Homeಕರ್ನಾಟಕನಾನು ಗೌರಿ ಪೋಲ್, ವಿಕೃತರಿಗೆ ಸೋಲು : ಸಾವನ್ನು ಸಂಭ್ರಮಿಸುವುದು ತಪ್ಪೆಂದವರು 70%, ಸರಿಯೆಂದವರು 30%

ನಾನು ಗೌರಿ ಪೋಲ್, ವಿಕೃತರಿಗೆ ಸೋಲು : ಸಾವನ್ನು ಸಂಭ್ರಮಿಸುವುದು ತಪ್ಪೆಂದವರು 70%, ಸರಿಯೆಂದವರು 30%

- Advertisement -
- Advertisement -

| ನಾನುಗೌರಿ ಡೆಸ್ಕ್ |

ಕನ್ನಡದ ಮೇರು ಲೇಖಕ, ನಾಟಕಕಾರ, ಜೀವಪರ ಹೋರಾಟಗಾರ ಗಿರೀಶ್ ಕಾರ್ನಾಡ್‍ರವರ ನಿಧನದ ನಂತರ ಲಕ್ಷಾಂತರ ಜನ ಕಂಬನಿ ಮಿಡಿದಿದ್ದರು. ಚಳವಳಿ ಮತ್ತು ಕನ್ನಡ ಸಾಹಿತ್ಯ ಲೋಕಕ್ಕೆ ಅವರ ಕೊಡುಗೆಯನ್ನು ಸ್ಮರಿಸಿದ್ದರು. ನೋವಿನ ಭಾವಪೂರ್ಣ ವಿದಾಯವನ್ನು ಸಲ್ಲಿಸಿದ್ದರು. ಜೊತೆಗೇನೆ ಹಲವು ವಿಕೃತ ಮನಸ್ಸಿನವರು, ಒಂದು ಪಕ್ಷಕ್ಕೆ ಸೇರಿದವರು ಸಾಮಾಜಿಕ ಜಾಲತಾಣಗಳಲ್ಲಿ ಅವರ ಸಾವನ್ನು ಸಂಭ್ರಮಿಸಿ ಪೋಸ್ಟ್ ಸಹ ಹಾಕಿದ್ದರು. ಇದರ ಕುರಿತಾಗಿ ಸಾಕಷ್ಟು ಸುದ್ದಿಯಾಗಿತ್ತು.

ಇದರಿಂದ ನಾನುಗೌರಿ.ಕಾಂ ವತಿಯಿಂದ ಜನರ ಮನಸ್ಥಿತಿ ಅರ್ಥ ಮಾಡಿಕೊಳ್ಳು ನಾನುಗೌರಿ ಫೇಸ್‍ಬುಕ್ ಪುಟದಲ್ಲಿ ಒಂದು ಪೋಲ್ ಕ್ರಿಯೇಟ್ ಮಾಡಲಾಗಿತ್ತು. “ಸಾವನ್ನು ಸಂಭ್ರಮಿಸುವುದು ಭಾರತೀಯ ಸಂಸ್ಕøತಿಯೇ? ವೋಟ್ ಮಾಡಿ, ಕಾಮೆಂಟ್ ಮಾಡಿ. ಷೇರ್ ಸಹ ಮಾಡಬಹುದು” ಎಂದು ಪೋಲ್ ನಲ್ಲಿ ಬರೆದು 1. ಹೌದು 2. ಖಂಡಿತಾ ಅಲ್ಲ ಎಂಬ ಎರಡು ಆಯ್ಕೆಗಳನ್ನು ನೀಡಲಾಗಿತ್ತು.

ಸಾವನ್ನು ಸಂಭ್ರಮಿಸುವುದು ಭಾರತೀಯ ಸಂಸ್ಕೃತಿಯೇ? ವೋಟ್ ಮಾಡಿ, ಕಾಮೆಂಟ್ ಮಾಡಿ. ಷೇರ್ ಸಹಾ ಮಾಡಬಹುದು.

