HomeUncategorizedದೇಶ ವಿಭಜನೆಗೆ ಕಾಂಗ್ರೆಸ್ಸೇ ಕಾರಣ ಜವಾಹರಲಾಲ್ ನೆಹರು ಪಾಪದ ಕೂಸು : ಸಚಿವ ಸಿ.ಟಿ.ರವಿ ಆರೋಪ

ದೇಶ ವಿಭಜನೆಗೆ ಕಾಂಗ್ರೆಸ್ಸೇ ಕಾರಣ ಜವಾಹರಲಾಲ್ ನೆಹರು ಪಾಪದ ಕೂಸು : ಸಚಿವ ಸಿ.ಟಿ.ರವಿ ಆರೋಪ

- Advertisement -
- Advertisement -

ಭಾರತ-ಪಾಕಿಸ್ತಾನ ವಿಭಜೆಗೆ ಕಾಂಗ್ರೆಸ್ಸೇ ಕಾರಣ. ಮೊಹಮದ್ ಆಲಿ ಜಿನ್ನಾ ಜೊತೆಗೆ ಸೇರಿಕೊಂಡು ದೇಶ ವಿಭಜನೆ ಮಾಡಿದರು. ವಿಭಜನೆಯ ಪಾಪದ ಕೂಸು ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ ಗಂಭೀರ ಆರೋಪ ಮಾಡಿದರು.

ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ರವಿ ಕಾಂಗ್ರೆಸ್ ನಾಯಕರು ಜಿನ್ನಾ ಜೊತೆ ಮಾಡಿಕೊಂಡ ಭಾಗವಾಗಿ ದೇಶ ವಿಭಜೆಯಾಯಿತು. ದೇಶ ವಿಭಜನೆಗೆ RSS ಮತ್ತು BJPಕಾರಣವಲ್ಲ. ಕಾಂಗ್ರೆಸ್ ಪಾಪದ ಕೂಸು ಎಂದು ದೂರಿದರು.

ನಾಥೂರಾಮ್ ಗೋಡ್ಸೆ ಒಂದು ಬಾರಿ ಗಾಂಧಿಯನ್ನು ಕೊಂದ. ಆತ ಮಾಡಿದ್ದು ಪಾಪದ ಕೆಲಸ. ಆದರೆ ಗಾಂಧಿ ಟೋಟಿ ಧರಿಸಿ ಗಾಂಧಿ ತತ್ವಗಳನ್ನು ನಿತ್ಯವೂ ಕೊಂದದ್ದು ಕಾಂಗ್ರೆಸ್. ಹಾಗೆ ನೋಡಿದರೆ ಗೋಡ್ಸೆ ಮಾಡಿದ ಕೃತ್ಯಕ್ಕಿಂತ ಕಾಂಗ್ರೆಸ್ ಮಾಡಿದ ಕೃತ್ಯವೇ ಹೆಚ್ಚು. ಗೂಡ್ಸೆ ಮಾಡಿದ್ದು ತಪ್ಪಾದರೆ ಕಾಂಗ್ರೆಸ್ ದೇಶಕ್ಕೆ ದ್ರೋಹ ಬಗೆದು ಮಹಾತಪ್ಪ ಮಾಡಿತು. ಗೋಡ್ಸೆ ಮಾಡಿದ ಅನ್ಯಾಯಕ್ಕಿಂತ ಕಾಂಗ್ರೆಸ್ ಮಾಡಿದ ಅನ್ಯಾಯ ದೊಡ್ಡದು ಎಂದು ಗೋಡ್ಸೆಯನ್ನು ಒಂದು ಹಂತದಲ್ಲಿ ಸಮರ್ಥನೆ ಮಾಡಿಕೊಂಡರು.

ಗಾಂಧಿ ಟೋಪಿ ಹಾಕಿದರೆ, ಖಾದಿ ಬಟ್ಟೆ ಧರಿಸಿದ ಮಾತ್ರಕ್ಕೆ ಗಾಂಧೀಜಿ ಆಗಲು ಸಾಧ್ಯವಿಲ್ಲ ಎಂದು ರಾಹುಲ್ ಗಾಂಧಿಯನ್ನು ಕಟುವಾಗಿ ಟೀಕಿಸಿದರು. ದೇಶ ಮೊದಲ ನಂತರ ಪಕ್ಷ. ಆದರೆ ಕಾಂಗ್ರೆಸ್ ಗೆ ನೋಟು ಮೊದಲು ನಂತರ ದೇಶ. ರಾಹುಲ್ ಗಾಂಧಿ ಹತಾಶೆಯಿಂದ ಟೀಕೆ ಮಾಡುತ್ತಿದ್ದಾರೆ. ಅವರು ಹೇಳಿಕೆಗಳೆಲ್ಲವು ಅಪ್ರಬುದ್ಧತೆಯಿಂದ ಕೂಡಿವೆ ಎಂದು ವಾಗ್ದಾಳಿ ನಡೆಸಿದರು.

