Homeಮುಖಪುಟನಮ್ಮ ಪ್ರಜಾಪ್ರಭುತ್ವ ಪಾಕಿಸ್ತಾನಕ್ಕಿಂತ ದುರ್ಬಲವಾಗಬಾರದು: ಒಂದು ಆಶಯ

ನಮ್ಮ ಪ್ರಜಾಪ್ರಭುತ್ವ ಪಾಕಿಸ್ತಾನಕ್ಕಿಂತ ದುರ್ಬಲವಾಗಬಾರದು: ಒಂದು ಆಶಯ

- Advertisement -
- Advertisement -

ನೀಲಗಾರ |

ಕೆಲವು ವರ್ಷಗಳ ಕೆಳಗೆ ಪಾಕಿಸ್ತಾನದ ಕವಿಯೊಬ್ಬರು ನಮ್ಮ ದೇಶದಂತೆ ನೀವಾಗಬೇಡಿ ಎಂದು ಭಾರತವನ್ನು ಉದ್ದೇಶಿಸಿ ಬಹಳ ನೋವಿನಿಂದ ಕೂಡಿದ ಕವಿತೆಯೊಂದನ್ನು ಬರೆದಿದ್ದರು.

ನಮ್ಮದೇ ಸೋದರಿ ದೇಶ, ಇಂದಲ್ಲಾ ನಾಳೆ ಒಂದೇ ಆಗಬೇಕಿರುವ ನೆರೆಯ ದೇಶವು ಅತ್ಯಂತ ಅರಾಜಕವಾದ ಪರಿಸ್ಥಿತಿಯಲ್ಲಿರುವುದು ನಮಗೆಲ್ಲರಿಗೂ ಗೊತ್ತು. ಸೈನ್ಯ, ಇಂಟೆಲಿಜೆನ್ಸ್ ಸಂಸ್ಥೆ, ಮತೀಯವಾದಿಗಳು, ಅಮೆರಿಕಾ ಮತ್ತು ಭ್ರಷ್ಟ ರಾಜಕಾರಣಿಗಳು ಇವೆಲ್ಲದರ ಮಧ್ಯೆ ನಲುಗುತ್ತಿರುವ ಜನಸಾಮಾನ್ಯರು  ಇದೇ ಪಾಕಿಸ್ತಾನ. ಹಾಗಾಗಿಯೇ ಭಯೋತ್ಪಾದಕರನ್ನೂ ಮಟ್ಟ ಹಾಕಲಾಗದ ದುಸ್ಥಿತಿ. ಬಹುಶಃ ಇದೇ ಆ ಕವಿಯ ಮನದಾಳದಲ್ಲಿದ್ದದ್ದು.

ಆದರೆ, ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ಬೆಳವಣಿಗೆಗಳು ದುಃಖಕರವಾಗಿದೆ. ನಮ್ಮ ದೇಶದ ಸಿಆರ್‌ಪಿಎಫ್ ಮೇಲೆ ಭಯೋತ್ಪಾದಕ ದಾಳಿ ನಡೆದು ಸುಮಾರು 40ಕ್ಕೂ ಹೆಚ್ಚು ಯೋಧರು ಸಾವಿಗೀಡಾಗುತ್ತಾರೆ. ಆ ಸಂದರ್ಭದಲ್ಲಿ ಕೇಂದ್ರ ಸರ್ಕಾರವು ಸರ್ವಪಕ್ಷ ಸಭೆ ಕರೆಯುತ್ತದೆ – ಪ್ರಧಾನಮಂತ್ರಿಯೇ ಅದರಲ್ಲಿ ಪಾಲ್ಗೊಳ್ಳದೇ ಪಕ್ಷದ ಪರ ಪ್ರಚಾರ ಮಾಡಲು ಹೋಗುತ್ತಾರೆ.