Naanu Gauri यांनी वर पोस्ट केले सोमवार, १० जून, २०१९

ಪೋಲ್ ಆರಂಭವಾದ ಕೆಲವೇ ಕ್ಷಣಗಳಲ್ಲಿ ನೂರಾರು ಜನ ಓಟ್ ಮಾಡಿ ಖಂಡಿತಾ ಅಲ್ಲ ಎಂಬುದಕ್ಕೆ ಮತ ಹಾಕಿದ್ದರು. ಅಷ್ಟರಲ್ಲಿ ಕ್ರಿಸ್ಟೋಫರ್ ಚಕ್ರವರ್ತಿ ಹೆಸರಿನ ಮೋದಿಯವರು ಫ್ರೊಫೈಲ್ ಹಾಕಿದ್ದ ಫೇಕ್ ಅಕೌಂಟ್‍ನಿಂದ ಒಬ್ಬರು “ನೀವ್ಯಾರು ಈ ಜನ್ಮದಲ್ಲಿ ಪೋಲ್ ಗೆಲ್ಲೋಕೆ ಆಗೋದಿಲ್ಲ.. ಕಿಲ ಕಿಲ,,, ನಾವ್ ಬಿಡಕಿಲ್ಲ ಎಂದು ಕಮೆಂಟ್” ಮಾಡಿದರು. ಅಷ್ಟು ಮಾತ್ರವಲ್ಲದೇ ಪೋಲ್‍ನ ಲಿಂಕ್ ಕಾಪಿ ಮಾಡಿ ಬಲಪಂಥೀಯ ಗ್ರೂಪುಗಳಲ್ಲಿ ಷೇರ್ ಮಾಡಿ ಬಂದು ಇಲ್ಲಿ ವೋಟ್ ಮತ್ತು ಕಮೆಂಟ್ ಮಾಡುವಂತೆ ಮಾಡಿದರು. ಆಗ ಪೋಲ್ ನಲ್ಲಿ 76%ಜನ ಸಾವಿನ ಸಂಭ್ರಮ ಖಂಡಿತ ತಪ್ಪೆಂದರೆ 24% ಜನ ಸರಿ ಎಂದು ಸಮರ್ಥಿಸಿಕೊಂಡಿದ್ದರು.

ಪೋಲ್ ಡಿಲೀಟ್ ಮಾಡಿದ್ರೆ ಕಾರ್ನಾಡ್ ಪ್ರೇತಾತ್ಮನಾಗಿ ನಿನ್ನ ಮನೇಲಿ ಅಲಿತಾನೇ ಹುಷಾರ್ ಎಂದು ಕಮೆಂಟ್ ಮಾಡಿದರು. ಬೆಳಿಗ್ಗೆ ಒಳಗೆ ಈ ಪೋಲ್ ಉಡೀಸ್ ಮಾಡ್ತೀವಿ ನೋಡಿ ಎಂದು ಚಾಲೆಂಜ್ ಸಹ ಹಾಕಿದರು. ಅಂದರೆ ಅವರ ಕಡೆಯವರೆಲ್ಲಾ ಬಂದು ಸಾವನ್ನು ಸಂಭ್ರಮಿಸುವುದು ಸರಿ ಎಂದು ಕಮೆಂಟ್ ಮತ್ತು ವೋಟ್ ಮಾಡುತ್ತಾರೆ ಎಂಬ ಅತೀ ಆತ್ಮವಿಶ್ವಾಸ ಅವರದು. ಅದಾದ ಸ್ವಲ್ಪ ಹೊತ್ತಿನಲ್ಲೇ ನೂರಾರು ಜನ ಬಲಪಂಥೀಯರು ಪೋಲ್‍ಗೆ ಲಗ್ಗೆ ಇಟ್ಟರು. ವೋಟ್ ಮಾಡಿ ಕೆಟ್ಟ ಕೊಳಕಾಗಿ, ಅಶ್ಲೀಲವಾಗಿ ಬೈಗುಳಗಳ ಮಳೆ ಸುರಿಸಿದರು.

