Homeಮುಖಪುಟನಿರುದ್ಯೋಗ ದರ ಶೇ.7.2ಕ್ಕೆ ಏರಿಕೆ: ಮೋದಿಗೆ ಸಂಕಷ್ಟ ತಂದಿಟ್ಟ ಸಿಎಂಇಐ ವರದಿ

ನಿರುದ್ಯೋಗ ದರ ಶೇ.7.2ಕ್ಕೆ ಏರಿಕೆ: ಮೋದಿಗೆ ಸಂಕಷ್ಟ ತಂದಿಟ್ಟ ಸಿಎಂಇಐ ವರದಿ

- Advertisement -
- Advertisement -

ಭಾರತೀಯ ಆರ್ಥಿಕ ಉಸ್ತುವಾರಿ ಕೇಂದ್ರವು (ಸಿ.ಎಂ.ಐ.ಇ) ಸಂಗ್ರಹಿಸಿರುವ ದತ್ತಾಂಶಗಳ ಪ್ರಕಾರ ಫೆಬ್ರವರಿ 2019ರಲ್ಲಿ ಭಾರತದ ನಿರುದ್ಯೋಗ ದರ ಶೇ.7.2ಕ್ಕೆ ಏರಿಕೆಯಾಗಿದೆ. ಸೆಪ್ಟೆಂಬರ್ 2016ರಿಂದ ಈಚೆಗಿನ ಅತಿ ಹೆಚ್ಚಿನ ನಿರುದ್ಯೋಗ ದರ ಇದಾಗಿದೆ ಎಂದು ನಿನ್ನೆಯಷ್ಟೇ (ಮಾರ್ಚ್ 5, 2019) ಬಿಡುಗಡೆಯಾದ ಸಿಎಂಇಐ ವರದಿಯನ್ನು ರಾಯಿಟರ್ಸ್  ಸುದ್ದಿಸಂಸ್ಥೆ ವಿಶ್ಲೇಷಿಸಿದೆ. 2018ರ ಫೆಬ್ರವರಿಯಲ್ಲಿ ಈ ದರ ಶೇ.5.8ರಷ್ಟಿತ್ತು. ಭಾರತದಾದ್ಯಂತ ನಡೆಸಲಾದ ಲಕ್ಷಾಂತರ ಕುಟುಂಬಗಳ ಸಮೀಕ್ಷೆಯನ್ನು ಈ ವರದಿ ಒಳಗೊಂಡಿದೆ.

ಮೇನಲ್ಲಿ ಲೋಕಸಭಾ ಚುನಾವಣೆಗೆ ಅಣಿಯಾಗುತ್ತಿರುವ ಪ್ರಧಾನಿ ಮೋದಿಯವರಿಗೆ ಈ ವರದಿ ದೊಡ್ಡ ಹಿನ್ನಡೆಯಾಗುವ ಸಾಧ್ಯತೆ ಇದೆ. ಯಾಕೆಂದರೆ ಈಗಾಗಲೇ ವಿರೋಧ ಪಕ್ಷಗಳು ರೈತರಿಗೆ ಸಿಗುತ್ತಿರುವ ಕಡಿಮೆ ಬೆಲೆ ಮತ್ತು ಕುಸಿತಗೊಂಡಿರುವ ಉದ್ಯೋಗ ಸೃಷ್ಟಿಯನ್ನು ತಮ್ಮ ಮುಖ್ಯ ಚುನಾವಣಾ ವಿಷಯಗಳಾಗಿ ಪ್ರಸ್ತಾಪಿಸುತ್ತಿವೆ. ಇಂತಹ ಸಂದರ್ಭದಲ್ಲಿ ಬಿಡುಗಡೆಯಾಗಿರುವ ವರದಿ ನಿರುದ್ಯೋಗ ನಿಯಂತ್ರಣದಲ್ಲಿ ಮೋದಿಯವರ ವೈಫಲ್ಯವನ್ನು ಎತ್ತಿ ತೋಸಿರುತ್ತಿದೆ.

