Homeಚಳವಳಿದೇಶದ ಗಮನ ಸೆಳೆಯಲು ಹೋದ ನಮ್ಮ ಗಮನ ಸೆಳೆದ ಒಂದು ಪ್ರತಿಭಟನೆ

ದೇಶದ ಗಮನ ಸೆಳೆಯಲು ಹೋದ ನಮ್ಮ ಗಮನ ಸೆಳೆದ ಒಂದು ಪ್ರತಿಭಟನೆ

- Advertisement -
- Advertisement -

ಸರೋವರ್ ಬೆಂಕಿಕೆರೆ |

ರೈತರ ಹೋರಾಟವು ಎಲ್ಲರ ಗಮನ ಸೆಳೆಯಿತು. ಅದಕ್ಕಾಗಿ ದೆಹಲಿಗೆ ಹೋಗಿದ್ದ ನಮಗೆ ಅದೇ ಜಂತರ್‌ಮಂತರ್‌ನಲ್ಲಿ ಇನ್ನೊಂದು ಹೋರಾಟವು ಗಮನ ಸೆಳೆಯಿತು. ಸರ್ಕಾರಗಳ ಕಣ್ಣು ಕಾಣಿಸದೇ ಇರಬಹುದು, ಅವರುಗಳ ಕಿವಿ ಕೇಳಿಸದೇ ಇರಬಹುದು. ಆದರೆ ಆಳದಲ್ಲಿ ಪ್ರಜ್ಞೆಯನ್ನು ಜಾಗೃತವಾಗಿರಿಸಿಕೊಂಡ ನಾಗರಿಕರು ಅವರ ಕಣ್ಣು, ಕಿವಿಗಳು ಊನವಾಗಿದ್ದರೂ, ಸಮಾಜವನ್ನು ಎಚ್ಚರಿಸುತ್ತಲೇ ಇರುತ್ತಾರೆ. ದೆಹಲಿಯ ರೈತ ಹೋರಾಟ ನಡೆದ ೨ ದಿನಗಳ ಬಳಿಕ ನಮಗೆ ಅಲ್ಲಿ ಕಂಡ ಸಂಗತಿಯಿದು. ಡಿ. 3ರಂದು ನೂರಾರು ಅಂಗವಿಕಲರು ಸಂಘಟಿತರಾಗಿ ಒಂದು ಪ್ರತಿಭಟನೆಯನ್ನು ನಡೆಸಿದರು. ಅವರಲ್ಲಿ ಅಂಧರೇ ಅತ್ಯಂತ ಹೆಚ್ಚು ಸಂಖ್ಯೆಯಲ್ಲಿದ್ದರು.

ಹೆಣ್ಣುಮಕ್ಕಳು ಬಳಸುವ ನ್ಯಾಪ್ಕಿನ್ ಮೇಲೆ ಹೆಚ್ಚಿನ ಜಿಎಸ್‌ಟಿ ತೆರಿಗೆ ವಿಧಿಸಿ ದೇಶದಾದ್ಯಂತ ಪ್ರತಿರೋಧದ ಬಂದ ನಂತರದಲ್ಲಿ ಸ್ವಲ್ಪ ಮಟ್ಟಿಗೆ ತೆರಿಗೆ ಇಳಿಸಿದ್ದು ನಮಗೆ ಗೊತ್ತಿತ್ತು. ಆದರೆ ಅದೇ ಸರ್ಕಾರವು ಸಾವಿರಾರು ಕೋಟಿ ರೂಗಳನ್ನು ಕೊಳ್ಳೆ ಹೊಡೆದು ದೇಶ ಬಿಟ್ಟಂತ ದರೋಡೆಕೋರರು, ತೆರಿಗೆ ಪಾವತಿಸದೆ ನಮ್ಮ ನೈಸರ್ಗಿಕ ಸಂಪನ್ಮೂಲಗಳನ್ನು ತಿಂದು ತೇಗುತ್ತಿರುವ ಬಂಡವಾಳಶಾಹಿಗಳಿಗೆ ಬೆನ್ನೆಲುಬಾಗಿ ನಿಂತಿರುವುದೂ ಗೊತ್ತಿತ್ತು. ಆದರೆ, ಈ ಪ್ರತಿಭಟನೆಯಿಂದ ನಮಗೆ ಇನ್ನೊಂದು ಸಂಗತಿಯೂ ಗೊತ್ತಾಯಿತು. ಮಾನ ಮರ್ಯಾದೆಯಿಲ್ಲದ, ಪಂಚೇಂದ್ರಿಯಗಳಿಲ್ಲದ ಕೇಂದ್ರ ಸರ್ಕಾರವು ಅಂಗವಿಕಲರು ಬಳಸುವ ಉಪಕರಣಗಳ ಮೇಲೆ ತೆರಿಗೆ ಹೆಚ್ಚಿಸಿ 25% ಜಿಎಸ್‌ಟಿಅನ್ನು ವಿಧಿಸಿದೆ! ಅದೇ ಕಾರಣಕ್ಕೆ ಅವರು ಅಲ್ಲಿ ಸೇರಿದ್ದರು.

