Homeಅಂಕಣಗಳುನಕಲಿ ಲಿಂಗಾಯತ ನಾಯಕನನ್ನು ಬಲೆಗೆ ಕೆಡವಿದ 'ಶರಣ'!

ನಕಲಿ ಲಿಂಗಾಯತ ನಾಯಕನನ್ನು ಬಲೆಗೆ ಕೆಡವಿದ ‘ಶರಣ’!

- Advertisement -
- Advertisement -

ವಿಶ್ವರಾಧ್ಯ ಸತ್ಯಂಪೇಟೆ |
ರಾಜ್ಯ ರಾಜಕೀಯದಲ್ಲಿ ಬಿರುಗಾಳಿಯನ್ನು ಉಂಟು ಮಾಡಿದ ಧ್ವನಿ ಸುರುಳಿಯ ಕರ್ತೃ ಶರಣಗೌಡ ಕಂದಕೂರ ಗುರುಮಿಠಕಲ್ ಕ್ಷೇತ್ರದಿಂದ ಗೆದ್ದು ಬಂದ ನಾಗಣ್ಣಗೌಡ ಕಂದಕೂರ ಅವರ ಪುತ್ರ. ಕಂದಕೂರ ಕುಟುಂಬ ವರ್ಗದವರಿಗೆ ದೇವೇಗೌಡರು ಎಂದೆಂದೂ ಸನಿಹವೆ. ಶರಣಗೌಡರ ದೊಡ್ಡಪ್ಪ ಲಿಂ.ಸದಾಶಿವರೆಡ್ಡಿ ಕಂದಕೂರ ಅಂದರೆ ಪಂಚಪ್ರಾಣ. ಯಾದಗಿರಿಗೆ ಗೌಡರು ಆಗ ಯಾವಾಗ ಬಂದರೂ ಸದಾಶಿವರೆಡ್ಡಿಯವರನ್ನು ಭೇಟಿಯಾಗದೆ ಹೋಗುತ್ತಿರಲಿಲ್ಲ. ಸದಾಶಿವರೆಡ್ಡಿ ಜನತಾ ಪಕ್ಷ ಪಾಳೆಯದಲ್ಲಿ ಹಿಂದಿನಿಂದಲೂ ಗುರುತಿಸಿಕೊಂಡಿದ್ದರು. ಯಾದಗಿರಿ ಮತ ಕ್ಷೇತ್ರದ ಶಾಸಕರಾಗಿದ್ದ ಕೆಲವು ಕಾಲ ಮಂತ್ರಿಯಾಗಿದ್ದ ವಿಶ್ವನಾಥರೆಡ್ಡಿ ಮುದ್ನಾಳರ ಒಡನಾಟವಿದ್ದರೂ ತಮ್ಮದೆ ಅಸ್ತಿತ್ವ ಹೊಂದಿದವರು. ಸಣ್ಣ ಪುಟ್ಟ ಗಿಮಿಕ್ ಮಾಡದೆ ನೇರ ನಿಷ್ಠುರ ಗುಣಗಳನ್ನು ಬೆಳೆಸಿಕೊಂಡು ಜನ ಮನ್ನಣೆ ಗಳಿಸಿಕೊಂಡಿದ್ದವರು. ಬಹುಶಃ ಇದನ್ನು ಗುರುತಿಸಿದ್ದ ದೇವೇಗೌಡರು ಯಾದಗಿರಿಗೆ ಯಾವಾಗ ಬಂದರೂ ಸದಾಶಿವರೆಡ್ಡಿಯವರನ್ನು ಭೇಟಿಯಾಗದೆ ಹೋಗುತ್ತಿರಲಿಲ್ಲ.

ಈ ಸದಾಶಿವರೆಡ್ಡಿಯವರ ತಮ್ಮ ನಾಗಣ್ಣಗೌಡ ಕಂದಕೂರ ಅವರ ಮಗನೆ ಶರಣಗೌಡ ಕಂದಕೂರ. ಗುರುಮಿಠಕಲ್ ಮತಕ್ಷೇತ್ರದಿಂದ ಎರಡು ಬಾರಿ ಸ್ಪರ್ಧಿಸಿ ಸೋತು ಹೋಗಿದ್ದ ನಾಗಣ್ಣಗೌಡರ ಗೆಲುವಿಗೆ ಮುಖ್ಯ ಕಾರಣವೆ ಶರಣಗೌಡ ಕಂದಕೂರ. ಕೇವಲ 37 ವರ್ಷ ವಯಸ್ಸಿನವನಿದ್ರೂ ಮತಕ್ಷೇತ್ರದ ಉದ್ದಕ್ಕೂ ಪಾದರಸದಂತೆ ಓಡಾಡಿ ತಮ್ಮ ಕುಟುಂಬದ ಪ್ರಭಾವ ಉಂಟು ಮಾಡಿದ್ದಾನೆ.

