Homeನಿಜವೋ ಸುಳ್ಳೋನರೇಂದ್ರ ಮೋದಿಯವರ ಮೀಟ್ ದಿ ಪ್ರೆಸ್ಸೂ, ಕಾರ್ಟೂನ್‍ಗಳೂ

ನರೇಂದ್ರ ಮೋದಿಯವರ ಮೀಟ್ ದಿ ಪ್ರೆಸ್ಸೂ, ಕಾರ್ಟೂನ್‍ಗಳೂ

ನರೇಂದ್ರ ಮೋದಿಯವರ ಪತ್ರಿಕಾಗೋಷ್ಠಿಯಲ್ಲದ ಪತ್ರಿಕಾಗೋಷ್ಠಿಯ ಕುರಿತು ಸೃಜನಶೀಲ ಲೋಕದ ಪ್ರತಿಕ್ರಿಯೆ

- Advertisement -
- Advertisement -

|| ನಾನು ಗೌರಿ ಡೆಸ್ಕ್ ||
ಮೋದಿಯವರು ಪ್ರಧಾನಿಯಾದ ನಂತರ ದೇಶದಲ್ಲಿ ಸೃಜನಶೀಲತೆಯೂ ಉಕ್ಕೇರಿ ಹರಿಯುತ್ತಿದೆ. ಈ ಹೊತ್ತಿನಲ್ಲೇ ಇ-ಹೊತ್ತೂ ಹೆಚ್ಚಾಗಿದ್ದೂ ಇದಕ್ಕೆ ಇಂಬುಕೊಟ್ಟಿರಬಹುದು. ತೀರಾ ಇತ್ತೀಚೆಗಿನ ಉದಾಹರಣೆ ಎಂದರೆ, ಮೋದಿಯವರ ಮೋಡ ಮತ್ತು ರಾಡಾರ್ ಹೇಳಿಕೆಯ ಸಂದರ್ಭ. ಆಗ ನೂರಾರು ಬಗೆಯ ಟ್ವೀಟ್‍ಗಳು ಮತ್ತು ಕಾರ್ಟೂನ್‍ಗಳು ಕೆಲವೇ ಗಂಟೆಗಳಲ್ಲಿ ಎಲ್ಲೆಡೆ ಹರಿದಾಡುತ್ತಿದ್ದವು. ಈಗ ಮೋದಿಯವರ ಪತ್ರಿಕಾಗೋಷ್ಠಿಯಲ್ಲದ ಪತ್ರಿಕಾಗೋಷ್ಠಿಯ ಬಗ್ಗೆ ಕಾರ್ಟೂನುಗಳು ಯಥೇಚ್ಚ ಜಿಗಿದಾಡುತ್ತಿವೆ.

5 ವರ್ಷಗಳ ಹಿಂದೆ ಇಂತಹ ಹಲವು ಚಿತ್ರಗಳು, ಮೆಮೆಗಳು, ಜೋಕುಗಳು ರಾಹುಲ್‍ಗಾಂಧಿಯವರನ್ನು ಪಪ್ಪುವಾಗಿಸುವಲ್ಲಿ ಯಶಸ್ವಿಯಾಗಿದ್ದವು. ಈಗ ಮೋದಿಯವರನ್ನು ಪತ್ರಿಕಾಗೋಷ್ಠಿಯನ್ನು ಎದುರಿಸುವ ಧೈರ್ಯವಿಲ್ಲದ ಪ್ರಧಾನಿಯಾಗಿ ಬಿಂಬಿಸುತ್ತಿವೆ. ಸ್ವತಃ ರಾಹುಲ್‍ಗಾಂಧಿ ಮೋದಿಯವರನ್ನು ಟ್ರೋಲ್ ಮಾಡಲು ಆರಂಭಿಸಿದ್ದಾರೆ. ಅದು ಹೋಗಲಿ ಎಂದರೆ, ಪತ್ರಕರ್ತರನ್ನೂ ರಾಹುಲ್ ಗೋಳು ಹುಯ್ದುಕೊಳ್ಳಲು ಶುರು ಮಾಡಿದ್ದಾರೆ.

ನಿನ್ನೆ ಅಮಿತ್‍ಷಾ ಪತ್ರಿಕಾಗೋಷ್ಠಿಯಲ್ಲಿ ‘ಹಾಜರಿದ್ದು’ ಒಂದೂ ಪ್ರಶ್ನೆ ಎದುರಿಸದ ಪ್ರಧಾನಿಯವರ ನಡವಳಿಕೆಯ ಕುರಿತು ಬಂದಿರುವ ಕೆಲವು ಕಾರ್ಟೂನುಗಳು, ಚಿತ್ರಗಳು ಏನು ಹೇಳುತ್ತವೆ ನೋಡೋಣ.


