Homeಮುಖಪುಟನಿರುದ್ಯೋಗ ದರ ಶೇ.7.2ಕ್ಕೆ ಏರಿಕೆ: ಮೋದಿಗೆ ಸಂಕಷ್ಟ ತಂದಿಟ್ಟ ಸಿಎಂಇಐ ವರದಿ

ನಿರುದ್ಯೋಗ ದರ ಶೇ.7.2ಕ್ಕೆ ಏರಿಕೆ: ಮೋದಿಗೆ ಸಂಕಷ್ಟ ತಂದಿಟ್ಟ ಸಿಎಂಇಐ ವರದಿ

- Advertisement -
- Advertisement -

ಭಾರತೀಯ ಆರ್ಥಿಕ ಉಸ್ತುವಾರಿ ಕೇಂದ್ರವು (ಸಿ.ಎಂ.ಐ.ಇ) ಸಂಗ್ರಹಿಸಿರುವ ದತ್ತಾಂಶಗಳ ಪ್ರಕಾರ ಫೆಬ್ರವರಿ 2019ರಲ್ಲಿ ಭಾರತದ ನಿರುದ್ಯೋಗ ದರ ಶೇ.7.2ಕ್ಕೆ ಏರಿಕೆಯಾಗಿದೆ. ಸೆಪ್ಟೆಂಬರ್ 2016ರಿಂದ ಈಚೆಗಿನ ಅತಿ ಹೆಚ್ಚಿನ ನಿರುದ್ಯೋಗ ದರ ಇದಾಗಿದೆ ಎಂದು ನಿನ್ನೆಯಷ್ಟೇ (ಮಾರ್ಚ್ 5, 2019) ಬಿಡುಗಡೆಯಾದ ಸಿಎಂಇಐ ವರದಿಯನ್ನು ರಾಯಿಟರ್ಸ್  ಸುದ್ದಿಸಂಸ್ಥೆ ವಿಶ್ಲೇಷಿಸಿದೆ. 2018ರ ಫೆಬ್ರವರಿಯಲ್ಲಿ ಈ ದರ ಶೇ.5.8ರಷ್ಟಿತ್ತು. ಭಾರತದಾದ್ಯಂತ ನಡೆಸಲಾದ ಲಕ್ಷಾಂತರ ಕುಟುಂಬಗಳ ಸಮೀಕ್ಷೆಯನ್ನು ಈ ವರದಿ ಒಳಗೊಂಡಿದೆ.

ಮೇನಲ್ಲಿ ಲೋಕಸಭಾ ಚುನಾವಣೆಗೆ ಅಣಿಯಾಗುತ್ತಿರುವ ಪ್ರಧಾನಿ ಮೋದಿಯವರಿಗೆ ಈ ವರದಿ ದೊಡ್ಡ ಹಿನ್ನಡೆಯಾಗುವ ಸಾಧ್ಯತೆ ಇದೆ. ಯಾಕೆಂದರೆ ಈಗಾಗಲೇ ವಿರೋಧ ಪಕ್ಷಗಳು ರೈತರಿಗೆ ಸಿಗುತ್ತಿರುವ ಕಡಿಮೆ ಬೆಲೆ ಮತ್ತು ಕುಸಿತಗೊಂಡಿರುವ ಉದ್ಯೋಗ ಸೃಷ್ಟಿಯನ್ನು ತಮ್ಮ ಮುಖ್ಯ ಚುನಾವಣಾ ವಿಷಯಗಳಾಗಿ ಪ್ರಸ್ತಾಪಿಸುತ್ತಿವೆ. ಇಂತಹ ಸಂದರ್ಭದಲ್ಲಿ ಬಿಡುಗಡೆಯಾಗಿರುವ ವರದಿ ನಿರುದ್ಯೋಗ ನಿಯಂತ್ರಣದಲ್ಲಿ ಮೋದಿಯವರ ವೈಫಲ್ಯವನ್ನು ಎತ್ತಿ ತೋಸಿರುತ್ತಿದೆ.