ಕಳೆದ ಎರಡು ವಿಧಾನಸಭೆಯ ಚುನಾವಣೆಯಲ್ಲಿ ಅಲ್ಲಿನ ಬಾಬುರಾವ್ ಚಿಂಚನಸೂರ ಎಂಬ ವ್ಯಕ್ತಿಯಿಂದ ಸೋತು ಸುಣ್ಣವಾಗಿದ್ದ ನಾಗಣ್ಣಗೌಡ ಕಂದಕೂರ ಮತ್ತೆ ಚಿಗುರುವಂತೆ ಮಾಡಿದ್ದೇ ಈ ಶರಣಗೌಡನ ಸಂಘಟನಾ ಚತುರತೆ. ನಾಗಣ್ಣಗೌಡರ ತೂಕದ ಮಾತು ಹಾಗೂ ಗಟ್ಸ್ ಒಂದೆಡೆ ಕೆಲಸ ಮಾಡಿದ್ದರೆ ಇನ್ನೊಂದೆಡೆ ಶರಣಗೌಡನ ಕ್ಷೇತ್ರದ ಪಾದಯಾತ್ರೆಗಳೂ ಪ್ಲಸ್ ಪಾಯಿಂಟ್ ಆದವು. ಎರಡು ಬಾರಿ ನೆಲ ಕಚ್ಚಿ ಇನ್ನೇನು ಮೂರನೆ ಬಾರಿ ಕಂದಕೂರ ಕುಟುಂಬ ನೆಲ ಕಚ್ಚಿಯೇ ಹೋಗುತ್ತದೆ ಎಂದು ರಾಜಕೀಯ ನಾಯಕರು ಎಣಿಕೆ ಹಾಕಿದಾಗ ಮತದಾರನ ಕರುಣಾ ದೃಷ್ಟಿ ಇವರ ಮೇಲೆ ಬಿತ್ತು. ಸಾಡೆ ಸಾತಿಯಂತೆ ಗುರುಮಿಠಕಲ್ ಮತಕ್ಷೇತ್ರಕ್ಕೆ ಗಂಟು ಬಿದ್ದಿದ್ದ ಚಿಂಚನಸೂರ ಬಾಬುರಾವ್ ನೇಪಥ್ಯಕ್ಕೆ ಸರಿಯಬೇಕಾಯಿತು.

ಮೂರನೆ ಸಲ ಗುರುಮಿಠಕಲ್ ಕ್ಷೇತ್ರದಲ್ಲಿ ನಿಲ್ಲಲು ದೇವೇಗೌಡರ ಜನತಾದಳ ನಾಗಣ್ಣಗೌಡ ಕಂದಕೂರರಿಗೆ ಎಲ್ಲಾ ರೀತಿಯಿಂದಲೂ ಸಹಕಾರ ನೀಡಿದೆ. ಈ ಸಹಕಾರ ಇಂದು ನಿನ್ನೆಯದಲ್ಲ. ಹೀಗಾಗಿ ನಾಗಣ್ಣಗೌಡ ಕಂದಕೂರ ಆತನ ಮಗ ಶರಣಗೌಡ ಮತ್ತು ಮುಖ್ಯಮಂತ್ರಿ ಕುಮಾರ ಸ್ವಾಮಿಗಳು ಬೀಸಿದ ಬಲೆಯಲ್ಲಿ ಯಡಿಯೂರಪ್ಪ ಸಿಕ್ಕು ಹಾಕಿಕೊಂಡಿದ್ದಾನೆ. ಯಡಿಯೂರಪ್ಪನ ಮುಖ್ಯಮಂತ್ರಿಯ ಕನಸಿಗೆ ಬ್ರೇಕ್ ಹಾಕದೆ ಹೋದರೆ ಕುಮಾರಣ್ಣನ ಸರಕಾರ ಉರುಳಿ ಹೋಗುತ್ತದೆಂಬುದು ಯಾರಾದರೂ ಊಹಿಸಬಹುದಾಗಿತ್ತು. ಕುದುರೆಗಳು ಹೇಗೂ ಖರೀದಿಗೆ ಸಿಗುತ್ತವೆ ಎಂಬ ಖಾತ್ರಿಯಲ್ಲಿದ್ದ ಯಡಿಯೂರಪ್ಪ ಹೈಕಮಾಂಡ್‌ನಿಂದ ಗ್ರಿನ್ ಸಿಗ್ನಲ್ ಪಡೆದು ತನ್ನ ಕೈಚಳ ಆರಂಭಿಸಿದ್ದರು. ಇದರಿಂದ ಕಾಂಗ್ರೆಸ್ ಹಾಗೂ ದಳದ ಮೈತ್ರಿ ಸರಕಾರ ತನ್ನ ಅಸ್ತಿತ್ವಕ್ಕಾಗಿ ಯಡ್ಡಿಯನ್ನು ಖೆಡ್ಡಾದಲ್ಲಿ ಕೆಡವಲು ಸಖತ್ ಗೇಮ್ ಆಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...