Homeಕರ್ನಾಟಕನಾನು ಗೌರಿ ಪೋಲ್, ವಿಕೃತರಿಗೆ ಸೋಲು : ಸಾವನ್ನು ಸಂಭ್ರಮಿಸುವುದು ತಪ್ಪೆಂದವರು 70%, ಸರಿಯೆಂದವರು 30%

ನಾನು ಗೌರಿ ಪೋಲ್, ವಿಕೃತರಿಗೆ ಸೋಲು : ಸಾವನ್ನು ಸಂಭ್ರಮಿಸುವುದು ತಪ್ಪೆಂದವರು 70%, ಸರಿಯೆಂದವರು 30%

- Advertisement -
- Advertisement -

| ನಾನುಗೌರಿ ಡೆಸ್ಕ್ |

ಕನ್ನಡದ ಮೇರು ಲೇಖಕ, ನಾಟಕಕಾರ, ಜೀವಪರ ಹೋರಾಟಗಾರ ಗಿರೀಶ್ ಕಾರ್ನಾಡ್‍ರವರ ನಿಧನದ ನಂತರ ಲಕ್ಷಾಂತರ ಜನ ಕಂಬನಿ ಮಿಡಿದಿದ್ದರು. ಚಳವಳಿ ಮತ್ತು ಕನ್ನಡ ಸಾಹಿತ್ಯ ಲೋಕಕ್ಕೆ ಅವರ ಕೊಡುಗೆಯನ್ನು ಸ್ಮರಿಸಿದ್ದರು. ನೋವಿನ ಭಾವಪೂರ್ಣ ವಿದಾಯವನ್ನು ಸಲ್ಲಿಸಿದ್ದರು. ಜೊತೆಗೇನೆ ಹಲವು ವಿಕೃತ ಮನಸ್ಸಿನವರು, ಒಂದು ಪಕ್ಷಕ್ಕೆ ಸೇರಿದವರು ಸಾಮಾಜಿಕ ಜಾಲತಾಣಗಳಲ್ಲಿ ಅವರ ಸಾವನ್ನು ಸಂಭ್ರಮಿಸಿ ಪೋಸ್ಟ್ ಸಹ ಹಾಕಿದ್ದರು. ಇದರ ಕುರಿತಾಗಿ ಸಾಕಷ್ಟು ಸುದ್ದಿಯಾಗಿತ್ತು.

ಇದರಿಂದ ನಾನುಗೌರಿ.ಕಾಂ ವತಿಯಿಂದ ಜನರ ಮನಸ್ಥಿತಿ ಅರ್ಥ ಮಾಡಿಕೊಳ್ಳು ನಾನುಗೌರಿ ಫೇಸ್‍ಬುಕ್ ಪುಟದಲ್ಲಿ ಒಂದು ಪೋಲ್ ಕ್ರಿಯೇಟ್ ಮಾಡಲಾಗಿತ್ತು. “ಸಾವನ್ನು ಸಂಭ್ರಮಿಸುವುದು ಭಾರತೀಯ ಸಂಸ್ಕøತಿಯೇ? ವೋಟ್ ಮಾಡಿ, ಕಾಮೆಂಟ್ ಮಾಡಿ. ಷೇರ್ ಸಹ ಮಾಡಬಹುದು” ಎಂದು ಪೋಲ್ ನಲ್ಲಿ ಬರೆದು 1. ಹೌದು 2. ಖಂಡಿತಾ ಅಲ್ಲ ಎಂಬ ಎರಡು ಆಯ್ಕೆಗಳನ್ನು ನೀಡಲಾಗಿತ್ತು.

ಸಾವನ್ನು ಸಂಭ್ರಮಿಸುವುದು ಭಾರತೀಯ ಸಂಸ್ಕೃತಿಯೇ? ವೋಟ್ ಮಾಡಿ, ಕಾಮೆಂಟ್ ಮಾಡಿ. ಷೇರ್ ಸಹಾ ಮಾಡಬಹುದು.