ರಾಹುಲ್‍ಗಾಂಧಿಯವರ ಟ್ವೀಟ್‍ನ ಸ್ಕ್ರೀನ್‍ಶಾಟ್ ಎಲ್ಲಕ್ಕಿಂತ ಹೆಚ್ಚು ಷೇರ್ ಆಗಿತ್ತು.  ಮೋದಿಯವರನ್ನು ವ್ಯಂಗ್ಯವಾಗಿ ಅಭಿನಂದಿಸಿದ ಆ ಟ್ವೀಟ್, ‘ಮುಂದಿನ ಬಾರಿ ಅಮಿತ್‍ಷಾ ನಿಮಗೆ ಒಂದೆರಡು ಪ್ರಶ್ನೆಗಳಿಗೆ ಉತ್ತರಿಸಲು ಬಿಡಬಹುದು’ ಎಂದಿತ್ತು.

ಅದರ ನಂತರದ್ದು ಸತೀಶ್ ಆಚಾರ್ಯ ಅವರ ಕಾರ್ಟೂನ್. ಇವರೊಬ್ಬರದ್ದು ಮಾತ್ರವಲ್ಲದೇ, ಇನ್ನೂ ಹಲವು ಕಾರ್ಟೂನ್‍ಗಳು ಬಂದವು.  ಅವು ಮೋದಿಯವರ ಇತ್ತೀಚೆಗಿನ ಮೋಡದ ಮರೆಯಲ್ಲಿ ರಾಡಾರ್ ಕೆಲಸ ಮಾಡುವುದಿಲ್ಲವೆಂಬುದನ್ನು ಇದಕ್ಕೆ ಲಿಂಕ್ ಮಾಡಿಕೊಂಡಿದ್ದವು.


ಇದನ್ನೂ ಓದಿ: ಮೋದಿ ಪ್ರೆಸ್‍ಮೀಟ್ – ಹೇಳಿಕೊಟ್ಟ ಮಾತು, ಕಟ್ಟಿಕೊಟ್ಟ ಬುತ್ತಿ

ಮೋದಿಯವರ ಮೌನವನ್ನು ಅಣಕಿಸುವ ಕೆಲವು ಪೋಸ್ಟರ್‍ಗಳು ಬಂದವು.

 

ಸಾಮಾನ್ಯವಾಗಿ ವಾಚಾಳಿಯಾದ ಮೋದಿಯವರು ದೀರ್ಘಕಾಲ ಮೌನವಾಗಿದ್ದದ್ದು ಇಲ್ಲೇ ಎಂದು ಹೇಳುವ ಟ್ವೀಟ್‍ಗಳೂ ಇದ್ದವು.


ಪತ್ರಿಕಾಗೋಷ್ಠಿ ಮುಗಿದ ಕೆಲವೇ ಸಮಯದಲ್ಲಿ, ಮೋದಿಯವರು ದೀರ್ಘಕಾಲ ಸುಮ್ಮನೇ ಕೇಳಿಸಿಕೊಂಡಿದ್ದನ್ನು ವಿಡಿಯೋ ಮಾಡಿ ಹರಿಬಿಡಲಾಯಿತು.

ಇದನ್ನೂ ಓದಿ: ಒಬ್ಬನೇ ಸಂದರ್ಶಕ, ಮೋದಿ-ರಾಹುಲ್ ಇಬ್ಬರನ್ನೂ ಸಂದರ್ಶಿಸಿದ ಪರಿ

ಮೋದಿಯವರು ಆಯ್ದ ಮಾಧ್ಯಮ ಸಂಸ್ಥೆಗಳಿಗೆ ನೀಡಿದ ಸಂದರ್ಶನದಲ್ಲೂ ಪ್ರಶ್ನೆ ಮತ್ತು ಉತ್ತರಗಳನ್ನು ಮೊದಲೇ ಬರೆದಿಟ್ಟುಕೊಳ್ಳುವುದನ್ನು ಆಕಾಶ್ ಬ್ಯಾನರ್ಜಿ ಟ್ರೋಲ್ ಮಾಡಿದ್ದರು.

 

ಇಂತಹ ಹಲವಾರು ಕಾರ್ಟೂನುಗಳು ಹರಿದಾಡಿದವು.

ಪತ್ರಿಕಾಗೋಷ್ಠಿಯನ್ನು ಎದುರಿಸಲು ಧೈರ್ಯವಿಲ್ಲದ ಮೋದಿಯವರನ್ನು ಅಮಿತ್ ಷಾ ಬಲವಂತದಿಂದ ಕರೆದುಕೊಂಡು ಬಂದಂತೆ ಬರೆಯಲಾಗಿದ್ದ ಕಾರ್ಟೂನ್ ಸಹಾ ಸದ್ದು ಮಾಡಿತು.

ಈ ದಿನ ಬೆಳಿಗ್ಗೆ ಬಂದ ಟೆಲಿಗ್ರಾಫ್ ಪತ್ರಿಕೆಯ ಮುಖಪುಟವು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿತ್ತು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...