Homeಮುಖಪುಟನಮ್ಮ ಪ್ರಜಾಪ್ರಭುತ್ವ ಪಾಕಿಸ್ತಾನಕ್ಕಿಂತ ದುರ್ಬಲವಾಗಬಾರದು: ಒಂದು ಆಶಯ

ನಮ್ಮ ಪ್ರಜಾಪ್ರಭುತ್ವ ಪಾಕಿಸ್ತಾನಕ್ಕಿಂತ ದುರ್ಬಲವಾಗಬಾರದು: ಒಂದು ಆಶಯ

- Advertisement -
- Advertisement -

ನೀಲಗಾರ |

ಕೆಲವು ವರ್ಷಗಳ ಕೆಳಗೆ ಪಾಕಿಸ್ತಾನದ ಕವಿಯೊಬ್ಬರು ನಮ್ಮ ದೇಶದಂತೆ ನೀವಾಗಬೇಡಿ ಎಂದು ಭಾರತವನ್ನು ಉದ್ದೇಶಿಸಿ ಬಹಳ ನೋವಿನಿಂದ ಕೂಡಿದ ಕವಿತೆಯೊಂದನ್ನು ಬರೆದಿದ್ದರು.

ನಮ್ಮದೇ ಸೋದರಿ ದೇಶ, ಇಂದಲ್ಲಾ ನಾಳೆ ಒಂದೇ ಆಗಬೇಕಿರುವ ನೆರೆಯ ದೇಶವು ಅತ್ಯಂತ ಅರಾಜಕವಾದ ಪರಿಸ್ಥಿತಿಯಲ್ಲಿರುವುದು ನಮಗೆಲ್ಲರಿಗೂ ಗೊತ್ತು. ಸೈನ್ಯ, ಇಂಟೆಲಿಜೆನ್ಸ್ ಸಂಸ್ಥೆ, ಮತೀಯವಾದಿಗಳು, ಅಮೆರಿಕಾ ಮತ್ತು ಭ್ರಷ್ಟ ರಾಜಕಾರಣಿಗಳು ಇವೆಲ್ಲದರ ಮಧ್ಯೆ ನಲುಗುತ್ತಿರುವ ಜನಸಾಮಾನ್ಯರು  ಇದೇ ಪಾಕಿಸ್ತಾನ. ಹಾಗಾಗಿಯೇ ಭಯೋತ್ಪಾದಕರನ್ನೂ ಮಟ್ಟ ಹಾಕಲಾಗದ ದುಸ್ಥಿತಿ. ಬಹುಶಃ ಇದೇ ಆ ಕವಿಯ ಮನದಾಳದಲ್ಲಿದ್ದದ್ದು.

ಆದರೆ, ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ಬೆಳವಣಿಗೆಗಳು ದುಃಖಕರವಾಗಿದೆ. ನಮ್ಮ ದೇಶದ ಸಿಆರ್‌ಪಿಎಫ್ ಮೇಲೆ ಭಯೋತ್ಪಾದಕ ದಾಳಿ ನಡೆದು ಸುಮಾರು 40ಕ್ಕೂ ಹೆಚ್ಚು ಯೋಧರು ಸಾವಿಗೀಡಾಗುತ್ತಾರೆ. ಆ ಸಂದರ್ಭದಲ್ಲಿ ಕೇಂದ್ರ ಸರ್ಕಾರವು ಸರ್ವಪಕ್ಷ ಸಭೆ ಕರೆಯುತ್ತದೆ – ಪ್ರಧಾನಮಂತ್ರಿಯೇ ಅದರಲ್ಲಿ ಪಾಲ್ಗೊಳ್ಳದೇ ಪಕ್ಷದ ಪರ ಪ್ರಚಾರ ಮಾಡಲು ಹೋಗುತ್ತಾರೆ.

