Homeಕರ್ನಾಟಕನಾನು ಗೌರಿ ಪೋಲ್, ವಿಕೃತರಿಗೆ ಸೋಲು : ಸಾವನ್ನು ಸಂಭ್ರಮಿಸುವುದು ತಪ್ಪೆಂದವರು 70%, ಸರಿಯೆಂದವರು 30%

ನಾನು ಗೌರಿ ಪೋಲ್, ವಿಕೃತರಿಗೆ ಸೋಲು : ಸಾವನ್ನು ಸಂಭ್ರಮಿಸುವುದು ತಪ್ಪೆಂದವರು 70%, ಸರಿಯೆಂದವರು 30%

- Advertisement -
- Advertisement -

| ನಾನುಗೌರಿ ಡೆಸ್ಕ್ |

ಕನ್ನಡದ ಮೇರು ಲೇಖಕ, ನಾಟಕಕಾರ, ಜೀವಪರ ಹೋರಾಟಗಾರ ಗಿರೀಶ್ ಕಾರ್ನಾಡ್‍ರವರ ನಿಧನದ ನಂತರ ಲಕ್ಷಾಂತರ ಜನ ಕಂಬನಿ ಮಿಡಿದಿದ್ದರು. ಚಳವಳಿ ಮತ್ತು ಕನ್ನಡ ಸಾಹಿತ್ಯ ಲೋಕಕ್ಕೆ ಅವರ ಕೊಡುಗೆಯನ್ನು ಸ್ಮರಿಸಿದ್ದರು. ನೋವಿನ ಭಾವಪೂರ್ಣ ವಿದಾಯವನ್ನು ಸಲ್ಲಿಸಿದ್ದರು. ಜೊತೆಗೇನೆ ಹಲವು ವಿಕೃತ ಮನಸ್ಸಿನವರು, ಒಂದು ಪಕ್ಷಕ್ಕೆ ಸೇರಿದವರು ಸಾಮಾಜಿಕ ಜಾಲತಾಣಗಳಲ್ಲಿ ಅವರ ಸಾವನ್ನು ಸಂಭ್ರಮಿಸಿ ಪೋಸ್ಟ್ ಸಹ ಹಾಕಿದ್ದರು. ಇದರ ಕುರಿತಾಗಿ ಸಾಕಷ್ಟು ಸುದ್ದಿಯಾಗಿತ್ತು.

ಇದರಿಂದ ನಾನುಗೌರಿ.ಕಾಂ ವತಿಯಿಂದ ಜನರ ಮನಸ್ಥಿತಿ ಅರ್ಥ ಮಾಡಿಕೊಳ್ಳು ನಾನುಗೌರಿ ಫೇಸ್‍ಬುಕ್ ಪುಟದಲ್ಲಿ ಒಂದು ಪೋಲ್ ಕ್ರಿಯೇಟ್ ಮಾಡಲಾಗಿತ್ತು. “ಸಾವನ್ನು ಸಂಭ್ರಮಿಸುವುದು ಭಾರತೀಯ ಸಂಸ್ಕøತಿಯೇ? ವೋಟ್ ಮಾಡಿ, ಕಾಮೆಂಟ್ ಮಾಡಿ. ಷೇರ್ ಸಹ ಮಾಡಬಹುದು” ಎಂದು ಪೋಲ್ ನಲ್ಲಿ ಬರೆದು 1. ಹೌದು 2. ಖಂಡಿತಾ ಅಲ್ಲ ಎಂಬ ಎರಡು ಆಯ್ಕೆಗಳನ್ನು ನೀಡಲಾಗಿತ್ತು.

ಸಾವನ್ನು ಸಂಭ್ರಮಿಸುವುದು ಭಾರತೀಯ ಸಂಸ್ಕೃತಿಯೇ? ವೋಟ್ ಮಾಡಿ, ಕಾಮೆಂಟ್ ಮಾಡಿ. ಷೇರ್ ಸಹಾ ಮಾಡಬಹುದು.