ಅಷ್ಟು ಮಾತ್ರವಲ್ಲದೇ ತಮ್ಮ ಯಾವು ಯಾವುದೋ ಫೇಸ್‍ಬುಕ್ ಪೇಜ್‍ನಲ್ಲಿ, ಗ್ರೂಪ್‍ನಲ್ಲಿ ಮತ್ತು ವಾಟ್ಸಾಪ್ ಗುಂಪುಗಳಿಗೆ ಪೋಲ್‍ನ ಲಿಂಕ್ ಹಾಕಿ ಬಂದು ವೋಟ್ ಮಾಡಲು ಮತ್ತು ಕೆಟ್ಟದಾಗಿ ಕಮೆಂಟ್ ಮಾಡಲು ಕರೆ ನೀಡಿದ್ದರು. ಆದರೆ ಒಂದು ದಿನದ ಪೋಲ್ ಮುಗಿದಾಗ ಅವರ ಬಯಕೆ ಸ್ವಲ್ಪ ಮಾತ್ರವೇ ಈಡೇರಿತ್ತು. ಅಂಕಿ ಸಂಖ್ಯೆಗಳ ಆಧಾರದಲ್ಲಿ ಅವರಿಗೆ ನಿಚ್ಚಳ ಸೋಲಾಗಿತ್ತು. ಪೋಲ್ ನಲ್ಲಿ 14810ಜನ ಒಟ್ಟು ವೋಟ್ ಮಾಡಿದ್ದು 70%ಜನ ಸಾವಿನ ಸಂಭ್ರಮ ಖಂಡಿತ ತಪ್ಪೆಂದರೆ 30% ಜನ ಮಾತ್ರ ಸರಿ ಎಂದು ಸಮರ್ಥಿಸಿಕೊಂಡಿದ್ದರು.

ಅಂದರೆ ಇಂದಿಗೂ 70% ಅಂದರೆ ಪೋಲ್ ಪ್ರಕಾರ 10367 ಜನ ಸಾವಿನ ಸಂಭ್ರಮವನ್ನು ವಿರೋಧಿಸಿ ಜೀವಪರತೆ ಮೆರೆದಿದ್ದಾರೆ. ಇದು ಭರವಸೆಯ ಸಂಗತಿ. ಈ ಸಮಾಜವನ್ನು ಒಂದಷ್ಟು ಸಹನೀಯಗೊಳಿಸಬಹುದೆಂಬ ಆಶಯಕ್ಕೆ ಇದು ವಿಶ್ವಾಸ ಕೊಡುವ ಸಂಗತಿಯಾಗುತ್ತದೆ. ಅಂದರೆ ಸಜ್ಜನರು ಇನ್ನು ಹೆಚ್ಚಿನ ಸಂಖ್ಯೆಯಲ್ಲಿಯೇ ಇದ್ದಾರೆ ಎಂಬುದನ್ನು ಇದು ಎತ್ತಿ ತೋರಿಸುತ್ತದೆ. ಹೊಸದೊಂದನ್ನು ಕಟ್ಟುವ, ಮಾನವೀಯತೆಯನ್ನು, ಬಹುತ್ವವನ್ನು ಕಾಪಾಡಬೇಕೆಂದು ಶ್ರಮಿಸುವವರಿಗೆ ಇದು ಆಶಾದಾಯಕ ಸಂಗತಿ.

ಆದರೆ ಎಚ್ಚರಿಕೆಯ ಸಂಗತಿಯೆಂದರೆ 30%ಜನ ವೋಟ್ ಮಾಡಿರುವ 4443 ಜನ ಸಾವನ್ನು ಸಂಭ್ರಮಿಸಿದ್ದಾರೆ, ವಿಕೃತತೆ ಮೆರೆದಿದ್ದಾರೆ. ಕೆಟ್ಟದಾಗಿ ಬೈಯ್ಯುವ ಮನಸ್ಥಿತಿ ರೂಢಿಸಿಕೊಂಡಿದ್ದಾರೆ. ಇದು ಸಹ ಕಡಿಮೆ ಸಂಖ್ಯೆಯೇನಲ್ಲ. ಇವರು ಹೀಗೇಕಾದರೂ ಎಂಬುದರ ಕುರಿತು ಯೋಚಿಸಬೇಕಿದೆ. ಏಕೆಂದರೆ ಯಾವ ಧರ್ಮವೂ ಸಹ ಸಾವನ್ನು ಸಂಭ್ರಮಿಸು ಎಂದು ಹೇಳಿಕೊಡುವುದಿಲ್ಲವಲ್ಲ?

