Homeನಿಜವೋ ಸುಳ್ಳೋನರೇಂದ್ರ ಮೋದಿಯವರ ಮೀಟ್ ದಿ ಪ್ರೆಸ್ಸೂ, ಕಾರ್ಟೂನ್‍ಗಳೂ

ನರೇಂದ್ರ ಮೋದಿಯವರ ಮೀಟ್ ದಿ ಪ್ರೆಸ್ಸೂ, ಕಾರ್ಟೂನ್‍ಗಳೂ

ನರೇಂದ್ರ ಮೋದಿಯವರ ಪತ್ರಿಕಾಗೋಷ್ಠಿಯಲ್ಲದ ಪತ್ರಿಕಾಗೋಷ್ಠಿಯ ಕುರಿತು ಸೃಜನಶೀಲ ಲೋಕದ ಪ್ರತಿಕ್ರಿಯೆ

- Advertisement -
- Advertisement -

|| ನಾನು ಗೌರಿ ಡೆಸ್ಕ್ ||
ಮೋದಿಯವರು ಪ್ರಧಾನಿಯಾದ ನಂತರ ದೇಶದಲ್ಲಿ ಸೃಜನಶೀಲತೆಯೂ ಉಕ್ಕೇರಿ ಹರಿಯುತ್ತಿದೆ. ಈ ಹೊತ್ತಿನಲ್ಲೇ ಇ-ಹೊತ್ತೂ ಹೆಚ್ಚಾಗಿದ್ದೂ ಇದಕ್ಕೆ ಇಂಬುಕೊಟ್ಟಿರಬಹುದು. ತೀರಾ ಇತ್ತೀಚೆಗಿನ ಉದಾಹರಣೆ ಎಂದರೆ, ಮೋದಿಯವರ ಮೋಡ ಮತ್ತು ರಾಡಾರ್ ಹೇಳಿಕೆಯ ಸಂದರ್ಭ. ಆಗ ನೂರಾರು ಬಗೆಯ ಟ್ವೀಟ್‍ಗಳು ಮತ್ತು ಕಾರ್ಟೂನ್‍ಗಳು ಕೆಲವೇ ಗಂಟೆಗಳಲ್ಲಿ ಎಲ್ಲೆಡೆ ಹರಿದಾಡುತ್ತಿದ್ದವು. ಈಗ ಮೋದಿಯವರ ಪತ್ರಿಕಾಗೋಷ್ಠಿಯಲ್ಲದ ಪತ್ರಿಕಾಗೋಷ್ಠಿಯ ಬಗ್ಗೆ ಕಾರ್ಟೂನುಗಳು ಯಥೇಚ್ಚ ಜಿಗಿದಾಡುತ್ತಿವೆ.

5 ವರ್ಷಗಳ ಹಿಂದೆ ಇಂತಹ ಹಲವು ಚಿತ್ರಗಳು, ಮೆಮೆಗಳು, ಜೋಕುಗಳು ರಾಹುಲ್‍ಗಾಂಧಿಯವರನ್ನು ಪಪ್ಪುವಾಗಿಸುವಲ್ಲಿ ಯಶಸ್ವಿಯಾಗಿದ್ದವು. ಈಗ ಮೋದಿಯವರನ್ನು ಪತ್ರಿಕಾಗೋಷ್ಠಿಯನ್ನು ಎದುರಿಸುವ ಧೈರ್ಯವಿಲ್ಲದ ಪ್ರಧಾನಿಯಾಗಿ ಬಿಂಬಿಸುತ್ತಿವೆ. ಸ್ವತಃ ರಾಹುಲ್‍ಗಾಂಧಿ ಮೋದಿಯವರನ್ನು ಟ್ರೋಲ್ ಮಾಡಲು ಆರಂಭಿಸಿದ್ದಾರೆ. ಅದು ಹೋಗಲಿ ಎಂದರೆ, ಪತ್ರಕರ್ತರನ್ನೂ ರಾಹುಲ್ ಗೋಳು ಹುಯ್ದುಕೊಳ್ಳಲು ಶುರು ಮಾಡಿದ್ದಾರೆ.

ನಿನ್ನೆ ಅಮಿತ್‍ಷಾ ಪತ್ರಿಕಾಗೋಷ್ಠಿಯಲ್ಲಿ ‘ಹಾಜರಿದ್ದು’ ಒಂದೂ ಪ್ರಶ್ನೆ ಎದುರಿಸದ ಪ್ರಧಾನಿಯವರ ನಡವಳಿಕೆಯ ಕುರಿತು ಬಂದಿರುವ ಕೆಲವು ಕಾರ್ಟೂನುಗಳು, ಚಿತ್ರಗಳು ಏನು ಹೇಳುತ್ತವೆ ನೋಡೋಣ.