Naanu Gauri यांनी वर पोस्ट केले सोमवार, १० जून, २०१९

ಪೋಲ್ ಆರಂಭವಾದ ಕೆಲವೇ ಕ್ಷಣಗಳಲ್ಲಿ ನೂರಾರು ಜನ ಓಟ್ ಮಾಡಿ ಖಂಡಿತಾ ಅಲ್ಲ ಎಂಬುದಕ್ಕೆ ಮತ ಹಾಕಿದ್ದರು. ಅಷ್ಟರಲ್ಲಿ ಕ್ರಿಸ್ಟೋಫರ್ ಚಕ್ರವರ್ತಿ ಹೆಸರಿನ ಮೋದಿಯವರು ಫ್ರೊಫೈಲ್ ಹಾಕಿದ್ದ ಫೇಕ್ ಅಕೌಂಟ್‍ನಿಂದ ಒಬ್ಬರು “ನೀವ್ಯಾರು ಈ ಜನ್ಮದಲ್ಲಿ ಪೋಲ್ ಗೆಲ್ಲೋಕೆ ಆಗೋದಿಲ್ಲ.. ಕಿಲ ಕಿಲ,,, ನಾವ್ ಬಿಡಕಿಲ್ಲ ಎಂದು ಕಮೆಂಟ್” ಮಾಡಿದರು. ಅಷ್ಟು ಮಾತ್ರವಲ್ಲದೇ ಪೋಲ್‍ನ ಲಿಂಕ್ ಕಾಪಿ ಮಾಡಿ ಬಲಪಂಥೀಯ ಗ್ರೂಪುಗಳಲ್ಲಿ ಷೇರ್ ಮಾಡಿ ಬಂದು ಇಲ್ಲಿ ವೋಟ್ ಮತ್ತು ಕಮೆಂಟ್ ಮಾಡುವಂತೆ ಮಾಡಿದರು. ಆಗ ಪೋಲ್ ನಲ್ಲಿ 76%ಜನ ಸಾವಿನ ಸಂಭ್ರಮ ಖಂಡಿತ ತಪ್ಪೆಂದರೆ 24% ಜನ ಸರಿ ಎಂದು ಸಮರ್ಥಿಸಿಕೊಂಡಿದ್ದರು.

ಪೋಲ್ ಡಿಲೀಟ್ ಮಾಡಿದ್ರೆ ಕಾರ್ನಾಡ್ ಪ್ರೇತಾತ್ಮನಾಗಿ ನಿನ್ನ ಮನೇಲಿ ಅಲಿತಾನೇ ಹುಷಾರ್ ಎಂದು ಕಮೆಂಟ್ ಮಾಡಿದರು. ಬೆಳಿಗ್ಗೆ ಒಳಗೆ ಈ ಪೋಲ್ ಉಡೀಸ್ ಮಾಡ್ತೀವಿ ನೋಡಿ ಎಂದು ಚಾಲೆಂಜ್ ಸಹ ಹಾಕಿದರು. ಅಂದರೆ ಅವರ ಕಡೆಯವರೆಲ್ಲಾ ಬಂದು ಸಾವನ್ನು ಸಂಭ್ರಮಿಸುವುದು ಸರಿ ಎಂದು ಕಮೆಂಟ್ ಮತ್ತು ವೋಟ್ ಮಾಡುತ್ತಾರೆ ಎಂಬ ಅತೀ ಆತ್ಮವಿಶ್ವಾಸ ಅವರದು. ಅದಾದ ಸ್ವಲ್ಪ ಹೊತ್ತಿನಲ್ಲೇ ನೂರಾರು ಜನ ಬಲಪಂಥೀಯರು ಪೋಲ್‍ಗೆ ಲಗ್ಗೆ ಇಟ್ಟರು. ವೋಟ್ ಮಾಡಿ ಕೆಟ್ಟ ಕೊಳಕಾಗಿ, ಅಶ್ಲೀಲವಾಗಿ ಬೈಗುಳಗಳ ಮಳೆ ಸುರಿಸಿದರು.

