Homeಕರ್ನಾಟಕನಾನು ಗೌರಿ ಪೋಲ್, ವಿಕೃತರಿಗೆ ಸೋಲು : ಸಾವನ್ನು ಸಂಭ್ರಮಿಸುವುದು ತಪ್ಪೆಂದವರು 70%, ಸರಿಯೆಂದವರು 30%

ನಾನು ಗೌರಿ ಪೋಲ್, ವಿಕೃತರಿಗೆ ಸೋಲು : ಸಾವನ್ನು ಸಂಭ್ರಮಿಸುವುದು ತಪ್ಪೆಂದವರು 70%, ಸರಿಯೆಂದವರು 30%

- Advertisement -
- Advertisement -

| ನಾನುಗೌರಿ ಡೆಸ್ಕ್ |

ಕನ್ನಡದ ಮೇರು ಲೇಖಕ, ನಾಟಕಕಾರ, ಜೀವಪರ ಹೋರಾಟಗಾರ ಗಿರೀಶ್ ಕಾರ್ನಾಡ್‍ರವರ ನಿಧನದ ನಂತರ ಲಕ್ಷಾಂತರ ಜನ ಕಂಬನಿ ಮಿಡಿದಿದ್ದರು. ಚಳವಳಿ ಮತ್ತು ಕನ್ನಡ ಸಾಹಿತ್ಯ ಲೋಕಕ್ಕೆ ಅವರ ಕೊಡುಗೆಯನ್ನು ಸ್ಮರಿಸಿದ್ದರು. ನೋವಿನ ಭಾವಪೂರ್ಣ ವಿದಾಯವನ್ನು ಸಲ್ಲಿಸಿದ್ದರು. ಜೊತೆಗೇನೆ ಹಲವು ವಿಕೃತ ಮನಸ್ಸಿನವರು, ಒಂದು ಪಕ್ಷಕ್ಕೆ ಸೇರಿದವರು ಸಾಮಾಜಿಕ ಜಾಲತಾಣಗಳಲ್ಲಿ ಅವರ ಸಾವನ್ನು ಸಂಭ್ರಮಿಸಿ ಪೋಸ್ಟ್ ಸಹ ಹಾಕಿದ್ದರು. ಇದರ ಕುರಿತಾಗಿ ಸಾಕಷ್ಟು ಸುದ್ದಿಯಾಗಿತ್ತು.

ಇದರಿಂದ ನಾನುಗೌರಿ.ಕಾಂ ವತಿಯಿಂದ ಜನರ ಮನಸ್ಥಿತಿ ಅರ್ಥ ಮಾಡಿಕೊಳ್ಳು ನಾನುಗೌರಿ ಫೇಸ್‍ಬುಕ್ ಪುಟದಲ್ಲಿ ಒಂದು ಪೋಲ್ ಕ್ರಿಯೇಟ್ ಮಾಡಲಾಗಿತ್ತು. “ಸಾವನ್ನು ಸಂಭ್ರಮಿಸುವುದು ಭಾರತೀಯ ಸಂಸ್ಕøತಿಯೇ? ವೋಟ್ ಮಾಡಿ, ಕಾಮೆಂಟ್ ಮಾಡಿ. ಷೇರ್ ಸಹ ಮಾಡಬಹುದು” ಎಂದು ಪೋಲ್ ನಲ್ಲಿ ಬರೆದು 1. ಹೌದು 2. ಖಂಡಿತಾ ಅಲ್ಲ ಎಂಬ ಎರಡು ಆಯ್ಕೆಗಳನ್ನು ನೀಡಲಾಗಿತ್ತು.

ಸಾವನ್ನು ಸಂಭ್ರಮಿಸುವುದು ಭಾರತೀಯ ಸಂಸ್ಕೃತಿಯೇ? ವೋಟ್ ಮಾಡಿ, ಕಾಮೆಂಟ್ ಮಾಡಿ. ಷೇರ್ ಸಹಾ ಮಾಡಬಹುದು.