ಆ ನಂತರ ಭಾರತದ ವಾಯುಪಡೆಯು ಪಾಕಿಸ್ತಾನದ ಮೇಲೆ ದಾಳಿ ನಡೆಸುತ್ತದೆ. ಉದ್ವಿಗ್ನ ವಾತಾವರಣ ಹೆಚ್ಚಾಗುತ್ತಾ ಹೋಗುತ್ತದೆ. ಇನ್ನೊಂದು ಸರ್ವಪಕ್ಷ ಸಭೆ ನಡೆಯುತ್ತದೆ. ಆಗಲೂ ಪ್ರಧಾನಿ ಗೈರುಹಾಜರು. ಅವರು ಪ್ರತಿನಿತ್ಯ ಚುನಾವಣೆಯ ಸಿದ್ಧತೆಯಲ್ಲೇ ಹೆಚ್ಚು ತೊಡಗಿರುವುದು ಕಂಡು ಬರುತ್ತದೆ.

ಇದೇ ಅವಧಿಯಲ್ಲಿ ಪಾಕಿಸ್ತಾನದ ಇಮ್ರಾನ್‌ಖಾನ್ ಅವರು ಮಾಡಿದ ಭಾಷಣವೊಂದು ಎಲ್ಲೆಡೆ ಚರ್ಚೆಯಲ್ಲಿದೆ. ಆ ಭಾಷಣ ಮಾಡಿದ್ದು ಎಲ್ಲಿ ಗೊತ್ತೇ? ಸಂಸತ್ತಿನಲ್ಲಿ. ಅದೂ ಸಹಾ, ಈ ಸನ್ನಿವೇಶದಲ್ಲಿ ದೇಶದ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲೆಂದೇ ಕರೆದ ವಿಶೇಷ ಅಧಿವೇಶನ. ಅಲ್ಲಿಯೇ ಭಾರತದ ಜೊತೆಗೆ ಶಾಂತಿ ಹಸ್ತವನ್ನು ಚಾಚುವ ಉದ್ದೇಶದಿಂದ ನಾವು ಪೈಲಟ್ ಅಭಿನಂದನ್‌ರನ್ನು ಬಿಡುಗಡೆ ಮಾಡುತ್ತೇವೆ ಎಂದು ಇಮ್ರಾನ್‌ಖಾನ್ ಹೇಳಿದಾಗ, ಇಡೀ ಸಂಸತ್ತು ಮೇಜುತಟ್ಟಿ ಅದನ್ನು ಅನುಮೋದಿಸುತ್ತದೆ.

ಫೆ.28ರಂದು ನಡೆದ ಪ್ರಧಾನಿ ಮೋದಿಯವರ ಚುನಾವಣಾ ಪ್ರಚಾರದ ಬಿಜೆಪಿ ಜಾಹೀರಾತು

ಅಭಿನಂದನ್‌ರ ಬಿಡುಗಡೆಯ ಸಂದೇಶ ಹೊರಬಂದ ಕೆಲ ಹೊತ್ತಿನಲ್ಲಿ ಪಂಜಾಬಿನ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಪ್ರಧಾನಿ ಮೋದಿಯವರಲ್ಲಿ ಒಂದು ಕೋರಿಕೆ ಮುಂದಿಡುತ್ತಾರೆ. ಅಭಿನಂದನ್ ದೇಶದೊಳಕ್ಕೆ ಬರುವುದು ವಾಘಾ ಗಡಿಯಿಂದ. ವಾಘಾ ಆ ಕಡೆಯ ಪಂಜಾಬ್‌ನಲ್ಲಿದ್ದರೆ, ಈ ಕಡೆಗೆ ಭಾರತದ ಪಂಜಾಬಿನ ಅಟ್ಟಾರಿ ಇದೆ. ಅಮೃತಸರ ಮತ್ತು ಲಾಹೋರ್ ನಡುವಿನ ದೂರ ಕೇವಲ 58 ಕಿ.ಮೀ. ತಾನು ಖುದ್ದಾಗಿ ಹೋಗಿ ಅಭಿನಂದನ್‌ರನ್ನು ಕರೆತರುತ್ತೇನೆ ಎಂದು ಅಮರಿಂದರ್ ಕೋರಿಕೆ.

