Homeಮುಖಪುಟ‘ಧರ್ಮ ಸಂಸತ್‌‌’ ದ್ವೇಷ ಭಾಷಣ ಕುರಿತ ಪ್ರಶ್ನೆಗೆ ಸಿಟ್ಟಾಗಿ ಸಂದರ್ಶನ ಅರ್ಧಕ್ಕೆ ನಿಲ್ಲಿಸಿದ ಯುಪಿ ಉಪಮುಖ್ಯಮಂತ್ರಿ

‘ಧರ್ಮ ಸಂಸತ್‌‌’ ದ್ವೇಷ ಭಾಷಣ ಕುರಿತ ಪ್ರಶ್ನೆಗೆ ಸಿಟ್ಟಾಗಿ ಸಂದರ್ಶನ ಅರ್ಧಕ್ಕೆ ನಿಲ್ಲಿಸಿದ ಯುಪಿ ಉಪಮುಖ್ಯಮಂತ್ರಿ

‘ಬಿಬಿಸಿ’ ನಡೆಸಿದ ಸಂದರ್ಶನದ ಮೇಳೆ ಸಿಟ್ಟಾದ ಬಿಜೆಪಿ ನಾಯಕ ಕೇಶವ್ ಪ್ರಸಾದ್ ಮೌರ್ಯ ಸಂದರ್ಶಕರನ್ನೇ ಒಂದು ಗುಂಪಿನ ಏಜೆಂಟ್‌ ಎಂದು ಮೂದಲಿಸಿದ್ದಾರೆ. (ವಿಡಿಯೊ ನೋಡಿ)

- Advertisement -
- Advertisement -

ಉತ್ತರ ಪ್ರದೇಶದ ಉಪಮುಖ್ಯಮಂತ್ರಿ, ಬಿಜೆಪಿ ನಾಯಕ ಕೇಶವ್ ಪ್ರಸಾದ್ ಮೌರ್ಯ ಅವರು ಬಿಬಿಸಿ ಸಂದರ್ಶನವನ್ನು ಮೊಟುಕುಗೊಳಿಸಿ ಸಂದರ್ಶನದ ದೃಶ್ಯಗಳನ್ನು ಡಿಲೀಟ್‌ ಮಾಡುವಂತೆ ಸೂಚಿಸಿರುವ ಘಟನೆ ನಡೆದಿದೆ.

ಹರಿದ್ವಾರದ ಧರ್ಮ ಸಂಸದ್‌ನಲ್ಲಿ ಮುಸ್ಲಿಂ ವಿರೋಧಿಯಾಗಿ ಮಾಡಲಾದ ದ್ವೇಷ ಭಾಷಣಗಳ ಕುರಿತ ಪ್ರಶ್ನೆಗಳಿಗೆ ಕೋಪಗೊಂಡ ಕೇಶವ್‌ ಪ್ರಸಾದ್‌, ಸಂದರ್ಶನವನ್ನು ಮಧ್ಯದಲ್ಲೇ ನಿಲ್ಲಿಸಿದ್ದಾರೆ. ಸಂದರ್ಶನದ ದೃಶ್ಯಗಳನ್ನು ಅಳಿಸಲು ಸೂಚಿಸಿದ್ದಾರೆ.

ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಮೌರ್ಯ ಅವರು ನಂತರದಲ್ಲಿ ಪ್ರತಿಕ್ರಿಯಿಸಿದ್ದು ಈ ಘಟನೆಯನ್ನು “ದುರದೃಷ್ಟಕರ ಘಟನೆ” ಎಂದು ಕರೆದ್ದಾರೆ.

ಧಾರ್ಮಿಕ ಸಮಾವೇಶದ ದ್ವೇಷ ಭಾಷಣಗಳ ಬಗ್ಗೆ ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಪಕ್ಷದ ನಾಯಕರು ಮೌನ ತಾಳಿರುವುದನ್ನು ಮೌರ್ಯ ಅವರಲ್ಲಿ ಬಿಬಿಸಿ ಸಂದರ್ಶಕರು ಪ್ರಶ್ನಿಸುತ್ತಾರೆ.

ನಾಯಕರು ಇಂತಹ ಘೋಷಣೆಗಳ ವಿರುದ್ಧ ಮಾತನಾಡುವ ಮೂಲಕ ಜನರಿಗೆ ಧೈರ್ಯ ತುಂಬಬೇಕೇ ಎಂದು ಕೇಳಿದಾಗ ಮೌರ್ಯ ಅವರು ಪ್ರತಿಕ್ರಿಯಿಸಿ, “ನಾವು ನಮ್ಮನ್ನು ಸಾಬೀತುಪಡಿಸುವ ಅಗತ್ಯವಿಲ್ಲ. ನಾವು ‘ಸಬ್ಕಾ ಸಾಥ್, ಸಬ್ಕಾ ವಿಕಾಸ್ (ಎಲ್ಲರ ಅಭಿವೃದ್ಧಿ ಮತ್ತು ಬೆಂಬಲ) ನಲ್ಲಿ ನಂಬಿಕೆ ಹೊಂದಿದ್ದೇವೆ. ತಮ್ಮ ವಿಚಾರಗಳನ್ನು ಹೇಳುವುದಕ್ಕೆ ಧಾರ್ಮಿಕ ಮುಖಂಡರಿಗೆ ಹಕ್ಕು ಇದೆ” ಎನ್ನುತ್ತಾರೆ.

