Homeಅಂಕಣಗಳುನಕಲಿ ಲಿಂಗಾಯತ ನಾಯಕನನ್ನು ಬಲೆಗೆ ಕೆಡವಿದ 'ಶರಣ'!

ನಕಲಿ ಲಿಂಗಾಯತ ನಾಯಕನನ್ನು ಬಲೆಗೆ ಕೆಡವಿದ ‘ಶರಣ’!

- Advertisement -
- Advertisement -

ವಿಶ್ವರಾಧ್ಯ ಸತ್ಯಂಪೇಟೆ |
ರಾಜ್ಯ ರಾಜಕೀಯದಲ್ಲಿ ಬಿರುಗಾಳಿಯನ್ನು ಉಂಟು ಮಾಡಿದ ಧ್ವನಿ ಸುರುಳಿಯ ಕರ್ತೃ ಶರಣಗೌಡ ಕಂದಕೂರ ಗುರುಮಿಠಕಲ್ ಕ್ಷೇತ್ರದಿಂದ ಗೆದ್ದು ಬಂದ ನಾಗಣ್ಣಗೌಡ ಕಂದಕೂರ ಅವರ ಪುತ್ರ. ಕಂದಕೂರ ಕುಟುಂಬ ವರ್ಗದವರಿಗೆ ದೇವೇಗೌಡರು ಎಂದೆಂದೂ ಸನಿಹವೆ. ಶರಣಗೌಡರ ದೊಡ್ಡಪ್ಪ ಲಿಂ.ಸದಾಶಿವರೆಡ್ಡಿ ಕಂದಕೂರ ಅಂದರೆ ಪಂಚಪ್ರಾಣ. ಯಾದಗಿರಿಗೆ ಗೌಡರು ಆಗ ಯಾವಾಗ ಬಂದರೂ ಸದಾಶಿವರೆಡ್ಡಿಯವರನ್ನು ಭೇಟಿಯಾಗದೆ ಹೋಗುತ್ತಿರಲಿಲ್ಲ. ಸದಾಶಿವರೆಡ್ಡಿ ಜನತಾ ಪಕ್ಷ ಪಾಳೆಯದಲ್ಲಿ ಹಿಂದಿನಿಂದಲೂ ಗುರುತಿಸಿಕೊಂಡಿದ್ದರು. ಯಾದಗಿರಿ ಮತ ಕ್ಷೇತ್ರದ ಶಾಸಕರಾಗಿದ್ದ ಕೆಲವು ಕಾಲ ಮಂತ್ರಿಯಾಗಿದ್ದ ವಿಶ್ವನಾಥರೆಡ್ಡಿ ಮುದ್ನಾಳರ ಒಡನಾಟವಿದ್ದರೂ ತಮ್ಮದೆ ಅಸ್ತಿತ್ವ ಹೊಂದಿದವರು. ಸಣ್ಣ ಪುಟ್ಟ ಗಿಮಿಕ್ ಮಾಡದೆ ನೇರ ನಿಷ್ಠುರ ಗುಣಗಳನ್ನು ಬೆಳೆಸಿಕೊಂಡು ಜನ ಮನ್ನಣೆ ಗಳಿಸಿಕೊಂಡಿದ್ದವರು. ಬಹುಶಃ ಇದನ್ನು ಗುರುತಿಸಿದ್ದ ದೇವೇಗೌಡರು ಯಾದಗಿರಿಗೆ ಯಾವಾಗ ಬಂದರೂ ಸದಾಶಿವರೆಡ್ಡಿಯವರನ್ನು ಭೇಟಿಯಾಗದೆ ಹೋಗುತ್ತಿರಲಿಲ್ಲ.

ಈ ಸದಾಶಿವರೆಡ್ಡಿಯವರ ತಮ್ಮ ನಾಗಣ್ಣಗೌಡ ಕಂದಕೂರ ಅವರ ಮಗನೆ ಶರಣಗೌಡ ಕಂದಕೂರ. ಗುರುಮಿಠಕಲ್ ಮತಕ್ಷೇತ್ರದಿಂದ ಎರಡು ಬಾರಿ ಸ್ಪರ್ಧಿಸಿ ಸೋತು ಹೋಗಿದ್ದ ನಾಗಣ್ಣಗೌಡರ ಗೆಲುವಿಗೆ ಮುಖ್ಯ ಕಾರಣವೆ ಶರಣಗೌಡ ಕಂದಕೂರ. ಕೇವಲ 37 ವರ್ಷ ವಯಸ್ಸಿನವನಿದ್ರೂ ಮತಕ್ಷೇತ್ರದ ಉದ್ದಕ್ಕೂ ಪಾದರಸದಂತೆ ಓಡಾಡಿ ತಮ್ಮ ಕುಟುಂಬದ ಪ್ರಭಾವ ಉಂಟು ಮಾಡಿದ್ದಾನೆ.

