Homeನಿಜವೋ ಸುಳ್ಳೋನರೇಂದ್ರ ಮೋದಿಯವರ ಮೀಟ್ ದಿ ಪ್ರೆಸ್ಸೂ, ಕಾರ್ಟೂನ್‍ಗಳೂ

ನರೇಂದ್ರ ಮೋದಿಯವರ ಮೀಟ್ ದಿ ಪ್ರೆಸ್ಸೂ, ಕಾರ್ಟೂನ್‍ಗಳೂ

ನರೇಂದ್ರ ಮೋದಿಯವರ ಪತ್ರಿಕಾಗೋಷ್ಠಿಯಲ್ಲದ ಪತ್ರಿಕಾಗೋಷ್ಠಿಯ ಕುರಿತು ಸೃಜನಶೀಲ ಲೋಕದ ಪ್ರತಿಕ್ರಿಯೆ

- Advertisement -
- Advertisement -

|| ನಾನು ಗೌರಿ ಡೆಸ್ಕ್ ||
ಮೋದಿಯವರು ಪ್ರಧಾನಿಯಾದ ನಂತರ ದೇಶದಲ್ಲಿ ಸೃಜನಶೀಲತೆಯೂ ಉಕ್ಕೇರಿ ಹರಿಯುತ್ತಿದೆ. ಈ ಹೊತ್ತಿನಲ್ಲೇ ಇ-ಹೊತ್ತೂ ಹೆಚ್ಚಾಗಿದ್ದೂ ಇದಕ್ಕೆ ಇಂಬುಕೊಟ್ಟಿರಬಹುದು. ತೀರಾ ಇತ್ತೀಚೆಗಿನ ಉದಾಹರಣೆ ಎಂದರೆ, ಮೋದಿಯವರ ಮೋಡ ಮತ್ತು ರಾಡಾರ್ ಹೇಳಿಕೆಯ ಸಂದರ್ಭ. ಆಗ ನೂರಾರು ಬಗೆಯ ಟ್ವೀಟ್‍ಗಳು ಮತ್ತು ಕಾರ್ಟೂನ್‍ಗಳು ಕೆಲವೇ ಗಂಟೆಗಳಲ್ಲಿ ಎಲ್ಲೆಡೆ ಹರಿದಾಡುತ್ತಿದ್ದವು. ಈಗ ಮೋದಿಯವರ ಪತ್ರಿಕಾಗೋಷ್ಠಿಯಲ್ಲದ ಪತ್ರಿಕಾಗೋಷ್ಠಿಯ ಬಗ್ಗೆ ಕಾರ್ಟೂನುಗಳು ಯಥೇಚ್ಚ ಜಿಗಿದಾಡುತ್ತಿವೆ.

5 ವರ್ಷಗಳ ಹಿಂದೆ ಇಂತಹ ಹಲವು ಚಿತ್ರಗಳು, ಮೆಮೆಗಳು, ಜೋಕುಗಳು ರಾಹುಲ್‍ಗಾಂಧಿಯವರನ್ನು ಪಪ್ಪುವಾಗಿಸುವಲ್ಲಿ ಯಶಸ್ವಿಯಾಗಿದ್ದವು. ಈಗ ಮೋದಿಯವರನ್ನು ಪತ್ರಿಕಾಗೋಷ್ಠಿಯನ್ನು ಎದುರಿಸುವ ಧೈರ್ಯವಿಲ್ಲದ ಪ್ರಧಾನಿಯಾಗಿ ಬಿಂಬಿಸುತ್ತಿವೆ. ಸ್ವತಃ ರಾಹುಲ್‍ಗಾಂಧಿ ಮೋದಿಯವರನ್ನು ಟ್ರೋಲ್ ಮಾಡಲು ಆರಂಭಿಸಿದ್ದಾರೆ. ಅದು ಹೋಗಲಿ ಎಂದರೆ, ಪತ್ರಕರ್ತರನ್ನೂ ರಾಹುಲ್ ಗೋಳು ಹುಯ್ದುಕೊಳ್ಳಲು ಶುರು ಮಾಡಿದ್ದಾರೆ.

ನಿನ್ನೆ ಅಮಿತ್‍ಷಾ ಪತ್ರಿಕಾಗೋಷ್ಠಿಯಲ್ಲಿ ‘ಹಾಜರಿದ್ದು’ ಒಂದೂ ಪ್ರಶ್ನೆ ಎದುರಿಸದ ಪ್ರಧಾನಿಯವರ ನಡವಳಿಕೆಯ ಕುರಿತು ಬಂದಿರುವ ಕೆಲವು ಕಾರ್ಟೂನುಗಳು, ಚಿತ್ರಗಳು ಏನು ಹೇಳುತ್ತವೆ ನೋಡೋಣ.


