Homeಸಾಹಿತ್ಯ-ಸಂಸ್ಕೃತಿಕವನನಿನ್ನ ಕೊನೆ ಹತ್ತು ಸೆಕೆಂಡುಗಳು

ನಿನ್ನ ಕೊನೆ ಹತ್ತು ಸೆಕೆಂಡುಗಳು

- Advertisement -
- Advertisement -

ಕೆಲವೊಮ್ಮೆ ಅನಿಸುತ್ತೆ
ನೀನು ಇಲ್ಲೇ ಇದ್ದೀ
ಎಂದಿನಂತೆ ನಿನ್ನ ಬಿಡುವಿಲ್ಲದ
ಕೆಲಸದಲ್ಲಿ ಮುಳುಗಿಹೋಗಿದ್ದೀ..
ಅದಕೆಂದೇ ಈ ವಾರ
ಮನೆಗೆ ಬರದೇ ಹೋದೀ..

ಆದರೆ ಮಿಕ್ಕ ಸಮಯದಲ್ಲೆ
ನಿಜ ಮುಖಕ್ಕೆ ರಾಚುತ್ತೆ
ನೀನಿನ್ನು ಬರಲ್ಲ
ಎಂದೆಂದೆಂದಿಗೂ ಬರಲ್ಲ
ಅನ್ನೋ ಕಹಿಸತ್ಯ ಅರಿವಾಗುತ್ತೆ
ಹೃದಯ ಕಂಪಿಸುತ್ತೆ
ಕಾಲುಗಳು ನಡುಗುತ್ತೆ
ಹೊಟ್ಟೆಯೊಳಗೆ ಸಂಕಟವಾಗಿ
ಒಳಗಿರೋದೆಲ್ಲಾ ಕಕ್ಕುವಂತಾಗುತ್ತೆ..
ಆದರೆ ನನ್ನಂತೆ ಅದೂ ಖಾಲಿಖಾಲಿಯಾಗಿದೆ..

ಎಚ್ಚರವಾದಾಗ ಕೊರಗುತ್ತಾ
ಮಲಗಿದ್ದಾಗ ಬೆಚ್ಚಿಬೀಳುತ್ತಾ..
ಪ್ರತಿಗಳಿಗೆಯೂ ಕಳೆದುಕೊಂಡಿದ್ದರ
ಲೆಕ್ಕ ನೀಡುತ್ತಿದೆ..
ನಿನ್ನ ಆ ಕೊನೆ ಹತ್ತು ಸೆಕೆಂಡುಗಳನ್ನು
ಊಹಿಸಿಕೊಳ್ಳುತ್ತೀನಿ
ಪೊಲೀಸರ ಪ್ರಕಾರ
ಹತ್ತೇ ಸೆಕೆಂಡುಗಳಲ್ಲಿ
ಆ ಕೊಲೆಗಡುಕರು
ನಿನ್ನ ಧ್ವನಿಯಡಗಿಸಿರಬಹುದಂತೆ..

ಹೇಗಿದ್ದಿರಬಹುದು ಆ ಹತ್ತು ಸೆಕೆಂಡುಗಳು
ಹೆಲ್ಮೆಟ್ಟಿನ ಹಿಂದೆ ಅಡಗಿದ್ದ ಆ ಕೊಲೆಗಡುಕ
ಆ ಹೇಡಿ
ನಿನ್ನ ಕಡೆ ನುಗ್ಗುತ್ತಾನೆ
ಯಾರೋ ನೀನು? ಎನ್ಮಾಡ್ತಿದೀಯೋ..ಮಗನೇ?
ಕೂಡಲೇ ಹಾರಿರಬಹುದೇ ಮೊದಲಗುಂಡು!
ಹೇ..ಯಾಕೋ? ಯಾವ ಬೇವರ್ಸಿ ಕಳಿಸಿದ್ದು ನಿನ್ನ..
ಚಡ್ಡಿ ಕಳಚಿ ಪ್ಯಾಂಟು ಹಾಕ್ಕೊಂಡ ತಕ್ಷಣ
ದೊಡ್ಡವನೆಂದು ತಿಳ್ಕೊಂಡ್ಯಾ..
ಎಷ್ಟು ಧೈರ್ಯ..ನನ್ನ ಕೊಲ್ತೀಯ
ಹತ್ತು ಸೆಕೆಂಡುಗಳು. ಮತ್ತೆ ಮೂರು ಬುಲ್ಲೆಟ್ಟುಗಳು.
ಕೊಂದೇ ಬಿಟ್ಟರಲ್ಲೇ ನಿನ್ನ..

ಆ ಕೊನೆಗಳಿಗೆಯಲ್ಲಿ ನಿನ್ನ ಕಣ್ಮುಂದೆ ಬಂದವರು ಯಾರು?
ಇಷಾ? ಅಮ್ಮ? ಅಥವಾ ನಾನೇ?
ನಿನ್ನ ಪ್ರೀತಿ, ಕಾಳಜಿ, ಕಳವಳಗಳೇ?
ಅಥವಾ ಪುಟ್ಟ ಗುಬ್ಬಿಯಂತಿದ್ದ ನಿನ್ನನ್ನು
ಮೊರೆಯುವ ಹೆಣ್ಣುಹುಲಿಯನ್ನಾಗಿಸಿದ ನಿನ್ನ ಕಾಮ್ರೇಡುಗಳೇ?

ನೀನು ತಣ್ಣಗೆ ಮಲಗಿದ್ದಿ ಅಲ್ಲಿ
ರಕ್ತದ ಮಡುವಿನಲ್ಲಿ..
ಆದರೆ ಸಾವೂ ಸುಮ್ಮನಾಗಿಸಲಿಲ್ಲ್ಲ ನಿನ್ನ
ಈಗ ಎಲ್ಲಿ ನೋಡಿದರು ಅಲ್ಲಿ ಗೌರಿಯರು
ಬೀದಿಯಲ್ಲಿ, ಗಲ್ಲಿಯಲ್ಲಿ, ದೂರದ ಡೆಲ್ಲಿಯಲ್ಲಿ..
ನಿನ್ನ ರಕ್ತದ ಕಣಕಣವೂ ಹೋರಾಟದ ಕಣ

ನನಗೀಗ ಮತ್ತಷ್ಟು ಗೊಂದಲ..
ನಿನ್ನಂತೆ
ಧ್ವನಿ ಇಲ್ಲದವರಿಗೆ ಧ್ವನಿಯಾದರೆ
ನಾನೂ ನೀನಾಗಬಲ್ಲೆನೇ?
ಸುಮ್ಮನುಳಿದರೆ
ಬದುಕಿಯೂ ಸತ್ತಂತಾಗುವೆನೇ?

ಇಂಗ್ಲೀಷ್ ಮೂಲ: ಕವಿತಾ ಲಂಕೇಶ್
ಅನು: ಶಿವಸುಂದರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....