Homeಅಂಕಣಗಳುನಕಲಿ ಲಿಂಗಾಯತ ನಾಯಕನನ್ನು ಬಲೆಗೆ ಕೆಡವಿದ 'ಶರಣ'!

ನಕಲಿ ಲಿಂಗಾಯತ ನಾಯಕನನ್ನು ಬಲೆಗೆ ಕೆಡವಿದ ‘ಶರಣ’!

- Advertisement -
- Advertisement -

ವಿಶ್ವರಾಧ್ಯ ಸತ್ಯಂಪೇಟೆ |
ರಾಜ್ಯ ರಾಜಕೀಯದಲ್ಲಿ ಬಿರುಗಾಳಿಯನ್ನು ಉಂಟು ಮಾಡಿದ ಧ್ವನಿ ಸುರುಳಿಯ ಕರ್ತೃ ಶರಣಗೌಡ ಕಂದಕೂರ ಗುರುಮಿಠಕಲ್ ಕ್ಷೇತ್ರದಿಂದ ಗೆದ್ದು ಬಂದ ನಾಗಣ್ಣಗೌಡ ಕಂದಕೂರ ಅವರ ಪುತ್ರ. ಕಂದಕೂರ ಕುಟುಂಬ ವರ್ಗದವರಿಗೆ ದೇವೇಗೌಡರು ಎಂದೆಂದೂ ಸನಿಹವೆ. ಶರಣಗೌಡರ ದೊಡ್ಡಪ್ಪ ಲಿಂ.ಸದಾಶಿವರೆಡ್ಡಿ ಕಂದಕೂರ ಅಂದರೆ ಪಂಚಪ್ರಾಣ. ಯಾದಗಿರಿಗೆ ಗೌಡರು ಆಗ ಯಾವಾಗ ಬಂದರೂ ಸದಾಶಿವರೆಡ್ಡಿಯವರನ್ನು ಭೇಟಿಯಾಗದೆ ಹೋಗುತ್ತಿರಲಿಲ್ಲ. ಸದಾಶಿವರೆಡ್ಡಿ ಜನತಾ ಪಕ್ಷ ಪಾಳೆಯದಲ್ಲಿ ಹಿಂದಿನಿಂದಲೂ ಗುರುತಿಸಿಕೊಂಡಿದ್ದರು. ಯಾದಗಿರಿ ಮತ ಕ್ಷೇತ್ರದ ಶಾಸಕರಾಗಿದ್ದ ಕೆಲವು ಕಾಲ ಮಂತ್ರಿಯಾಗಿದ್ದ ವಿಶ್ವನಾಥರೆಡ್ಡಿ ಮುದ್ನಾಳರ ಒಡನಾಟವಿದ್ದರೂ ತಮ್ಮದೆ ಅಸ್ತಿತ್ವ ಹೊಂದಿದವರು. ಸಣ್ಣ ಪುಟ್ಟ ಗಿಮಿಕ್ ಮಾಡದೆ ನೇರ ನಿಷ್ಠುರ ಗುಣಗಳನ್ನು ಬೆಳೆಸಿಕೊಂಡು ಜನ ಮನ್ನಣೆ ಗಳಿಸಿಕೊಂಡಿದ್ದವರು. ಬಹುಶಃ ಇದನ್ನು ಗುರುತಿಸಿದ್ದ ದೇವೇಗೌಡರು ಯಾದಗಿರಿಗೆ ಯಾವಾಗ ಬಂದರೂ ಸದಾಶಿವರೆಡ್ಡಿಯವರನ್ನು ಭೇಟಿಯಾಗದೆ ಹೋಗುತ್ತಿರಲಿಲ್ಲ.

ಈ ಸದಾಶಿವರೆಡ್ಡಿಯವರ ತಮ್ಮ ನಾಗಣ್ಣಗೌಡ ಕಂದಕೂರ ಅವರ ಮಗನೆ ಶರಣಗೌಡ ಕಂದಕೂರ. ಗುರುಮಿಠಕಲ್ ಮತಕ್ಷೇತ್ರದಿಂದ ಎರಡು ಬಾರಿ ಸ್ಪರ್ಧಿಸಿ ಸೋತು ಹೋಗಿದ್ದ ನಾಗಣ್ಣಗೌಡರ ಗೆಲುವಿಗೆ ಮುಖ್ಯ ಕಾರಣವೆ ಶರಣಗೌಡ ಕಂದಕೂರ. ಕೇವಲ 37 ವರ್ಷ ವಯಸ್ಸಿನವನಿದ್ರೂ ಮತಕ್ಷೇತ್ರದ ಉದ್ದಕ್ಕೂ ಪಾದರಸದಂತೆ ಓಡಾಡಿ ತಮ್ಮ ಕುಟುಂಬದ ಪ್ರಭಾವ ಉಂಟು ಮಾಡಿದ್ದಾನೆ.