ಈಗಾಗಲೇ ನ್ಯಾಶನಲ್ ಸ್ಯಾಂಪಲ್ ಸರ್ವೇ ಆಫೀಸಸ್ (ಎನ್‌ಎಸ್‌ಎಸ್‌ಒ) ವರದಿಯಲ್ಲಿ, ನಿಯಮಿತ ಕಾರ್ಮಿಕ ವರ್ಗ ಸಮೀಕ್ಷೆಯ ಪ್ರಕಾರ 2017-18ರಲ್ಲಿ ಶೇ.6.1 ತಲುಪಿದ್ದ ನಿರುದ್ಯೋಗ ದರವು ಕಳೆದ 45 ವರ್ಷಗಳ ಇತಿಹಾಸದಲ್ಲಿ ಅತಿಹೆಚ್ಚು ನಿರುದ್ಯೋಗ ದರವಾಗಿದೆ ಎಂದು ಉಲ್ಲೇಖಿಸಿರುವುದಾಗಿ Business Standard ವರದಿ ಮಾಡಿತ್ತು. ತನಗೆ ಲಭ್ಯವಾದ ದಾಖಲೆಪತ್ರಗಳ ಪ್ರಕಾರ, ಉದ್ಯೋಗಕ್ಕೆ ಸಂಬಂಧಿಸಿದ ಅಂಕಿಅಂಶಗಳನ್ನು ಸಂಗ್ರಹಿಸಲು ಶುರು ಮಾಡಲಾದ 1972-73ರಿಂದ ಈಚೆಗೆ 2017-18ರ ನಿರುದ್ಯೋಗ ದರವೇ ದಾಖಲೆಯ ಏರಿಕೆಯದ್ದು ಎಂದು ಅದು ತಿಳಿಸಿತ್ತು.

ಎನ್.ಎಸ್.ಎಸ್.ಒ ವರದಿಯಲ್ಲಿ ಗ್ರಾಮೀಣ ಪ್ರದೇಶಕ್ಕಿಂತ ನಗರ ಪ್ರದೇಶಗಳಲ್ಲೇ ಹೆಚ್ಚು ನಿರುದ್ಯೋಗ ಪ್ರಮಾಣವಿದೆ ಎಂದು Business Standard ಉಲ್ಲೇಖಿಸಿತ್ತು. ಗ್ರಾಮೀಣ ಪ್ರದೇಶಗಳಲ್ಲಿ ಶೇ.5.3ರಷ್ಟಿದ್ದರೆ ನಗರ ಪ್ರದೇಶಗಳಲ್ಲಿ ನಿರುದ್ಯೋಗ ದರ ಶೇ.7.8 ರಷ್ಟಿದೆ ಎಂಬುದು ವರದಿಯಿಂದ ತಿಳಿದುಬಂದಿದೆ. ಪ್ರಸ್ತುತ 201-18ನೇ ಸಾಲಿನಲ್ಲಿ ನಿರುದ್ಯೋಗ ದರವು ನಗರ ಪ್ರದೇಶದ 15 ರಿಂದ 29 ವರ್ಷ ವಯೋಮಾನದ ಪುರುಷರಲ್ಲಿ ಶೇ.18.7ರಷ್ಟು (2011ರಲ್ಲಿ ಈ ಪ್ರಮಾಣ ಶೇ.8.1ರಷ್ಟಿತ್ತು) ಹಾಗೂ ನಗರವಾಸಿ ಮಹಿಳೆಯರಲ್ಲಿ ಶೇ.27.2ರಷ್ಟು (2011ರಲ್ಲಿ ಈ ಪ್ರಮಾಣ ಶೇ.13.1ರಷ್ಟಿತ್ತು) ಇದೆ ಎಂದು Business Standard ವರದಿ ಮಾಡಿತ್ತು.

ವಿಪರ್ಯಾಸವೆಂದರೆ, ಮೊದಲಿನಿಂದಲೂ ಬಿಜೆಪಿ ನಗರ ಪ್ರದೇಶಗಳಲ್ಲೇ ತನ್ನ ವೋಟ್‌ಬ್ಯಾಂಕ್ ಸಾಮರ್ಥ್ಯವನ್ನು ಬಲವಾಗಿ ನಂಬಿಕೊಂಡು ಬಂದಿದೆ. ಈಗಲೂ ಅದಕ್ಕೆ ಗ್ರಾಮೀಣ ಪ್ರದೇಶಗಳಲ್ಲಿ ಹೇಳಿಕೊಳ್ಳುವಂತಹ ಬಲವಿಲ್ಲ. ಹೀಗಿರುವಾಗ ನಗರ ಪ್ರದೇಶಗಳಲ್ಲೇ ನಿರುದ್ಯೋಗ ದಾಖಲೆಯ ಪ್ರಮಾಣದಲ್ಲಿ ಏರಿಕೆಯಾಗಿರುವುದು ಚುನಾವಣಾ ದೃಷ್ಟಿಯಿಂದ ಮೋದಿಯವರಿಗೆ ಶುಭ ಸೂಚಕವಂತೂ ಅಲ್ಲ.