ಆ ನಂತರ ಭಾರತದ ವಾಯುಪಡೆಯು ಪಾಕಿಸ್ತಾನದ ಮೇಲೆ ದಾಳಿ ನಡೆಸುತ್ತದೆ. ಉದ್ವಿಗ್ನ ವಾತಾವರಣ ಹೆಚ್ಚಾಗುತ್ತಾ ಹೋಗುತ್ತದೆ. ಇನ್ನೊಂದು ಸರ್ವಪಕ್ಷ ಸಭೆ ನಡೆಯುತ್ತದೆ. ಆಗಲೂ ಪ್ರಧಾನಿ ಗೈರುಹಾಜರು. ಅವರು ಪ್ರತಿನಿತ್ಯ ಚುನಾವಣೆಯ ಸಿದ್ಧತೆಯಲ್ಲೇ ಹೆಚ್ಚು ತೊಡಗಿರುವುದು ಕಂಡು ಬರುತ್ತದೆ.

ಇದೇ ಅವಧಿಯಲ್ಲಿ ಪಾಕಿಸ್ತಾನದ ಇಮ್ರಾನ್‌ಖಾನ್ ಅವರು ಮಾಡಿದ ಭಾಷಣವೊಂದು ಎಲ್ಲೆಡೆ ಚರ್ಚೆಯಲ್ಲಿದೆ. ಆ ಭಾಷಣ ಮಾಡಿದ್ದು ಎಲ್ಲಿ ಗೊತ್ತೇ? ಸಂಸತ್ತಿನಲ್ಲಿ. ಅದೂ ಸಹಾ, ಈ ಸನ್ನಿವೇಶದಲ್ಲಿ ದೇಶದ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲೆಂದೇ ಕರೆದ ವಿಶೇಷ ಅಧಿವೇಶನ. ಅಲ್ಲಿಯೇ ಭಾರತದ ಜೊತೆಗೆ ಶಾಂತಿ ಹಸ್ತವನ್ನು ಚಾಚುವ ಉದ್ದೇಶದಿಂದ ನಾವು ಪೈಲಟ್ ಅಭಿನಂದನ್‌ರನ್ನು ಬಿಡುಗಡೆ ಮಾಡುತ್ತೇವೆ ಎಂದು ಇಮ್ರಾನ್‌ಖಾನ್ ಹೇಳಿದಾಗ, ಇಡೀ ಸಂಸತ್ತು ಮೇಜುತಟ್ಟಿ ಅದನ್ನು ಅನುಮೋದಿಸುತ್ತದೆ.

ಫೆ.28ರಂದು ನಡೆದ ಪ್ರಧಾನಿ ಮೋದಿಯವರ ಚುನಾವಣಾ ಪ್ರಚಾರದ ಬಿಜೆಪಿ ಜಾಹೀರಾತು

ಅಭಿನಂದನ್‌ರ ಬಿಡುಗಡೆಯ ಸಂದೇಶ ಹೊರಬಂದ ಕೆಲ ಹೊತ್ತಿನಲ್ಲಿ ಪಂಜಾಬಿನ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಪ್ರಧಾನಿ ಮೋದಿಯವರಲ್ಲಿ ಒಂದು ಕೋರಿಕೆ ಮುಂದಿಡುತ್ತಾರೆ. ಅಭಿನಂದನ್ ದೇಶದೊಳಕ್ಕೆ ಬರುವುದು ವಾಘಾ ಗಡಿಯಿಂದ. ವಾಘಾ ಆ ಕಡೆಯ ಪಂಜಾಬ್‌ನಲ್ಲಿದ್ದರೆ, ಈ ಕಡೆಗೆ ಭಾರತದ ಪಂಜಾಬಿನ ಅಟ್ಟಾರಿ ಇದೆ. ಅಮೃತಸರ ಮತ್ತು ಲಾಹೋರ್ ನಡುವಿನ ದೂರ ಕೇವಲ 58 ಕಿ.ಮೀ. ತಾನು ಖುದ್ದಾಗಿ ಹೋಗಿ ಅಭಿನಂದನ್‌ರನ್ನು ಕರೆತರುತ್ತೇನೆ ಎಂದು ಅಮರಿಂದರ್ ಕೋರಿಕೆ.