Naanu Gauri यांनी वर पोस्ट केले सोमवार, १० जून, २०१९

ಪೋಲ್ ಆರಂಭವಾದ ಕೆಲವೇ ಕ್ಷಣಗಳಲ್ಲಿ ನೂರಾರು ಜನ ಓಟ್ ಮಾಡಿ ಖಂಡಿತಾ ಅಲ್ಲ ಎಂಬುದಕ್ಕೆ ಮತ ಹಾಕಿದ್ದರು. ಅಷ್ಟರಲ್ಲಿ ಕ್ರಿಸ್ಟೋಫರ್ ಚಕ್ರವರ್ತಿ ಹೆಸರಿನ ಮೋದಿಯವರು ಫ್ರೊಫೈಲ್ ಹಾಕಿದ್ದ ಫೇಕ್ ಅಕೌಂಟ್‍ನಿಂದ ಒಬ್ಬರು “ನೀವ್ಯಾರು ಈ ಜನ್ಮದಲ್ಲಿ ಪೋಲ್ ಗೆಲ್ಲೋಕೆ ಆಗೋದಿಲ್ಲ.. ಕಿಲ ಕಿಲ,,, ನಾವ್ ಬಿಡಕಿಲ್ಲ ಎಂದು ಕಮೆಂಟ್” ಮಾಡಿದರು. ಅಷ್ಟು ಮಾತ್ರವಲ್ಲದೇ ಪೋಲ್‍ನ ಲಿಂಕ್ ಕಾಪಿ ಮಾಡಿ ಬಲಪಂಥೀಯ ಗ್ರೂಪುಗಳಲ್ಲಿ ಷೇರ್ ಮಾಡಿ ಬಂದು ಇಲ್ಲಿ ವೋಟ್ ಮತ್ತು ಕಮೆಂಟ್ ಮಾಡುವಂತೆ ಮಾಡಿದರು. ಆಗ ಪೋಲ್ ನಲ್ಲಿ 76%ಜನ ಸಾವಿನ ಸಂಭ್ರಮ ಖಂಡಿತ ತಪ್ಪೆಂದರೆ 24% ಜನ ಸರಿ ಎಂದು ಸಮರ್ಥಿಸಿಕೊಂಡಿದ್ದರು.

ಪೋಲ್ ಡಿಲೀಟ್ ಮಾಡಿದ್ರೆ ಕಾರ್ನಾಡ್ ಪ್ರೇತಾತ್ಮನಾಗಿ ನಿನ್ನ ಮನೇಲಿ ಅಲಿತಾನೇ ಹುಷಾರ್ ಎಂದು ಕಮೆಂಟ್ ಮಾಡಿದರು. ಬೆಳಿಗ್ಗೆ ಒಳಗೆ ಈ ಪೋಲ್ ಉಡೀಸ್ ಮಾಡ್ತೀವಿ ನೋಡಿ ಎಂದು ಚಾಲೆಂಜ್ ಸಹ ಹಾಕಿದರು. ಅಂದರೆ ಅವರ ಕಡೆಯವರೆಲ್ಲಾ ಬಂದು ಸಾವನ್ನು ಸಂಭ್ರಮಿಸುವುದು ಸರಿ ಎಂದು ಕಮೆಂಟ್ ಮತ್ತು ವೋಟ್ ಮಾಡುತ್ತಾರೆ ಎಂಬ ಅತೀ ಆತ್ಮವಿಶ್ವಾಸ ಅವರದು. ಅದಾದ ಸ್ವಲ್ಪ ಹೊತ್ತಿನಲ್ಲೇ ನೂರಾರು ಜನ ಬಲಪಂಥೀಯರು ಪೋಲ್‍ಗೆ ಲಗ್ಗೆ ಇಟ್ಟರು. ವೋಟ್ ಮಾಡಿ ಕೆಟ್ಟ ಕೊಳಕಾಗಿ, ಅಶ್ಲೀಲವಾಗಿ ಬೈಗುಳಗಳ ಮಳೆ ಸುರಿಸಿದರು.

