Homeಮುಖಪುಟನಿರುದ್ಯೋಗ ದರ ಶೇ.7.2ಕ್ಕೆ ಏರಿಕೆ: ಮೋದಿಗೆ ಸಂಕಷ್ಟ ತಂದಿಟ್ಟ ಸಿಎಂಇಐ ವರದಿ

ನಿರುದ್ಯೋಗ ದರ ಶೇ.7.2ಕ್ಕೆ ಏರಿಕೆ: ಮೋದಿಗೆ ಸಂಕಷ್ಟ ತಂದಿಟ್ಟ ಸಿಎಂಇಐ ವರದಿ

- Advertisement -
- Advertisement -

ಭಾರತೀಯ ಆರ್ಥಿಕ ಉಸ್ತುವಾರಿ ಕೇಂದ್ರವು (ಸಿ.ಎಂ.ಐ.ಇ) ಸಂಗ್ರಹಿಸಿರುವ ದತ್ತಾಂಶಗಳ ಪ್ರಕಾರ ಫೆಬ್ರವರಿ 2019ರಲ್ಲಿ ಭಾರತದ ನಿರುದ್ಯೋಗ ದರ ಶೇ.7.2ಕ್ಕೆ ಏರಿಕೆಯಾಗಿದೆ. ಸೆಪ್ಟೆಂಬರ್ 2016ರಿಂದ ಈಚೆಗಿನ ಅತಿ ಹೆಚ್ಚಿನ ನಿರುದ್ಯೋಗ ದರ ಇದಾಗಿದೆ ಎಂದು ನಿನ್ನೆಯಷ್ಟೇ (ಮಾರ್ಚ್ 5, 2019) ಬಿಡುಗಡೆಯಾದ ಸಿಎಂಇಐ ವರದಿಯನ್ನು ರಾಯಿಟರ್ಸ್  ಸುದ್ದಿಸಂಸ್ಥೆ ವಿಶ್ಲೇಷಿಸಿದೆ. 2018ರ ಫೆಬ್ರವರಿಯಲ್ಲಿ ಈ ದರ ಶೇ.5.8ರಷ್ಟಿತ್ತು. ಭಾರತದಾದ್ಯಂತ ನಡೆಸಲಾದ ಲಕ್ಷಾಂತರ ಕುಟುಂಬಗಳ ಸಮೀಕ್ಷೆಯನ್ನು ಈ ವರದಿ ಒಳಗೊಂಡಿದೆ.

ಮೇನಲ್ಲಿ ಲೋಕಸಭಾ ಚುನಾವಣೆಗೆ ಅಣಿಯಾಗುತ್ತಿರುವ ಪ್ರಧಾನಿ ಮೋದಿಯವರಿಗೆ ಈ ವರದಿ ದೊಡ್ಡ ಹಿನ್ನಡೆಯಾಗುವ ಸಾಧ್ಯತೆ ಇದೆ. ಯಾಕೆಂದರೆ ಈಗಾಗಲೇ ವಿರೋಧ ಪಕ್ಷಗಳು ರೈತರಿಗೆ ಸಿಗುತ್ತಿರುವ ಕಡಿಮೆ ಬೆಲೆ ಮತ್ತು ಕುಸಿತಗೊಂಡಿರುವ ಉದ್ಯೋಗ ಸೃಷ್ಟಿಯನ್ನು ತಮ್ಮ ಮುಖ್ಯ ಚುನಾವಣಾ ವಿಷಯಗಳಾಗಿ ಪ್ರಸ್ತಾಪಿಸುತ್ತಿವೆ. ಇಂತಹ ಸಂದರ್ಭದಲ್ಲಿ ಬಿಡುಗಡೆಯಾಗಿರುವ ವರದಿ ನಿರುದ್ಯೋಗ ನಿಯಂತ್ರಣದಲ್ಲಿ ಮೋದಿಯವರ ವೈಫಲ್ಯವನ್ನು ಎತ್ತಿ ತೋಸಿರುತ್ತಿದೆ.

