Homeಮುಖಪುಟನಮ್ಮ ಪ್ರಜಾಪ್ರಭುತ್ವ ಪಾಕಿಸ್ತಾನಕ್ಕಿಂತ ದುರ್ಬಲವಾಗಬಾರದು: ಒಂದು ಆಶಯ

ನಮ್ಮ ಪ್ರಜಾಪ್ರಭುತ್ವ ಪಾಕಿಸ್ತಾನಕ್ಕಿಂತ ದುರ್ಬಲವಾಗಬಾರದು: ಒಂದು ಆಶಯ

- Advertisement -
- Advertisement -

ನೀಲಗಾರ |

ಕೆಲವು ವರ್ಷಗಳ ಕೆಳಗೆ ಪಾಕಿಸ್ತಾನದ ಕವಿಯೊಬ್ಬರು ನಮ್ಮ ದೇಶದಂತೆ ನೀವಾಗಬೇಡಿ ಎಂದು ಭಾರತವನ್ನು ಉದ್ದೇಶಿಸಿ ಬಹಳ ನೋವಿನಿಂದ ಕೂಡಿದ ಕವಿತೆಯೊಂದನ್ನು ಬರೆದಿದ್ದರು.

ನಮ್ಮದೇ ಸೋದರಿ ದೇಶ, ಇಂದಲ್ಲಾ ನಾಳೆ ಒಂದೇ ಆಗಬೇಕಿರುವ ನೆರೆಯ ದೇಶವು ಅತ್ಯಂತ ಅರಾಜಕವಾದ ಪರಿಸ್ಥಿತಿಯಲ್ಲಿರುವುದು ನಮಗೆಲ್ಲರಿಗೂ ಗೊತ್ತು. ಸೈನ್ಯ, ಇಂಟೆಲಿಜೆನ್ಸ್ ಸಂಸ್ಥೆ, ಮತೀಯವಾದಿಗಳು, ಅಮೆರಿಕಾ ಮತ್ತು ಭ್ರಷ್ಟ ರಾಜಕಾರಣಿಗಳು ಇವೆಲ್ಲದರ ಮಧ್ಯೆ ನಲುಗುತ್ತಿರುವ ಜನಸಾಮಾನ್ಯರು  ಇದೇ ಪಾಕಿಸ್ತಾನ. ಹಾಗಾಗಿಯೇ ಭಯೋತ್ಪಾದಕರನ್ನೂ ಮಟ್ಟ ಹಾಕಲಾಗದ ದುಸ್ಥಿತಿ. ಬಹುಶಃ ಇದೇ ಆ ಕವಿಯ ಮನದಾಳದಲ್ಲಿದ್ದದ್ದು.

ಆದರೆ, ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ಬೆಳವಣಿಗೆಗಳು ದುಃಖಕರವಾಗಿದೆ. ನಮ್ಮ ದೇಶದ ಸಿಆರ್‌ಪಿಎಫ್ ಮೇಲೆ ಭಯೋತ್ಪಾದಕ ದಾಳಿ ನಡೆದು ಸುಮಾರು 40ಕ್ಕೂ ಹೆಚ್ಚು ಯೋಧರು ಸಾವಿಗೀಡಾಗುತ್ತಾರೆ. ಆ ಸಂದರ್ಭದಲ್ಲಿ ಕೇಂದ್ರ ಸರ್ಕಾರವು ಸರ್ವಪಕ್ಷ ಸಭೆ ಕರೆಯುತ್ತದೆ – ಪ್ರಧಾನಮಂತ್ರಿಯೇ ಅದರಲ್ಲಿ ಪಾಲ್ಗೊಳ್ಳದೇ ಪಕ್ಷದ ಪರ ಪ್ರಚಾರ ಮಾಡಲು ಹೋಗುತ್ತಾರೆ.

