Homeನಿಜವೋ ಸುಳ್ಳೋನರೇಂದ್ರ ಮೋದಿಯವರ ಮೀಟ್ ದಿ ಪ್ರೆಸ್ಸೂ, ಕಾರ್ಟೂನ್‍ಗಳೂ

ನರೇಂದ್ರ ಮೋದಿಯವರ ಮೀಟ್ ದಿ ಪ್ರೆಸ್ಸೂ, ಕಾರ್ಟೂನ್‍ಗಳೂ

ನರೇಂದ್ರ ಮೋದಿಯವರ ಪತ್ರಿಕಾಗೋಷ್ಠಿಯಲ್ಲದ ಪತ್ರಿಕಾಗೋಷ್ಠಿಯ ಕುರಿತು ಸೃಜನಶೀಲ ಲೋಕದ ಪ್ರತಿಕ್ರಿಯೆ

- Advertisement -
- Advertisement -

|| ನಾನು ಗೌರಿ ಡೆಸ್ಕ್ ||
ಮೋದಿಯವರು ಪ್ರಧಾನಿಯಾದ ನಂತರ ದೇಶದಲ್ಲಿ ಸೃಜನಶೀಲತೆಯೂ ಉಕ್ಕೇರಿ ಹರಿಯುತ್ತಿದೆ. ಈ ಹೊತ್ತಿನಲ್ಲೇ ಇ-ಹೊತ್ತೂ ಹೆಚ್ಚಾಗಿದ್ದೂ ಇದಕ್ಕೆ ಇಂಬುಕೊಟ್ಟಿರಬಹುದು. ತೀರಾ ಇತ್ತೀಚೆಗಿನ ಉದಾಹರಣೆ ಎಂದರೆ, ಮೋದಿಯವರ ಮೋಡ ಮತ್ತು ರಾಡಾರ್ ಹೇಳಿಕೆಯ ಸಂದರ್ಭ. ಆಗ ನೂರಾರು ಬಗೆಯ ಟ್ವೀಟ್‍ಗಳು ಮತ್ತು ಕಾರ್ಟೂನ್‍ಗಳು ಕೆಲವೇ ಗಂಟೆಗಳಲ್ಲಿ ಎಲ್ಲೆಡೆ ಹರಿದಾಡುತ್ತಿದ್ದವು. ಈಗ ಮೋದಿಯವರ ಪತ್ರಿಕಾಗೋಷ್ಠಿಯಲ್ಲದ ಪತ್ರಿಕಾಗೋಷ್ಠಿಯ ಬಗ್ಗೆ ಕಾರ್ಟೂನುಗಳು ಯಥೇಚ್ಚ ಜಿಗಿದಾಡುತ್ತಿವೆ.

5 ವರ್ಷಗಳ ಹಿಂದೆ ಇಂತಹ ಹಲವು ಚಿತ್ರಗಳು, ಮೆಮೆಗಳು, ಜೋಕುಗಳು ರಾಹುಲ್‍ಗಾಂಧಿಯವರನ್ನು ಪಪ್ಪುವಾಗಿಸುವಲ್ಲಿ ಯಶಸ್ವಿಯಾಗಿದ್ದವು. ಈಗ ಮೋದಿಯವರನ್ನು ಪತ್ರಿಕಾಗೋಷ್ಠಿಯನ್ನು ಎದುರಿಸುವ ಧೈರ್ಯವಿಲ್ಲದ ಪ್ರಧಾನಿಯಾಗಿ ಬಿಂಬಿಸುತ್ತಿವೆ. ಸ್ವತಃ ರಾಹುಲ್‍ಗಾಂಧಿ ಮೋದಿಯವರನ್ನು ಟ್ರೋಲ್ ಮಾಡಲು ಆರಂಭಿಸಿದ್ದಾರೆ. ಅದು ಹೋಗಲಿ ಎಂದರೆ, ಪತ್ರಕರ್ತರನ್ನೂ ರಾಹುಲ್ ಗೋಳು ಹುಯ್ದುಕೊಳ್ಳಲು ಶುರು ಮಾಡಿದ್ದಾರೆ.

ನಿನ್ನೆ ಅಮಿತ್‍ಷಾ ಪತ್ರಿಕಾಗೋಷ್ಠಿಯಲ್ಲಿ ‘ಹಾಜರಿದ್ದು’ ಒಂದೂ ಪ್ರಶ್ನೆ ಎದುರಿಸದ ಪ್ರಧಾನಿಯವರ ನಡವಳಿಕೆಯ ಕುರಿತು ಬಂದಿರುವ ಕೆಲವು ಕಾರ್ಟೂನುಗಳು, ಚಿತ್ರಗಳು ಏನು ಹೇಳುತ್ತವೆ ನೋಡೋಣ.