Naanu Gauri यांनी वर पोस्ट केले सोमवार, १० जून, २०१९

ಪೋಲ್ ಆರಂಭವಾದ ಕೆಲವೇ ಕ್ಷಣಗಳಲ್ಲಿ ನೂರಾರು ಜನ ಓಟ್ ಮಾಡಿ ಖಂಡಿತಾ ಅಲ್ಲ ಎಂಬುದಕ್ಕೆ ಮತ ಹಾಕಿದ್ದರು. ಅಷ್ಟರಲ್ಲಿ ಕ್ರಿಸ್ಟೋಫರ್ ಚಕ್ರವರ್ತಿ ಹೆಸರಿನ ಮೋದಿಯವರು ಫ್ರೊಫೈಲ್ ಹಾಕಿದ್ದ ಫೇಕ್ ಅಕೌಂಟ್‍ನಿಂದ ಒಬ್ಬರು “ನೀವ್ಯಾರು ಈ ಜನ್ಮದಲ್ಲಿ ಪೋಲ್ ಗೆಲ್ಲೋಕೆ ಆಗೋದಿಲ್ಲ.. ಕಿಲ ಕಿಲ,,, ನಾವ್ ಬಿಡಕಿಲ್ಲ ಎಂದು ಕಮೆಂಟ್” ಮಾಡಿದರು. ಅಷ್ಟು ಮಾತ್ರವಲ್ಲದೇ ಪೋಲ್‍ನ ಲಿಂಕ್ ಕಾಪಿ ಮಾಡಿ ಬಲಪಂಥೀಯ ಗ್ರೂಪುಗಳಲ್ಲಿ ಷೇರ್ ಮಾಡಿ ಬಂದು ಇಲ್ಲಿ ವೋಟ್ ಮತ್ತು ಕಮೆಂಟ್ ಮಾಡುವಂತೆ ಮಾಡಿದರು. ಆಗ ಪೋಲ್ ನಲ್ಲಿ 76%ಜನ ಸಾವಿನ ಸಂಭ್ರಮ ಖಂಡಿತ ತಪ್ಪೆಂದರೆ 24% ಜನ ಸರಿ ಎಂದು ಸಮರ್ಥಿಸಿಕೊಂಡಿದ್ದರು.

ಪೋಲ್ ಡಿಲೀಟ್ ಮಾಡಿದ್ರೆ ಕಾರ್ನಾಡ್ ಪ್ರೇತಾತ್ಮನಾಗಿ ನಿನ್ನ ಮನೇಲಿ ಅಲಿತಾನೇ ಹುಷಾರ್ ಎಂದು ಕಮೆಂಟ್ ಮಾಡಿದರು. ಬೆಳಿಗ್ಗೆ ಒಳಗೆ ಈ ಪೋಲ್ ಉಡೀಸ್ ಮಾಡ್ತೀವಿ ನೋಡಿ ಎಂದು ಚಾಲೆಂಜ್ ಸಹ ಹಾಕಿದರು. ಅಂದರೆ ಅವರ ಕಡೆಯವರೆಲ್ಲಾ ಬಂದು ಸಾವನ್ನು ಸಂಭ್ರಮಿಸುವುದು ಸರಿ ಎಂದು ಕಮೆಂಟ್ ಮತ್ತು ವೋಟ್ ಮಾಡುತ್ತಾರೆ ಎಂಬ ಅತೀ ಆತ್ಮವಿಶ್ವಾಸ ಅವರದು. ಅದಾದ ಸ್ವಲ್ಪ ಹೊತ್ತಿನಲ್ಲೇ ನೂರಾರು ಜನ ಬಲಪಂಥೀಯರು ಪೋಲ್‍ಗೆ ಲಗ್ಗೆ ಇಟ್ಟರು. ವೋಟ್ ಮಾಡಿ ಕೆಟ್ಟ ಕೊಳಕಾಗಿ, ಅಶ್ಲೀಲವಾಗಿ ಬೈಗುಳಗಳ ಮಳೆ ಸುರಿಸಿದರು.