ಇದಕ್ಕೆ ಕಾರಣವಿದೆ. ಅವರು ಕ್ಯಾಪ್ಟನ್ ಅಮರಿಂದರ್. ಸ್ವತಃ ಸೈನ್ಯದಲ್ಲಿ ಸೇವೆ ಸಲ್ಲಿಸಿದ್ದವರು. ಜೊತೆಗೆ ಈ ಸದ್ಯ ವಾಘಾ-ಅಟ್ಟಾರಿ ಬಾರ್ಡರ್ ಬರುವ ಪಂಜಾಬಿನ ಮುಖ್ಯಮಂತ್ರಿ. ಅಭಿನಂದನ್ ಮತ್ತು ಅವರ ತಂದೆಯು  ಶಿಕ್ಷಣ ಹಾಗೂ ತರಬೇತಿ ಪಡೆದುಕೊಂಡ ನ್ಯಾಷನಲ್ ಡಿಫೆನ್ಸ್ ಅಕ್ಯಾಡೆಮಿಯಲ್ಲೇ ಅಮರಿಂದರ್ ಸಿಂಗ್ ಸಹಾ ತರಬೇತಿ ಪಡೆದುಕೊಂಡಿದ್ದರು. ಜೊತೆಗೆ ಈ ಮನವಿ ಮಾಡಿಕೊಳ್ಳುವ ಹೊತ್ತಿನಲ್ಲಿ ಅಮರಿಂದರ್ ಸಿಂಗ್ ಅದೇ ಪ್ರದೇಶದಲ್ಲಿದ್ದರು. ಒಂದು ವೇಳೆ ಕ್ಯಾಪ್ಟನ್ ಅಮರಿಂದರ್ ಅವರು ವ್ಯಕ್ತಿಗತ ಇಮೇಜ್ ಹೆಚ್ಚಿಸಿಕೊಳ್ಳಲೆಂದೇ ಈ ಪ್ರಸ್ತಾಪ ಮುಂದಿಟ್ಟಿದ್ದಾರೆಂದುಕೊಳ್ಳಿ.

ಆದರೂ, ದೇಶದ ಪ್ರತಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ದೇಶದ ಪ್ರಧಾನಿಗೆ ಇದೊಂದು ಅವಕಾಶವಾಗಿತ್ತು. ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಮಾಜಿ ಸೈನಿಕರಾದ ಅಮರಿಂದರ್‌ರನ್ನು ಅದಕ್ಕೆ ಕಳಿಸುವುದಕ್ಕಿಂತ ಒಳ್ಳೆಯ ನಡೆ ಇನ್ನೇನಾಗಿರಲು ಸಾಧ್ಯವಿತ್ತು?

ಆದರೆ ಮೋದಿಯವರು ಅಂಥಾ ಪ್ರಬುದ್ಧ ನಡೆಯನ್ನು ತೋರಲೇ ಇಲ್ಲ. ನಮ್ಮದೇ ದೇಶದ ಪ್ರಧಾನಿ ಹುದ್ದೆಯನ್ನು ಹೀಗಳೆಯುವುದು ಯಾರಿಗೂ ಇಷ್ಟವಿಲ್ಲದ ಸಂಗತಿ, ಆದರೆ ಪುಲ್ವಾಮಾ ಘಟನೆಯ ತರುವಾಯ ಪಾಕಿಸ್ತಾನದ ಪ್ರಧಾನಿ ವ್ಯವಹರಿಸಿದ ರೀತಿಗೂ ನಮ್ಮ ಭಾರತದ ಪ್ರಧಾನಿಯಾಗಿ ಮೋದಿಯವರು ತೋರಿದ ರಾಜಕೀಯ ಪ್ರೇರಿತ ನಡವಳಿಕೆಗಳಿಗೂ ಹೋಲಿಕೆ ಮಾಡಿದರೆ ನಿಜಕ್ಕೂ ಭಾರತೀಯರು ವಿಷಾದಗೊಳ್ಳಬೇಕಾಗಿ ಬಂದಿದೆ.