ರಾಹುಲ್ ಮುಂದಿನ ಪ್ರಧಾನಿಯಾಗಬಲ್ಲ ವ್ಯಕ್ತಿ ಎಂಬ ಪ್ರಶ್ನೆಗೆ ತಿರುಕನೋರ್ವ ಮುರುಕು ಗುಡಿಸಲಲ್ಲಿ ಕನಸು ಕಂಡನಂತೆ ಎಂದು ಗೇಲಿ ಮಾಡಿದರು.

ಮಹಾತ್ಮಗಾಂಧೀಜಿ ಪಾಕಿಸ್ತಾನದಲ್ಲಿರುವ ಹಿಂದೂಗಳಿಗೆ ಪೌರತ್ವ ನೀಡಬೇಕೆಂದು ಹೇಳಿದ್ದರು. ದೌರ್ಜನ್ಯ ನಡಯುತ್ತಿದ್ದ ನೋಡಿಕೊಂಡು ಸುಮ್ಮನಿರಲು ಸಾದ್ಯವಿಲ್ಲ. ಅಂದು ಗಾಂಧೀಜಿ ಕಂಡಿದ್ದ ಕನಸನ್ನು ಇಂದು ನಮ್ಮ ಸರ್ಕಾರ ನನಸು ಮಾಡಿದೆ ಎಂದು ಹೇಳಿದರು.

ಮುಖ್ಯಮಂತ್ರಿ ಯಡಿಯೂರಪ್ಪ ಬಲಾಢ್ಯ ರಾಜಕಾರಣಿ. ಅವರನ್ನು ಯಾರಿಂದಲೂ ಆಟವಾಡಿಸಲು ಸಾಧ್ಯವಿಲ್ಲ. ಸಾಮರ್ಥ್ಯವಿರುವ ಯಡಿಯೂರಪ್ಪ ಅವರನ್ನು ಆಟವಾಡಿಸಲು ಆಗುವುದಿಲ್ಲ. ಅವರು ಬಲಿಷ್ಟವಾಗಿದ್ದು ಬೇರೆಯವರನ್ನು ಆಟವಾಡಿಸಬಲ್ಲ ಶಕ್ತಿ ಇದೆ.

ಸಂಪುಟ ವಿಸ್ತರಣೆ ಕುರಿತು ಪ್ರತಿಕ್ರಿಯೆ ನೀಡಿದ ಸಿ.ಟಿ.ರವಿ ದೆಹಲಿಯ ಚುನಾವಣೆ ಸಮೀಪದಲ್ಲಿದೆ. ಆ ಕಾರಣಕ್ಕೆ ವಿಳಂಬವಾಗಿದೆ. ಪಕ್ಷದ ಕೈಮಾಂಡ್ ಅಧ್ಯತೆ ಮೇಲೆ ವಿಷಯಗಳನ್ನು ಕೈಗೆತ್ತಿಕೊಳ್ಳಲಿದೆ. ಮುಖ್ಯ ವಿಷಯ ಬಂದಾಗ ಸಣ್ಣ ವಿಷಯಗಳು ಪಕ್ಕಕ್ಕೆ ಸರಿಯುತ್ತವೆ ಎಂದು ಸಂಪುಟ ವಿಸ್ತರಣೆಗೆ ಮಹತ್ವ ನೀಡಬೇಕಾದ ಅಗತ್ಯವಿಲ್ಲ ಎಂದು ಪರೋಕ್ಷವಾಗಿ ಹೇಳಿದರು.

ಪಕ್ಷದ ಹೈಕಮಾಂಡ್ ರೋಗಿಯನ್ನು ನೋಡಿಕೊಳ್ಳುತ್ತಿದೆ. ಮೊದಲು ಬಿಪಿ ಮತ್ತು ಶುಗರ್ ಕಂಟ್ರೋಲ್ ಮಾಡಿ ನಂತರ ಶಸ್ತ್ರಚಿಕಿತ್ಸೆ ಮಾಡುತ್ತಾರಲ್ಲವೇ? ಹಾಗೆ ಸಂಪುಟ ವಿಸ್ತರಣೆ ಎಂದು ಸಂಪುಟ ವಿಸ್ತರಣೆಯಲ್ಲಿ ಬಿಪಿ, ಶುಗರ್ ಹೆಚ್ಚಾಗಿದೆ ಎಂಬ ಸೂಚನೆ ನೀಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...