ಅಷ್ಟು ಮಾತ್ರವಲ್ಲದೇ ತಮ್ಮ ಯಾವು ಯಾವುದೋ ಫೇಸ್‍ಬುಕ್ ಪೇಜ್‍ನಲ್ಲಿ, ಗ್ರೂಪ್‍ನಲ್ಲಿ ಮತ್ತು ವಾಟ್ಸಾಪ್ ಗುಂಪುಗಳಿಗೆ ಪೋಲ್‍ನ ಲಿಂಕ್ ಹಾಕಿ ಬಂದು ವೋಟ್ ಮಾಡಲು ಮತ್ತು ಕೆಟ್ಟದಾಗಿ ಕಮೆಂಟ್ ಮಾಡಲು ಕರೆ ನೀಡಿದ್ದರು. ಆದರೆ ಒಂದು ದಿನದ ಪೋಲ್ ಮುಗಿದಾಗ ಅವರ ಬಯಕೆ ಸ್ವಲ್ಪ ಮಾತ್ರವೇ ಈಡೇರಿತ್ತು. ಅಂಕಿ ಸಂಖ್ಯೆಗಳ ಆಧಾರದಲ್ಲಿ ಅವರಿಗೆ ನಿಚ್ಚಳ ಸೋಲಾಗಿತ್ತು. ಪೋಲ್ ನಲ್ಲಿ 14810ಜನ ಒಟ್ಟು ವೋಟ್ ಮಾಡಿದ್ದು 70%ಜನ ಸಾವಿನ ಸಂಭ್ರಮ ಖಂಡಿತ ತಪ್ಪೆಂದರೆ 30% ಜನ ಮಾತ್ರ ಸರಿ ಎಂದು ಸಮರ್ಥಿಸಿಕೊಂಡಿದ್ದರು.

ಅಂದರೆ ಇಂದಿಗೂ 70% ಅಂದರೆ ಪೋಲ್ ಪ್ರಕಾರ 10367 ಜನ ಸಾವಿನ ಸಂಭ್ರಮವನ್ನು ವಿರೋಧಿಸಿ ಜೀವಪರತೆ ಮೆರೆದಿದ್ದಾರೆ. ಇದು ಭರವಸೆಯ ಸಂಗತಿ. ಈ ಸಮಾಜವನ್ನು ಒಂದಷ್ಟು ಸಹನೀಯಗೊಳಿಸಬಹುದೆಂಬ ಆಶಯಕ್ಕೆ ಇದು ವಿಶ್ವಾಸ ಕೊಡುವ ಸಂಗತಿಯಾಗುತ್ತದೆ. ಅಂದರೆ ಸಜ್ಜನರು ಇನ್ನು ಹೆಚ್ಚಿನ ಸಂಖ್ಯೆಯಲ್ಲಿಯೇ ಇದ್ದಾರೆ ಎಂಬುದನ್ನು ಇದು ಎತ್ತಿ ತೋರಿಸುತ್ತದೆ. ಹೊಸದೊಂದನ್ನು ಕಟ್ಟುವ, ಮಾನವೀಯತೆಯನ್ನು, ಬಹುತ್ವವನ್ನು ಕಾಪಾಡಬೇಕೆಂದು ಶ್ರಮಿಸುವವರಿಗೆ ಇದು ಆಶಾದಾಯಕ ಸಂಗತಿ.

ಆದರೆ ಎಚ್ಚರಿಕೆಯ ಸಂಗತಿಯೆಂದರೆ 30%ಜನ ವೋಟ್ ಮಾಡಿರುವ 4443 ಜನ ಸಾವನ್ನು ಸಂಭ್ರಮಿಸಿದ್ದಾರೆ, ವಿಕೃತತೆ ಮೆರೆದಿದ್ದಾರೆ. ಕೆಟ್ಟದಾಗಿ ಬೈಯ್ಯುವ ಮನಸ್ಥಿತಿ ರೂಢಿಸಿಕೊಂಡಿದ್ದಾರೆ. ಇದು ಸಹ ಕಡಿಮೆ ಸಂಖ್ಯೆಯೇನಲ್ಲ. ಇವರು ಹೀಗೇಕಾದರೂ ಎಂಬುದರ ಕುರಿತು ಯೋಚಿಸಬೇಕಿದೆ. ಏಕೆಂದರೆ ಯಾವ ಧರ್ಮವೂ ಸಹ ಸಾವನ್ನು ಸಂಭ್ರಮಿಸು ಎಂದು ಹೇಳಿಕೊಡುವುದಿಲ್ಲವಲ್ಲ?