ಅಷ್ಟು ಮಾತ್ರವಲ್ಲದೇ ತಮ್ಮ ಯಾವು ಯಾವುದೋ ಫೇಸ್‍ಬುಕ್ ಪೇಜ್‍ನಲ್ಲಿ, ಗ್ರೂಪ್‍ನಲ್ಲಿ ಮತ್ತು ವಾಟ್ಸಾಪ್ ಗುಂಪುಗಳಿಗೆ ಪೋಲ್‍ನ ಲಿಂಕ್ ಹಾಕಿ ಬಂದು ವೋಟ್ ಮಾಡಲು ಮತ್ತು ಕೆಟ್ಟದಾಗಿ ಕಮೆಂಟ್ ಮಾಡಲು ಕರೆ ನೀಡಿದ್ದರು. ಆದರೆ ಒಂದು ದಿನದ ಪೋಲ್ ಮುಗಿದಾಗ ಅವರ ಬಯಕೆ ಸ್ವಲ್ಪ ಮಾತ್ರವೇ ಈಡೇರಿತ್ತು. ಅಂಕಿ ಸಂಖ್ಯೆಗಳ ಆಧಾರದಲ್ಲಿ ಅವರಿಗೆ ನಿಚ್ಚಳ ಸೋಲಾಗಿತ್ತು. ಪೋಲ್ ನಲ್ಲಿ 14810ಜನ ಒಟ್ಟು ವೋಟ್ ಮಾಡಿದ್ದು 70%ಜನ ಸಾವಿನ ಸಂಭ್ರಮ ಖಂಡಿತ ತಪ್ಪೆಂದರೆ 30% ಜನ ಮಾತ್ರ ಸರಿ ಎಂದು ಸಮರ್ಥಿಸಿಕೊಂಡಿದ್ದರು.

ಅಂದರೆ ಇಂದಿಗೂ 70% ಅಂದರೆ ಪೋಲ್ ಪ್ರಕಾರ 10367 ಜನ ಸಾವಿನ ಸಂಭ್ರಮವನ್ನು ವಿರೋಧಿಸಿ ಜೀವಪರತೆ ಮೆರೆದಿದ್ದಾರೆ. ಇದು ಭರವಸೆಯ ಸಂಗತಿ. ಈ ಸಮಾಜವನ್ನು ಒಂದಷ್ಟು ಸಹನೀಯಗೊಳಿಸಬಹುದೆಂಬ ಆಶಯಕ್ಕೆ ಇದು ವಿಶ್ವಾಸ ಕೊಡುವ ಸಂಗತಿಯಾಗುತ್ತದೆ. ಅಂದರೆ ಸಜ್ಜನರು ಇನ್ನು ಹೆಚ್ಚಿನ ಸಂಖ್ಯೆಯಲ್ಲಿಯೇ ಇದ್ದಾರೆ ಎಂಬುದನ್ನು ಇದು ಎತ್ತಿ ತೋರಿಸುತ್ತದೆ. ಹೊಸದೊಂದನ್ನು ಕಟ್ಟುವ, ಮಾನವೀಯತೆಯನ್ನು, ಬಹುತ್ವವನ್ನು ಕಾಪಾಡಬೇಕೆಂದು ಶ್ರಮಿಸುವವರಿಗೆ ಇದು ಆಶಾದಾಯಕ ಸಂಗತಿ.

ಆದರೆ ಎಚ್ಚರಿಕೆಯ ಸಂಗತಿಯೆಂದರೆ 30%ಜನ ವೋಟ್ ಮಾಡಿರುವ 4443 ಜನ ಸಾವನ್ನು ಸಂಭ್ರಮಿಸಿದ್ದಾರೆ, ವಿಕೃತತೆ ಮೆರೆದಿದ್ದಾರೆ. ಕೆಟ್ಟದಾಗಿ ಬೈಯ್ಯುವ ಮನಸ್ಥಿತಿ ರೂಢಿಸಿಕೊಂಡಿದ್ದಾರೆ. ಇದು ಸಹ ಕಡಿಮೆ ಸಂಖ್ಯೆಯೇನಲ್ಲ. ಇವರು ಹೀಗೇಕಾದರೂ ಎಂಬುದರ ಕುರಿತು ಯೋಚಿಸಬೇಕಿದೆ. ಏಕೆಂದರೆ ಯಾವ ಧರ್ಮವೂ ಸಹ ಸಾವನ್ನು ಸಂಭ್ರಮಿಸು ಎಂದು ಹೇಳಿಕೊಡುವುದಿಲ್ಲವಲ್ಲ?

