Homeಅಂಕಣಗಳುನಕಲಿ ಲಿಂಗಾಯತ ನಾಯಕನನ್ನು ಬಲೆಗೆ ಕೆಡವಿದ 'ಶರಣ'!

ನಕಲಿ ಲಿಂಗಾಯತ ನಾಯಕನನ್ನು ಬಲೆಗೆ ಕೆಡವಿದ ‘ಶರಣ’!

- Advertisement -
- Advertisement -

ವಿಶ್ವರಾಧ್ಯ ಸತ್ಯಂಪೇಟೆ |
ರಾಜ್ಯ ರಾಜಕೀಯದಲ್ಲಿ ಬಿರುಗಾಳಿಯನ್ನು ಉಂಟು ಮಾಡಿದ ಧ್ವನಿ ಸುರುಳಿಯ ಕರ್ತೃ ಶರಣಗೌಡ ಕಂದಕೂರ ಗುರುಮಿಠಕಲ್ ಕ್ಷೇತ್ರದಿಂದ ಗೆದ್ದು ಬಂದ ನಾಗಣ್ಣಗೌಡ ಕಂದಕೂರ ಅವರ ಪುತ್ರ. ಕಂದಕೂರ ಕುಟುಂಬ ವರ್ಗದವರಿಗೆ ದೇವೇಗೌಡರು ಎಂದೆಂದೂ ಸನಿಹವೆ. ಶರಣಗೌಡರ ದೊಡ್ಡಪ್ಪ ಲಿಂ.ಸದಾಶಿವರೆಡ್ಡಿ ಕಂದಕೂರ ಅಂದರೆ ಪಂಚಪ್ರಾಣ. ಯಾದಗಿರಿಗೆ ಗೌಡರು ಆಗ ಯಾವಾಗ ಬಂದರೂ ಸದಾಶಿವರೆಡ್ಡಿಯವರನ್ನು ಭೇಟಿಯಾಗದೆ ಹೋಗುತ್ತಿರಲಿಲ್ಲ. ಸದಾಶಿವರೆಡ್ಡಿ ಜನತಾ ಪಕ್ಷ ಪಾಳೆಯದಲ್ಲಿ ಹಿಂದಿನಿಂದಲೂ ಗುರುತಿಸಿಕೊಂಡಿದ್ದರು. ಯಾದಗಿರಿ ಮತ ಕ್ಷೇತ್ರದ ಶಾಸಕರಾಗಿದ್ದ ಕೆಲವು ಕಾಲ ಮಂತ್ರಿಯಾಗಿದ್ದ ವಿಶ್ವನಾಥರೆಡ್ಡಿ ಮುದ್ನಾಳರ ಒಡನಾಟವಿದ್ದರೂ ತಮ್ಮದೆ ಅಸ್ತಿತ್ವ ಹೊಂದಿದವರು. ಸಣ್ಣ ಪುಟ್ಟ ಗಿಮಿಕ್ ಮಾಡದೆ ನೇರ ನಿಷ್ಠುರ ಗುಣಗಳನ್ನು ಬೆಳೆಸಿಕೊಂಡು ಜನ ಮನ್ನಣೆ ಗಳಿಸಿಕೊಂಡಿದ್ದವರು. ಬಹುಶಃ ಇದನ್ನು ಗುರುತಿಸಿದ್ದ ದೇವೇಗೌಡರು ಯಾದಗಿರಿಗೆ ಯಾವಾಗ ಬಂದರೂ ಸದಾಶಿವರೆಡ್ಡಿಯವರನ್ನು ಭೇಟಿಯಾಗದೆ ಹೋಗುತ್ತಿರಲಿಲ್ಲ.

ಈ ಸದಾಶಿವರೆಡ್ಡಿಯವರ ತಮ್ಮ ನಾಗಣ್ಣಗೌಡ ಕಂದಕೂರ ಅವರ ಮಗನೆ ಶರಣಗೌಡ ಕಂದಕೂರ. ಗುರುಮಿಠಕಲ್ ಮತಕ್ಷೇತ್ರದಿಂದ ಎರಡು ಬಾರಿ ಸ್ಪರ್ಧಿಸಿ ಸೋತು ಹೋಗಿದ್ದ ನಾಗಣ್ಣಗೌಡರ ಗೆಲುವಿಗೆ ಮುಖ್ಯ ಕಾರಣವೆ ಶರಣಗೌಡ ಕಂದಕೂರ. ಕೇವಲ 37 ವರ್ಷ ವಯಸ್ಸಿನವನಿದ್ರೂ ಮತಕ್ಷೇತ್ರದ ಉದ್ದಕ್ಕೂ ಪಾದರಸದಂತೆ ಓಡಾಡಿ ತಮ್ಮ ಕುಟುಂಬದ ಪ್ರಭಾವ ಉಂಟು ಮಾಡಿದ್ದಾನೆ.