ಕಳೆದ ಎರಡು ವಿಧಾನಸಭೆಯ ಚುನಾವಣೆಯಲ್ಲಿ ಅಲ್ಲಿನ ಬಾಬುರಾವ್ ಚಿಂಚನಸೂರ ಎಂಬ ವ್ಯಕ್ತಿಯಿಂದ ಸೋತು ಸುಣ್ಣವಾಗಿದ್ದ ನಾಗಣ್ಣಗೌಡ ಕಂದಕೂರ ಮತ್ತೆ ಚಿಗುರುವಂತೆ ಮಾಡಿದ್ದೇ ಈ ಶರಣಗೌಡನ ಸಂಘಟನಾ ಚತುರತೆ. ನಾಗಣ್ಣಗೌಡರ ತೂಕದ ಮಾತು ಹಾಗೂ ಗಟ್ಸ್ ಒಂದೆಡೆ ಕೆಲಸ ಮಾಡಿದ್ದರೆ ಇನ್ನೊಂದೆಡೆ ಶರಣಗೌಡನ ಕ್ಷೇತ್ರದ ಪಾದಯಾತ್ರೆಗಳೂ ಪ್ಲಸ್ ಪಾಯಿಂಟ್ ಆದವು. ಎರಡು ಬಾರಿ ನೆಲ ಕಚ್ಚಿ ಇನ್ನೇನು ಮೂರನೆ ಬಾರಿ ಕಂದಕೂರ ಕುಟುಂಬ ನೆಲ ಕಚ್ಚಿಯೇ ಹೋಗುತ್ತದೆ ಎಂದು ರಾಜಕೀಯ ನಾಯಕರು ಎಣಿಕೆ ಹಾಕಿದಾಗ ಮತದಾರನ ಕರುಣಾ ದೃಷ್ಟಿ ಇವರ ಮೇಲೆ ಬಿತ್ತು. ಸಾಡೆ ಸಾತಿಯಂತೆ ಗುರುಮಿಠಕಲ್ ಮತಕ್ಷೇತ್ರಕ್ಕೆ ಗಂಟು ಬಿದ್ದಿದ್ದ ಚಿಂಚನಸೂರ ಬಾಬುರಾವ್ ನೇಪಥ್ಯಕ್ಕೆ ಸರಿಯಬೇಕಾಯಿತು.

ಮೂರನೆ ಸಲ ಗುರುಮಿಠಕಲ್ ಕ್ಷೇತ್ರದಲ್ಲಿ ನಿಲ್ಲಲು ದೇವೇಗೌಡರ ಜನತಾದಳ ನಾಗಣ್ಣಗೌಡ ಕಂದಕೂರರಿಗೆ ಎಲ್ಲಾ ರೀತಿಯಿಂದಲೂ ಸಹಕಾರ ನೀಡಿದೆ. ಈ ಸಹಕಾರ ಇಂದು ನಿನ್ನೆಯದಲ್ಲ. ಹೀಗಾಗಿ ನಾಗಣ್ಣಗೌಡ ಕಂದಕೂರ ಆತನ ಮಗ ಶರಣಗೌಡ ಮತ್ತು ಮುಖ್ಯಮಂತ್ರಿ ಕುಮಾರ ಸ್ವಾಮಿಗಳು ಬೀಸಿದ ಬಲೆಯಲ್ಲಿ ಯಡಿಯೂರಪ್ಪ ಸಿಕ್ಕು ಹಾಕಿಕೊಂಡಿದ್ದಾನೆ. ಯಡಿಯೂರಪ್ಪನ ಮುಖ್ಯಮಂತ್ರಿಯ ಕನಸಿಗೆ ಬ್ರೇಕ್ ಹಾಕದೆ ಹೋದರೆ ಕುಮಾರಣ್ಣನ ಸರಕಾರ ಉರುಳಿ ಹೋಗುತ್ತದೆಂಬುದು ಯಾರಾದರೂ ಊಹಿಸಬಹುದಾಗಿತ್ತು. ಕುದುರೆಗಳು ಹೇಗೂ ಖರೀದಿಗೆ ಸಿಗುತ್ತವೆ ಎಂಬ ಖಾತ್ರಿಯಲ್ಲಿದ್ದ ಯಡಿಯೂರಪ್ಪ ಹೈಕಮಾಂಡ್‌ನಿಂದ ಗ್ರಿನ್ ಸಿಗ್ನಲ್ ಪಡೆದು ತನ್ನ ಕೈಚಳ ಆರಂಭಿಸಿದ್ದರು. ಇದರಿಂದ ಕಾಂಗ್ರೆಸ್ ಹಾಗೂ ದಳದ ಮೈತ್ರಿ ಸರಕಾರ ತನ್ನ ಅಸ್ತಿತ್ವಕ್ಕಾಗಿ ಯಡ್ಡಿಯನ್ನು ಖೆಡ್ಡಾದಲ್ಲಿ ಕೆಡವಲು ಸಖತ್ ಗೇಮ್ ಆಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...