ಈಗಾಗಲೇ ನ್ಯಾಶನಲ್ ಸ್ಯಾಂಪಲ್ ಸರ್ವೇ ಆಫೀಸಸ್ (ಎನ್‌ಎಸ್‌ಎಸ್‌ಒ) ವರದಿಯಲ್ಲಿ, ನಿಯಮಿತ ಕಾರ್ಮಿಕ ವರ್ಗ ಸಮೀಕ್ಷೆಯ ಪ್ರಕಾರ 2017-18ರಲ್ಲಿ ಶೇ.6.1 ತಲುಪಿದ್ದ ನಿರುದ್ಯೋಗ ದರವು ಕಳೆದ 45 ವರ್ಷಗಳ ಇತಿಹಾಸದಲ್ಲಿ ಅತಿಹೆಚ್ಚು ನಿರುದ್ಯೋಗ ದರವಾಗಿದೆ ಎಂದು ಉಲ್ಲೇಖಿಸಿರುವುದಾಗಿ Business Standard ವರದಿ ಮಾಡಿತ್ತು. ತನಗೆ ಲಭ್ಯವಾದ ದಾಖಲೆಪತ್ರಗಳ ಪ್ರಕಾರ, ಉದ್ಯೋಗಕ್ಕೆ ಸಂಬಂಧಿಸಿದ ಅಂಕಿಅಂಶಗಳನ್ನು ಸಂಗ್ರಹಿಸಲು ಶುರು ಮಾಡಲಾದ 1972-73ರಿಂದ ಈಚೆಗೆ 2017-18ರ ನಿರುದ್ಯೋಗ ದರವೇ ದಾಖಲೆಯ ಏರಿಕೆಯದ್ದು ಎಂದು ಅದು ತಿಳಿಸಿತ್ತು.

ಎನ್.ಎಸ್.ಎಸ್.ಒ ವರದಿಯಲ್ಲಿ ಗ್ರಾಮೀಣ ಪ್ರದೇಶಕ್ಕಿಂತ ನಗರ ಪ್ರದೇಶಗಳಲ್ಲೇ ಹೆಚ್ಚು ನಿರುದ್ಯೋಗ ಪ್ರಮಾಣವಿದೆ ಎಂದು Business Standard ಉಲ್ಲೇಖಿಸಿತ್ತು. ಗ್ರಾಮೀಣ ಪ್ರದೇಶಗಳಲ್ಲಿ ಶೇ.5.3ರಷ್ಟಿದ್ದರೆ ನಗರ ಪ್ರದೇಶಗಳಲ್ಲಿ ನಿರುದ್ಯೋಗ ದರ ಶೇ.7.8 ರಷ್ಟಿದೆ ಎಂಬುದು ವರದಿಯಿಂದ ತಿಳಿದುಬಂದಿದೆ. ಪ್ರಸ್ತುತ 201-18ನೇ ಸಾಲಿನಲ್ಲಿ ನಿರುದ್ಯೋಗ ದರವು ನಗರ ಪ್ರದೇಶದ 15 ರಿಂದ 29 ವರ್ಷ ವಯೋಮಾನದ ಪುರುಷರಲ್ಲಿ ಶೇ.18.7ರಷ್ಟು (2011ರಲ್ಲಿ ಈ ಪ್ರಮಾಣ ಶೇ.8.1ರಷ್ಟಿತ್ತು) ಹಾಗೂ ನಗರವಾಸಿ ಮಹಿಳೆಯರಲ್ಲಿ ಶೇ.27.2ರಷ್ಟು (2011ರಲ್ಲಿ ಈ ಪ್ರಮಾಣ ಶೇ.13.1ರಷ್ಟಿತ್ತು) ಇದೆ ಎಂದು Business Standard ವರದಿ ಮಾಡಿತ್ತು.

ವಿಪರ್ಯಾಸವೆಂದರೆ, ಮೊದಲಿನಿಂದಲೂ ಬಿಜೆಪಿ ನಗರ ಪ್ರದೇಶಗಳಲ್ಲೇ ತನ್ನ ವೋಟ್‌ಬ್ಯಾಂಕ್ ಸಾಮರ್ಥ್ಯವನ್ನು ಬಲವಾಗಿ ನಂಬಿಕೊಂಡು ಬಂದಿದೆ. ಈಗಲೂ ಅದಕ್ಕೆ ಗ್ರಾಮೀಣ ಪ್ರದೇಶಗಳಲ್ಲಿ ಹೇಳಿಕೊಳ್ಳುವಂತಹ ಬಲವಿಲ್ಲ. ಹೀಗಿರುವಾಗ ನಗರ ಪ್ರದೇಶಗಳಲ್ಲೇ ನಿರುದ್ಯೋಗ ದಾಖಲೆಯ ಪ್ರಮಾಣದಲ್ಲಿ ಏರಿಕೆಯಾಗಿರುವುದು ಚುನಾವಣಾ ದೃಷ್ಟಿಯಿಂದ ಮೋದಿಯವರಿಗೆ ಶುಭ ಸೂಚಕವಂತೂ ಅಲ್ಲ.