ರಾಹುಲ್‍ಗಾಂಧಿಯವರ ಟ್ವೀಟ್‍ನ ಸ್ಕ್ರೀನ್‍ಶಾಟ್ ಎಲ್ಲಕ್ಕಿಂತ ಹೆಚ್ಚು ಷೇರ್ ಆಗಿತ್ತು.  ಮೋದಿಯವರನ್ನು ವ್ಯಂಗ್ಯವಾಗಿ ಅಭಿನಂದಿಸಿದ ಆ ಟ್ವೀಟ್, ‘ಮುಂದಿನ ಬಾರಿ ಅಮಿತ್‍ಷಾ ನಿಮಗೆ ಒಂದೆರಡು ಪ್ರಶ್ನೆಗಳಿಗೆ ಉತ್ತರಿಸಲು ಬಿಡಬಹುದು’ ಎಂದಿತ್ತು.

ಅದರ ನಂತರದ್ದು ಸತೀಶ್ ಆಚಾರ್ಯ ಅವರ ಕಾರ್ಟೂನ್. ಇವರೊಬ್ಬರದ್ದು ಮಾತ್ರವಲ್ಲದೇ, ಇನ್ನೂ ಹಲವು ಕಾರ್ಟೂನ್‍ಗಳು ಬಂದವು.  ಅವು ಮೋದಿಯವರ ಇತ್ತೀಚೆಗಿನ ಮೋಡದ ಮರೆಯಲ್ಲಿ ರಾಡಾರ್ ಕೆಲಸ ಮಾಡುವುದಿಲ್ಲವೆಂಬುದನ್ನು ಇದಕ್ಕೆ ಲಿಂಕ್ ಮಾಡಿಕೊಂಡಿದ್ದವು.


ಇದನ್ನೂ ಓದಿ: ಮೋದಿ ಪ್ರೆಸ್‍ಮೀಟ್ – ಹೇಳಿಕೊಟ್ಟ ಮಾತು, ಕಟ್ಟಿಕೊಟ್ಟ ಬುತ್ತಿ

ಮೋದಿಯವರ ಮೌನವನ್ನು ಅಣಕಿಸುವ ಕೆಲವು ಪೋಸ್ಟರ್‍ಗಳು ಬಂದವು.

 

ಸಾಮಾನ್ಯವಾಗಿ ವಾಚಾಳಿಯಾದ ಮೋದಿಯವರು ದೀರ್ಘಕಾಲ ಮೌನವಾಗಿದ್ದದ್ದು ಇಲ್ಲೇ ಎಂದು ಹೇಳುವ ಟ್ವೀಟ್‍ಗಳೂ ಇದ್ದವು.


ಪತ್ರಿಕಾಗೋಷ್ಠಿ ಮುಗಿದ ಕೆಲವೇ ಸಮಯದಲ್ಲಿ, ಮೋದಿಯವರು ದೀರ್ಘಕಾಲ ಸುಮ್ಮನೇ ಕೇಳಿಸಿಕೊಂಡಿದ್ದನ್ನು ವಿಡಿಯೋ ಮಾಡಿ ಹರಿಬಿಡಲಾಯಿತು.

ಇದನ್ನೂ ಓದಿ: ಒಬ್ಬನೇ ಸಂದರ್ಶಕ, ಮೋದಿ-ರಾಹುಲ್ ಇಬ್ಬರನ್ನೂ ಸಂದರ್ಶಿಸಿದ ಪರಿ

ಮೋದಿಯವರು ಆಯ್ದ ಮಾಧ್ಯಮ ಸಂಸ್ಥೆಗಳಿಗೆ ನೀಡಿದ ಸಂದರ್ಶನದಲ್ಲೂ ಪ್ರಶ್ನೆ ಮತ್ತು ಉತ್ತರಗಳನ್ನು ಮೊದಲೇ ಬರೆದಿಟ್ಟುಕೊಳ್ಳುವುದನ್ನು ಆಕಾಶ್ ಬ್ಯಾನರ್ಜಿ ಟ್ರೋಲ್ ಮಾಡಿದ್ದರು.

 

ಇಂತಹ ಹಲವಾರು ಕಾರ್ಟೂನುಗಳು ಹರಿದಾಡಿದವು.

ಪತ್ರಿಕಾಗೋಷ್ಠಿಯನ್ನು ಎದುರಿಸಲು ಧೈರ್ಯವಿಲ್ಲದ ಮೋದಿಯವರನ್ನು ಅಮಿತ್ ಷಾ ಬಲವಂತದಿಂದ ಕರೆದುಕೊಂಡು ಬಂದಂತೆ ಬರೆಯಲಾಗಿದ್ದ ಕಾರ್ಟೂನ್ ಸಹಾ ಸದ್ದು ಮಾಡಿತು.

ಈ ದಿನ ಬೆಳಿಗ್ಗೆ ಬಂದ ಟೆಲಿಗ್ರಾಫ್ ಪತ್ರಿಕೆಯ ಮುಖಪುಟವು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿತ್ತು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...