ರಾಹುಲ್‍ಗಾಂಧಿಯವರ ಟ್ವೀಟ್‍ನ ಸ್ಕ್ರೀನ್‍ಶಾಟ್ ಎಲ್ಲಕ್ಕಿಂತ ಹೆಚ್ಚು ಷೇರ್ ಆಗಿತ್ತು.  ಮೋದಿಯವರನ್ನು ವ್ಯಂಗ್ಯವಾಗಿ ಅಭಿನಂದಿಸಿದ ಆ ಟ್ವೀಟ್, ‘ಮುಂದಿನ ಬಾರಿ ಅಮಿತ್‍ಷಾ ನಿಮಗೆ ಒಂದೆರಡು ಪ್ರಶ್ನೆಗಳಿಗೆ ಉತ್ತರಿಸಲು ಬಿಡಬಹುದು’ ಎಂದಿತ್ತು.

ಅದರ ನಂತರದ್ದು ಸತೀಶ್ ಆಚಾರ್ಯ ಅವರ ಕಾರ್ಟೂನ್. ಇವರೊಬ್ಬರದ್ದು ಮಾತ್ರವಲ್ಲದೇ, ಇನ್ನೂ ಹಲವು ಕಾರ್ಟೂನ್‍ಗಳು ಬಂದವು.  ಅವು ಮೋದಿಯವರ ಇತ್ತೀಚೆಗಿನ ಮೋಡದ ಮರೆಯಲ್ಲಿ ರಾಡಾರ್ ಕೆಲಸ ಮಾಡುವುದಿಲ್ಲವೆಂಬುದನ್ನು ಇದಕ್ಕೆ ಲಿಂಕ್ ಮಾಡಿಕೊಂಡಿದ್ದವು.


ಇದನ್ನೂ ಓದಿ: ಮೋದಿ ಪ್ರೆಸ್‍ಮೀಟ್ – ಹೇಳಿಕೊಟ್ಟ ಮಾತು, ಕಟ್ಟಿಕೊಟ್ಟ ಬುತ್ತಿ

ಮೋದಿಯವರ ಮೌನವನ್ನು ಅಣಕಿಸುವ ಕೆಲವು ಪೋಸ್ಟರ್‍ಗಳು ಬಂದವು.

 

ಸಾಮಾನ್ಯವಾಗಿ ವಾಚಾಳಿಯಾದ ಮೋದಿಯವರು ದೀರ್ಘಕಾಲ ಮೌನವಾಗಿದ್ದದ್ದು ಇಲ್ಲೇ ಎಂದು ಹೇಳುವ ಟ್ವೀಟ್‍ಗಳೂ ಇದ್ದವು.


ಪತ್ರಿಕಾಗೋಷ್ಠಿ ಮುಗಿದ ಕೆಲವೇ ಸಮಯದಲ್ಲಿ, ಮೋದಿಯವರು ದೀರ್ಘಕಾಲ ಸುಮ್ಮನೇ ಕೇಳಿಸಿಕೊಂಡಿದ್ದನ್ನು ವಿಡಿಯೋ ಮಾಡಿ ಹರಿಬಿಡಲಾಯಿತು.

ಇದನ್ನೂ ಓದಿ: ಒಬ್ಬನೇ ಸಂದರ್ಶಕ, ಮೋದಿ-ರಾಹುಲ್ ಇಬ್ಬರನ್ನೂ ಸಂದರ್ಶಿಸಿದ ಪರಿ

ಮೋದಿಯವರು ಆಯ್ದ ಮಾಧ್ಯಮ ಸಂಸ್ಥೆಗಳಿಗೆ ನೀಡಿದ ಸಂದರ್ಶನದಲ್ಲೂ ಪ್ರಶ್ನೆ ಮತ್ತು ಉತ್ತರಗಳನ್ನು ಮೊದಲೇ ಬರೆದಿಟ್ಟುಕೊಳ್ಳುವುದನ್ನು ಆಕಾಶ್ ಬ್ಯಾನರ್ಜಿ ಟ್ರೋಲ್ ಮಾಡಿದ್ದರು.

 

ಇಂತಹ ಹಲವಾರು ಕಾರ್ಟೂನುಗಳು ಹರಿದಾಡಿದವು.

ಪತ್ರಿಕಾಗೋಷ್ಠಿಯನ್ನು ಎದುರಿಸಲು ಧೈರ್ಯವಿಲ್ಲದ ಮೋದಿಯವರನ್ನು ಅಮಿತ್ ಷಾ ಬಲವಂತದಿಂದ ಕರೆದುಕೊಂಡು ಬಂದಂತೆ ಬರೆಯಲಾಗಿದ್ದ ಕಾರ್ಟೂನ್ ಸಹಾ ಸದ್ದು ಮಾಡಿತು.

ಈ ದಿನ ಬೆಳಿಗ್ಗೆ ಬಂದ ಟೆಲಿಗ್ರಾಫ್ ಪತ್ರಿಕೆಯ ಮುಖಪುಟವು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿತ್ತು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...