ಈ ಪೋಲ್ ನಲ್ಲಿ ಗಮನಿಸಬೇಕಾದ ಸಂಗತಿಯೆಂದರೆ ಒಟ್ಟು 259 ಜನ ಕಮೆಂಟ್ ಮಾಡಿದ್ದಾರೆ. ಅದರಲ್ಲಿ ಬೆರಳೆಣಿಕೆಯ ಮಂದಿ ಮಾತ್ರ ಸಾವನ್ನು ಸಂಭ್ರಮಿಸುವುದು ಸರಿಯಲ್ಲ ಎಂಬ ಕಾಳಜಿ ತೋರಿಸಿದ್ದಾರೆ. ಇನ್ನುಳಿದಂತೆ ಎಲ್ಲವೂ ಬಲಪಂಥೀಯರ ಕಮೆಂಟ್ ಗಳೇ ಆಗಿದ್ದು ತೀರಾ ಕೊಳಕು ಭಾಷೆಯನ್ನು ಪ್ರಯೋಗಿಸಿ ಹೀಗಳೆದಿದ್ದಾರೆ. ಇದು ಹೇಗೆ ಸಾಧ್ಯ? ವೋಟ್ ಮಾಡಿರುವವರು 70%ಜನ ಸಾವಿನ ಸಂಭ್ರಮ ಸರಿಯಲ್ಲ ಎಂದರೆ ಕಮೆಂಟ್ ಮಾಡಿರುವ 90%ಗೂ ಹೆಚ್ಚು ಜನ ಸರಿ ಎಂದು ವಿಕೃತತೆ ಅನುಭವಿಸಿದ್ದಾರೆ.

ಅಂದರೆ ಸಜ್ಜನರು ಮೌನವಾಗಿದ್ದರೆ ದುರ್ಜನರು ಜೋರಾಗಿಯೇ ಸದ್ದು ಮಾಡುತ್ತಿದ್ದಾರೆ. ಒಳ್ಳೆಯ ಮನಸ್ಥಿತಿಯವರು ವೋಟ್ ಮಾಡಿ ಮುಂದೆ ಹೋಗಿದ್ದಾರೆ. ಅಲ್ಲಿ ಬಲಪಂಥೀಯರೊಡನೆ ಕಮೆಂಟ್ ಮಾಡುವುದಕ್ಕೆ ಇಳಿದಿಲ್ಲ. ಇದರಿಂದ ಪ್ರಯೋಜನ ಸಹ ಇಲ್ಲ ಅನ್ನಿಸಿರಬೇಕು. ಇನ್ನು ಕೆಲವರಿಗೆ ಅಷ್ಟು ಸಮಯವಿರಲ್ಲಿಕ್ಕಿಲ್ಲ. ಆದರೆ ಅಲ್ಲಿ ಕೆಟ್ಟದಾಗಿ ಕಮೆಂಟ್ ಮಾಡಿರುವ ಅರ್ಧಕ್ಕಿಂತ ಹೆಚ್ಚು ಫೇಕ್ ಅಕೌಂಟ್‍ಗಳೆ ಆಗಿವೆ. ಉಳಿದವರ ಕೆಲಸ ಸಹ ಸದಾ ಫೇಸ್ ಬುಕ್ ವಾಟ್ಸಾಪ್ ನಲ್ಲಿ ಸುಳ್ಳು ಸುದ್ದಿ ಹಬ್ಬಿಸುವುದು, ಈ ರೀತಿ ಕೆಟ್ಟದಾಗಿ ಕಮೆಂಟ್ ಮಾಡುವುದೇ ಆಗಿದೆ.

ಒಟ್ಟಿನಲ್ಲಿ ಸಾಮಾಜಿಕ ಬದಲಾವಣೆ ಬಯಸುವವರಿಗೆ ಈ ಪೋಲ್ ಹೊಸದಾಗಿ ಜನಪರವಾಗಿ, ಜೀವಪರವಾಗಿ ಏನನ್ನಾದರೂ ಮಾಡುವುದಾದರೆ ಇನ್ನು ಇರುವ ಅವಕಾಶವನ್ನು ತೋರಿಸುತ್ತದೆ. ಜೊತೆಗೇನೆ ಜನರ ಮನಸ್ಥಿತಿ ನಿಧಾನವಾಗಿ ವಿಷಮಯವಾಗುತ್ತಿರುವುದನ್ನು, ಕೆಲವರು ಈಗಾಗಲೇ ವಿಕೃತರಾಗಿರುವುದನ್ನು ತೋರಿಸುತ್ತಲೇ ಎಚ್ಚರಿಕೆ ನೀಡುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...