Homeಮುಖಪುಟನಮ್ಮ ಪ್ರಜಾಪ್ರಭುತ್ವ ಪಾಕಿಸ್ತಾನಕ್ಕಿಂತ ದುರ್ಬಲವಾಗಬಾರದು: ಒಂದು ಆಶಯ

ನಮ್ಮ ಪ್ರಜಾಪ್ರಭುತ್ವ ಪಾಕಿಸ್ತಾನಕ್ಕಿಂತ ದುರ್ಬಲವಾಗಬಾರದು: ಒಂದು ಆಶಯ

- Advertisement -
- Advertisement -

ನೀಲಗಾರ |

ಕೆಲವು ವರ್ಷಗಳ ಕೆಳಗೆ ಪಾಕಿಸ್ತಾನದ ಕವಿಯೊಬ್ಬರು ನಮ್ಮ ದೇಶದಂತೆ ನೀವಾಗಬೇಡಿ ಎಂದು ಭಾರತವನ್ನು ಉದ್ದೇಶಿಸಿ ಬಹಳ ನೋವಿನಿಂದ ಕೂಡಿದ ಕವಿತೆಯೊಂದನ್ನು ಬರೆದಿದ್ದರು.

ನಮ್ಮದೇ ಸೋದರಿ ದೇಶ, ಇಂದಲ್ಲಾ ನಾಳೆ ಒಂದೇ ಆಗಬೇಕಿರುವ ನೆರೆಯ ದೇಶವು ಅತ್ಯಂತ ಅರಾಜಕವಾದ ಪರಿಸ್ಥಿತಿಯಲ್ಲಿರುವುದು ನಮಗೆಲ್ಲರಿಗೂ ಗೊತ್ತು. ಸೈನ್ಯ, ಇಂಟೆಲಿಜೆನ್ಸ್ ಸಂಸ್ಥೆ, ಮತೀಯವಾದಿಗಳು, ಅಮೆರಿಕಾ ಮತ್ತು ಭ್ರಷ್ಟ ರಾಜಕಾರಣಿಗಳು ಇವೆಲ್ಲದರ ಮಧ್ಯೆ ನಲುಗುತ್ತಿರುವ ಜನಸಾಮಾನ್ಯರು  ಇದೇ ಪಾಕಿಸ್ತಾನ. ಹಾಗಾಗಿಯೇ ಭಯೋತ್ಪಾದಕರನ್ನೂ ಮಟ್ಟ ಹಾಕಲಾಗದ ದುಸ್ಥಿತಿ. ಬಹುಶಃ ಇದೇ ಆ ಕವಿಯ ಮನದಾಳದಲ್ಲಿದ್ದದ್ದು.

ಆದರೆ, ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ಬೆಳವಣಿಗೆಗಳು ದುಃಖಕರವಾಗಿದೆ. ನಮ್ಮ ದೇಶದ ಸಿಆರ್‌ಪಿಎಫ್ ಮೇಲೆ ಭಯೋತ್ಪಾದಕ ದಾಳಿ ನಡೆದು ಸುಮಾರು 40ಕ್ಕೂ ಹೆಚ್ಚು ಯೋಧರು ಸಾವಿಗೀಡಾಗುತ್ತಾರೆ. ಆ ಸಂದರ್ಭದಲ್ಲಿ ಕೇಂದ್ರ ಸರ್ಕಾರವು ಸರ್ವಪಕ್ಷ ಸಭೆ ಕರೆಯುತ್ತದೆ – ಪ್ರಧಾನಮಂತ್ರಿಯೇ ಅದರಲ್ಲಿ ಪಾಲ್ಗೊಳ್ಳದೇ ಪಕ್ಷದ ಪರ ಪ್ರಚಾರ ಮಾಡಲು ಹೋಗುತ್ತಾರೆ.