ಇದಕ್ಕೆ ಕಾರಣವಿದೆ. ಅವರು ಕ್ಯಾಪ್ಟನ್ ಅಮರಿಂದರ್. ಸ್ವತಃ ಸೈನ್ಯದಲ್ಲಿ ಸೇವೆ ಸಲ್ಲಿಸಿದ್ದವರು. ಜೊತೆಗೆ ಈ ಸದ್ಯ ವಾಘಾ-ಅಟ್ಟಾರಿ ಬಾರ್ಡರ್ ಬರುವ ಪಂಜಾಬಿನ ಮುಖ್ಯಮಂತ್ರಿ. ಅಭಿನಂದನ್ ಮತ್ತು ಅವರ ತಂದೆಯು  ಶಿಕ್ಷಣ ಹಾಗೂ ತರಬೇತಿ ಪಡೆದುಕೊಂಡ ನ್ಯಾಷನಲ್ ಡಿಫೆನ್ಸ್ ಅಕ್ಯಾಡೆಮಿಯಲ್ಲೇ ಅಮರಿಂದರ್ ಸಿಂಗ್ ಸಹಾ ತರಬೇತಿ ಪಡೆದುಕೊಂಡಿದ್ದರು. ಜೊತೆಗೆ ಈ ಮನವಿ ಮಾಡಿಕೊಳ್ಳುವ ಹೊತ್ತಿನಲ್ಲಿ ಅಮರಿಂದರ್ ಸಿಂಗ್ ಅದೇ ಪ್ರದೇಶದಲ್ಲಿದ್ದರು. ಒಂದು ವೇಳೆ ಕ್ಯಾಪ್ಟನ್ ಅಮರಿಂದರ್ ಅವರು ವ್ಯಕ್ತಿಗತ ಇಮೇಜ್ ಹೆಚ್ಚಿಸಿಕೊಳ್ಳಲೆಂದೇ ಈ ಪ್ರಸ್ತಾಪ ಮುಂದಿಟ್ಟಿದ್ದಾರೆಂದುಕೊಳ್ಳಿ.

ಆದರೂ, ದೇಶದ ಪ್ರತಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ದೇಶದ ಪ್ರಧಾನಿಗೆ ಇದೊಂದು ಅವಕಾಶವಾಗಿತ್ತು. ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಮಾಜಿ ಸೈನಿಕರಾದ ಅಮರಿಂದರ್‌ರನ್ನು ಅದಕ್ಕೆ ಕಳಿಸುವುದಕ್ಕಿಂತ ಒಳ್ಳೆಯ ನಡೆ ಇನ್ನೇನಾಗಿರಲು ಸಾಧ್ಯವಿತ್ತು?

ಆದರೆ ಮೋದಿಯವರು ಅಂಥಾ ಪ್ರಬುದ್ಧ ನಡೆಯನ್ನು ತೋರಲೇ ಇಲ್ಲ. ನಮ್ಮದೇ ದೇಶದ ಪ್ರಧಾನಿ ಹುದ್ದೆಯನ್ನು ಹೀಗಳೆಯುವುದು ಯಾರಿಗೂ ಇಷ್ಟವಿಲ್ಲದ ಸಂಗತಿ, ಆದರೆ ಪುಲ್ವಾಮಾ ಘಟನೆಯ ತರುವಾಯ ಪಾಕಿಸ್ತಾನದ ಪ್ರಧಾನಿ ವ್ಯವಹರಿಸಿದ ರೀತಿಗೂ ನಮ್ಮ ಭಾರತದ ಪ್ರಧಾನಿಯಾಗಿ ಮೋದಿಯವರು ತೋರಿದ ರಾಜಕೀಯ ಪ್ರೇರಿತ ನಡವಳಿಕೆಗಳಿಗೂ ಹೋಲಿಕೆ ಮಾಡಿದರೆ ನಿಜಕ್ಕೂ ಭಾರತೀಯರು ವಿಷಾದಗೊಳ್ಳಬೇಕಾಗಿ ಬಂದಿದೆ.

