Homeಕರ್ನಾಟಕನೆರೆಪರಿಹಾರ ವಿಳಂಬಕ್ಕೆ ಮೋದಿ ಎದುರೆ ಸಿಎಂ ಯಡಿಯೂರಪ್ಪ ಅಸಮಾಧಾನ

ನೆರೆಪರಿಹಾರ ವಿಳಂಬಕ್ಕೆ ಮೋದಿ ಎದುರೆ ಸಿಎಂ ಯಡಿಯೂರಪ್ಪ ಅಸಮಾಧಾನ

- Advertisement -
- Advertisement -

ಪ್ರವಾಹದಿಂದ ಅಪಾರ ಪ್ರಮಾಣದ ಹಾನಿಯಾಗಿದ್ದು ನಾಲ್ಕು ಬಾರಿ ಹೋಗಿ ಪ್ರಧಾನಿಯನ್ನು ಬೇಟಿ ಮಾಡಿದರೂ ಪರಿಹಾರ ಹಣ ಬಿಡುಗಡೆ ಮಾಡಿಲ್ಲ. ಗ್ರಾಮಗಳೇ ಮುಳುಗಡೆಯಾಗಿವೆ. ಮನೆಗಳು ಬಿದ್ದುಹೋಗಿವೆ ಎಂದು ಮನವಿ ಮಾಡಿದರೂ ಹಣ ಬಂದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರಧಾನಿ ಎದುರೇ ಅಸಮಾಧಾನ ಹೊರಹಾಕಿದರು.

ತುಮಕೂರು ನಗರದ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಹಮ್ಮಿಕೊಂಡಿದ್ದ ಬೃಹತ್ ರೈತ ಸಮಾವೇಶದಲ್ಲಿ ಮೊದಲಿಗೆ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ 3 ಲಕ್ಷ ಮನೆಗಳು ಬಿದ್ದುಹೋಗಿವೆ. ರಸ್ತೆಗಳು, ಸೇತುವೆಗಳು ನಾಶವಾಗಿವೆ. ನೆರೆ ಹಾವಳಿಯಿಂದ 30 ಸಾವಿರ ಕೋಟಿ ನಷ್ಟವಾಗಿದೆ. ಮೊದಲ ಕಂತಿನ 1200 ಕೋಟಿ ಹಣವನ್ನು ಮಾತ್ರ ಬಿಡುಗಡೆ ಮಾಡಲಾಗಿದೆ ಎಂದು ಅಳಲು ತೋಡಿಕೊಂಡರು.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಬಂದು ಲಕ್ಷಾಂತರ ಹೆಕ್ಟೇರ್ ನಲ್ಲಿ ಬೆಳೆದಿದ್ದ ಬೆಳೆ ನೀರಿನಲ್ಲಿ ಕೊಚ್ಚಿ ಹೋಯಿತು. ಮನೆಗಳು ಕಳೆದುಕೊಂಡಿದ್ದರು. ರೈತರು ತೊಂದರೆಗೊಳಗಾಗಿದ್ದರು. ಇದನ್ನು ಪ್ರಧಾನಿಗಳ ಗಮನಕ್ಕೆ ತರಲು ನಾಲ್ಕು ಬಾರಿ ದೆಹಲಿಗೆ ಹೋದೆವು. ಪ್ರಧಾನಿಗಳಿಗೆ ಮನವಿ ಮಾಡಿದೆವು. ಆದರೂ ಪರಿಹಾರದ ಹಣ ಬಿಡುಗಡೆ ಮಾಡಿಲ್ಲ ಎಂದು ನಯವಾಗಿಯೇ ಅಸಮಾಧಾನ ಹೊರಹಾಕಿದರು.

ನೀರಾವರಿ ಯೋಜನೆಗಳ ಕಾಮಗಾರಿ ಸ್ಥಗಿತಗೊಂಡಿದೆ. ಸುಮಾರು 6 ಸಾವಿರ ನೀರಾವರಿ ಕಾಮಗಾರಿಗಳು ಪೂರ್ಣಗೊಳ್ಳಬೇಕಿದೆ. ಇದಕ್ಕೆ ಸಾಕಷ್ಟು ಹಣ ಬೇಕು. ಹಾಗಾಗಿ ಶೀಘ್ರವೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಪೂರ್ವಕ ಮನವಿ ಮಾಡಿದರು.