ಆ ನಂತರ ಭಾರತದ ವಾಯುಪಡೆಯು ಪಾಕಿಸ್ತಾನದ ಮೇಲೆ ದಾಳಿ ನಡೆಸುತ್ತದೆ. ಉದ್ವಿಗ್ನ ವಾತಾವರಣ ಹೆಚ್ಚಾಗುತ್ತಾ ಹೋಗುತ್ತದೆ. ಇನ್ನೊಂದು ಸರ್ವಪಕ್ಷ ಸಭೆ ನಡೆಯುತ್ತದೆ. ಆಗಲೂ ಪ್ರಧಾನಿ ಗೈರುಹಾಜರು. ಅವರು ಪ್ರತಿನಿತ್ಯ ಚುನಾವಣೆಯ ಸಿದ್ಧತೆಯಲ್ಲೇ ಹೆಚ್ಚು ತೊಡಗಿರುವುದು ಕಂಡು ಬರುತ್ತದೆ.

ಇದೇ ಅವಧಿಯಲ್ಲಿ ಪಾಕಿಸ್ತಾನದ ಇಮ್ರಾನ್‌ಖಾನ್ ಅವರು ಮಾಡಿದ ಭಾಷಣವೊಂದು ಎಲ್ಲೆಡೆ ಚರ್ಚೆಯಲ್ಲಿದೆ. ಆ ಭಾಷಣ ಮಾಡಿದ್ದು ಎಲ್ಲಿ ಗೊತ್ತೇ? ಸಂಸತ್ತಿನಲ್ಲಿ. ಅದೂ ಸಹಾ, ಈ ಸನ್ನಿವೇಶದಲ್ಲಿ ದೇಶದ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲೆಂದೇ ಕರೆದ ವಿಶೇಷ ಅಧಿವೇಶನ. ಅಲ್ಲಿಯೇ ಭಾರತದ ಜೊತೆಗೆ ಶಾಂತಿ ಹಸ್ತವನ್ನು ಚಾಚುವ ಉದ್ದೇಶದಿಂದ ನಾವು ಪೈಲಟ್ ಅಭಿನಂದನ್‌ರನ್ನು ಬಿಡುಗಡೆ ಮಾಡುತ್ತೇವೆ ಎಂದು ಇಮ್ರಾನ್‌ಖಾನ್ ಹೇಳಿದಾಗ, ಇಡೀ ಸಂಸತ್ತು ಮೇಜುತಟ್ಟಿ ಅದನ್ನು ಅನುಮೋದಿಸುತ್ತದೆ.

ಫೆ.28ರಂದು ನಡೆದ ಪ್ರಧಾನಿ ಮೋದಿಯವರ ಚುನಾವಣಾ ಪ್ರಚಾರದ ಬಿಜೆಪಿ ಜಾಹೀರಾತು

ಅಭಿನಂದನ್‌ರ ಬಿಡುಗಡೆಯ ಸಂದೇಶ ಹೊರಬಂದ ಕೆಲ ಹೊತ್ತಿನಲ್ಲಿ ಪಂಜಾಬಿನ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಪ್ರಧಾನಿ ಮೋದಿಯವರಲ್ಲಿ ಒಂದು ಕೋರಿಕೆ ಮುಂದಿಡುತ್ತಾರೆ. ಅಭಿನಂದನ್ ದೇಶದೊಳಕ್ಕೆ ಬರುವುದು ವಾಘಾ ಗಡಿಯಿಂದ. ವಾಘಾ ಆ ಕಡೆಯ ಪಂಜಾಬ್‌ನಲ್ಲಿದ್ದರೆ, ಈ ಕಡೆಗೆ ಭಾರತದ ಪಂಜಾಬಿನ ಅಟ್ಟಾರಿ ಇದೆ. ಅಮೃತಸರ ಮತ್ತು ಲಾಹೋರ್ ನಡುವಿನ ದೂರ ಕೇವಲ 58 ಕಿ.ಮೀ. ತಾನು ಖುದ್ದಾಗಿ ಹೋಗಿ ಅಭಿನಂದನ್‌ರನ್ನು ಕರೆತರುತ್ತೇನೆ ಎಂದು ಅಮರಿಂದರ್ ಕೋರಿಕೆ.