ಫೆಬ್ರವರಿ 28ರಂದು ಗುಜರಾತಿನಲ್ಲಿ ಕಾಂಗ್ರೆಸ್ ಪಕ್ಷವು `ಕಾಂಗ್ರೆಸ್ ಕಾರ್ಯಕಾರಿ ಸಮಿತಿ’ (ಸಿಡ್ಬ್ಲುಸಿ) ಯ ಸಭೆ ಆಯೋಜಿಸಿತ್ತು. ಕಳೆದ ಆರು ದಶಕಗಳ (60 ವರ್ಷಗಳ) ನಂತರ ಈ ಅತಿದೊಡ್ಡ ಸಭೆ ನಡೆಸಲು ಕಾಂಗ್ರೆಸ್ ಯೋಜಿಸಿಕೊಂಡಿತ್ತು. ಜೊತೆಗೆ ಚುನಾವಣಾ ಪ್ರಚಾರಕ್ಕಾಗಿ `ಜನಸಂಕಲ್ಪ ಯಾತ್ರೆ’ಗೆ ಚಾಲನೆ ನೀಡುವುದೂ ಅದರ ಭಾಗವಾಗಿತ್ತು. ಆದರೆ ಭಾರತ ಮತ್ತು ಪಾಕಿಸ್ತಾನ ನಡುವೆ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾದ್ದರಿಂದ ದೇಶದ ಭದ್ರತೆಗೆ ಒತ್ತು ಕೊಟ್ಟು ಕಾಂಗ್ರೆಸ್ ಆ ಸಭೆಗಳನ್ನು ಮುಂದಕ್ಕೂಡಿತು.

ಆದರೆ ಪ್ರಧಾನಿಯಾಗಿ ಮೋದಿಯವರು ಪುಲ್ವಾಮಾ ಘಟನೆಯ ತರುವಾಯ ನಿರಂತರವಾಗಿ ಚುನಾವಣಾ ರ್ಯಾಲಿಗಳಲ್ಲಿ ಭಾಗವಹಿಸುತ್ತಿದ್ದಾರೆ. ಆ ಭಯೋತ್ಪಾದಕ ದಾಳಿ ನಡೆದ ಸುದ್ದಿ ನಡೆದ ಮೇಲೂ ಮೋದಿಯವರು ಜಿಮ್ ಕಾರ್ಬೆಟ್  ನ್ಯಾಶನಲ್ ಪಾರ್ಕಿನಲ್ಲಿ ಜಾಹಿರಾತೊಂದರ ಶೂಟಿಂಗ್ ಮುಂದುವರೆಸಿದರು ಎಂಬ ಆಪಾದನೆ ಸುಳ್ಳೋ ನಿಜವೋ ಎಂದು ಇತ್ಯರ್ಥಗೊಳ್ಳುವ ಮೊದಲೇ ಅವರು ಝಾಂಸಿಯೂ ಒಳಗೊಂಡಂತೆ ಬೇರೆಬೇರೆ ಕಡೆ ಪಕ್ಷದ ಪರವಾಗಿ ಚುನಾವಣಾ ರ್ಯಾಲಿಗಳಲ್ಲಿ ಭಾಗವಹಿಸಿ ದೇಶದ ಭದ್ರತೆಗೆ ಸಂಬಂಧಿಸಿದ ವಿಚಾರವನ್ನು ರಾಜಕೀಯ ವೇದಿಕೆಯಲ್ಲಿ ಸರಕಾಗಿಸಿಕೊಂಡು ಮಾತನಾಡಿದರು. ಯಾವ ಆತಂಕವೂ ಇಲ್ಲದಂತೆ `ಖೇಲೊ ಇಂಡಿಯಾ’ ಆಪ್ ಬಿಡುಗಡೆ ಮಾಡಿದರು.