ಆ ನಂತರ ಭಾರತದ ವಾಯುಪಡೆಯು ಪಾಕಿಸ್ತಾನದ ಮೇಲೆ ದಾಳಿ ನಡೆಸುತ್ತದೆ. ಉದ್ವಿಗ್ನ ವಾತಾವರಣ ಹೆಚ್ಚಾಗುತ್ತಾ ಹೋಗುತ್ತದೆ. ಇನ್ನೊಂದು ಸರ್ವಪಕ್ಷ ಸಭೆ ನಡೆಯುತ್ತದೆ. ಆಗಲೂ ಪ್ರಧಾನಿ ಗೈರುಹಾಜರು. ಅವರು ಪ್ರತಿನಿತ್ಯ ಚುನಾವಣೆಯ ಸಿದ್ಧತೆಯಲ್ಲೇ ಹೆಚ್ಚು ತೊಡಗಿರುವುದು ಕಂಡು ಬರುತ್ತದೆ.

ಇದೇ ಅವಧಿಯಲ್ಲಿ ಪಾಕಿಸ್ತಾನದ ಇಮ್ರಾನ್‌ಖಾನ್ ಅವರು ಮಾಡಿದ ಭಾಷಣವೊಂದು ಎಲ್ಲೆಡೆ ಚರ್ಚೆಯಲ್ಲಿದೆ. ಆ ಭಾಷಣ ಮಾಡಿದ್ದು ಎಲ್ಲಿ ಗೊತ್ತೇ? ಸಂಸತ್ತಿನಲ್ಲಿ. ಅದೂ ಸಹಾ, ಈ ಸನ್ನಿವೇಶದಲ್ಲಿ ದೇಶದ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲೆಂದೇ ಕರೆದ ವಿಶೇಷ ಅಧಿವೇಶನ. ಅಲ್ಲಿಯೇ ಭಾರತದ ಜೊತೆಗೆ ಶಾಂತಿ ಹಸ್ತವನ್ನು ಚಾಚುವ ಉದ್ದೇಶದಿಂದ ನಾವು ಪೈಲಟ್ ಅಭಿನಂದನ್‌ರನ್ನು ಬಿಡುಗಡೆ ಮಾಡುತ್ತೇವೆ ಎಂದು ಇಮ್ರಾನ್‌ಖಾನ್ ಹೇಳಿದಾಗ, ಇಡೀ ಸಂಸತ್ತು ಮೇಜುತಟ್ಟಿ ಅದನ್ನು ಅನುಮೋದಿಸುತ್ತದೆ.

ಫೆ.28ರಂದು ನಡೆದ ಪ್ರಧಾನಿ ಮೋದಿಯವರ ಚುನಾವಣಾ ಪ್ರಚಾರದ ಬಿಜೆಪಿ ಜಾಹೀರಾತು

ಅಭಿನಂದನ್‌ರ ಬಿಡುಗಡೆಯ ಸಂದೇಶ ಹೊರಬಂದ ಕೆಲ ಹೊತ್ತಿನಲ್ಲಿ ಪಂಜಾಬಿನ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಪ್ರಧಾನಿ ಮೋದಿಯವರಲ್ಲಿ ಒಂದು ಕೋರಿಕೆ ಮುಂದಿಡುತ್ತಾರೆ. ಅಭಿನಂದನ್ ದೇಶದೊಳಕ್ಕೆ ಬರುವುದು ವಾಘಾ ಗಡಿಯಿಂದ. ವಾಘಾ ಆ ಕಡೆಯ ಪಂಜಾಬ್‌ನಲ್ಲಿದ್ದರೆ, ಈ ಕಡೆಗೆ ಭಾರತದ ಪಂಜಾಬಿನ ಅಟ್ಟಾರಿ ಇದೆ. ಅಮೃತಸರ ಮತ್ತು ಲಾಹೋರ್ ನಡುವಿನ ದೂರ ಕೇವಲ 58 ಕಿ.ಮೀ. ತಾನು ಖುದ್ದಾಗಿ ಹೋಗಿ ಅಭಿನಂದನ್‌ರನ್ನು ಕರೆತರುತ್ತೇನೆ ಎಂದು ಅಮರಿಂದರ್ ಕೋರಿಕೆ.

