Homeಅಂಕಣಗಳುನಕಲಿ ಲಿಂಗಾಯತ ನಾಯಕನನ್ನು ಬಲೆಗೆ ಕೆಡವಿದ 'ಶರಣ'!

ನಕಲಿ ಲಿಂಗಾಯತ ನಾಯಕನನ್ನು ಬಲೆಗೆ ಕೆಡವಿದ ‘ಶರಣ’!

- Advertisement -
- Advertisement -

ವಿಶ್ವರಾಧ್ಯ ಸತ್ಯಂಪೇಟೆ |
ರಾಜ್ಯ ರಾಜಕೀಯದಲ್ಲಿ ಬಿರುಗಾಳಿಯನ್ನು ಉಂಟು ಮಾಡಿದ ಧ್ವನಿ ಸುರುಳಿಯ ಕರ್ತೃ ಶರಣಗೌಡ ಕಂದಕೂರ ಗುರುಮಿಠಕಲ್ ಕ್ಷೇತ್ರದಿಂದ ಗೆದ್ದು ಬಂದ ನಾಗಣ್ಣಗೌಡ ಕಂದಕೂರ ಅವರ ಪುತ್ರ. ಕಂದಕೂರ ಕುಟುಂಬ ವರ್ಗದವರಿಗೆ ದೇವೇಗೌಡರು ಎಂದೆಂದೂ ಸನಿಹವೆ. ಶರಣಗೌಡರ ದೊಡ್ಡಪ್ಪ ಲಿಂ.ಸದಾಶಿವರೆಡ್ಡಿ ಕಂದಕೂರ ಅಂದರೆ ಪಂಚಪ್ರಾಣ. ಯಾದಗಿರಿಗೆ ಗೌಡರು ಆಗ ಯಾವಾಗ ಬಂದರೂ ಸದಾಶಿವರೆಡ್ಡಿಯವರನ್ನು ಭೇಟಿಯಾಗದೆ ಹೋಗುತ್ತಿರಲಿಲ್ಲ. ಸದಾಶಿವರೆಡ್ಡಿ ಜನತಾ ಪಕ್ಷ ಪಾಳೆಯದಲ್ಲಿ ಹಿಂದಿನಿಂದಲೂ ಗುರುತಿಸಿಕೊಂಡಿದ್ದರು. ಯಾದಗಿರಿ ಮತ ಕ್ಷೇತ್ರದ ಶಾಸಕರಾಗಿದ್ದ ಕೆಲವು ಕಾಲ ಮಂತ್ರಿಯಾಗಿದ್ದ ವಿಶ್ವನಾಥರೆಡ್ಡಿ ಮುದ್ನಾಳರ ಒಡನಾಟವಿದ್ದರೂ ತಮ್ಮದೆ ಅಸ್ತಿತ್ವ ಹೊಂದಿದವರು. ಸಣ್ಣ ಪುಟ್ಟ ಗಿಮಿಕ್ ಮಾಡದೆ ನೇರ ನಿಷ್ಠುರ ಗುಣಗಳನ್ನು ಬೆಳೆಸಿಕೊಂಡು ಜನ ಮನ್ನಣೆ ಗಳಿಸಿಕೊಂಡಿದ್ದವರು. ಬಹುಶಃ ಇದನ್ನು ಗುರುತಿಸಿದ್ದ ದೇವೇಗೌಡರು ಯಾದಗಿರಿಗೆ ಯಾವಾಗ ಬಂದರೂ ಸದಾಶಿವರೆಡ್ಡಿಯವರನ್ನು ಭೇಟಿಯಾಗದೆ ಹೋಗುತ್ತಿರಲಿಲ್ಲ.

ಈ ಸದಾಶಿವರೆಡ್ಡಿಯವರ ತಮ್ಮ ನಾಗಣ್ಣಗೌಡ ಕಂದಕೂರ ಅವರ ಮಗನೆ ಶರಣಗೌಡ ಕಂದಕೂರ. ಗುರುಮಿಠಕಲ್ ಮತಕ್ಷೇತ್ರದಿಂದ ಎರಡು ಬಾರಿ ಸ್ಪರ್ಧಿಸಿ ಸೋತು ಹೋಗಿದ್ದ ನಾಗಣ್ಣಗೌಡರ ಗೆಲುವಿಗೆ ಮುಖ್ಯ ಕಾರಣವೆ ಶರಣಗೌಡ ಕಂದಕೂರ. ಕೇವಲ 37 ವರ್ಷ ವಯಸ್ಸಿನವನಿದ್ರೂ ಮತಕ್ಷೇತ್ರದ ಉದ್ದಕ್ಕೂ ಪಾದರಸದಂತೆ ಓಡಾಡಿ ತಮ್ಮ ಕುಟುಂಬದ ಪ್ರಭಾವ ಉಂಟು ಮಾಡಿದ್ದಾನೆ.