ಇದಕ್ಕೆ ಕಾರಣವಿದೆ. ಅವರು ಕ್ಯಾಪ್ಟನ್ ಅಮರಿಂದರ್. ಸ್ವತಃ ಸೈನ್ಯದಲ್ಲಿ ಸೇವೆ ಸಲ್ಲಿಸಿದ್ದವರು. ಜೊತೆಗೆ ಈ ಸದ್ಯ ವಾಘಾ-ಅಟ್ಟಾರಿ ಬಾರ್ಡರ್ ಬರುವ ಪಂಜಾಬಿನ ಮುಖ್ಯಮಂತ್ರಿ. ಅಭಿನಂದನ್ ಮತ್ತು ಅವರ ತಂದೆಯು  ಶಿಕ್ಷಣ ಹಾಗೂ ತರಬೇತಿ ಪಡೆದುಕೊಂಡ ನ್ಯಾಷನಲ್ ಡಿಫೆನ್ಸ್ ಅಕ್ಯಾಡೆಮಿಯಲ್ಲೇ ಅಮರಿಂದರ್ ಸಿಂಗ್ ಸಹಾ ತರಬೇತಿ ಪಡೆದುಕೊಂಡಿದ್ದರು. ಜೊತೆಗೆ ಈ ಮನವಿ ಮಾಡಿಕೊಳ್ಳುವ ಹೊತ್ತಿನಲ್ಲಿ ಅಮರಿಂದರ್ ಸಿಂಗ್ ಅದೇ ಪ್ರದೇಶದಲ್ಲಿದ್ದರು. ಒಂದು ವೇಳೆ ಕ್ಯಾಪ್ಟನ್ ಅಮರಿಂದರ್ ಅವರು ವ್ಯಕ್ತಿಗತ ಇಮೇಜ್ ಹೆಚ್ಚಿಸಿಕೊಳ್ಳಲೆಂದೇ ಈ ಪ್ರಸ್ತಾಪ ಮುಂದಿಟ್ಟಿದ್ದಾರೆಂದುಕೊಳ್ಳಿ.

ಆದರೂ, ದೇಶದ ಪ್ರತಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ದೇಶದ ಪ್ರಧಾನಿಗೆ ಇದೊಂದು ಅವಕಾಶವಾಗಿತ್ತು. ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಮಾಜಿ ಸೈನಿಕರಾದ ಅಮರಿಂದರ್‌ರನ್ನು ಅದಕ್ಕೆ ಕಳಿಸುವುದಕ್ಕಿಂತ ಒಳ್ಳೆಯ ನಡೆ ಇನ್ನೇನಾಗಿರಲು ಸಾಧ್ಯವಿತ್ತು?

ಆದರೆ ಮೋದಿಯವರು ಅಂಥಾ ಪ್ರಬುದ್ಧ ನಡೆಯನ್ನು ತೋರಲೇ ಇಲ್ಲ. ನಮ್ಮದೇ ದೇಶದ ಪ್ರಧಾನಿ ಹುದ್ದೆಯನ್ನು ಹೀಗಳೆಯುವುದು ಯಾರಿಗೂ ಇಷ್ಟವಿಲ್ಲದ ಸಂಗತಿ, ಆದರೆ ಪುಲ್ವಾಮಾ ಘಟನೆಯ ತರುವಾಯ ಪಾಕಿಸ್ತಾನದ ಪ್ರಧಾನಿ ವ್ಯವಹರಿಸಿದ ರೀತಿಗೂ ನಮ್ಮ ಭಾರತದ ಪ್ರಧಾನಿಯಾಗಿ ಮೋದಿಯವರು ತೋರಿದ ರಾಜಕೀಯ ಪ್ರೇರಿತ ನಡವಳಿಕೆಗಳಿಗೂ ಹೋಲಿಕೆ ಮಾಡಿದರೆ ನಿಜಕ್ಕೂ ಭಾರತೀಯರು ವಿಷಾದಗೊಳ್ಳಬೇಕಾಗಿ ಬಂದಿದೆ.