ಇದಕ್ಕೆ ಕಾರಣವಿದೆ. ಅವರು ಕ್ಯಾಪ್ಟನ್ ಅಮರಿಂದರ್. ಸ್ವತಃ ಸೈನ್ಯದಲ್ಲಿ ಸೇವೆ ಸಲ್ಲಿಸಿದ್ದವರು. ಜೊತೆಗೆ ಈ ಸದ್ಯ ವಾಘಾ-ಅಟ್ಟಾರಿ ಬಾರ್ಡರ್ ಬರುವ ಪಂಜಾಬಿನ ಮುಖ್ಯಮಂತ್ರಿ. ಅಭಿನಂದನ್ ಮತ್ತು ಅವರ ತಂದೆಯು  ಶಿಕ್ಷಣ ಹಾಗೂ ತರಬೇತಿ ಪಡೆದುಕೊಂಡ ನ್ಯಾಷನಲ್ ಡಿಫೆನ್ಸ್ ಅಕ್ಯಾಡೆಮಿಯಲ್ಲೇ ಅಮರಿಂದರ್ ಸಿಂಗ್ ಸಹಾ ತರಬೇತಿ ಪಡೆದುಕೊಂಡಿದ್ದರು. ಜೊತೆಗೆ ಈ ಮನವಿ ಮಾಡಿಕೊಳ್ಳುವ ಹೊತ್ತಿನಲ್ಲಿ ಅಮರಿಂದರ್ ಸಿಂಗ್ ಅದೇ ಪ್ರದೇಶದಲ್ಲಿದ್ದರು. ಒಂದು ವೇಳೆ ಕ್ಯಾಪ್ಟನ್ ಅಮರಿಂದರ್ ಅವರು ವ್ಯಕ್ತಿಗತ ಇಮೇಜ್ ಹೆಚ್ಚಿಸಿಕೊಳ್ಳಲೆಂದೇ ಈ ಪ್ರಸ್ತಾಪ ಮುಂದಿಟ್ಟಿದ್ದಾರೆಂದುಕೊಳ್ಳಿ.

ಆದರೂ, ದೇಶದ ಪ್ರತಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ದೇಶದ ಪ್ರಧಾನಿಗೆ ಇದೊಂದು ಅವಕಾಶವಾಗಿತ್ತು. ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಮಾಜಿ ಸೈನಿಕರಾದ ಅಮರಿಂದರ್‌ರನ್ನು ಅದಕ್ಕೆ ಕಳಿಸುವುದಕ್ಕಿಂತ ಒಳ್ಳೆಯ ನಡೆ ಇನ್ನೇನಾಗಿರಲು ಸಾಧ್ಯವಿತ್ತು?

ಆದರೆ ಮೋದಿಯವರು ಅಂಥಾ ಪ್ರಬುದ್ಧ ನಡೆಯನ್ನು ತೋರಲೇ ಇಲ್ಲ. ನಮ್ಮದೇ ದೇಶದ ಪ್ರಧಾನಿ ಹುದ್ದೆಯನ್ನು ಹೀಗಳೆಯುವುದು ಯಾರಿಗೂ ಇಷ್ಟವಿಲ್ಲದ ಸಂಗತಿ, ಆದರೆ ಪುಲ್ವಾಮಾ ಘಟನೆಯ ತರುವಾಯ ಪಾಕಿಸ್ತಾನದ ಪ್ರಧಾನಿ ವ್ಯವಹರಿಸಿದ ರೀತಿಗೂ ನಮ್ಮ ಭಾರತದ ಪ್ರಧಾನಿಯಾಗಿ ಮೋದಿಯವರು ತೋರಿದ ರಾಜಕೀಯ ಪ್ರೇರಿತ ನಡವಳಿಕೆಗಳಿಗೂ ಹೋಲಿಕೆ ಮಾಡಿದರೆ ನಿಜಕ್ಕೂ ಭಾರತೀಯರು ವಿಷಾದಗೊಳ್ಳಬೇಕಾಗಿ ಬಂದಿದೆ.

