Homeಮುಖಪುಟನಾವು ಹಿಂಸೆ, ಗಲಭೆ ಬೆಂಬಲಿಸುವುದಿಲ್ಲ.. ಜಮಾ ಮಸೀದಿಯಲ್ಲಿ ಮೊಳಗಿತು ಶಾಂತಿಯ ಮಂತ್ರ..

ನಾವು ಹಿಂಸೆ, ಗಲಭೆ ಬೆಂಬಲಿಸುವುದಿಲ್ಲ.. ಜಮಾ ಮಸೀದಿಯಲ್ಲಿ ಮೊಳಗಿತು ಶಾಂತಿಯ ಮಂತ್ರ..

- Advertisement -
- Advertisement -

ನವದೆಹಲಿಯ ಜಮಾ ಮಸೀದಿಯಲ್ಲಿ ಸಿಎಎ ಮತ್ತು ಎನ್ಆರ್ ಸಿ ವಿರುದ್ಧ ಘೋಷಣೆಗಳು ಮೊಳಗಿದವು. ನಾವು ಹಿಂಸೆ, ಗಲಭೆ ಬೆಂಬಲಿಸುವವರು ಅಲ್ಲ, ಪ್ರಚೋದಿಸುವವರೂ ಅಲ್ಲ. ನಾವು ಶಾಂತಿಪ್ರಿಯರು ಎಂದು ಗಾಂಧಿಯ ಮಾರ್ಗದಲ್ಲಿ ಪ್ರತಿಭಟನೆ  ನಡೆಸಿದರು. ಹಿಂಸೆ, ವಿಭಜನೆ, ಆತಂಕ ಸೃಷ್ಟಿಸುವುದು ಮಹನೀಯರ ಲಕ್ಷಣವಾಗಿರಲಿಲ್ಲ ಎಂದು ಸಾರಿದರು.

ಕಾಂಗ್ರೆಸ್ ನಾಯಕಿ ಅಲ್ಕಾ ಲಂಬಾ ಮಾತನಾಡಿ, ದೇಶದಲ್ಲಿ ನಿರುದ್ಯೋಗ ಸಮಸ್ಯೆ ಜನರನ್ನು ಕಾಡುತ್ತಿದೆ. ಈ ಸಮಸ್ಯೆ ಬಗೆಹರಿಸುವುದು ಬಿಟ್ಟು ಪ್ರಧಾನಿ ನರೇದ್ರ ಮೋದಿ ಮತ್ತೊಮ್ಮೆ ಜನರನ್ನು ಸರದಿಯ ಸಾಲಿನಲ್ಲಿ ನಿಲ್ಲುವಂತೆ ಮಾಡುವ ಪ್ರಯತ್ನದಲ್ಲಿ ತೊಡಗಿದ್ದಾರೆ. ಎನ್ ಪಿಎ, ಎನ್ಆರ್ ಸಿ ಮತ್ತು ಸಿಎಎ ಇನ್ನೊಂದು ನೋಟು ಅಮಾನ್ಯೀಕರಣ. ಪ್ರಧಾನಿಗಳು ವಾಸ್ತವ ಪರಿಸ್ಥಿತಿಯ ಬಗ್ಗೆ ಮಾತನಾಡಲಿ. ಅದು ಬಿಟ್ಟು ಜನರನ್ನು ಕ್ಯೂನಲ್ಲಿ ನಿಲ್ಲುವಂತೆ ಮಾಡುವುದನ್ನು ಕೈಬಿಡಬೇಕು ಎಂದು ಆಗ್ರಹಿಸಿದರು.

ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇರುವವರು, ಎನ್ಆರ್ ಸಿ, ಸಿಎಎ ಅವಶ್ಯಕತೆ ಇದೆಯೇ ಎಂಬ ಬಗ್ಗೆ ಪ್ರಶ್ನಿಸಬೇಕು. ದೊಡ್ಡ ದನಿಯಲ್ಲಿ ಕೇಳಬೇಕು. ಪ್ರಜಾಪ್ರಭುತ್ವ ಮತ್ತು ಸಂವಿಧಾನದಲ್ಲಿ ವ್ಯಕ್ತಪಡಿಸಿರುವ ಆಶಯಗಳಿಗೆ ಧಕ್ಕೆ ಉಂಟಾಗುತ್ತಿರುವ ಸಂದರ್ಭದಲ್ಲಿ ಪ್ರತಿಯೊಬ್ಬರೂ ಕೇಂದ್ರದ ಜನವಿರೋಧಿ ನೀತಿಗಳನ್ನು ಖಂಡಿಸಬೇಕು ಎಂದು ಕರೆ ನೀಡಿದರು.

ಜಮಾ ಮಸೀದಿಯಲ್ಲಿ ಕೇಂದ್ರ ಸರ್ಕಾರದ ಸಿಎಎ, ಎನ್ಆರ್ ಸಿ ಹೊಸ ಕಾಯ್ದೆಗಳ ವಿರುದ್ಧ ಭಿತ್ತಿಪತ್ರಗಳನ್ನು ಹಿಡಿದು ಘೋಷಣೆಗಳನ್ನು ಹಾಕಿದರು. ಯಾವುದೇ ಕಾರಣಕ್ಕೂ ಈ ಕಾಯ್ದೆಗಳನ್ನು ಜಾರಿಗೊಳಿಸಬಾರದು ಎಂದು ಒತ್ತಾಯಿಸಿದರು. ದೇಶಕ್ಕೆ ಎನ್ ಆರ್ ಸಿ, ಸಿಎಎ, ಎನ್ ಪಿಎ ಬೇಕಾಗಿಲ್ಲ. ಉದ್ಯೋಗ ಬೇಕು. ಜನರಿಗೆ ಶಾಂತಿ ನೆಮ್ಮದಿಯ ಅವಶ್ಯಕತೆ ಇದೆ. ಸಂವಿಧಾನ ಉಳಿಸಿ ಭಾರತ ವಿಭಿಸುವುದಕ್ಕೆ ಬಿಡುವುದಿಲ್ಲ ಎಂದು ಹೇಳಿದರು.

ಮಾಜಿ ಶಾಸಕ ಶೋಯಿಬ್ ಇಕ್ಬಾಲ್ ಮಾತನಾಡಿ ನಮ್ಮದು ಅಹಿಂಸಾತ್ಮಕ ಹೋರಾಟ. ನಮಗೆ ಹಿಂಸಾ ವಾದದಲ್ಲಿ ನಂಬಿಕೆ ಇಲ್ಲ. ಅಹಿಂಸೆಯ ನೆಲೆಯಲ್ಲಿ ಶಾಂತಿಯುತ ಹೋರಾಟ ಮುಂದುವರಿಸುತ್ತೇವೆ. ಆದರೆ ಕೆಲವರು ನಮ್ಮ ಶಾಂತಿಯುತ ಪ್ರತಿಭಟನೆಯನ್ನು ಕದಡುತ್ತಿದ್ದಾರೆ. ಶಾಂತಿ ಕದಡುವವರು ನಮ್ಮ ಸಂಘಟನೆಗೆ ಸೇರಿದವರಲ್ಲ. ಅವರು ಹೋರಾಟವನ್ನು ದಿಕ್ಕುತಪ್ಪಿಸುವವರು. ಅವರ ಬಗ್ಗೆ ಎಚ್ಚರ ಬೇಕು. ನಾವು ಹಿಂಸೆಯನ್ನು ಇಷ್ಟಪಡುವುದಿಲ್ಲ. ಗಲಭೆಯನ್ನು ಪ್ರಚೋದಿಸುವುದಿಲ್ಲ. ನಾವು ಶಾಂತಿಪ್ರಿಯರು ಎಂದು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...