Homeನಿಜವೋ ಸುಳ್ಳೋನರೇಂದ್ರ ಮೋದಿಯವರ ಮೀಟ್ ದಿ ಪ್ರೆಸ್ಸೂ, ಕಾರ್ಟೂನ್‍ಗಳೂ

ನರೇಂದ್ರ ಮೋದಿಯವರ ಮೀಟ್ ದಿ ಪ್ರೆಸ್ಸೂ, ಕಾರ್ಟೂನ್‍ಗಳೂ

ನರೇಂದ್ರ ಮೋದಿಯವರ ಪತ್ರಿಕಾಗೋಷ್ಠಿಯಲ್ಲದ ಪತ್ರಿಕಾಗೋಷ್ಠಿಯ ಕುರಿತು ಸೃಜನಶೀಲ ಲೋಕದ ಪ್ರತಿಕ್ರಿಯೆ

- Advertisement -
- Advertisement -

|| ನಾನು ಗೌರಿ ಡೆಸ್ಕ್ ||
ಮೋದಿಯವರು ಪ್ರಧಾನಿಯಾದ ನಂತರ ದೇಶದಲ್ಲಿ ಸೃಜನಶೀಲತೆಯೂ ಉಕ್ಕೇರಿ ಹರಿಯುತ್ತಿದೆ. ಈ ಹೊತ್ತಿನಲ್ಲೇ ಇ-ಹೊತ್ತೂ ಹೆಚ್ಚಾಗಿದ್ದೂ ಇದಕ್ಕೆ ಇಂಬುಕೊಟ್ಟಿರಬಹುದು. ತೀರಾ ಇತ್ತೀಚೆಗಿನ ಉದಾಹರಣೆ ಎಂದರೆ, ಮೋದಿಯವರ ಮೋಡ ಮತ್ತು ರಾಡಾರ್ ಹೇಳಿಕೆಯ ಸಂದರ್ಭ. ಆಗ ನೂರಾರು ಬಗೆಯ ಟ್ವೀಟ್‍ಗಳು ಮತ್ತು ಕಾರ್ಟೂನ್‍ಗಳು ಕೆಲವೇ ಗಂಟೆಗಳಲ್ಲಿ ಎಲ್ಲೆಡೆ ಹರಿದಾಡುತ್ತಿದ್ದವು. ಈಗ ಮೋದಿಯವರ ಪತ್ರಿಕಾಗೋಷ್ಠಿಯಲ್ಲದ ಪತ್ರಿಕಾಗೋಷ್ಠಿಯ ಬಗ್ಗೆ ಕಾರ್ಟೂನುಗಳು ಯಥೇಚ್ಚ ಜಿಗಿದಾಡುತ್ತಿವೆ.

5 ವರ್ಷಗಳ ಹಿಂದೆ ಇಂತಹ ಹಲವು ಚಿತ್ರಗಳು, ಮೆಮೆಗಳು, ಜೋಕುಗಳು ರಾಹುಲ್‍ಗಾಂಧಿಯವರನ್ನು ಪಪ್ಪುವಾಗಿಸುವಲ್ಲಿ ಯಶಸ್ವಿಯಾಗಿದ್ದವು. ಈಗ ಮೋದಿಯವರನ್ನು ಪತ್ರಿಕಾಗೋಷ್ಠಿಯನ್ನು ಎದುರಿಸುವ ಧೈರ್ಯವಿಲ್ಲದ ಪ್ರಧಾನಿಯಾಗಿ ಬಿಂಬಿಸುತ್ತಿವೆ. ಸ್ವತಃ ರಾಹುಲ್‍ಗಾಂಧಿ ಮೋದಿಯವರನ್ನು ಟ್ರೋಲ್ ಮಾಡಲು ಆರಂಭಿಸಿದ್ದಾರೆ. ಅದು ಹೋಗಲಿ ಎಂದರೆ, ಪತ್ರಕರ್ತರನ್ನೂ ರಾಹುಲ್ ಗೋಳು ಹುಯ್ದುಕೊಳ್ಳಲು ಶುರು ಮಾಡಿದ್ದಾರೆ.

ನಿನ್ನೆ ಅಮಿತ್‍ಷಾ ಪತ್ರಿಕಾಗೋಷ್ಠಿಯಲ್ಲಿ ‘ಹಾಜರಿದ್ದು’ ಒಂದೂ ಪ್ರಶ್ನೆ ಎದುರಿಸದ ಪ್ರಧಾನಿಯವರ ನಡವಳಿಕೆಯ ಕುರಿತು ಬಂದಿರುವ ಕೆಲವು ಕಾರ್ಟೂನುಗಳು, ಚಿತ್ರಗಳು ಏನು ಹೇಳುತ್ತವೆ ನೋಡೋಣ.