ಫೆಬ್ರವರಿ 28ರಂದು ಗುಜರಾತಿನಲ್ಲಿ ಕಾಂಗ್ರೆಸ್ ಪಕ್ಷವು `ಕಾಂಗ್ರೆಸ್ ಕಾರ್ಯಕಾರಿ ಸಮಿತಿ’ (ಸಿಡ್ಬ್ಲುಸಿ) ಯ ಸಭೆ ಆಯೋಜಿಸಿತ್ತು. ಕಳೆದ ಆರು ದಶಕಗಳ (60 ವರ್ಷಗಳ) ನಂತರ ಈ ಅತಿದೊಡ್ಡ ಸಭೆ ನಡೆಸಲು ಕಾಂಗ್ರೆಸ್ ಯೋಜಿಸಿಕೊಂಡಿತ್ತು. ಜೊತೆಗೆ ಚುನಾವಣಾ ಪ್ರಚಾರಕ್ಕಾಗಿ `ಜನಸಂಕಲ್ಪ ಯಾತ್ರೆ’ಗೆ ಚಾಲನೆ ನೀಡುವುದೂ ಅದರ ಭಾಗವಾಗಿತ್ತು. ಆದರೆ ಭಾರತ ಮತ್ತು ಪಾಕಿಸ್ತಾನ ನಡುವೆ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾದ್ದರಿಂದ ದೇಶದ ಭದ್ರತೆಗೆ ಒತ್ತು ಕೊಟ್ಟು ಕಾಂಗ್ರೆಸ್ ಆ ಸಭೆಗಳನ್ನು ಮುಂದಕ್ಕೂಡಿತು.

ಆದರೆ ಪ್ರಧಾನಿಯಾಗಿ ಮೋದಿಯವರು ಪುಲ್ವಾಮಾ ಘಟನೆಯ ತರುವಾಯ ನಿರಂತರವಾಗಿ ಚುನಾವಣಾ ರ್ಯಾಲಿಗಳಲ್ಲಿ ಭಾಗವಹಿಸುತ್ತಿದ್ದಾರೆ. ಆ ಭಯೋತ್ಪಾದಕ ದಾಳಿ ನಡೆದ ಸುದ್ದಿ ನಡೆದ ಮೇಲೂ ಮೋದಿಯವರು ಜಿಮ್ ಕಾರ್ಬೆಟ್  ನ್ಯಾಶನಲ್ ಪಾರ್ಕಿನಲ್ಲಿ ಜಾಹಿರಾತೊಂದರ ಶೂಟಿಂಗ್ ಮುಂದುವರೆಸಿದರು ಎಂಬ ಆಪಾದನೆ ಸುಳ್ಳೋ ನಿಜವೋ ಎಂದು ಇತ್ಯರ್ಥಗೊಳ್ಳುವ ಮೊದಲೇ ಅವರು ಝಾಂಸಿಯೂ ಒಳಗೊಂಡಂತೆ ಬೇರೆಬೇರೆ ಕಡೆ ಪಕ್ಷದ ಪರವಾಗಿ ಚುನಾವಣಾ ರ್ಯಾಲಿಗಳಲ್ಲಿ ಭಾಗವಹಿಸಿ ದೇಶದ ಭದ್ರತೆಗೆ ಸಂಬಂಧಿಸಿದ ವಿಚಾರವನ್ನು ರಾಜಕೀಯ ವೇದಿಕೆಯಲ್ಲಿ ಸರಕಾಗಿಸಿಕೊಂಡು ಮಾತನಾಡಿದರು. ಯಾವ ಆತಂಕವೂ ಇಲ್ಲದಂತೆ `ಖೇಲೊ ಇಂಡಿಯಾ’ ಆಪ್ ಬಿಡುಗಡೆ ಮಾಡಿದರು.