ಫೆಬ್ರವರಿ 28ರಂದು ಗುಜರಾತಿನಲ್ಲಿ ಕಾಂಗ್ರೆಸ್ ಪಕ್ಷವು `ಕಾಂಗ್ರೆಸ್ ಕಾರ್ಯಕಾರಿ ಸಮಿತಿ’ (ಸಿಡ್ಬ್ಲುಸಿ) ಯ ಸಭೆ ಆಯೋಜಿಸಿತ್ತು. ಕಳೆದ ಆರು ದಶಕಗಳ (60 ವರ್ಷಗಳ) ನಂತರ ಈ ಅತಿದೊಡ್ಡ ಸಭೆ ನಡೆಸಲು ಕಾಂಗ್ರೆಸ್ ಯೋಜಿಸಿಕೊಂಡಿತ್ತು. ಜೊತೆಗೆ ಚುನಾವಣಾ ಪ್ರಚಾರಕ್ಕಾಗಿ `ಜನಸಂಕಲ್ಪ ಯಾತ್ರೆ’ಗೆ ಚಾಲನೆ ನೀಡುವುದೂ ಅದರ ಭಾಗವಾಗಿತ್ತು. ಆದರೆ ಭಾರತ ಮತ್ತು ಪಾಕಿಸ್ತಾನ ನಡುವೆ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾದ್ದರಿಂದ ದೇಶದ ಭದ್ರತೆಗೆ ಒತ್ತು ಕೊಟ್ಟು ಕಾಂಗ್ರೆಸ್ ಆ ಸಭೆಗಳನ್ನು ಮುಂದಕ್ಕೂಡಿತು.

ಆದರೆ ಪ್ರಧಾನಿಯಾಗಿ ಮೋದಿಯವರು ಪುಲ್ವಾಮಾ ಘಟನೆಯ ತರುವಾಯ ನಿರಂತರವಾಗಿ ಚುನಾವಣಾ ರ್ಯಾಲಿಗಳಲ್ಲಿ ಭಾಗವಹಿಸುತ್ತಿದ್ದಾರೆ. ಆ ಭಯೋತ್ಪಾದಕ ದಾಳಿ ನಡೆದ ಸುದ್ದಿ ನಡೆದ ಮೇಲೂ ಮೋದಿಯವರು ಜಿಮ್ ಕಾರ್ಬೆಟ್  ನ್ಯಾಶನಲ್ ಪಾರ್ಕಿನಲ್ಲಿ ಜಾಹಿರಾತೊಂದರ ಶೂಟಿಂಗ್ ಮುಂದುವರೆಸಿದರು ಎಂಬ ಆಪಾದನೆ ಸುಳ್ಳೋ ನಿಜವೋ ಎಂದು ಇತ್ಯರ್ಥಗೊಳ್ಳುವ ಮೊದಲೇ ಅವರು ಝಾಂಸಿಯೂ ಒಳಗೊಂಡಂತೆ ಬೇರೆಬೇರೆ ಕಡೆ ಪಕ್ಷದ ಪರವಾಗಿ ಚುನಾವಣಾ ರ್ಯಾಲಿಗಳಲ್ಲಿ ಭಾಗವಹಿಸಿ ದೇಶದ ಭದ್ರತೆಗೆ ಸಂಬಂಧಿಸಿದ ವಿಚಾರವನ್ನು ರಾಜಕೀಯ ವೇದಿಕೆಯಲ್ಲಿ ಸರಕಾಗಿಸಿಕೊಂಡು ಮಾತನಾಡಿದರು. ಯಾವ ಆತಂಕವೂ ಇಲ್ಲದಂತೆ `ಖೇಲೊ ಇಂಡಿಯಾ’ ಆಪ್ ಬಿಡುಗಡೆ ಮಾಡಿದರು.