ಕಳೆದ ಎರಡು ವಿಧಾನಸಭೆಯ ಚುನಾವಣೆಯಲ್ಲಿ ಅಲ್ಲಿನ ಬಾಬುರಾವ್ ಚಿಂಚನಸೂರ ಎಂಬ ವ್ಯಕ್ತಿಯಿಂದ ಸೋತು ಸುಣ್ಣವಾಗಿದ್ದ ನಾಗಣ್ಣಗೌಡ ಕಂದಕೂರ ಮತ್ತೆ ಚಿಗುರುವಂತೆ ಮಾಡಿದ್ದೇ ಈ ಶರಣಗೌಡನ ಸಂಘಟನಾ ಚತುರತೆ. ನಾಗಣ್ಣಗೌಡರ ತೂಕದ ಮಾತು ಹಾಗೂ ಗಟ್ಸ್ ಒಂದೆಡೆ ಕೆಲಸ ಮಾಡಿದ್ದರೆ ಇನ್ನೊಂದೆಡೆ ಶರಣಗೌಡನ ಕ್ಷೇತ್ರದ ಪಾದಯಾತ್ರೆಗಳೂ ಪ್ಲಸ್ ಪಾಯಿಂಟ್ ಆದವು. ಎರಡು ಬಾರಿ ನೆಲ ಕಚ್ಚಿ ಇನ್ನೇನು ಮೂರನೆ ಬಾರಿ ಕಂದಕೂರ ಕುಟುಂಬ ನೆಲ ಕಚ್ಚಿಯೇ ಹೋಗುತ್ತದೆ ಎಂದು ರಾಜಕೀಯ ನಾಯಕರು ಎಣಿಕೆ ಹಾಕಿದಾಗ ಮತದಾರನ ಕರುಣಾ ದೃಷ್ಟಿ ಇವರ ಮೇಲೆ ಬಿತ್ತು. ಸಾಡೆ ಸಾತಿಯಂತೆ ಗುರುಮಿಠಕಲ್ ಮತಕ್ಷೇತ್ರಕ್ಕೆ ಗಂಟು ಬಿದ್ದಿದ್ದ ಚಿಂಚನಸೂರ ಬಾಬುರಾವ್ ನೇಪಥ್ಯಕ್ಕೆ ಸರಿಯಬೇಕಾಯಿತು.

ಮೂರನೆ ಸಲ ಗುರುಮಿಠಕಲ್ ಕ್ಷೇತ್ರದಲ್ಲಿ ನಿಲ್ಲಲು ದೇವೇಗೌಡರ ಜನತಾದಳ ನಾಗಣ್ಣಗೌಡ ಕಂದಕೂರರಿಗೆ ಎಲ್ಲಾ ರೀತಿಯಿಂದಲೂ ಸಹಕಾರ ನೀಡಿದೆ. ಈ ಸಹಕಾರ ಇಂದು ನಿನ್ನೆಯದಲ್ಲ. ಹೀಗಾಗಿ ನಾಗಣ್ಣಗೌಡ ಕಂದಕೂರ ಆತನ ಮಗ ಶರಣಗೌಡ ಮತ್ತು ಮುಖ್ಯಮಂತ್ರಿ ಕುಮಾರ ಸ್ವಾಮಿಗಳು ಬೀಸಿದ ಬಲೆಯಲ್ಲಿ ಯಡಿಯೂರಪ್ಪ ಸಿಕ್ಕು ಹಾಕಿಕೊಂಡಿದ್ದಾನೆ. ಯಡಿಯೂರಪ್ಪನ ಮುಖ್ಯಮಂತ್ರಿಯ ಕನಸಿಗೆ ಬ್ರೇಕ್ ಹಾಕದೆ ಹೋದರೆ ಕುಮಾರಣ್ಣನ ಸರಕಾರ ಉರುಳಿ ಹೋಗುತ್ತದೆಂಬುದು ಯಾರಾದರೂ ಊಹಿಸಬಹುದಾಗಿತ್ತು. ಕುದುರೆಗಳು ಹೇಗೂ ಖರೀದಿಗೆ ಸಿಗುತ್ತವೆ ಎಂಬ ಖಾತ್ರಿಯಲ್ಲಿದ್ದ ಯಡಿಯೂರಪ್ಪ ಹೈಕಮಾಂಡ್‌ನಿಂದ ಗ್ರಿನ್ ಸಿಗ್ನಲ್ ಪಡೆದು ತನ್ನ ಕೈಚಳ ಆರಂಭಿಸಿದ್ದರು. ಇದರಿಂದ ಕಾಂಗ್ರೆಸ್ ಹಾಗೂ ದಳದ ಮೈತ್ರಿ ಸರಕಾರ ತನ್ನ ಅಸ್ತಿತ್ವಕ್ಕಾಗಿ ಯಡ್ಡಿಯನ್ನು ಖೆಡ್ಡಾದಲ್ಲಿ ಕೆಡವಲು ಸಖತ್ ಗೇಮ್ ಆಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...