ಫೆಬ್ರವರಿ 28ರಂದು ವಿಶ್ವದ ಅತಿದೊಡ್ಡ ವೀಡಿಯೋ ಕಾನ್ಫರೆನ್ಸ್ ಮೂಲಕ `ಮೇರಾ ಬೂತ್ ಸಬ್ ಸೇ ಮಜಬೂತ್’ ಎಂಬ ಕಾರ್ಯಕ್ರಮದಲ್ಲಿ ಭಾಗಿಯಾಗಿ ಚುನಾವಣಾ ಪ್ರಚಾರ ಮಾಡಿದರು. ದೇಶದ ರಾಜಕಾರಣಿಗಳಲ್ಲೆ ಅತಿಹೆಚ್ಚು ಸೋಶಿಯಲ್ ಮೀಡಿಯಾ ಬಳಸುವ, ಫಾಲೋವರ್ ಗಳನ್ನು ಹೊಂದಿರುವ ರಾಜಕಾರಣಿ ಅಂದ್ರೆ ಮೋದಿಯವರು. ಟ್ವೀಟ್ಟರ್ ನಲ್ಲಿ ನಾಲ್ಕೂವರೆ ಕೋಟಿಗೂ ಹೆಚ್ಚು ಫಾಲೋವರ್.ಗಳನ್ನು ಹೊಂದಿದ್ದಾರೆ. ಆದರೆ ಪುಲ್ವಾಮಾ ಘಟನೆಯ ನಂತರ ಟ್ವಿಟ್ಟರ್ ನಲ್ಲೂ ಅವರು ಬಿಜೆಪಿ ರಾಜಕೀಯ ಪ್ರಚಾರಗಳನ್ನು ಹೆಚ್ಚಾಗಿ ಟ್ವೀಟ್ ಮಾಡಿದ್ದಾರೆಯೇ ವಿನಾಃ ಆತಂಕದ ಸ್ಥಿತಿಯಲ್ಲಿ ದೇಶಕ್ಕೆ ಅಗತ್ಯವಿರುವ ನಾಯಕತ್ವದ ಮಾತುಗಳು ಅವರಿಂದ ಟ್ಟೀಟುಗೊಂಡಿಲ್ಲ.

ಸಂದಿಗ್ಧ ಪರಿಸ್ಥಿತಿಯನ್ನು ಎದುರಿಸುವುದಕ್ಕೆಂದೇ ವಿಶೇಷ ಅಧಿವೇಶನ ಕರೆದು ವಿರೋಧ ಪಕ್ಷಗಳನ್ನೂ ಸಹಮತಕ್ಕೆ ತೆಗೆದುಕೊಂಡು ಸಮತೂಕದ ಮಾತುಗಳನ್ನಾಡುವ ಇಮ್ರಾನ್ ಖಾನ್ ಜಿನೆವಾ ಒಪ್ಪಂದವನ್ನು ಗೌರವಿಸಿ ತನ್ನ ವಶದಲ್ಲಿದ್ದ ಭಾರತದ ಕಮಾಂಡರ್ ಅಬಿನಂದನ್ ಬಿಡುಗಡೆಯನ್ನು ಸಂಸತ್ತಿನಲ್ಲೇ ಘೋಷಿಸುವಾಗ ಒಂದು ಆಶಯವಂತೂ ಭಾರತದ ಶಾಂತಿಪ್ರಿಯತೆ ಮತ್ತು ಸೌಹಾರ್ದತೆಯನ್ನು ಗೌರವಿಸುವ ನಿಜವಾದ ದೇಶಪ್ರೇಮಿಗಳಲ್ಲ ಮನಸಿನಲ್ಲಿ ಪುಟಿದೇಳುತ್ತಿರುತ್ತದೆ.  ಅದು, ಮೋದಿಯವರ ಕಾಲದಲ್ಲಿ ಭಾರತ ಪಾಕಿಸ್ತಾನದಂತಾಗದಿರಲಿ, ದೇಶದ ಪ್ರಜಾಪ್ರಭುತ್ವ ಗಟ್ಟಿಗೊಳ್ಳಲಿ ಎಂಬುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