ಈ ಹಿಂದೆ ಇದೇ ಸರ್ಕಾರ ಉದ್ಯೋಗಕ್ಕೆ ಸಂಬಂಧಿಸಿದ ವರದಿಗಳನ್ನು ಬಿಡುಗಡೆ ಮಾಡಿದಾಗ ಅವು ಔಟ್-ಆಫ್-ಡೇಟ್ ಆಗಿರುತ್ತಿದ್ದವು ಎಂಬ ಅಪವಾದಗಳು ಕೇಳಿಬರುತ್ತಿದ್ದವು. ಆದರೆ ಚುನಾವಣಾ ಸಿದ್ಧತೆಯ ಈ ವರ್ಷದಲ್ಲಿ ಡಿಸೆಂಬರ್‌ನಲ್ಲಿ ಬಿಡುಗಡೆಯಾಗಬೇಕಿದ್ದ ಎನ್.ಎಸ್.ಎಸ್.ಒ ವರದಿಯನ್ನು ಅಧಿಕಾರಿಗಳು ಅಂಕಿಅಂಶಗಳನ್ನು ಪುನರ್‌ಪರಿಶೀಲಿಸಬೇಕು ಎಂಬ ನೆಪ ನೀಡಿ ಬಿಡುಗಡೆಯನ್ನೇ ಮಾಡಲಿಲ್ಲ. ನಿರುದ್ಯೋಗ ಪ್ರಮಾಣ ಈ ಪರಿಯಲ್ಲಿ ಏರಿಕೆಯಾಗಿರುವುದು ಬಹಿರಂಗಗೊಂಡರೆ ಚುನಾವಣೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ ಎಂಬ ಅಂದಾಜಿನಿಂದಲೇ ವರದಿಯನ್ನು ಬಿಡುಗಡೆ ಮಾಡದಂತೆ ಸರ್ಕಾರದಿಂದ ತಡೆಹಿಡಿಯಲಾಗಿದೆ ಎಂಬ ಹೇಳಿಕೆಗಳು ಕೇಳಿ ಬಂದ ಬೆನ್ನಲ್ಲೇ Business Standard ಪತ್ರಿಕೆಯು ತನಗೆ ಎನ್.ಎಸ್.ಎಸ್.ಒ ವರದಿ ಅದರ ಸದಸ್ಯರೊಬ್ಬರಿಂದಲೇ ಸೋರಿಕೆಯಾಗಿದೆ ಎಂದು ಅಂಕಿಅಂಶಗಳನ್ನು ಬಹಿರಂಗಗೊಳಿಸಿತ್ತು.

ಆದಾಗ್ಯೂ ಸರ್ಕಾರ ಅದನ್ನು ತಿರಸ್ಕರಿಸಿ ಅವು ಸತ್ಯಕ್ಕೆ ದೂರವಾದ ಸಂಗತಿಗಳು ಎಂದು ಆರೋಪಿಸಿತ್ತೇ ವಿನಾಃ ಯಾವ ಕಾರಣಕ್ಕೆ ಎನ್‌ಎಸ್‌ಎಸ್‌ಒ ವರದಿ ತಡೆಹಿಡಿಯಲಾಗಿದೆ ಎಂಬ ಪ್ರಶ್ನೆಗೆ ಸಮರ್ಪಕ ಉತ್ತರ ನೀಡಿರಲಿಲ್ಲ. ಇದೀಗ ಸಿ.ಎಂ.ಐ.ಇ ವರದಿ ನಿನ್ನೆ ಬಿಡುಗಡೆಗೊಂಡಿದ್ದು ನಿರುದ್ಯೋಗ ದರವನ್ನು ನಿಯಂತ್ರಿಸುವಲ್ಲಿ ಸರ್ಕಾರದ ವೈಫಲ್ಯವನ್ನು ಅನುಮಾನಕ್ಕೆ ಎಡೆಯಿಲ್ಲದಂತೆ ತೆರೆದಿಟ್ಟಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...