ಫೆಬ್ರವರಿ 28ರಂದು ವಿಶ್ವದ ಅತಿದೊಡ್ಡ ವೀಡಿಯೋ ಕಾನ್ಫರೆನ್ಸ್ ಮೂಲಕ `ಮೇರಾ ಬೂತ್ ಸಬ್ ಸೇ ಮಜಬೂತ್’ ಎಂಬ ಕಾರ್ಯಕ್ರಮದಲ್ಲಿ ಭಾಗಿಯಾಗಿ ಚುನಾವಣಾ ಪ್ರಚಾರ ಮಾಡಿದರು. ದೇಶದ ರಾಜಕಾರಣಿಗಳಲ್ಲೆ ಅತಿಹೆಚ್ಚು ಸೋಶಿಯಲ್ ಮೀಡಿಯಾ ಬಳಸುವ, ಫಾಲೋವರ್ ಗಳನ್ನು ಹೊಂದಿರುವ ರಾಜಕಾರಣಿ ಅಂದ್ರೆ ಮೋದಿಯವರು. ಟ್ವೀಟ್ಟರ್ ನಲ್ಲಿ ನಾಲ್ಕೂವರೆ ಕೋಟಿಗೂ ಹೆಚ್ಚು ಫಾಲೋವರ್.ಗಳನ್ನು ಹೊಂದಿದ್ದಾರೆ. ಆದರೆ ಪುಲ್ವಾಮಾ ಘಟನೆಯ ನಂತರ ಟ್ವಿಟ್ಟರ್ ನಲ್ಲೂ ಅವರು ಬಿಜೆಪಿ ರಾಜಕೀಯ ಪ್ರಚಾರಗಳನ್ನು ಹೆಚ್ಚಾಗಿ ಟ್ವೀಟ್ ಮಾಡಿದ್ದಾರೆಯೇ ವಿನಾಃ ಆತಂಕದ ಸ್ಥಿತಿಯಲ್ಲಿ ದೇಶಕ್ಕೆ ಅಗತ್ಯವಿರುವ ನಾಯಕತ್ವದ ಮಾತುಗಳು ಅವರಿಂದ ಟ್ಟೀಟುಗೊಂಡಿಲ್ಲ.

ಸಂದಿಗ್ಧ ಪರಿಸ್ಥಿತಿಯನ್ನು ಎದುರಿಸುವುದಕ್ಕೆಂದೇ ವಿಶೇಷ ಅಧಿವೇಶನ ಕರೆದು ವಿರೋಧ ಪಕ್ಷಗಳನ್ನೂ ಸಹಮತಕ್ಕೆ ತೆಗೆದುಕೊಂಡು ಸಮತೂಕದ ಮಾತುಗಳನ್ನಾಡುವ ಇಮ್ರಾನ್ ಖಾನ್ ಜಿನೆವಾ ಒಪ್ಪಂದವನ್ನು ಗೌರವಿಸಿ ತನ್ನ ವಶದಲ್ಲಿದ್ದ ಭಾರತದ ಕಮಾಂಡರ್ ಅಬಿನಂದನ್ ಬಿಡುಗಡೆಯನ್ನು ಸಂಸತ್ತಿನಲ್ಲೇ ಘೋಷಿಸುವಾಗ ಒಂದು ಆಶಯವಂತೂ ಭಾರತದ ಶಾಂತಿಪ್ರಿಯತೆ ಮತ್ತು ಸೌಹಾರ್ದತೆಯನ್ನು ಗೌರವಿಸುವ ನಿಜವಾದ ದೇಶಪ್ರೇಮಿಗಳಲ್ಲ ಮನಸಿನಲ್ಲಿ ಪುಟಿದೇಳುತ್ತಿರುತ್ತದೆ.  ಅದು, ಮೋದಿಯವರ ಕಾಲದಲ್ಲಿ ಭಾರತ ಪಾಕಿಸ್ತಾನದಂತಾಗದಿರಲಿ, ದೇಶದ ಪ್ರಜಾಪ್ರಭುತ್ವ ಗಟ್ಟಿಗೊಳ್ಳಲಿ ಎಂಬುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...