ಕಳೆದ ಎರಡು ವಿಧಾನಸಭೆಯ ಚುನಾವಣೆಯಲ್ಲಿ ಅಲ್ಲಿನ ಬಾಬುರಾವ್ ಚಿಂಚನಸೂರ ಎಂಬ ವ್ಯಕ್ತಿಯಿಂದ ಸೋತು ಸುಣ್ಣವಾಗಿದ್ದ ನಾಗಣ್ಣಗೌಡ ಕಂದಕೂರ ಮತ್ತೆ ಚಿಗುರುವಂತೆ ಮಾಡಿದ್ದೇ ಈ ಶರಣಗೌಡನ ಸಂಘಟನಾ ಚತುರತೆ. ನಾಗಣ್ಣಗೌಡರ ತೂಕದ ಮಾತು ಹಾಗೂ ಗಟ್ಸ್ ಒಂದೆಡೆ ಕೆಲಸ ಮಾಡಿದ್ದರೆ ಇನ್ನೊಂದೆಡೆ ಶರಣಗೌಡನ ಕ್ಷೇತ್ರದ ಪಾದಯಾತ್ರೆಗಳೂ ಪ್ಲಸ್ ಪಾಯಿಂಟ್ ಆದವು. ಎರಡು ಬಾರಿ ನೆಲ ಕಚ್ಚಿ ಇನ್ನೇನು ಮೂರನೆ ಬಾರಿ ಕಂದಕೂರ ಕುಟುಂಬ ನೆಲ ಕಚ್ಚಿಯೇ ಹೋಗುತ್ತದೆ ಎಂದು ರಾಜಕೀಯ ನಾಯಕರು ಎಣಿಕೆ ಹಾಕಿದಾಗ ಮತದಾರನ ಕರುಣಾ ದೃಷ್ಟಿ ಇವರ ಮೇಲೆ ಬಿತ್ತು. ಸಾಡೆ ಸಾತಿಯಂತೆ ಗುರುಮಿಠಕಲ್ ಮತಕ್ಷೇತ್ರಕ್ಕೆ ಗಂಟು ಬಿದ್ದಿದ್ದ ಚಿಂಚನಸೂರ ಬಾಬುರಾವ್ ನೇಪಥ್ಯಕ್ಕೆ ಸರಿಯಬೇಕಾಯಿತು.

ಮೂರನೆ ಸಲ ಗುರುಮಿಠಕಲ್ ಕ್ಷೇತ್ರದಲ್ಲಿ ನಿಲ್ಲಲು ದೇವೇಗೌಡರ ಜನತಾದಳ ನಾಗಣ್ಣಗೌಡ ಕಂದಕೂರರಿಗೆ ಎಲ್ಲಾ ರೀತಿಯಿಂದಲೂ ಸಹಕಾರ ನೀಡಿದೆ. ಈ ಸಹಕಾರ ಇಂದು ನಿನ್ನೆಯದಲ್ಲ. ಹೀಗಾಗಿ ನಾಗಣ್ಣಗೌಡ ಕಂದಕೂರ ಆತನ ಮಗ ಶರಣಗೌಡ ಮತ್ತು ಮುಖ್ಯಮಂತ್ರಿ ಕುಮಾರ ಸ್ವಾಮಿಗಳು ಬೀಸಿದ ಬಲೆಯಲ್ಲಿ ಯಡಿಯೂರಪ್ಪ ಸಿಕ್ಕು ಹಾಕಿಕೊಂಡಿದ್ದಾನೆ. ಯಡಿಯೂರಪ್ಪನ ಮುಖ್ಯಮಂತ್ರಿಯ ಕನಸಿಗೆ ಬ್ರೇಕ್ ಹಾಕದೆ ಹೋದರೆ ಕುಮಾರಣ್ಣನ ಸರಕಾರ ಉರುಳಿ ಹೋಗುತ್ತದೆಂಬುದು ಯಾರಾದರೂ ಊಹಿಸಬಹುದಾಗಿತ್ತು. ಕುದುರೆಗಳು ಹೇಗೂ ಖರೀದಿಗೆ ಸಿಗುತ್ತವೆ ಎಂಬ ಖಾತ್ರಿಯಲ್ಲಿದ್ದ ಯಡಿಯೂರಪ್ಪ ಹೈಕಮಾಂಡ್‌ನಿಂದ ಗ್ರಿನ್ ಸಿಗ್ನಲ್ ಪಡೆದು ತನ್ನ ಕೈಚಳ ಆರಂಭಿಸಿದ್ದರು. ಇದರಿಂದ ಕಾಂಗ್ರೆಸ್ ಹಾಗೂ ದಳದ ಮೈತ್ರಿ ಸರಕಾರ ತನ್ನ ಅಸ್ತಿತ್ವಕ್ಕಾಗಿ ಯಡ್ಡಿಯನ್ನು ಖೆಡ್ಡಾದಲ್ಲಿ ಕೆಡವಲು ಸಖತ್ ಗೇಮ್ ಆಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...