ಬೆಂಗಳೂರಿನ ರಾಜಭವನದಲ್ಲಿ ಮತ್ತೊಮ್ಮೆ ಲಿಖಿತ ಮನವಿ ನೀಡಿ ಪ್ರಧಾನಿಗಳನ್ನು ಮನವಿ ಮಾಡುತ್ತೇವೆ. ಹಣದ ಅಗತ್ಯವಿದೆ ಎಂಬುದನ್ನು ಪ್ರಧಾನಿಗಳಿಗೆ ಮನವರಿಕೆ ಮಾಡುತ್ತೇವೆ. ಎಂದು ಹೇಳಿದರು.

ಪ್ರಧಾನಿ ಮೋದಿ ಮಠದಲ್ಲಿ ಧ್ಯಾನ ಮಾಡುತ್ತಾರೆ ಎಂದಿದ್ದರು. ಆದರೆ ಪ್ರಧಾನಿ ಧ್ಯಾನವನ್ನೇ ಮಾಡಲಿಲ್ಲ. ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುತ್ತಾರೆ ಎಂದಿದ್ದರು. ಬೆಂಗಳೂರಿನಿಂದ ಪ್ರಧಾನಿಗಳನ್ನು ಪ್ರಶ್ನೆ ಕೇಳಲೆಂದು ವಿದ್ಯಾರ್ಥಿನಿಯರು ಬಂದಿದ್ದರು. ಆದರೆ ಪ್ರಧಾನಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುವ ಗೋಜಿಗೆ ಹೋಗಲಿಲ್ಲ. ರಾಜಕೀಯ ಭಾಷಣ ಮಾಡಿದರು.

ಪ್ರಧಾನಿಗಳು ರೈತ ಸಮಾವೇಶದಲ್ಲಿ ಕನಿಷ್ಟ ಬೆಂಬಲ ಬೆಲೆಯ ಜೊತೆಗೆ ಒಂದೂವರೆ ಪಟ್ಟು ಆದಾಯವನ್ನು ರೈತರಿಗೆ ಸಿಗಬೇಕೆಂಬ ಯೋಜನೆಯನ್ನು ಜಾರಿಗೆ ತಂದಿದ್ದೇವೆ ಎಂದರು.

ಕರ್ನಾಟಕ, ಕೇರಳ, ತಮಿಳುನಾಡು, ಆಂದ್ರಪ್ರದೇಶ, ತೆಲಂಗಾಣ ಸೇರಿದಂತೆ ದಕ್ಷಿಣ ಭಾರತದ ಶಕ್ತಿಯನ್ನು ಹೊಂದಿದೆ. ಕಾಫಿ, ಚಹ, ರಬ್ಬರ್, ಅರಿಶಿಣ ಬೆಳೆಗೆ ಪ್ರಸಿದ್ದಿಯಾಗಿದೆ. ದೊಡ್ಡ ಪ್ರಮಾಣದಲ್ಲಿ ಉತ್ಪಾದನೆ ಆಗುತ್ತಿದೆ. ಇದನ್ನು ರಫ್ತು ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮೋದಿ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

    • ಯಡಿಯೂರಪ್ಪ ನವರೆ ರಾಜ್ಯದ ಅಭಿವೃದ್ಧಿ ಪರ ಕೆಲಸ ಮಾಡಿದರೆ ರಾಜ್ಯದ ಜನ ನಿಮ್ಮನ್ನು ಬೆಂಬಲಿಸುತ್ತಾರೆ .ಇಲ್ಲವಾದರೆ ದಿಕ್ಕರಿಸುತ್ತಾರೆ ಇದು ನಿಮಗೆ ಕೊನೆಯ ಅವಕಾಶ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...