ಫೆಬ್ರವರಿ 28ರಂದು ವಿಶ್ವದ ಅತಿದೊಡ್ಡ ವೀಡಿಯೋ ಕಾನ್ಫರೆನ್ಸ್ ಮೂಲಕ `ಮೇರಾ ಬೂತ್ ಸಬ್ ಸೇ ಮಜಬೂತ್’ ಎಂಬ ಕಾರ್ಯಕ್ರಮದಲ್ಲಿ ಭಾಗಿಯಾಗಿ ಚುನಾವಣಾ ಪ್ರಚಾರ ಮಾಡಿದರು. ದೇಶದ ರಾಜಕಾರಣಿಗಳಲ್ಲೆ ಅತಿಹೆಚ್ಚು ಸೋಶಿಯಲ್ ಮೀಡಿಯಾ ಬಳಸುವ, ಫಾಲೋವರ್ ಗಳನ್ನು ಹೊಂದಿರುವ ರಾಜಕಾರಣಿ ಅಂದ್ರೆ ಮೋದಿಯವರು. ಟ್ವೀಟ್ಟರ್ ನಲ್ಲಿ ನಾಲ್ಕೂವರೆ ಕೋಟಿಗೂ ಹೆಚ್ಚು ಫಾಲೋವರ್.ಗಳನ್ನು ಹೊಂದಿದ್ದಾರೆ. ಆದರೆ ಪುಲ್ವಾಮಾ ಘಟನೆಯ ನಂತರ ಟ್ವಿಟ್ಟರ್ ನಲ್ಲೂ ಅವರು ಬಿಜೆಪಿ ರಾಜಕೀಯ ಪ್ರಚಾರಗಳನ್ನು ಹೆಚ್ಚಾಗಿ ಟ್ವೀಟ್ ಮಾಡಿದ್ದಾರೆಯೇ ವಿನಾಃ ಆತಂಕದ ಸ್ಥಿತಿಯಲ್ಲಿ ದೇಶಕ್ಕೆ ಅಗತ್ಯವಿರುವ ನಾಯಕತ್ವದ ಮಾತುಗಳು ಅವರಿಂದ ಟ್ಟೀಟುಗೊಂಡಿಲ್ಲ.

ಸಂದಿಗ್ಧ ಪರಿಸ್ಥಿತಿಯನ್ನು ಎದುರಿಸುವುದಕ್ಕೆಂದೇ ವಿಶೇಷ ಅಧಿವೇಶನ ಕರೆದು ವಿರೋಧ ಪಕ್ಷಗಳನ್ನೂ ಸಹಮತಕ್ಕೆ ತೆಗೆದುಕೊಂಡು ಸಮತೂಕದ ಮಾತುಗಳನ್ನಾಡುವ ಇಮ್ರಾನ್ ಖಾನ್ ಜಿನೆವಾ ಒಪ್ಪಂದವನ್ನು ಗೌರವಿಸಿ ತನ್ನ ವಶದಲ್ಲಿದ್ದ ಭಾರತದ ಕಮಾಂಡರ್ ಅಬಿನಂದನ್ ಬಿಡುಗಡೆಯನ್ನು ಸಂಸತ್ತಿನಲ್ಲೇ ಘೋಷಿಸುವಾಗ ಒಂದು ಆಶಯವಂತೂ ಭಾರತದ ಶಾಂತಿಪ್ರಿಯತೆ ಮತ್ತು ಸೌಹಾರ್ದತೆಯನ್ನು ಗೌರವಿಸುವ ನಿಜವಾದ ದೇಶಪ್ರೇಮಿಗಳಲ್ಲ ಮನಸಿನಲ್ಲಿ ಪುಟಿದೇಳುತ್ತಿರುತ್ತದೆ.  ಅದು, ಮೋದಿಯವರ ಕಾಲದಲ್ಲಿ ಭಾರತ ಪಾಕಿಸ್ತಾನದಂತಾಗದಿರಲಿ, ದೇಶದ ಪ್ರಜಾಪ್ರಭುತ್ವ ಗಟ್ಟಿಗೊಳ್ಳಲಿ ಎಂಬುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...