕಿದ್ದವರು ಅಂದು ಪ್ರತಿಭಟನೆಗೆ ಧುಮುಕಿದ್ದರು. ದೆಹಲಿಯಲ್ಲಿ ಸಂಘಟಿತರಾಗಿದ್ದ ಅವರು ನೋವುಗಳನ್ನು ಅದುಮಿಟ್ಟುಕೊಂಡು ರೋಷಾವೇಶದಿಂದ ಕುದಿಯುತ್ತಿದ್ದರು. ನಮಗೆ ನಿಮ್ಮ ಕರುಣೆ ಬೇಡ, ಸ್ವಾವಲಂಬಿಯಾಗಿ ಘನತೆಯಿಂದ ನಾವು ಜೀವಿಸಲು ನಮ್ಮ ಕೈಗೆ ಉದ್ಯೋಗ ಕೊಡಿ, ಉದ್ಯೋಗದಲ್ಲಿ ಮೀಸಲಾತಿ ಹೆಚ್ಚಿಸಿ ಎಂದು ತಮ್ಮ ಹಕ್ಕುಗಳನ್ನು ಕೇಂದ್ರ ಸರ್ಕಾರಕ್ಕೆ ಕೇಳುತ್ತಿದ್ದರು. ಅಲ್ಲದೆ ಅಂಗವಿಕಲರ ಉಪಕರಣಗಳ ಮೇಲೆ ಹೆಚ್ಚಿಸಿರುವ ಜಿಎಸ್‌ಟಿ ತೆರಿಗೆಯನ್ನು ಕಡಿಮೆ ಮಾಡಿ ಎನ್ನುವುದು ಅವರ ಹಕ್ಕೊತ್ತಾಯವಾಗಿತ್ತು. ದೇಶದ ದೊಡ್ಡ ಸುದ್ದಿಯಾಗಬೇಕಿದ್ದ ಈ ಹೋರಾಟವು ದುರದೃಷ್ಟವಶಾತ್ ಬಿಜೆಪಿಯ ಕೈಗೊಂಬೆಯಾಗಿರುವ ಮಾಧ್ಯಮಗಳು ಜನರ ಜೀವನಕ್ಕೆ ಸಂಬಂಧವೇ ಇಲ್ಲದ ಯಾರ ಹೊಟ್ಟೆಯನ್ನು ತುಂಬಿಸದ ರಾಮಮಂದಿರ, ಕೋಮು ದ್ವೇಷದಂತಹ ವಿಚಾರಗಳು ಮತ್ತು ಸೆಲಬ್ರಿಟಿಗಳ ಮದುವೆಯಿಂದ ಹಿಡಿದು ಬಸುರಿ ಬಾಣಂತನದವರೆಗಿನ ಸುದ್ದಿಗಳಲ್ಲಿ ಮುಳುಗಿವೆ. ಕರ್ನಾಟಕದಿಂದ ದೆಹಲಿಯವರೆಗೆ ಇದೇ ಕಥೆ. ಒಂದು ಸಮಧಾನದ ವಿಚಾರವೆಂದರೆ, ನೋವುಣ್ಣುತ್ತಿರುವ ಸಮುದಾಯಗಳು ಸುಮ್ಮನೇ ಕೂತಿಲ್ಲ; ಬೀದಿಗಿಳಿಯುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...