ಯುಪಿಎ ಆಡಳಿತದ ಸಂದರ್ಭದಿಂದ ಶುರುವಾದ ಜಾಬ್‌ಲೆಸ್ ಗ್ರೋಥ್‌ನಿಂದ ಜಾಬ್ ಲಾಸ್‌ಗ್ರೋಥ್‌ನತ್ತ ಭಾರತವು ಮುಖ ಮಾಡಿದೆ. ಈ ನಕಾರಾತ್ಮಕ ಬೆಳವಣಿಗೆಗೆ ಬಿಜೆಪಿ ಆಡಳಿತವೇ ಕಾರಣವೆಂಬುದು ನಮಗೆ ಗೊತ್ತಿತ್ತು. ನಿರುದ್ಯೋಗದ ವಿರುದ್ಧದ ಆಂದೋಲನದಲ್ಲಿ ತೊಡಗಿದ್ದ ನಮಗೆ ಅದರ ಒಳಹೊರಗುಗಳ ಅರಿವಿದೆ. ಆದರೆ ಈ ಅವಧಿಯಲ್ಲಿ ಎರಡು ವಿಶೇಷ ಸಮುದಾಯಗಳ ಕುರಿತು ನಮಗೆ ದೆಹಲಿಯಲ್ಲಿ ಅರಿವಿಗೆ ಬಂದಿತು. ನಿರುದ್ಯೋಗದ ಸಮಸ್ಯೆಯು ಓದಿಕೊಂಡಿರುವ ಸುಶಿಕ್ಷಿತ ಸಮುದಾಯದ ಜೊತೆಗೆ, ಹಳ್ಳಿಯಲ್ಲೇ ಉಳಿಯಬಯಸುವ ಯುವಜನರದ್ದೂ ಆಗಿರುವುದು ಎಲ್ಲರಿಗೂ ತಿಳಿದಿದೆ; ಉದ್ಯೋಗ ಹುಡುಕಿಕೊಳ್ಳಲು ಸಾಧ್ಯವಾಗದೇ ಸೆಕ್ಸ್‌ವರ್ಕ್ ಮತ್ತು ಭಿಕ್ಷಾಟನೆಗಿಳಿದಿರುವ ಹಿಜ್ರಾ ಸಮುದಾಯದ ಕಥೆ ಏನಾಗಿರಬಹುದು? ಹಾಗೆಯೇ ವಿಕಲಚೇತನರದ್ದು?

ಎಲ್ಲರಿಗೂ ಖುಷಿಯಿಂದ ಆಚರಣೆ ಮಾಡಲು ಒಂದು ದಿನವಿರುವಂತೆ (ಡಿ.3ರಂದು) ಯಾವುದೋ ಒಂದು ಕಾರ್ಯಕ್ರಮದಲ್ಲಿ ಅಂಗವಿಕಲರ ದಿನವನ್ನು ಸಂತಸದಿಂದ ಆಚರಣೆ ಮಾಡಬೇಕಿದ್ದವರು ಅಂದು ಪ್ರತಿಭಟನೆಗೆ ಧುಮುಕಿದ್ದರು. ದೆಹಲಿಯಲ್ಲಿ ಸಂಘಟಿತರಾಗಿದ್ದ ಅವರು ನೋವುಗಳನ್ನು ಅದುಮಿಟ್ಟುಕೊಂಡು ರೋಷಾವೇಶದಿಂದ ಕುದಿಯುತ್ತಿದ್ದರು. ನಮಗೆ ನಿಮ್ಮ ಕರುಣೆ ಬೇಡ, ಸ್ವಾವಲಂಬಿಯಾಗಿ ಘನತೆಯಿಂದ ನಾವು ಜೀವಿಸಲು ನಮ್ಮ ಕೈಗೆ ಉದ್ಯೋಗ ಕೊಡಿ, ಉದ್ಯೋಗದಲ್ಲಿ ಮೀಸಲಾತಿ ಹೆಚ್ಚಿಸಿ ಎಂದು ತಮ್ಮ ಹಕ್ಕುಗಳನ್ನು ಕೇಂದ್ರ ಸರ್ಕಾರಕ್ಕೆ ಕೇಳುತ್ತಿದ್ದರು. ಅಲ್ಲದೆ ಅಂಗವಿಕಲರ ಉಪಕರಣಗಳ ಮೇಲೆ ಹೆಚ್ಚಿಸಿರುವ ಜಿಎಸ್‌ಟಿ ತೆರಿಗೆಯನ್ನು ಕಡಿಮೆ ಮಾಡಿ ಎನ್ನುವುದು ಅವರ ಹಕ್ಕೊತ್ತಾಯವಾಗಿತ್ತು. ದೇಶದ ದೊಡ್ಡ ಸುದ್ದಿಯಾಗಬೇಕಿದ್ದ ಈ ಹೋರಾಟವು ದುರದೃಷ್ಟವಶಾತ್ ಬಿಜೆಪಿಯ ಕೈಗೊಂಬೆಯಾಗಿರುವ ಮಾಧ್ಯಮಗಳು ಜನರ ಜೀವನಕ್ಕೆ ಸಂಬಂಧವೇ ಇಲ್ಲದ ಯಾರ ಹೊಟ್ಟೆಯನ್ನು ತುಂಬಿಸದ ರಾಮಮಂದಿರ, ಕೋಮು ದ್ವೇಷದಂತಹ ವಿಚಾರಗಳು ಮತ್ತು ಸೆಲಬ್ರಿಟಿಗಳ ಮದುವೆಯಿಂದ ಹಿಡಿದು ಬಸುರಿ ಬಾಣಂತನದವರೆಗಿನ ಸುದ್ದಿಗಳಲ್ಲಿ ಮುಳುಗಿವೆ. ಕರ್ನಾಟಕದಿಂದ ದೆಹಲಿಯವರೆಗೆ ಇದೇ ಕಥೆ. ಒಂದು ಸಮಧಾನದ ವಿಚಾರವೆಂದರೆ, ನೋವುಣ್ಣುತ್ತಿರುವ ಸಮುದಾಯಗಳು ಸುಮ್ಮನೇ ಕೂತಿಲ್ಲ; ಬೀದಿಗಿಳಿಯುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...