ಈಗಾಗಲೇ ನ್ಯಾಶನಲ್ ಸ್ಯಾಂಪಲ್ ಸರ್ವೇ ಆಫೀಸಸ್ (ಎನ್‌ಎಸ್‌ಎಸ್‌ಒ) ವರದಿಯಲ್ಲಿ, ನಿಯಮಿತ ಕಾರ್ಮಿಕ ವರ್ಗ ಸಮೀಕ್ಷೆಯ ಪ್ರಕಾರ 2017-18ರಲ್ಲಿ ಶೇ.6.1 ತಲುಪಿದ್ದ ನಿರುದ್ಯೋಗ ದರವು ಕಳೆದ 45 ವರ್ಷಗಳ ಇತಿಹಾಸದಲ್ಲಿ ಅತಿಹೆಚ್ಚು ನಿರುದ್ಯೋಗ ದರವಾಗಿದೆ ಎಂದು ಉಲ್ಲೇಖಿಸಿರುವುದಾಗಿ Business Standard ವರದಿ ಮಾಡಿತ್ತು. ತನಗೆ ಲಭ್ಯವಾದ ದಾಖಲೆಪತ್ರಗಳ ಪ್ರಕಾರ, ಉದ್ಯೋಗಕ್ಕೆ ಸಂಬಂಧಿಸಿದ ಅಂಕಿಅಂಶಗಳನ್ನು ಸಂಗ್ರಹಿಸಲು ಶುರು ಮಾಡಲಾದ 1972-73ರಿಂದ ಈಚೆಗೆ 2017-18ರ ನಿರುದ್ಯೋಗ ದರವೇ ದಾಖಲೆಯ ಏರಿಕೆಯದ್ದು ಎಂದು ಅದು ತಿಳಿಸಿತ್ತು.

ಎನ್.ಎಸ್.ಎಸ್.ಒ ವರದಿಯಲ್ಲಿ ಗ್ರಾಮೀಣ ಪ್ರದೇಶಕ್ಕಿಂತ ನಗರ ಪ್ರದೇಶಗಳಲ್ಲೇ ಹೆಚ್ಚು ನಿರುದ್ಯೋಗ ಪ್ರಮಾಣವಿದೆ ಎಂದು Business Standard ಉಲ್ಲೇಖಿಸಿತ್ತು. ಗ್ರಾಮೀಣ ಪ್ರದೇಶಗಳಲ್ಲಿ ಶೇ.5.3ರಷ್ಟಿದ್ದರೆ ನಗರ ಪ್ರದೇಶಗಳಲ್ಲಿ ನಿರುದ್ಯೋಗ ದರ ಶೇ.7.8 ರಷ್ಟಿದೆ ಎಂಬುದು ವರದಿಯಿಂದ ತಿಳಿದುಬಂದಿದೆ. ಪ್ರಸ್ತುತ 201-18ನೇ ಸಾಲಿನಲ್ಲಿ ನಿರುದ್ಯೋಗ ದರವು ನಗರ ಪ್ರದೇಶದ 15 ರಿಂದ 29 ವರ್ಷ ವಯೋಮಾನದ ಪುರುಷರಲ್ಲಿ ಶೇ.18.7ರಷ್ಟು (2011ರಲ್ಲಿ ಈ ಪ್ರಮಾಣ ಶೇ.8.1ರಷ್ಟಿತ್ತು) ಹಾಗೂ ನಗರವಾಸಿ ಮಹಿಳೆಯರಲ್ಲಿ ಶೇ.27.2ರಷ್ಟು (2011ರಲ್ಲಿ ಈ ಪ್ರಮಾಣ ಶೇ.13.1ರಷ್ಟಿತ್ತು) ಇದೆ ಎಂದು Business Standard ವರದಿ ಮಾಡಿತ್ತು.

ವಿಪರ್ಯಾಸವೆಂದರೆ, ಮೊದಲಿನಿಂದಲೂ ಬಿಜೆಪಿ ನಗರ ಪ್ರದೇಶಗಳಲ್ಲೇ ತನ್ನ ವೋಟ್‌ಬ್ಯಾಂಕ್ ಸಾಮರ್ಥ್ಯವನ್ನು ಬಲವಾಗಿ ನಂಬಿಕೊಂಡು ಬಂದಿದೆ. ಈಗಲೂ ಅದಕ್ಕೆ ಗ್ರಾಮೀಣ ಪ್ರದೇಶಗಳಲ್ಲಿ ಹೇಳಿಕೊಳ್ಳುವಂತಹ ಬಲವಿಲ್ಲ. ಹೀಗಿರುವಾಗ ನಗರ ಪ್ರದೇಶಗಳಲ್ಲೇ ನಿರುದ್ಯೋಗ ದಾಖಲೆಯ ಪ್ರಮಾಣದಲ್ಲಿ ಏರಿಕೆಯಾಗಿರುವುದು ಚುನಾವಣಾ ದೃಷ್ಟಿಯಿಂದ ಮೋದಿಯವರಿಗೆ ಶುಭ ಸೂಚಕವಂತೂ ಅಲ್ಲ.