ರಾಹುಲ್‍ಗಾಂಧಿಯವರ ಟ್ವೀಟ್‍ನ ಸ್ಕ್ರೀನ್‍ಶಾಟ್ ಎಲ್ಲಕ್ಕಿಂತ ಹೆಚ್ಚು ಷೇರ್ ಆಗಿತ್ತು.  ಮೋದಿಯವರನ್ನು ವ್ಯಂಗ್ಯವಾಗಿ ಅಭಿನಂದಿಸಿದ ಆ ಟ್ವೀಟ್, ‘ಮುಂದಿನ ಬಾರಿ ಅಮಿತ್‍ಷಾ ನಿಮಗೆ ಒಂದೆರಡು ಪ್ರಶ್ನೆಗಳಿಗೆ ಉತ್ತರಿಸಲು ಬಿಡಬಹುದು’ ಎಂದಿತ್ತು.

ಅದರ ನಂತರದ್ದು ಸತೀಶ್ ಆಚಾರ್ಯ ಅವರ ಕಾರ್ಟೂನ್. ಇವರೊಬ್ಬರದ್ದು ಮಾತ್ರವಲ್ಲದೇ, ಇನ್ನೂ ಹಲವು ಕಾರ್ಟೂನ್‍ಗಳು ಬಂದವು.  ಅವು ಮೋದಿಯವರ ಇತ್ತೀಚೆಗಿನ ಮೋಡದ ಮರೆಯಲ್ಲಿ ರಾಡಾರ್ ಕೆಲಸ ಮಾಡುವುದಿಲ್ಲವೆಂಬುದನ್ನು ಇದಕ್ಕೆ ಲಿಂಕ್ ಮಾಡಿಕೊಂಡಿದ್ದವು.


ಇದನ್ನೂ ಓದಿ: ಮೋದಿ ಪ್ರೆಸ್‍ಮೀಟ್ – ಹೇಳಿಕೊಟ್ಟ ಮಾತು, ಕಟ್ಟಿಕೊಟ್ಟ ಬುತ್ತಿ

ಮೋದಿಯವರ ಮೌನವನ್ನು ಅಣಕಿಸುವ ಕೆಲವು ಪೋಸ್ಟರ್‍ಗಳು ಬಂದವು.

 

ಸಾಮಾನ್ಯವಾಗಿ ವಾಚಾಳಿಯಾದ ಮೋದಿಯವರು ದೀರ್ಘಕಾಲ ಮೌನವಾಗಿದ್ದದ್ದು ಇಲ್ಲೇ ಎಂದು ಹೇಳುವ ಟ್ವೀಟ್‍ಗಳೂ ಇದ್ದವು.


ಪತ್ರಿಕಾಗೋಷ್ಠಿ ಮುಗಿದ ಕೆಲವೇ ಸಮಯದಲ್ಲಿ, ಮೋದಿಯವರು ದೀರ್ಘಕಾಲ ಸುಮ್ಮನೇ ಕೇಳಿಸಿಕೊಂಡಿದ್ದನ್ನು ವಿಡಿಯೋ ಮಾಡಿ ಹರಿಬಿಡಲಾಯಿತು.

ಇದನ್ನೂ ಓದಿ: ಒಬ್ಬನೇ ಸಂದರ್ಶಕ, ಮೋದಿ-ರಾಹುಲ್ ಇಬ್ಬರನ್ನೂ ಸಂದರ್ಶಿಸಿದ ಪರಿ

ಮೋದಿಯವರು ಆಯ್ದ ಮಾಧ್ಯಮ ಸಂಸ್ಥೆಗಳಿಗೆ ನೀಡಿದ ಸಂದರ್ಶನದಲ್ಲೂ ಪ್ರಶ್ನೆ ಮತ್ತು ಉತ್ತರಗಳನ್ನು ಮೊದಲೇ ಬರೆದಿಟ್ಟುಕೊಳ್ಳುವುದನ್ನು ಆಕಾಶ್ ಬ್ಯಾನರ್ಜಿ ಟ್ರೋಲ್ ಮಾಡಿದ್ದರು.

 

ಇಂತಹ ಹಲವಾರು ಕಾರ್ಟೂನುಗಳು ಹರಿದಾಡಿದವು.

ಪತ್ರಿಕಾಗೋಷ್ಠಿಯನ್ನು ಎದುರಿಸಲು ಧೈರ್ಯವಿಲ್ಲದ ಮೋದಿಯವರನ್ನು ಅಮಿತ್ ಷಾ ಬಲವಂತದಿಂದ ಕರೆದುಕೊಂಡು ಬಂದಂತೆ ಬರೆಯಲಾಗಿದ್ದ ಕಾರ್ಟೂನ್ ಸಹಾ ಸದ್ದು ಮಾಡಿತು.

ಈ ದಿನ ಬೆಳಿಗ್ಗೆ ಬಂದ ಟೆಲಿಗ್ರಾಫ್ ಪತ್ರಿಕೆಯ ಮುಖಪುಟವು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿತ್ತು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...