5% ಮುಸ್ಲಿಂ ಮೀಸಲಾತಿ ಪ್ರಕ್ರಿಯೆ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರ

ರಾಜ್ಯದಲ್ಲಿ ಮುಸ್ಲಿಂ ಮೀಸಲಾತಿಗಾಗಿ ಜಾತಿ ಪರಿಶೀಲನೆ ಮತ್ತು ಪ್ರಮಾಣೀಕರಣ ಪತ್ರಗಳನ್ನು ನೀಡುವ ಪ್ರಕ್ರಿಯೆಯನ್ನು ಮಹಾರಾಷ್ಟ್ರ ಸರ್ಕಾರ ಮಂಗಳವಾರ (ಫೆ.17) ರದ್ದುಗೊಳಿಸಿ ಆದೇಶ ಹೊರಡಿಸಿದೆ. ಇದು ಪ್ರಸ್ತುತ ಪರಿಸ್ಥಿತಿಯಲ್ಲಿ ಯಾವುದೇ ತಕ್ಷಣದ ಬದಲಾವಣೆಯನ್ನು ತರದಿದ್ದರೂ,...

‘ಆರ್‌ಎಸ್‌ಎಸ್ ನೋಂದಣಿಗೆ ಕಾಂಗ್ರೆಸ್ ಕಾನೂನು ತರಲಿದೆ’: ತಮ್ಮ ಹೇಳಿಕೆಗಳನ್ನು ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಮಂಗಳವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಕುರಿತ ತಮ್ಮ ಹೇಳಿಕೆಗಳನ್ನು ಮತ್ತು ಕರಾವಳಿ ಕರ್ನಾಟಕದ ಹೂಡಿಕೆಗಳ ಮೇಲೆ ಕೋಮು ಉದ್ವಿಗ್ನತೆ ಪರಿಣಾಮ...

ವಿನೋದ್ ಅದಾನಿ ಸಹಚರರ ವಿರುದ್ಧ ತನಿಖೆ ನಡೆಸಿದ ಇಟಾಲಿಯನ್ ಬ್ಯಾಂಕ್; ಅನುಮಾನಾಸ್ಪದ ‘ಹೆಡ್ಜ್ ಫಂಡ್’ ಹೂಡಿಕೆ ಪತ್ತೆ

ಜನವರಿ 2023 ರಲ್ಲಿ ಹಿಂಡೆನ್‌ಬರ್ಗ್‌ ರಿಸರ್ಚ್ ವರದಿಯ ಬೆನ್ನಲ್ಲೇ, ಇಟಲಿಯ ಅತಿದೊಡ್ಡ ಬ್ಯಾಂಕ್ 'ಇಂಟೆಸಾ ಸ್ಯಾನ್ಪೋಲೊ' ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಅವರ ಸಹೋದರ ವಿನೋದ್ ಅದಾನಿ ಅವರ ಇಬ್ಬರು ಸಹಚರರನ್ನು...