ಈ ಪೋಲ್ ನಲ್ಲಿ ಗಮನಿಸಬೇಕಾದ ಸಂಗತಿಯೆಂದರೆ ಒಟ್ಟು 259 ಜನ ಕಮೆಂಟ್ ಮಾಡಿದ್ದಾರೆ. ಅದರಲ್ಲಿ ಬೆರಳೆಣಿಕೆಯ ಮಂದಿ ಮಾತ್ರ ಸಾವನ್ನು ಸಂಭ್ರಮಿಸುವುದು ಸರಿಯಲ್ಲ ಎಂಬ ಕಾಳಜಿ ತೋರಿಸಿದ್ದಾರೆ. ಇನ್ನುಳಿದಂತೆ ಎಲ್ಲವೂ ಬಲಪಂಥೀಯರ ಕಮೆಂಟ್ ಗಳೇ ಆಗಿದ್ದು ತೀರಾ ಕೊಳಕು ಭಾಷೆಯನ್ನು ಪ್ರಯೋಗಿಸಿ ಹೀಗಳೆದಿದ್ದಾರೆ. ಇದು ಹೇಗೆ ಸಾಧ್ಯ? ವೋಟ್ ಮಾಡಿರುವವರು 70%ಜನ ಸಾವಿನ ಸಂಭ್ರಮ ಸರಿಯಲ್ಲ ಎಂದರೆ ಕಮೆಂಟ್ ಮಾಡಿರುವ 90%ಗೂ ಹೆಚ್ಚು ಜನ ಸರಿ ಎಂದು ವಿಕೃತತೆ ಅನುಭವಿಸಿದ್ದಾರೆ.

ಅಂದರೆ ಸಜ್ಜನರು ಮೌನವಾಗಿದ್ದರೆ ದುರ್ಜನರು ಜೋರಾಗಿಯೇ ಸದ್ದು ಮಾಡುತ್ತಿದ್ದಾರೆ. ಒಳ್ಳೆಯ ಮನಸ್ಥಿತಿಯವರು ವೋಟ್ ಮಾಡಿ ಮುಂದೆ ಹೋಗಿದ್ದಾರೆ. ಅಲ್ಲಿ ಬಲಪಂಥೀಯರೊಡನೆ ಕಮೆಂಟ್ ಮಾಡುವುದಕ್ಕೆ ಇಳಿದಿಲ್ಲ. ಇದರಿಂದ ಪ್ರಯೋಜನ ಸಹ ಇಲ್ಲ ಅನ್ನಿಸಿರಬೇಕು. ಇನ್ನು ಕೆಲವರಿಗೆ ಅಷ್ಟು ಸಮಯವಿರಲ್ಲಿಕ್ಕಿಲ್ಲ. ಆದರೆ ಅಲ್ಲಿ ಕೆಟ್ಟದಾಗಿ ಕಮೆಂಟ್ ಮಾಡಿರುವ ಅರ್ಧಕ್ಕಿಂತ ಹೆಚ್ಚು ಫೇಕ್ ಅಕೌಂಟ್‍ಗಳೆ ಆಗಿವೆ. ಉಳಿದವರ ಕೆಲಸ ಸಹ ಸದಾ ಫೇಸ್ ಬುಕ್ ವಾಟ್ಸಾಪ್ ನಲ್ಲಿ ಸುಳ್ಳು ಸುದ್ದಿ ಹಬ್ಬಿಸುವುದು, ಈ ರೀತಿ ಕೆಟ್ಟದಾಗಿ ಕಮೆಂಟ್ ಮಾಡುವುದೇ ಆಗಿದೆ.

ಒಟ್ಟಿನಲ್ಲಿ ಸಾಮಾಜಿಕ ಬದಲಾವಣೆ ಬಯಸುವವರಿಗೆ ಈ ಪೋಲ್ ಹೊಸದಾಗಿ ಜನಪರವಾಗಿ, ಜೀವಪರವಾಗಿ ಏನನ್ನಾದರೂ ಮಾಡುವುದಾದರೆ ಇನ್ನು ಇರುವ ಅವಕಾಶವನ್ನು ತೋರಿಸುತ್ತದೆ. ಜೊತೆಗೇನೆ ಜನರ ಮನಸ್ಥಿತಿ ನಿಧಾನವಾಗಿ ವಿಷಮಯವಾಗುತ್ತಿರುವುದನ್ನು, ಕೆಲವರು ಈಗಾಗಲೇ ವಿಕೃತರಾಗಿರುವುದನ್ನು ತೋರಿಸುತ್ತಲೇ ಎಚ್ಚರಿಕೆ ನೀಡುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...