ರಾಹುಲ್‍ಗಾಂಧಿಯವರ ಟ್ವೀಟ್‍ನ ಸ್ಕ್ರೀನ್‍ಶಾಟ್ ಎಲ್ಲಕ್ಕಿಂತ ಹೆಚ್ಚು ಷೇರ್ ಆಗಿತ್ತು.  ಮೋದಿಯವರನ್ನು ವ್ಯಂಗ್ಯವಾಗಿ ಅಭಿನಂದಿಸಿದ ಆ ಟ್ವೀಟ್, ‘ಮುಂದಿನ ಬಾರಿ ಅಮಿತ್‍ಷಾ ನಿಮಗೆ ಒಂದೆರಡು ಪ್ರಶ್ನೆಗಳಿಗೆ ಉತ್ತರಿಸಲು ಬಿಡಬಹುದು’ ಎಂದಿತ್ತು.

ಅದರ ನಂತರದ್ದು ಸತೀಶ್ ಆಚಾರ್ಯ ಅವರ ಕಾರ್ಟೂನ್. ಇವರೊಬ್ಬರದ್ದು ಮಾತ್ರವಲ್ಲದೇ, ಇನ್ನೂ ಹಲವು ಕಾರ್ಟೂನ್‍ಗಳು ಬಂದವು.  ಅವು ಮೋದಿಯವರ ಇತ್ತೀಚೆಗಿನ ಮೋಡದ ಮರೆಯಲ್ಲಿ ರಾಡಾರ್ ಕೆಲಸ ಮಾಡುವುದಿಲ್ಲವೆಂಬುದನ್ನು ಇದಕ್ಕೆ ಲಿಂಕ್ ಮಾಡಿಕೊಂಡಿದ್ದವು.


ಇದನ್ನೂ ಓದಿ: ಮೋದಿ ಪ್ರೆಸ್‍ಮೀಟ್ – ಹೇಳಿಕೊಟ್ಟ ಮಾತು, ಕಟ್ಟಿಕೊಟ್ಟ ಬುತ್ತಿ

ಮೋದಿಯವರ ಮೌನವನ್ನು ಅಣಕಿಸುವ ಕೆಲವು ಪೋಸ್ಟರ್‍ಗಳು ಬಂದವು.

 

ಸಾಮಾನ್ಯವಾಗಿ ವಾಚಾಳಿಯಾದ ಮೋದಿಯವರು ದೀರ್ಘಕಾಲ ಮೌನವಾಗಿದ್ದದ್ದು ಇಲ್ಲೇ ಎಂದು ಹೇಳುವ ಟ್ವೀಟ್‍ಗಳೂ ಇದ್ದವು.


ಪತ್ರಿಕಾಗೋಷ್ಠಿ ಮುಗಿದ ಕೆಲವೇ ಸಮಯದಲ್ಲಿ, ಮೋದಿಯವರು ದೀರ್ಘಕಾಲ ಸುಮ್ಮನೇ ಕೇಳಿಸಿಕೊಂಡಿದ್ದನ್ನು ವಿಡಿಯೋ ಮಾಡಿ ಹರಿಬಿಡಲಾಯಿತು.

ಇದನ್ನೂ ಓದಿ: ಒಬ್ಬನೇ ಸಂದರ್ಶಕ, ಮೋದಿ-ರಾಹುಲ್ ಇಬ್ಬರನ್ನೂ ಸಂದರ್ಶಿಸಿದ ಪರಿ

ಮೋದಿಯವರು ಆಯ್ದ ಮಾಧ್ಯಮ ಸಂಸ್ಥೆಗಳಿಗೆ ನೀಡಿದ ಸಂದರ್ಶನದಲ್ಲೂ ಪ್ರಶ್ನೆ ಮತ್ತು ಉತ್ತರಗಳನ್ನು ಮೊದಲೇ ಬರೆದಿಟ್ಟುಕೊಳ್ಳುವುದನ್ನು ಆಕಾಶ್ ಬ್ಯಾನರ್ಜಿ ಟ್ರೋಲ್ ಮಾಡಿದ್ದರು.

 

ಇಂತಹ ಹಲವಾರು ಕಾರ್ಟೂನುಗಳು ಹರಿದಾಡಿದವು.

ಪತ್ರಿಕಾಗೋಷ್ಠಿಯನ್ನು ಎದುರಿಸಲು ಧೈರ್ಯವಿಲ್ಲದ ಮೋದಿಯವರನ್ನು ಅಮಿತ್ ಷಾ ಬಲವಂತದಿಂದ ಕರೆದುಕೊಂಡು ಬಂದಂತೆ ಬರೆಯಲಾಗಿದ್ದ ಕಾರ್ಟೂನ್ ಸಹಾ ಸದ್ದು ಮಾಡಿತು.

ಈ ದಿನ ಬೆಳಿಗ್ಗೆ ಬಂದ ಟೆಲಿಗ್ರಾಫ್ ಪತ್ರಿಕೆಯ ಮುಖಪುಟವು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿತ್ತು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...