ಈ ಹಿಂದೆ ಇದೇ ಸರ್ಕಾರ ಉದ್ಯೋಗಕ್ಕೆ ಸಂಬಂಧಿಸಿದ ವರದಿಗಳನ್ನು ಬಿಡುಗಡೆ ಮಾಡಿದಾಗ ಅವು ಔಟ್-ಆಫ್-ಡೇಟ್ ಆಗಿರುತ್ತಿದ್ದವು ಎಂಬ ಅಪವಾದಗಳು ಕೇಳಿಬರುತ್ತಿದ್ದವು. ಆದರೆ ಚುನಾವಣಾ ಸಿದ್ಧತೆಯ ಈ ವರ್ಷದಲ್ಲಿ ಡಿಸೆಂಬರ್‌ನಲ್ಲಿ ಬಿಡುಗಡೆಯಾಗಬೇಕಿದ್ದ ಎನ್.ಎಸ್.ಎಸ್.ಒ ವರದಿಯನ್ನು ಅಧಿಕಾರಿಗಳು ಅಂಕಿಅಂಶಗಳನ್ನು ಪುನರ್‌ಪರಿಶೀಲಿಸಬೇಕು ಎಂಬ ನೆಪ ನೀಡಿ ಬಿಡುಗಡೆಯನ್ನೇ ಮಾಡಲಿಲ್ಲ. ನಿರುದ್ಯೋಗ ಪ್ರಮಾಣ ಈ ಪರಿಯಲ್ಲಿ ಏರಿಕೆಯಾಗಿರುವುದು ಬಹಿರಂಗಗೊಂಡರೆ ಚುನಾವಣೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ ಎಂಬ ಅಂದಾಜಿನಿಂದಲೇ ವರದಿಯನ್ನು ಬಿಡುಗಡೆ ಮಾಡದಂತೆ ಸರ್ಕಾರದಿಂದ ತಡೆಹಿಡಿಯಲಾಗಿದೆ ಎಂಬ ಹೇಳಿಕೆಗಳು ಕೇಳಿ ಬಂದ ಬೆನ್ನಲ್ಲೇ Business Standard ಪತ್ರಿಕೆಯು ತನಗೆ ಎನ್.ಎಸ್.ಎಸ್.ಒ ವರದಿ ಅದರ ಸದಸ್ಯರೊಬ್ಬರಿಂದಲೇ ಸೋರಿಕೆಯಾಗಿದೆ ಎಂದು ಅಂಕಿಅಂಶಗಳನ್ನು ಬಹಿರಂಗಗೊಳಿಸಿತ್ತು.

ಆದಾಗ್ಯೂ ಸರ್ಕಾರ ಅದನ್ನು ತಿರಸ್ಕರಿಸಿ ಅವು ಸತ್ಯಕ್ಕೆ ದೂರವಾದ ಸಂಗತಿಗಳು ಎಂದು ಆರೋಪಿಸಿತ್ತೇ ವಿನಾಃ ಯಾವ ಕಾರಣಕ್ಕೆ ಎನ್‌ಎಸ್‌ಎಸ್‌ಒ ವರದಿ ತಡೆಹಿಡಿಯಲಾಗಿದೆ ಎಂಬ ಪ್ರಶ್ನೆಗೆ ಸಮರ್ಪಕ ಉತ್ತರ ನೀಡಿರಲಿಲ್ಲ. ಇದೀಗ ಸಿ.ಎಂ.ಐ.ಇ ವರದಿ ನಿನ್ನೆ ಬಿಡುಗಡೆಗೊಂಡಿದ್ದು ನಿರುದ್ಯೋಗ ದರವನ್ನು ನಿಯಂತ್ರಿಸುವಲ್ಲಿ ಸರ್ಕಾರದ ವೈಫಲ್ಯವನ್ನು ಅನುಮಾನಕ್ಕೆ ಎಡೆಯಿಲ್ಲದಂತೆ ತೆರೆದಿಟ್ಟಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...