ಮುಂದುವರಿದು, “ಹಿಂದೂ ಧಾರ್ಮಿಕ ಮುಖಂಡರನ್ನು ಮಾತ್ರ ಯಾಕೆ ಎತ್ತಿ ತೋರಿಸುತ್ತೀರಿ” ಎಂದು ಉಪಮುಖ್ಯಮಂತ್ರಿ ಸಂದರ್ಶಕರಲ್ಲಿ ಪ್ರಶ್ನಿಸುತ್ತಾರೆ.

“ಹಿಂದೂ ನಾಯಕರ ಬಗ್ಗೆ ಮಾತ್ರ ಏಕೆ ಕೇಳುತ್ತಿದ್ದೀರಿ? ಇತರ ಧಾರ್ಮಿಕ ಮುಖಂಡರು ಮಾಡಿದ ಕಮೆಂಟ್‌ಗಳ ಬಗ್ಗೆ ಯಾಕೆ ಮಾತನಾಡಲ್ಲ? 370ನೇ ವಿಧಿಯನ್ನು ರದ್ದುಗೊಳಿಸುವ ಮೊದಲು ಎಷ್ಟು ಮಂದಿ ಜಮ್ಮು ಮತ್ತು ಕಾಶ್ಮೀರವನ್ನು ತೊರೆಯಬೇಕಾಯಿತು, ನೀವು ಅದರ ಬಗ್ಗೆ ಏಕೆ ಮಾತನಾಡುವುದಿಲ್ಲ? ಧರ್ಮ ಸಂಸದ್ ಬಿಜೆಪಿ ಕಾರ್ಯಕ್ರಮವಲ್ಲ, ಧಾರ್ಮಿಕ ಮುಖಂಡರದ್ದು’’ ಎಂದು ತಿಳಿಸುತ್ತಾರೆ.

“ಸ್ವಾಮೀಜಿಗಳು ನಂಬಿದ್ದನ್ನು ಹೇಳಿದ್ದಾರೆ. ಇದು ರಾಜಕೀಯಕ್ಕೆ ಸಂಬಂಧಿಸಿಲ್ಲ. ಮುಸ್ಲಿಂ ಮತ್ತು ಕ್ರಿಶ್ಚಿಯನ್ ನಾಯಕರೂ ಇದ್ದಾರೆ. ಅವರ ಬಗ್ಗೆಯೂ ಮಾತನಾಡಿ” ಎಂದು ಉಪಮುಖ್ಯಮಂತ್ರಿ ಒತ್ತಾಯಿಸುತ್ತಾರೆ.

ರಾಜಕೀಯಕ್ಕೆ ಸಂಬಂಧಿಸಿದ್ದಲ್ಲ ಎಂಬ ಹೇಳಿಕೆಯನ್ನು ಕೇಂದ್ರೀಕರಿಸಿ, “ಇಂತಹ ಭಾಷಣಗಳು ಚುನಾವಣೆಗೆ ಮುನ್ನ ವಾತಾವರಣವನ್ನು ಹಾಳುಮಾಡುತ್ತವೆಯಲ್ಲ?” ಎಂದು ಸಂದರ್ಶಕರು ಎಂದು ಕೇಳುತ್ತಾರೆ. ಜೊತೆಗೆ ಭಾರತ-ಪಾಕಿಸ್ತಾನ ಪಂದ್ಯದ ವೇಳೆ ಕೂಗಲಾದ ಘೋಷಣೆಗಳ ಆಧಾರದಲ್ಲಿ ದೇಶದ್ರೋಹದ ಆರೋಪವನ್ನು ಹೊರಿಸಿರುವುದರ ಕುರಿತೂ ಅವರು ಕೇಳುತ್ತಾರೆ.

“ದೇಶದ್ರೋಹ ಬೇರೆ ವಿಷಯ. ಆದರೆ ಇದು ಧರ್ಮ ಸಂಸದ್. ಆಗ ನಾವು ಹೇಳಬಹುದು- ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಗೆ ಸೂರ್ಯ ನಮಸ್ಕಾರದ ವಿರುದ್ಧ ಪ್ರತಿಭಟಿಸುವ ಹಕ್ಕು ಇಲ್ಲ” ಎಂದು ಮೌರ್ಯ ಉತ್ತರಿಸುತ್ತಾರೆ.