ಅಷ್ಟು ಮಾತ್ರವಲ್ಲದೇ ತಮ್ಮ ಯಾವು ಯಾವುದೋ ಫೇಸ್‍ಬುಕ್ ಪೇಜ್‍ನಲ್ಲಿ, ಗ್ರೂಪ್‍ನಲ್ಲಿ ಮತ್ತು ವಾಟ್ಸಾಪ್ ಗುಂಪುಗಳಿಗೆ ಪೋಲ್‍ನ ಲಿಂಕ್ ಹಾಕಿ ಬಂದು ವೋಟ್ ಮಾಡಲು ಮತ್ತು ಕೆಟ್ಟದಾಗಿ ಕಮೆಂಟ್ ಮಾಡಲು ಕರೆ ನೀಡಿದ್ದರು. ಆದರೆ ಒಂದು ದಿನದ ಪೋಲ್ ಮುಗಿದಾಗ ಅವರ ಬಯಕೆ ಸ್ವಲ್ಪ ಮಾತ್ರವೇ ಈಡೇರಿತ್ತು. ಅಂಕಿ ಸಂಖ್ಯೆಗಳ ಆಧಾರದಲ್ಲಿ ಅವರಿಗೆ ನಿಚ್ಚಳ ಸೋಲಾಗಿತ್ತು. ಪೋಲ್ ನಲ್ಲಿ 14810ಜನ ಒಟ್ಟು ವೋಟ್ ಮಾಡಿದ್ದು 70%ಜನ ಸಾವಿನ ಸಂಭ್ರಮ ಖಂಡಿತ ತಪ್ಪೆಂದರೆ 30% ಜನ ಮಾತ್ರ ಸರಿ ಎಂದು ಸಮರ್ಥಿಸಿಕೊಂಡಿದ್ದರು.

ಅಂದರೆ ಇಂದಿಗೂ 70% ಅಂದರೆ ಪೋಲ್ ಪ್ರಕಾರ 10367 ಜನ ಸಾವಿನ ಸಂಭ್ರಮವನ್ನು ವಿರೋಧಿಸಿ ಜೀವಪರತೆ ಮೆರೆದಿದ್ದಾರೆ. ಇದು ಭರವಸೆಯ ಸಂಗತಿ. ಈ ಸಮಾಜವನ್ನು ಒಂದಷ್ಟು ಸಹನೀಯಗೊಳಿಸಬಹುದೆಂಬ ಆಶಯಕ್ಕೆ ಇದು ವಿಶ್ವಾಸ ಕೊಡುವ ಸಂಗತಿಯಾಗುತ್ತದೆ. ಅಂದರೆ ಸಜ್ಜನರು ಇನ್ನು ಹೆಚ್ಚಿನ ಸಂಖ್ಯೆಯಲ್ಲಿಯೇ ಇದ್ದಾರೆ ಎಂಬುದನ್ನು ಇದು ಎತ್ತಿ ತೋರಿಸುತ್ತದೆ. ಹೊಸದೊಂದನ್ನು ಕಟ್ಟುವ, ಮಾನವೀಯತೆಯನ್ನು, ಬಹುತ್ವವನ್ನು ಕಾಪಾಡಬೇಕೆಂದು ಶ್ರಮಿಸುವವರಿಗೆ ಇದು ಆಶಾದಾಯಕ ಸಂಗತಿ.

ಆದರೆ ಎಚ್ಚರಿಕೆಯ ಸಂಗತಿಯೆಂದರೆ 30%ಜನ ವೋಟ್ ಮಾಡಿರುವ 4443 ಜನ ಸಾವನ್ನು ಸಂಭ್ರಮಿಸಿದ್ದಾರೆ, ವಿಕೃತತೆ ಮೆರೆದಿದ್ದಾರೆ. ಕೆಟ್ಟದಾಗಿ ಬೈಯ್ಯುವ ಮನಸ್ಥಿತಿ ರೂಢಿಸಿಕೊಂಡಿದ್ದಾರೆ. ಇದು ಸಹ ಕಡಿಮೆ ಸಂಖ್ಯೆಯೇನಲ್ಲ. ಇವರು ಹೀಗೇಕಾದರೂ ಎಂಬುದರ ಕುರಿತು ಯೋಚಿಸಬೇಕಿದೆ. ಏಕೆಂದರೆ ಯಾವ ಧರ್ಮವೂ ಸಹ ಸಾವನ್ನು ಸಂಭ್ರಮಿಸು ಎಂದು ಹೇಳಿಕೊಡುವುದಿಲ್ಲವಲ್ಲ?