ಫೆಬ್ರವರಿ 28ರಂದು ಗುಜರಾತಿನಲ್ಲಿ ಕಾಂಗ್ರೆಸ್ ಪಕ್ಷವು `ಕಾಂಗ್ರೆಸ್ ಕಾರ್ಯಕಾರಿ ಸಮಿತಿ’ (ಸಿಡ್ಬ್ಲುಸಿ) ಯ ಸಭೆ ಆಯೋಜಿಸಿತ್ತು. ಕಳೆದ ಆರು ದಶಕಗಳ (60 ವರ್ಷಗಳ) ನಂತರ ಈ ಅತಿದೊಡ್ಡ ಸಭೆ ನಡೆಸಲು ಕಾಂಗ್ರೆಸ್ ಯೋಜಿಸಿಕೊಂಡಿತ್ತು. ಜೊತೆಗೆ ಚುನಾವಣಾ ಪ್ರಚಾರಕ್ಕಾಗಿ `ಜನಸಂಕಲ್ಪ ಯಾತ್ರೆ’ಗೆ ಚಾಲನೆ ನೀಡುವುದೂ ಅದರ ಭಾಗವಾಗಿತ್ತು. ಆದರೆ ಭಾರತ ಮತ್ತು ಪಾಕಿಸ್ತಾನ ನಡುವೆ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾದ್ದರಿಂದ ದೇಶದ ಭದ್ರತೆಗೆ ಒತ್ತು ಕೊಟ್ಟು ಕಾಂಗ್ರೆಸ್ ಆ ಸಭೆಗಳನ್ನು ಮುಂದಕ್ಕೂಡಿತು.

ಆದರೆ ಪ್ರಧಾನಿಯಾಗಿ ಮೋದಿಯವರು ಪುಲ್ವಾಮಾ ಘಟನೆಯ ತರುವಾಯ ನಿರಂತರವಾಗಿ ಚುನಾವಣಾ ರ್ಯಾಲಿಗಳಲ್ಲಿ ಭಾಗವಹಿಸುತ್ತಿದ್ದಾರೆ. ಆ ಭಯೋತ್ಪಾದಕ ದಾಳಿ ನಡೆದ ಸುದ್ದಿ ನಡೆದ ಮೇಲೂ ಮೋದಿಯವರು ಜಿಮ್ ಕಾರ್ಬೆಟ್  ನ್ಯಾಶನಲ್ ಪಾರ್ಕಿನಲ್ಲಿ ಜಾಹಿರಾತೊಂದರ ಶೂಟಿಂಗ್ ಮುಂದುವರೆಸಿದರು ಎಂಬ ಆಪಾದನೆ ಸುಳ್ಳೋ ನಿಜವೋ ಎಂದು ಇತ್ಯರ್ಥಗೊಳ್ಳುವ ಮೊದಲೇ ಅವರು ಝಾಂಸಿಯೂ ಒಳಗೊಂಡಂತೆ ಬೇರೆಬೇರೆ ಕಡೆ ಪಕ್ಷದ ಪರವಾಗಿ ಚುನಾವಣಾ ರ್ಯಾಲಿಗಳಲ್ಲಿ ಭಾಗವಹಿಸಿ ದೇಶದ ಭದ್ರತೆಗೆ ಸಂಬಂಧಿಸಿದ ವಿಚಾರವನ್ನು ರಾಜಕೀಯ ವೇದಿಕೆಯಲ್ಲಿ ಸರಕಾಗಿಸಿಕೊಂಡು ಮಾತನಾಡಿದರು. ಯಾವ ಆತಂಕವೂ ಇಲ್ಲದಂತೆ `ಖೇಲೊ ಇಂಡಿಯಾ’ ಆಪ್ ಬಿಡುಗಡೆ ಮಾಡಿದರು.