ಈ ಹಿಂದೆ ಇದೇ ಸರ್ಕಾರ ಉದ್ಯೋಗಕ್ಕೆ ಸಂಬಂಧಿಸಿದ ವರದಿಗಳನ್ನು ಬಿಡುಗಡೆ ಮಾಡಿದಾಗ ಅವು ಔಟ್-ಆಫ್-ಡೇಟ್ ಆಗಿರುತ್ತಿದ್ದವು ಎಂಬ ಅಪವಾದಗಳು ಕೇಳಿಬರುತ್ತಿದ್ದವು. ಆದರೆ ಚುನಾವಣಾ ಸಿದ್ಧತೆಯ ಈ ವರ್ಷದಲ್ಲಿ ಡಿಸೆಂಬರ್‌ನಲ್ಲಿ ಬಿಡುಗಡೆಯಾಗಬೇಕಿದ್ದ ಎನ್.ಎಸ್.ಎಸ್.ಒ ವರದಿಯನ್ನು ಅಧಿಕಾರಿಗಳು ಅಂಕಿಅಂಶಗಳನ್ನು ಪುನರ್‌ಪರಿಶೀಲಿಸಬೇಕು ಎಂಬ ನೆಪ ನೀಡಿ ಬಿಡುಗಡೆಯನ್ನೇ ಮಾಡಲಿಲ್ಲ. ನಿರುದ್ಯೋಗ ಪ್ರಮಾಣ ಈ ಪರಿಯಲ್ಲಿ ಏರಿಕೆಯಾಗಿರುವುದು ಬಹಿರಂಗಗೊಂಡರೆ ಚುನಾವಣೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ ಎಂಬ ಅಂದಾಜಿನಿಂದಲೇ ವರದಿಯನ್ನು ಬಿಡುಗಡೆ ಮಾಡದಂತೆ ಸರ್ಕಾರದಿಂದ ತಡೆಹಿಡಿಯಲಾಗಿದೆ ಎಂಬ ಹೇಳಿಕೆಗಳು ಕೇಳಿ ಬಂದ ಬೆನ್ನಲ್ಲೇ Business Standard ಪತ್ರಿಕೆಯು ತನಗೆ ಎನ್.ಎಸ್.ಎಸ್.ಒ ವರದಿ ಅದರ ಸದಸ್ಯರೊಬ್ಬರಿಂದಲೇ ಸೋರಿಕೆಯಾಗಿದೆ ಎಂದು ಅಂಕಿಅಂಶಗಳನ್ನು ಬಹಿರಂಗಗೊಳಿಸಿತ್ತು.

ಆದಾಗ್ಯೂ ಸರ್ಕಾರ ಅದನ್ನು ತಿರಸ್ಕರಿಸಿ ಅವು ಸತ್ಯಕ್ಕೆ ದೂರವಾದ ಸಂಗತಿಗಳು ಎಂದು ಆರೋಪಿಸಿತ್ತೇ ವಿನಾಃ ಯಾವ ಕಾರಣಕ್ಕೆ ಎನ್‌ಎಸ್‌ಎಸ್‌ಒ ವರದಿ ತಡೆಹಿಡಿಯಲಾಗಿದೆ ಎಂಬ ಪ್ರಶ್ನೆಗೆ ಸಮರ್ಪಕ ಉತ್ತರ ನೀಡಿರಲಿಲ್ಲ. ಇದೀಗ ಸಿ.ಎಂ.ಐ.ಇ ವರದಿ ನಿನ್ನೆ ಬಿಡುಗಡೆಗೊಂಡಿದ್ದು ನಿರುದ್ಯೋಗ ದರವನ್ನು ನಿಯಂತ್ರಿಸುವಲ್ಲಿ ಸರ್ಕಾರದ ವೈಫಲ್ಯವನ್ನು ಅನುಮಾನಕ್ಕೆ ಎಡೆಯಿಲ್ಲದಂತೆ ತೆರೆದಿಟ್ಟಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...