‘ಸ್ತನ ಹಿಡಿಯುವುದು, ಪೈಜಾಮದ ಲಾಡಿ ಬಿಚ್ಚುವುದು ಅತ್ಯಾಚಾರ ಯತ್ನವಲ್ಲ’ ಎಂಬ ಅಲಹಾಬಾದ್ ಹೈಕೋರ್ಟ್ ತೀರ್ಪು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

"ಹೆಣ್ಣು ಮಕ್ಕಳ ಸ್ತನ ಹಿಡಿಯುವುದು, ಪೈಜಾಮದ ಲಾಡಿ ಬಿಚ್ಚುವುದು, ಅವರನ್ನು ಚರಂಡಿ ಕಡೆಗೆ ಅಥವಾ ಮೋರಿಯ ಅಡಿಗೆ ಎಳೆಯುವುದು 'ಅತ್ಯಾಚಾರ ಅಥವಾ ಅತ್ಯಾಚಾರ ಯತ್ನವಲ್ಲ" ಎಂಬ ಅಲಹಾಬಾದ್‌ ಹೈಕೋರ್ಟ್‌ನ ವಿವಾದಾತ್ಮಕ ತೀರ್ಪಿನ್ನು ಸುಪ್ರೀಂ...

‘ದೇವರಿಗೆ ಧನ್ಯವಾದಗಳು, ದಕ್ಷಿಣ ಇನ್ನೂ ಸ್ವತಂತ್ರವಾಗಿದೆ, ನಾವು ನಿಮ್ಮಿಂದ ಶಕ್ತಿ ಪಡೆಯುತ್ತೇವೆ’: ಕೇರಳ ಸಮ್ಮೇಳನದಲ್ಲಿ ಫಾರೂಕ್ ಅಬ್ದುಲ್ಲಾ ಭಾವುಕ ಮಾತು

"ದೇವರಿಗೆ ಧನ್ಯವಾದಗಳು, ದಕ್ಷಿಣ ಇನ್ನೂ ಸ್ವತಂತ್ರವಾಗಿದೆ, ಮತ್ತು ಅದು ಸ್ವತಂತ್ರವಾಗಿಯೇ ಉಳಿದಿದೆ ಮತ್ತು ಅಭಿವೃದ್ಧಿ ಹೊಂದುತ್ತದೆ ಮತ್ತು ಬಲಗೊಳ್ಳುತ್ತದೆ ಎಂದು ನಾನು ಭಾವಿಸುತ್ತೇನೆ. ನಾವು ನಿಮ್ಮಿಂದ ಶಕ್ತಿಯನ್ನು ಪಡೆಯುತ್ತೇವೆ. ನಾವು ನಿಮ್ಮನ್ನು ನೋಡುತ್ತೇವೆ...

ದತ್ತಾಂಶ ಸಂರಕ್ಷಣಾ ಕಾನೂನಿನಡಿಯಲ್ಲಿ ಆರ್‌ಟಿಐ ತಿದ್ದುಪಡಿಗೆ ತಡೆ ನೀಡಲು ನಿರಾಕರಿಸಿದ ಸುಪ್ರೀಂ ಕೋರ್ಟ್

ಡಿಜಿಟಲ್ ವೈಯಕ್ತಿಕ ದತ್ತಾಂಶ ಸಂರಕ್ಷಣಾ ಕಾಯ್ದೆಯ ಮೂಲಕ ಪರಿಚಯಿಸಲಾದ ಮಾಹಿತಿ ಹಕ್ಕು ಕಾಯ್ದೆಗೆ ತಿದ್ದುಪಡಿಯನ್ನು ತಡೆಹಿಡಿಯಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ ಎಂದು 'ಬಾರ್ ಮತ್ತು ಬೆಂಚ್' ವರದಿ ಮಾಡಿದೆ. ಸಾರ್ವಜನಿಕ ಹಿತಾಸಕ್ತಿಯ ಆಧಾರದ...