ಕಳೆದ ಎರಡು ವಿಧಾನಸಭೆಯ ಚುನಾವಣೆಯಲ್ಲಿ ಅಲ್ಲಿನ ಬಾಬುರಾವ್ ಚಿಂಚನಸೂರ ಎಂಬ ವ್ಯಕ್ತಿಯಿಂದ ಸೋತು ಸುಣ್ಣವಾಗಿದ್ದ ನಾಗಣ್ಣಗೌಡ ಕಂದಕೂರ ಮತ್ತೆ ಚಿಗುರುವಂತೆ ಮಾಡಿದ್ದೇ ಈ ಶರಣಗೌಡನ ಸಂಘಟನಾ ಚತುರತೆ. ನಾಗಣ್ಣಗೌಡರ ತೂಕದ ಮಾತು ಹಾಗೂ ಗಟ್ಸ್ ಒಂದೆಡೆ ಕೆಲಸ ಮಾಡಿದ್ದರೆ ಇನ್ನೊಂದೆಡೆ ಶರಣಗೌಡನ ಕ್ಷೇತ್ರದ ಪಾದಯಾತ್ರೆಗಳೂ ಪ್ಲಸ್ ಪಾಯಿಂಟ್ ಆದವು. ಎರಡು ಬಾರಿ ನೆಲ ಕಚ್ಚಿ ಇನ್ನೇನು ಮೂರನೆ ಬಾರಿ ಕಂದಕೂರ ಕುಟುಂಬ ನೆಲ ಕಚ್ಚಿಯೇ ಹೋಗುತ್ತದೆ ಎಂದು ರಾಜಕೀಯ ನಾಯಕರು ಎಣಿಕೆ ಹಾಕಿದಾಗ ಮತದಾರನ ಕರುಣಾ ದೃಷ್ಟಿ ಇವರ ಮೇಲೆ ಬಿತ್ತು. ಸಾಡೆ ಸಾತಿಯಂತೆ ಗುರುಮಿಠಕಲ್ ಮತಕ್ಷೇತ್ರಕ್ಕೆ ಗಂಟು ಬಿದ್ದಿದ್ದ ಚಿಂಚನಸೂರ ಬಾಬುರಾವ್ ನೇಪಥ್ಯಕ್ಕೆ ಸರಿಯಬೇಕಾಯಿತು.

ಮೂರನೆ ಸಲ ಗುರುಮಿಠಕಲ್ ಕ್ಷೇತ್ರದಲ್ಲಿ ನಿಲ್ಲಲು ದೇವೇಗೌಡರ ಜನತಾದಳ ನಾಗಣ್ಣಗೌಡ ಕಂದಕೂರರಿಗೆ ಎಲ್ಲಾ ರೀತಿಯಿಂದಲೂ ಸಹಕಾರ ನೀಡಿದೆ. ಈ ಸಹಕಾರ ಇಂದು ನಿನ್ನೆಯದಲ್ಲ. ಹೀಗಾಗಿ ನಾಗಣ್ಣಗೌಡ ಕಂದಕೂರ ಆತನ ಮಗ ಶರಣಗೌಡ ಮತ್ತು ಮುಖ್ಯಮಂತ್ರಿ ಕುಮಾರ ಸ್ವಾಮಿಗಳು ಬೀಸಿದ ಬಲೆಯಲ್ಲಿ ಯಡಿಯೂರಪ್ಪ ಸಿಕ್ಕು ಹಾಕಿಕೊಂಡಿದ್ದಾನೆ. ಯಡಿಯೂರಪ್ಪನ ಮುಖ್ಯಮಂತ್ರಿಯ ಕನಸಿಗೆ ಬ್ರೇಕ್ ಹಾಕದೆ ಹೋದರೆ ಕುಮಾರಣ್ಣನ ಸರಕಾರ ಉರುಳಿ ಹೋಗುತ್ತದೆಂಬುದು ಯಾರಾದರೂ ಊಹಿಸಬಹುದಾಗಿತ್ತು. ಕುದುರೆಗಳು ಹೇಗೂ ಖರೀದಿಗೆ ಸಿಗುತ್ತವೆ ಎಂಬ ಖಾತ್ರಿಯಲ್ಲಿದ್ದ ಯಡಿಯೂರಪ್ಪ ಹೈಕಮಾಂಡ್‌ನಿಂದ ಗ್ರಿನ್ ಸಿಗ್ನಲ್ ಪಡೆದು ತನ್ನ ಕೈಚಳ ಆರಂಭಿಸಿದ್ದರು. ಇದರಿಂದ ಕಾಂಗ್ರೆಸ್ ಹಾಗೂ ದಳದ ಮೈತ್ರಿ ಸರಕಾರ ತನ್ನ ಅಸ್ತಿತ್ವಕ್ಕಾಗಿ ಯಡ್ಡಿಯನ್ನು ಖೆಡ್ಡಾದಲ್ಲಿ ಕೆಡವಲು ಸಖತ್ ಗೇಮ್ ಆಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...