ವಿವಾದಾತ್ಮಕ ಧಾರ್ಮಿಕ ಸಮಾವೇಶದಲ್ಲಿ ಎದ್ದಿರುವ ನರಮೇಧದ ಕರೆಗಳ ಬಗ್ಗೆ ಕೇಳಿದಾಗ ಡಿಸಿಎಂ ಸಿಟ್ಟಿಗೆದ್ದರು. “ನೀವು ಯಾವ ವೀಡಿಯೊದ ಬಗ್ಗೆ ಮಾತನಾಡುತ್ತಿದ್ದೀರಿ ಎಂದು ನನಗೆ ತಿಳಿದಿಲ್ಲ, ನೀವು ಚುನಾವಣೆಯ ಬಗ್ಗೆ ಕೇಳುತ್ತೀರಾ? ನೀವು ಪತ್ರಕರ್ತರಂತೆ ಮಾತನಾಡುತ್ತಿಲ್ಲ. ನೀವು ನಿರ್ದಿಷ್ಟ ಗುಂಪಿನ ಏಜೆಂಟರಂತೆ ಮಾತನಾಡುತ್ತಿದ್ದೀರಿ. ನಾನು ನಿಮ್ಮೊಂದಿಗೆ ಮಾತನಾಡುವುದಿಲ್ಲ” ಎಂದು ಮೈಕ್‌ ಕಿತ್ತೆಸೆಯುತ್ತಾರೆ.

ಉತ್ತರ ಪ್ರದೇಶ ಮತ್ತು ಇನ್ನೂ ನಾಲ್ಕು ರಾಜ್ಯಗಳಲ್ಲಿ ಚುನಾವಣಾ ಪ್ರಚಾರ ಮಾಡುವಾಗ, ಬಿಜೆಪಿಯು ಧರ್ಮ ಸಂಸದ್ ಬಗೆಗಿನ ಪ್ರಶ್ನೆಗಳನ್ನು ಎದುರಿಸುತ್ತಿದೆ. ಧರ್ಮ ಸಂಸತ್‌ನಲ್ಲಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಹಿಂದುತ್ವ ಧಾರ್ಮಿಕ ಮುಖಂಡರು, ಹಿಂಸಾಚಾರ ಮತ್ತು ನರಮೇಧಕ್ಕೆ ಕರೆಗಳನ್ನು ನೀಡುತ್ತಾರೆ. ಈ ಧಾರ್ಮಿಕ ಮುಖಂಡರು ಆಡಳಿತ ಪಕ್ಷದೊಂದಿಗೆ ಒಡನಾಟದಲ್ಲಿದ್ದಾರೆ.

ಪ್ರೀಮಿಯರ್ ಐಐಎಂ (ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್) ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಹಿರಂಗ ಪತ್ರ ಬರೆದಿದ್ದು, ದ್ವೇಷ ಭಾಷಣಗಳ ವಿರುದ್ಧ ಮಾತನಾಡುವಂತೆ ಒತ್ತಾಯಿಸಿದ್ದಾರೆ.

“ಗೌರವಾನ್ವಿತ ಪ್ರಧಾನ ಮಂತ್ರಿಗಳೇ, ನಿಮ್ಮ ಮೌನವು ದ್ವೇಷ ತುಂಬಿದ ಧ್ವನಿಗಳಿಗೆ ಧೈರ್ಯ ತುಂಬುತ್ತದೆ. ನಮ್ಮ ದೇಶದ ಏಕತೆ, ಸಮಗ್ರತೆಗೆ ಧಕ್ಕೆ ತರುತ್ತದೆ. ಗೌರವಾನ್ವಿತ ಪ್ರಧಾನ ಮಂತ್ರಿಗಳೇ, ನಮ್ಮನ್ನು ವಿಭಜಿಸಲು ಪ್ರಯತ್ನಿಸುವ ಶಕ್ತಿಗಳ ವಿರುದ್ಧ ದೃಢವಾಗಿ ನಿಲ್ಲುವಂತೆ ನಾವು ನಿಮ್ಮನ್ನು ವಿನಂತಿಸುತ್ತೇವೆ” ಎಂದು ಬಹಿರಂಗ ಪತ್ರದಲ್ಲಿ ಕೋರಲಾಗಿದೆ.


ಇದನ್ನೂ ಓದಿರಿ: ವಾರಣಾಸಿ: ಕೋಮುದ್ವೇಷ ಹರಡಲು ಯತ್ನ ಪ್ರಕರಣ; ಇಬ್ಬರು ದುಷ್ಕರ್ಮಿಗಳ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...