ಫೆಬ್ರವರಿ 28ರಂದು ವಿಶ್ವದ ಅತಿದೊಡ್ಡ ವೀಡಿಯೋ ಕಾನ್ಫರೆನ್ಸ್ ಮೂಲಕ `ಮೇರಾ ಬೂತ್ ಸಬ್ ಸೇ ಮಜಬೂತ್’ ಎಂಬ ಕಾರ್ಯಕ್ರಮದಲ್ಲಿ ಭಾಗಿಯಾಗಿ ಚುನಾವಣಾ ಪ್ರಚಾರ ಮಾಡಿದರು. ದೇಶದ ರಾಜಕಾರಣಿಗಳಲ್ಲೆ ಅತಿಹೆಚ್ಚು ಸೋಶಿಯಲ್ ಮೀಡಿಯಾ ಬಳಸುವ, ಫಾಲೋವರ್ ಗಳನ್ನು ಹೊಂದಿರುವ ರಾಜಕಾರಣಿ ಅಂದ್ರೆ ಮೋದಿಯವರು. ಟ್ವೀಟ್ಟರ್ ನಲ್ಲಿ ನಾಲ್ಕೂವರೆ ಕೋಟಿಗೂ ಹೆಚ್ಚು ಫಾಲೋವರ್.ಗಳನ್ನು ಹೊಂದಿದ್ದಾರೆ. ಆದರೆ ಪುಲ್ವಾಮಾ ಘಟನೆಯ ನಂತರ ಟ್ವಿಟ್ಟರ್ ನಲ್ಲೂ ಅವರು ಬಿಜೆಪಿ ರಾಜಕೀಯ ಪ್ರಚಾರಗಳನ್ನು ಹೆಚ್ಚಾಗಿ ಟ್ವೀಟ್ ಮಾಡಿದ್ದಾರೆಯೇ ವಿನಾಃ ಆತಂಕದ ಸ್ಥಿತಿಯಲ್ಲಿ ದೇಶಕ್ಕೆ ಅಗತ್ಯವಿರುವ ನಾಯಕತ್ವದ ಮಾತುಗಳು ಅವರಿಂದ ಟ್ಟೀಟುಗೊಂಡಿಲ್ಲ.

ಸಂದಿಗ್ಧ ಪರಿಸ್ಥಿತಿಯನ್ನು ಎದುರಿಸುವುದಕ್ಕೆಂದೇ ವಿಶೇಷ ಅಧಿವೇಶನ ಕರೆದು ವಿರೋಧ ಪಕ್ಷಗಳನ್ನೂ ಸಹಮತಕ್ಕೆ ತೆಗೆದುಕೊಂಡು ಸಮತೂಕದ ಮಾತುಗಳನ್ನಾಡುವ ಇಮ್ರಾನ್ ಖಾನ್ ಜಿನೆವಾ ಒಪ್ಪಂದವನ್ನು ಗೌರವಿಸಿ ತನ್ನ ವಶದಲ್ಲಿದ್ದ ಭಾರತದ ಕಮಾಂಡರ್ ಅಬಿನಂದನ್ ಬಿಡುಗಡೆಯನ್ನು ಸಂಸತ್ತಿನಲ್ಲೇ ಘೋಷಿಸುವಾಗ ಒಂದು ಆಶಯವಂತೂ ಭಾರತದ ಶಾಂತಿಪ್ರಿಯತೆ ಮತ್ತು ಸೌಹಾರ್ದತೆಯನ್ನು ಗೌರವಿಸುವ ನಿಜವಾದ ದೇಶಪ್ರೇಮಿಗಳಲ್ಲ ಮನಸಿನಲ್ಲಿ ಪುಟಿದೇಳುತ್ತಿರುತ್ತದೆ.  ಅದು, ಮೋದಿಯವರ ಕಾಲದಲ್ಲಿ ಭಾರತ ಪಾಕಿಸ್ತಾನದಂತಾಗದಿರಲಿ, ದೇಶದ ಪ್ರಜಾಪ್ರಭುತ್ವ ಗಟ್ಟಿಗೊಳ್ಳಲಿ ಎಂಬುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...