ಅಜಿತ್ ಪವಾರ್ ಸಾವು : ಎರಡೂ ಫ್ಲೈಟ್ ರೆಕಾರ್ಡರ್‌ಗಳು ಹಾನಿಗೊಳಗಾಗಿವೆ ಎಂದ ವಿಮಾನಯಾನ ಸಚಿವಾಲಯ

ಬಾರಾಮತಿಯಲ್ಲಿ ಜನವರಿ 28 ರಂದು ಅಜಿತ್ ಪವಾರ್ ಅವರನ್ನು ಹೊತ್ತೊಯ್ಯುತ್ತಿದ್ದ ವಿಮಾನ ಅಪಘಾತಕ್ಕೀಡಾದ ಬಗ್ಗೆ ನಾಗರಿಕ ವಿಮಾನಯಾನ ಸಚಿವಾಲಯವು ಮಂಗಳವಾರ (ಫೆ.17) ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, ವಿಮಾನದ ಎರಡೂ ಸ್ವತಂತ್ರ ಫ್ಲೈಟ್...

ರಾಜಸ್ಥಾನ| ಮೊದಲ ಬಜೆಟ್‌ನಲ್ಲಿ ಪಕ್ಷವು ‘ಗಂಡು ಮಗುವಿಗೆ ಜನ್ಮ ನೀಡಿದೆ’ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ಶಾಸಕ

ರಾಜಸ್ಥಾನದ ಬಿಜೆಪಿ ಶಾಸಕ ಬಹದ್ದೂರ್ ಸಿಂಗ್ ಕೋಲಿ, ತಮ್ಮ ಪಕ್ಷ ಮತ್ತು ಕಾಂಗ್ರೆಸ್ ಮಂಡಿಸಿದ ಬಜೆಟ್‌ಗಳನ್ನು ಗಂಡು ಮತ್ತು ಹೆಣ್ಣು ಮಗುವಿನ ಜನನಕ್ಕೆ ಹೋಲಿಸಿದ ಬಳಿಕ ವಿಧಾನಸಭೆಯಲ್ಲಿ ವಿವಾದ ಭುಗಿಲೆದ್ದಿತು. ರಾಜ್ಯ ಬಜೆಟ್ ಮೇಲಿನ...

ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ತಾರಿಖ್ ರೆಹಮಾನ್ ಪ್ರಮಾಣವಚನ ಸ್ವೀಕಾರ

ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ಬಾಂಗ್ಲಾದೇಶ್ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್‌ಪಿ) ನಾಯಕ ತಾರಿಖ್ ರೆಹಮಾನ್ ಅವರು ಮಂಗಳವಾರ (ಫೆ.17) ಪ್ರಮಾಣ ವಚನ ಸ್ವೀಕರಿಸಿದರು. ಪದಗ್ರಹಣ ಕಾರ್ಯಕ್ರಮವು ಸಂಪ್ರದಾಯದಂತೆ ಅಧ್ಯಕ್ಷೀಯ ಅರಮನೆಯಲ್ಲಿ ನಡೆಯುವ ಬದಲು, ಢಾಕಾದ ರಾಷ್ಟ್ರೀಯ...

ಮಹಾರಾಷ್ಟ್ರ| ಪರೀಕ್ಷೆಯ ಸಮಯದಲ್ಲಿ ಸಾಮೂಹಿಕ ನಕಲಿಗೆ ಬೆಂಬಲಿಸಿದ 5 ಜನ ಶಿಕ್ಷಕರ ಅಮಾನತು

ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಕೇಂದ್ರವೊಂದರಲ್ಲಿ ನಡೆದ 12 ನೇ ತರಗತಿಯ ಹೆಚ್‌ಎಸ್‌ಸಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಯ ಸಮಯದಲ್ಲಿ ದೊಡ್ಡ ಪ್ರಮಾಣದಲ್ಲಿ ನಕಲು ಮಾಡಲು ಅನುಕೂಲ ಮಾಡಿಕೊಟ್ಟ ಆರೋಪದ ಮೇಲೆ ಸಿಕ್ಕಿಬಿದ್ದ ಐದು ಶಿಕ್ಷಕರನ್ನು...