ಈ ಪೋಲ್ ನಲ್ಲಿ ಗಮನಿಸಬೇಕಾದ ಸಂಗತಿಯೆಂದರೆ ಒಟ್ಟು 259 ಜನ ಕಮೆಂಟ್ ಮಾಡಿದ್ದಾರೆ. ಅದರಲ್ಲಿ ಬೆರಳೆಣಿಕೆಯ ಮಂದಿ ಮಾತ್ರ ಸಾವನ್ನು ಸಂಭ್ರಮಿಸುವುದು ಸರಿಯಲ್ಲ ಎಂಬ ಕಾಳಜಿ ತೋರಿಸಿದ್ದಾರೆ. ಇನ್ನುಳಿದಂತೆ ಎಲ್ಲವೂ ಬಲಪಂಥೀಯರ ಕಮೆಂಟ್ ಗಳೇ ಆಗಿದ್ದು ತೀರಾ ಕೊಳಕು ಭಾಷೆಯನ್ನು ಪ್ರಯೋಗಿಸಿ ಹೀಗಳೆದಿದ್ದಾರೆ. ಇದು ಹೇಗೆ ಸಾಧ್ಯ? ವೋಟ್ ಮಾಡಿರುವವರು 70%ಜನ ಸಾವಿನ ಸಂಭ್ರಮ ಸರಿಯಲ್ಲ ಎಂದರೆ ಕಮೆಂಟ್ ಮಾಡಿರುವ 90%ಗೂ ಹೆಚ್ಚು ಜನ ಸರಿ ಎಂದು ವಿಕೃತತೆ ಅನುಭವಿಸಿದ್ದಾರೆ.

ಅಂದರೆ ಸಜ್ಜನರು ಮೌನವಾಗಿದ್ದರೆ ದುರ್ಜನರು ಜೋರಾಗಿಯೇ ಸದ್ದು ಮಾಡುತ್ತಿದ್ದಾರೆ. ಒಳ್ಳೆಯ ಮನಸ್ಥಿತಿಯವರು ವೋಟ್ ಮಾಡಿ ಮುಂದೆ ಹೋಗಿದ್ದಾರೆ. ಅಲ್ಲಿ ಬಲಪಂಥೀಯರೊಡನೆ ಕಮೆಂಟ್ ಮಾಡುವುದಕ್ಕೆ ಇಳಿದಿಲ್ಲ. ಇದರಿಂದ ಪ್ರಯೋಜನ ಸಹ ಇಲ್ಲ ಅನ್ನಿಸಿರಬೇಕು. ಇನ್ನು ಕೆಲವರಿಗೆ ಅಷ್ಟು ಸಮಯವಿರಲ್ಲಿಕ್ಕಿಲ್ಲ. ಆದರೆ ಅಲ್ಲಿ ಕೆಟ್ಟದಾಗಿ ಕಮೆಂಟ್ ಮಾಡಿರುವ ಅರ್ಧಕ್ಕಿಂತ ಹೆಚ್ಚು ಫೇಕ್ ಅಕೌಂಟ್‍ಗಳೆ ಆಗಿವೆ. ಉಳಿದವರ ಕೆಲಸ ಸಹ ಸದಾ ಫೇಸ್ ಬುಕ್ ವಾಟ್ಸಾಪ್ ನಲ್ಲಿ ಸುಳ್ಳು ಸುದ್ದಿ ಹಬ್ಬಿಸುವುದು, ಈ ರೀತಿ ಕೆಟ್ಟದಾಗಿ ಕಮೆಂಟ್ ಮಾಡುವುದೇ ಆಗಿದೆ.

ಒಟ್ಟಿನಲ್ಲಿ ಸಾಮಾಜಿಕ ಬದಲಾವಣೆ ಬಯಸುವವರಿಗೆ ಈ ಪೋಲ್ ಹೊಸದಾಗಿ ಜನಪರವಾಗಿ, ಜೀವಪರವಾಗಿ ಏನನ್ನಾದರೂ ಮಾಡುವುದಾದರೆ ಇನ್ನು ಇರುವ ಅವಕಾಶವನ್ನು ತೋರಿಸುತ್ತದೆ. ಜೊತೆಗೇನೆ ಜನರ ಮನಸ್ಥಿತಿ ನಿಧಾನವಾಗಿ ವಿಷಮಯವಾಗುತ್ತಿರುವುದನ್ನು, ಕೆಲವರು ಈಗಾಗಲೇ ವಿಕೃತರಾಗಿರುವುದನ್ನು ತೋರಿಸುತ್ತಲೇ ಎಚ್ಚರಿಕೆ ನೀಡುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...