ಈ ಪೋಲ್ ನಲ್ಲಿ ಗಮನಿಸಬೇಕಾದ ಸಂಗತಿಯೆಂದರೆ ಒಟ್ಟು 259 ಜನ ಕಮೆಂಟ್ ಮಾಡಿದ್ದಾರೆ. ಅದರಲ್ಲಿ ಬೆರಳೆಣಿಕೆಯ ಮಂದಿ ಮಾತ್ರ ಸಾವನ್ನು ಸಂಭ್ರಮಿಸುವುದು ಸರಿಯಲ್ಲ ಎಂಬ ಕಾಳಜಿ ತೋರಿಸಿದ್ದಾರೆ. ಇನ್ನುಳಿದಂತೆ ಎಲ್ಲವೂ ಬಲಪಂಥೀಯರ ಕಮೆಂಟ್ ಗಳೇ ಆಗಿದ್ದು ತೀರಾ ಕೊಳಕು ಭಾಷೆಯನ್ನು ಪ್ರಯೋಗಿಸಿ ಹೀಗಳೆದಿದ್ದಾರೆ. ಇದು ಹೇಗೆ ಸಾಧ್ಯ? ವೋಟ್ ಮಾಡಿರುವವರು 70%ಜನ ಸಾವಿನ ಸಂಭ್ರಮ ಸರಿಯಲ್ಲ ಎಂದರೆ ಕಮೆಂಟ್ ಮಾಡಿರುವ 90%ಗೂ ಹೆಚ್ಚು ಜನ ಸರಿ ಎಂದು ವಿಕೃತತೆ ಅನುಭವಿಸಿದ್ದಾರೆ.

ಅಂದರೆ ಸಜ್ಜನರು ಮೌನವಾಗಿದ್ದರೆ ದುರ್ಜನರು ಜೋರಾಗಿಯೇ ಸದ್ದು ಮಾಡುತ್ತಿದ್ದಾರೆ. ಒಳ್ಳೆಯ ಮನಸ್ಥಿತಿಯವರು ವೋಟ್ ಮಾಡಿ ಮುಂದೆ ಹೋಗಿದ್ದಾರೆ. ಅಲ್ಲಿ ಬಲಪಂಥೀಯರೊಡನೆ ಕಮೆಂಟ್ ಮಾಡುವುದಕ್ಕೆ ಇಳಿದಿಲ್ಲ. ಇದರಿಂದ ಪ್ರಯೋಜನ ಸಹ ಇಲ್ಲ ಅನ್ನಿಸಿರಬೇಕು. ಇನ್ನು ಕೆಲವರಿಗೆ ಅಷ್ಟು ಸಮಯವಿರಲ್ಲಿಕ್ಕಿಲ್ಲ. ಆದರೆ ಅಲ್ಲಿ ಕೆಟ್ಟದಾಗಿ ಕಮೆಂಟ್ ಮಾಡಿರುವ ಅರ್ಧಕ್ಕಿಂತ ಹೆಚ್ಚು ಫೇಕ್ ಅಕೌಂಟ್‍ಗಳೆ ಆಗಿವೆ. ಉಳಿದವರ ಕೆಲಸ ಸಹ ಸದಾ ಫೇಸ್ ಬುಕ್ ವಾಟ್ಸಾಪ್ ನಲ್ಲಿ ಸುಳ್ಳು ಸುದ್ದಿ ಹಬ್ಬಿಸುವುದು, ಈ ರೀತಿ ಕೆಟ್ಟದಾಗಿ ಕಮೆಂಟ್ ಮಾಡುವುದೇ ಆಗಿದೆ.

ಒಟ್ಟಿನಲ್ಲಿ ಸಾಮಾಜಿಕ ಬದಲಾವಣೆ ಬಯಸುವವರಿಗೆ ಈ ಪೋಲ್ ಹೊಸದಾಗಿ ಜನಪರವಾಗಿ, ಜೀವಪರವಾಗಿ ಏನನ್ನಾದರೂ ಮಾಡುವುದಾದರೆ ಇನ್ನು ಇರುವ ಅವಕಾಶವನ್ನು ತೋರಿಸುತ್ತದೆ. ಜೊತೆಗೇನೆ ಜನರ ಮನಸ್ಥಿತಿ ನಿಧಾನವಾಗಿ ವಿಷಮಯವಾಗುತ್ತಿರುವುದನ್ನು, ಕೆಲವರು ಈಗಾಗಲೇ ವಿಕೃತರಾಗಿರುವುದನ್ನು ತೋರಿಸುತ್ತಲೇ ಎಚ್ಚರಿಕೆ ನೀಡುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...